Homeಮುಖಪುಟಏಕರೂಪ ನಾಗರಿಕ ಸಂಹಿತೆ: ನೂತನ ಎನ್‌ಡಿಎ ಸರಕಾರದ ನಿಲುವೇನು?

ಏಕರೂಪ ನಾಗರಿಕ ಸಂಹಿತೆ: ನೂತನ ಎನ್‌ಡಿಎ ಸರಕಾರದ ನಿಲುವೇನು?

- Advertisement -
- Advertisement -

ಏಕರೂಪ ನಾಗರಿಕ ಸಂಹಿತೆ ಜಾರಿ ಸರ್ಕಾರದ ಕಾರ್ಯಸೂಚಿಯ ಭಾಗವಾಗಿದೆ ಎಂದು ಕೇಂದ್ರ ಕಾನೂನು ಸಚಿವ ಅರ್ಜುನ್ ರಾಮ್ ಮೇಘವಾಲ್ ಮಂಗಳವಾರ ಹೇಳಿದ್ದು, ಎನ್‌ಡಿಎ ಮೈತ್ರಿ ಸರಕಾರ ಅಧಿಕಾರಕ್ಕೆ ಬಂದರೂ ಹಿಂದಿನ ಬಿಜೆಪಿ ನೇತೃತ್ವದ ಎನ್‌ಡಿಎ ಸರಕಾರದ ಪ್ರಸ್ತಾವಿತ ಕಾಯ್ದೆ ಜಾರಿಗೆ ನೂತನ ಸರಕಾರ ಕೂಡ ಬದ್ಧವಾಗಿದೆ ಎಂದು ಹೇಳಿದ್ದಾರೆ.

ಹೈಕೋರ್ಟ್ ಮತ್ತು ಸುಪ್ರೀಂಕೋರ್ಟ್ ನ್ಯಾಯಾಧೀಶರ ನೇಮಕಾತಿ, ಪದೋನ್ನತಿ  ಮತ್ತು ವರ್ಗಾವಣೆ ಕುರಿತ ಅನುಸರಿಸಬೇಕಾದ ಪ್ರಕ್ರಿಯೆ ಕುರಿತು ಸೂಕ್ತ ಪರಿಹಾರೋಪಾಯ ಕಂಡುಕೊಳ್ಳಲಾಗುವುದು ಎಂದು ಅವರು ಇದೇ ಸಂದರ್ಭದಲ್ಲಿ ಹೇಳಿದ್ದಾರೆ.

ಸಚಿವಾಲಯದಲ್ಲಿನ ಪ್ರಮುಖ ಹುದ್ದೆಗಳ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅರ್ಜುನ್ ರಾಮ್ ಮೇಘವಾಲ್, ಸುಪ್ರೀಂಕೋರ್ಟ್, ಹೈಕೋರ್ಟ್ ಅಥವಾ ನಮ್ಮ ಸಚಿವಾಲಯ ಅಥವಾ ಅಧೀನ ನ್ಯಾಯಾಲಯಗಳಲ್ಲಿ ಎಲ್ಲೆಲ್ಲಿ ಹುದ್ದೆಗಳು ಖಾಲಿಯಿದ್ದರೂ, ನಾವು ಅವುಗಳನ್ನು ಶೀಘ್ರವಾಗಿ ಭರ್ತಿ ಮಾಡಲು ಪ್ರಯತ್ನಿಸುತ್ತೇವೆ. ಏಕಕಾಲಕ್ಕೆ ಚುನಾವಣೆ ವಿಚಾರವಾಗಿ ಮಾಜಿ ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ನೇತೃತ್ವದ ಸಮಿತಿಯು ತನ್ನ ವರದಿಯನ್ನು ಸಲ್ಲಿಸಿದ್ದು, ಅದರ ಬಗ್ಗೆ ನಾವು ನಂತರ ತಿಳಿಸುತ್ತೇವೆ ಎಂದು ಹೇಳಿದ್ದಾರೆ.

ಉನ್ನತ, ಕೆಳ ಮತ್ತು ಹೈಕೋರ್ಟ್‌ಗಳಲ್ಲಿ ಬಾಕಿ ಇರುವ ಪ್ರಕರಣಗಳಿಗೆ ಸಂಬಂಧಿಸಿ ಖಾಲಿ ಹುದ್ದೆಗಳ ಸಮಸ್ಯೆಗಳನ್ನು ಪರಿಹರಿಸುವುದು ಮೇಘವಾಲ್ ಅವರ ಮುಂದಿರುವ ಪ್ರಮುಖ ಸವಾಲುಗಳಾಗಿವೆ.

ಸರ್ಕಾರವು ಸಂಸತ್ತಿನೊಂದಿಗೆ ಹಂಚಿಕೊಂಡಿರುವ ಅಂಕಿಅಂಶಗಳ ಪ್ರಕಾರ, ಐದು ಕೋಟಿಗೂ ಹೆಚ್ಚು ಪ್ರಕರಣಗಳು ನ್ಯಾಯಾಲಯಗಳಾದ್ಯಂತ ಬಾಕಿ ಉಳಿದಿವೆ. ಕೆಳ ನ್ಯಾಯಾಲಯಗಳು, 25 ಉಚ್ಚ ನ್ಯಾಯಾಲಯಗಳು ಮತ್ತು ಸುಪ್ರೀಂ ಕೋರ್ಟ್‌ಗಳಲ್ಲಿ ಒಟ್ಟು 5 ಕೋಟಿಗೂ ಹೆಚ್ಚು ಪ್ರಕರಣಗಳು ಬಾಕಿ ಉಳಿದಿವೆ.

ಪ್ರಕರಣಗಳು ವಿಲೇವಾರಿ ವಿಳಂಬಕ್ಕೆ ವಿವಿಧ ಕಾರಣಗಳಿವೆ, ಇವುಗಳಲ್ಲಿ ನ್ಯಾಯಾಂಗದಲ್ಲಿ ಪ್ರಮುಖ ಹುದ್ದೆಗಳು ಖಾಲಿ ಇರುವುದು ಕೂಡ ಒಂದು ಕಾರಣವಾಗಿದೆ.

ಏಕರೂಪ ನಾಗರಿಕ ಸಂಹಿತೆ:

ಏಕರೂಪ ನಾಗರಿಕ ಸಂಹಿತೆ ಎಂದರೆ ಇಡೀ ದೇಶದಲ್ಲಿ ಪ್ರತಿಯೊಂದು ಧರ್ಮ, ಜಾತಿ, ಪಂಗಡ, ವರ್ಗಕ್ಕೆ ಒಂದೇ ನಿಯಮ ಜಾರಿಗೆ ತರುವುದು. ಪ್ರಸ್ತುತ ಹಿಂದೂ, ಮುಸ್ಲಿಂ, ಕ್ರಿಶ್ಚಿಯನ್ ಮತ್ತು ಪಾರ್ಸಿ ಸಮುದಾಯಗಳು ವಿಭಿನ್ನ ಧಾರ್ಮಿಕ ಕಾನೂನುಗಳನ್ನು ಹೊಂದಿವೆ. ಏಕರೂಪ ನಾಗರಿಕ ಸಂಹಿತೆ ಅನುಷ್ಠಾನವಾದರೆ ಬೇರೆಲ್ಲಾ ಧರ್ಮಗಳ ವೈಯಕ್ತಿಕ ಕಾನೂನುಗಳು ಅಂತ್ಯಗೊಳ್ಳುತ್ತವೆ.

ಏಕರೂಪ ಎನ್ನುವುದು ಭಾರತದ ಬಹುತ್ವ ಮತ್ತು ಒಕ್ಕೂಟ ವ್ಯವಸ್ಥೆಗೆ ವಿರುದ್ಧವಾದುದು. ಏಕರೂಪ ನಾಗರಿಕ ಸಂಹಿತೆಯು ಪ್ರಜಾಸತ್ತಾತ್ಮಕ ಜಾತ್ಯತೀತ ಮತ್ತು ಸಮಾಜವಾದಿ ತತ್ವಗಳ ಆಧಾರದ ಮೇಲೆ ಭಾರತೀಯ ಗಣರಾಜ್ಯವನ್ನು ಬಲಪಡಿಸುವ ಸಾಂವಿಧಾನಿಕ ಬದ್ಧತೆಯನ್ನು ಸೋಲಿಸುತ್ತದೆ.

2019ರ ಚುನಾವಣೆ ವೇಳೆ ಬಿಜೆಪಿ ಪ್ರಣಾಳಿಕೆಯಲ್ಲಿ ಸಮಾನ ನಾಗರಿಕ ಸಂಹಿತೆ ಜಾರಿ ಮಾಡುವ ಆಶ್ವಾಸನೆ ನೀಡಿತ್ತು. ದೇಶದ ಎಲ್ಲರಿಗೂ ಒಂದೇ ಕಾನೂನು ಇರಬೇಕು ಎಂದು ಬಿಜೆಪಿ ಹೇಳಿತ್ತು. ಒಂದು ವೇಳೆ ಈ ಕಾಯ್ದೆ ಜಾರಿಗೆ ಬಂದರೆ, ಹಿಂದೂ, ಮುಸ್ಲಿಂ, ಕ್ರೈಸ್ತ ಸೇರಿದಂತೆ ಯಾವುದೇ ಧರ್ಮಾಧಾರಿತ ಕಾನೂನುಗಳಿಗೆ ಬೆಲೆ ಇರುವುದಿಲ್ಲ. ವೈಯಕ್ತಿಕ ಕಾನೂನು, ಸಿವಿಲ್ ಕಾನೂನುಗಳು ರದ್ದುಗೊಳ್ಳುತ್ತದೆ.  ಹಿಂದೂ ವಿವಾಹ ಕಾಯ್ದೆ, ಮುಸ್ಲಿಂ ವಿವಾಹ ಕಾನೂನು ಹೀಗೆ ಆಯಾ ಧರ್ಮಕ್ಕೆ ಅವರದ್ದೇ ಆದ ಕಾನೂನು ಇದೆ. ವಿವಾಹ, ವಿಚ್ಛೇದನ, ಆಸ್ತಿ ಹಂಚಿಕೆ ಸೇರಿದಂತೆ ಹಲವು ಕಾನೂನುಗಳು ಹಿಂದೂಗಳಿಗೆ ಒಂದು ರೀತಿ ಇದ್ದರೆ, ಮುಸ್ಲಿಮರಿಗೆ ಮತ್ತೊಂದು ರೀತಿ ಇದೆ. ಏಕರೂಪ ನಾಗರಿಕ ನೀತಿ ಸಂಹಿತೆ ಜಾರಿಗೆ ಬಂದರೆ ಇದು ಬದಲಾಗುತ್ತದೆ.

ಸಂವಿಧಾನದ ಆರ್ಟಿಕಲ್ 25 ಹಾಗೂ 28ರ ಅಡಿ ದೇಶದ ಯಾವುದೇ ಪ್ರಜೆಗೆ ತನ್ನ ಧಾರ್ಮಿಕ ಆಚರಣೆಗಳನ್ನು ಪಾಲಿಸಲು ಸಂವಿಧಾನ ಅವಕಾಶ ನೀಡುತ್ತೆ. ಒಂದು ವೇಳೆ ಎಲ್ಲ ಧರ್ಮದವರಿಗೂ ಒಂದೇ ಕಾನೂನು ಜಾರಿ ಮಾಡಿದರೆ ವೈವಿಧ್ಯತೆಗೆ ಧಕ್ಕೆ ಬರಲಿದೆ.

ಇದನ್ನು ಓದಿ: ಮಹರಾಷ್ಟ್ರ: ಶಿಂಧೆ, ಅಜಿತ್‌ ಬಣದ 40 ಶಾಸಕರು ಘರ್ ವಾಪ್ಸಿ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

3 ವರ್ಷಗಳಲ್ಲಿ ರಷ್ಯಾ ಸೇನೆ ಸೇರಿದ 200 ಕ್ಕೂ ಹೆಚ್ಚು ಭಾರತೀಯರು; 26 ಮಂದಿ ಸಾವು: ವಿದೇಶಾಂಗ ಸಚಿವಾಲಯ

2022 ರಿಂದ ಕನಿಷ್ಠ 202 ಭಾರತೀಯ ಪ್ರಜೆಗಳು ರಷ್ಯಾದ ಸಶಸ್ತ್ರ ಪಡೆಗಳಿಗೆ ಸೇರಿದ್ದಾರೆ ಎಂದು ವರದಿಯಾಗಿದೆ. ಇದರಲ್ಲಿ 26 ಮಂದಿ ಸಾವನ್ನಪ್ಪಿದ್ದು, ಇಬ್ಬರನ್ನು ರಷ್ಯಾದಲ್ಲಿ ಅಂತ್ಯಕ್ರಿಯೆ ಮಾಡಲಾಗಿದೆ ಎಂದು ವಿದೇಶಾಂಗ ಸಚಿವಾಲಯ (ಎಂಇಎ)...

ಎಸ್‌ಐಆರ್‌ ಬಳಿಕ ಕರಡು ಮತದಾರರ ಪಟ್ಟಿ ಪ್ರಕಟ : ತಮಿಳುನಾಡಿನಲ್ಲಿ 97 ಲಕ್ಷ, ಗುಜರಾತ್‌ನಲ್ಲಿ 73 ಲಕ್ಷ ಹೆಸರು ಡಿಲೀಟ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಬಳಿಕ ತಮಿಳುನಾಡು ಮತ್ತು ಗುಜರಾತ್‌ನ ಕರಡು ಮತದಾರರ ಪಟ್ಟಿಯನ್ನು ಭಾರತೀಯ ಚುನಾವಣಾ ಆಯೋಗ (ಇಸಿಐ) ಪ್ರಕಟಿಸಿದ್ದು, ಕ್ರಮವಾಗಿ 97.3 ಮತ್ತು 73.7 ಲಕ್ಷ ಮತದಾರರ...

ಅಸ್ಸಾಂ | ರಾಜಧಾನಿ ಎಕ್ಸ್ ಪ್ರೆಸ್ ರೈಲು ಢಿಕ್ಕಿ : 8 ಆನೆಗಳು ಸಾವು

ಶನಿವಾರ (ಡಿಸೆಂಬರ್ 20, 2025) ಬೆಳಗಿನ ಜಾವ ಅಸ್ಸಾಂನ ಹೊಜೈ ಜಿಲ್ಲೆಯಲ್ಲಿ ಸಾಯಿರಂಗ್-ನವದೆಹಲಿ ರಾಜಧಾನಿ ಎಕ್ಸ್‌ಪ್ರೆಸ್‌ ರೈಲು ಡಿಕ್ಕಿ ಹೊಡೆದ ಪರಿಣಾಮ ಎಂಟು ಆನೆಗಳು ಸಾವನ್ನಪ್ಪಿದ್ದು, ಒಂದು ಗಾಯಗೊಂಡಿದೆ ಎಂದು ವರದಿಯಾಗಿದೆ. ಘಟನೆಯಲ್ಲಿ ಐದು...

ಮಲಯಾಳಂ ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಶ್ರೀನಿವಾಸನ್ ನಿಧನ

ಮಲಯಾಳಂ ಚಿತ್ರರಂಗದ ಹಿರಿಯ ನಟ, ಚಿತ್ರಕಥೆಗಾರ, ನಿರ್ದೇಶಕ ಹಾಗೂ ನಿರ್ಮಾಪಕ ಶ್ರೀನಿವಾಸನ್ ಶನಿವಾರ (ಡಿ.20) ನಿಧನರಾದರು. ಅವರಿಗೆ 69 ವರ್ಷ ವಯಸ್ಸಾಗಿತ್ತು. ದೀರ್ಘ ಸಮಯದಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಶ್ರೀನಿವಾಸನ್ ಅವರು, ಚಿಕಿತ್ಸೆ...

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...