Homeಮುಖಪುಟಏಕರೂಪ ನಾಗರಿಕ ಸಂಹಿತೆ: ನೂತನ ಎನ್‌ಡಿಎ ಸರಕಾರದ ನಿಲುವೇನು?

ಏಕರೂಪ ನಾಗರಿಕ ಸಂಹಿತೆ: ನೂತನ ಎನ್‌ಡಿಎ ಸರಕಾರದ ನಿಲುವೇನು?

- Advertisement -
- Advertisement -

ಏಕರೂಪ ನಾಗರಿಕ ಸಂಹಿತೆ ಜಾರಿ ಸರ್ಕಾರದ ಕಾರ್ಯಸೂಚಿಯ ಭಾಗವಾಗಿದೆ ಎಂದು ಕೇಂದ್ರ ಕಾನೂನು ಸಚಿವ ಅರ್ಜುನ್ ರಾಮ್ ಮೇಘವಾಲ್ ಮಂಗಳವಾರ ಹೇಳಿದ್ದು, ಎನ್‌ಡಿಎ ಮೈತ್ರಿ ಸರಕಾರ ಅಧಿಕಾರಕ್ಕೆ ಬಂದರೂ ಹಿಂದಿನ ಬಿಜೆಪಿ ನೇತೃತ್ವದ ಎನ್‌ಡಿಎ ಸರಕಾರದ ಪ್ರಸ್ತಾವಿತ ಕಾಯ್ದೆ ಜಾರಿಗೆ ನೂತನ ಸರಕಾರ ಕೂಡ ಬದ್ಧವಾಗಿದೆ ಎಂದು ಹೇಳಿದ್ದಾರೆ.

ಹೈಕೋರ್ಟ್ ಮತ್ತು ಸುಪ್ರೀಂಕೋರ್ಟ್ ನ್ಯಾಯಾಧೀಶರ ನೇಮಕಾತಿ, ಪದೋನ್ನತಿ  ಮತ್ತು ವರ್ಗಾವಣೆ ಕುರಿತ ಅನುಸರಿಸಬೇಕಾದ ಪ್ರಕ್ರಿಯೆ ಕುರಿತು ಸೂಕ್ತ ಪರಿಹಾರೋಪಾಯ ಕಂಡುಕೊಳ್ಳಲಾಗುವುದು ಎಂದು ಅವರು ಇದೇ ಸಂದರ್ಭದಲ್ಲಿ ಹೇಳಿದ್ದಾರೆ.

ಸಚಿವಾಲಯದಲ್ಲಿನ ಪ್ರಮುಖ ಹುದ್ದೆಗಳ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅರ್ಜುನ್ ರಾಮ್ ಮೇಘವಾಲ್, ಸುಪ್ರೀಂಕೋರ್ಟ್, ಹೈಕೋರ್ಟ್ ಅಥವಾ ನಮ್ಮ ಸಚಿವಾಲಯ ಅಥವಾ ಅಧೀನ ನ್ಯಾಯಾಲಯಗಳಲ್ಲಿ ಎಲ್ಲೆಲ್ಲಿ ಹುದ್ದೆಗಳು ಖಾಲಿಯಿದ್ದರೂ, ನಾವು ಅವುಗಳನ್ನು ಶೀಘ್ರವಾಗಿ ಭರ್ತಿ ಮಾಡಲು ಪ್ರಯತ್ನಿಸುತ್ತೇವೆ. ಏಕಕಾಲಕ್ಕೆ ಚುನಾವಣೆ ವಿಚಾರವಾಗಿ ಮಾಜಿ ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ನೇತೃತ್ವದ ಸಮಿತಿಯು ತನ್ನ ವರದಿಯನ್ನು ಸಲ್ಲಿಸಿದ್ದು, ಅದರ ಬಗ್ಗೆ ನಾವು ನಂತರ ತಿಳಿಸುತ್ತೇವೆ ಎಂದು ಹೇಳಿದ್ದಾರೆ.

ಉನ್ನತ, ಕೆಳ ಮತ್ತು ಹೈಕೋರ್ಟ್‌ಗಳಲ್ಲಿ ಬಾಕಿ ಇರುವ ಪ್ರಕರಣಗಳಿಗೆ ಸಂಬಂಧಿಸಿ ಖಾಲಿ ಹುದ್ದೆಗಳ ಸಮಸ್ಯೆಗಳನ್ನು ಪರಿಹರಿಸುವುದು ಮೇಘವಾಲ್ ಅವರ ಮುಂದಿರುವ ಪ್ರಮುಖ ಸವಾಲುಗಳಾಗಿವೆ.

ಸರ್ಕಾರವು ಸಂಸತ್ತಿನೊಂದಿಗೆ ಹಂಚಿಕೊಂಡಿರುವ ಅಂಕಿಅಂಶಗಳ ಪ್ರಕಾರ, ಐದು ಕೋಟಿಗೂ ಹೆಚ್ಚು ಪ್ರಕರಣಗಳು ನ್ಯಾಯಾಲಯಗಳಾದ್ಯಂತ ಬಾಕಿ ಉಳಿದಿವೆ. ಕೆಳ ನ್ಯಾಯಾಲಯಗಳು, 25 ಉಚ್ಚ ನ್ಯಾಯಾಲಯಗಳು ಮತ್ತು ಸುಪ್ರೀಂ ಕೋರ್ಟ್‌ಗಳಲ್ಲಿ ಒಟ್ಟು 5 ಕೋಟಿಗೂ ಹೆಚ್ಚು ಪ್ರಕರಣಗಳು ಬಾಕಿ ಉಳಿದಿವೆ.

ಪ್ರಕರಣಗಳು ವಿಲೇವಾರಿ ವಿಳಂಬಕ್ಕೆ ವಿವಿಧ ಕಾರಣಗಳಿವೆ, ಇವುಗಳಲ್ಲಿ ನ್ಯಾಯಾಂಗದಲ್ಲಿ ಪ್ರಮುಖ ಹುದ್ದೆಗಳು ಖಾಲಿ ಇರುವುದು ಕೂಡ ಒಂದು ಕಾರಣವಾಗಿದೆ.

ಏಕರೂಪ ನಾಗರಿಕ ಸಂಹಿತೆ:

ಏಕರೂಪ ನಾಗರಿಕ ಸಂಹಿತೆ ಎಂದರೆ ಇಡೀ ದೇಶದಲ್ಲಿ ಪ್ರತಿಯೊಂದು ಧರ್ಮ, ಜಾತಿ, ಪಂಗಡ, ವರ್ಗಕ್ಕೆ ಒಂದೇ ನಿಯಮ ಜಾರಿಗೆ ತರುವುದು. ಪ್ರಸ್ತುತ ಹಿಂದೂ, ಮುಸ್ಲಿಂ, ಕ್ರಿಶ್ಚಿಯನ್ ಮತ್ತು ಪಾರ್ಸಿ ಸಮುದಾಯಗಳು ವಿಭಿನ್ನ ಧಾರ್ಮಿಕ ಕಾನೂನುಗಳನ್ನು ಹೊಂದಿವೆ. ಏಕರೂಪ ನಾಗರಿಕ ಸಂಹಿತೆ ಅನುಷ್ಠಾನವಾದರೆ ಬೇರೆಲ್ಲಾ ಧರ್ಮಗಳ ವೈಯಕ್ತಿಕ ಕಾನೂನುಗಳು ಅಂತ್ಯಗೊಳ್ಳುತ್ತವೆ.

ಏಕರೂಪ ಎನ್ನುವುದು ಭಾರತದ ಬಹುತ್ವ ಮತ್ತು ಒಕ್ಕೂಟ ವ್ಯವಸ್ಥೆಗೆ ವಿರುದ್ಧವಾದುದು. ಏಕರೂಪ ನಾಗರಿಕ ಸಂಹಿತೆಯು ಪ್ರಜಾಸತ್ತಾತ್ಮಕ ಜಾತ್ಯತೀತ ಮತ್ತು ಸಮಾಜವಾದಿ ತತ್ವಗಳ ಆಧಾರದ ಮೇಲೆ ಭಾರತೀಯ ಗಣರಾಜ್ಯವನ್ನು ಬಲಪಡಿಸುವ ಸಾಂವಿಧಾನಿಕ ಬದ್ಧತೆಯನ್ನು ಸೋಲಿಸುತ್ತದೆ.

2019ರ ಚುನಾವಣೆ ವೇಳೆ ಬಿಜೆಪಿ ಪ್ರಣಾಳಿಕೆಯಲ್ಲಿ ಸಮಾನ ನಾಗರಿಕ ಸಂಹಿತೆ ಜಾರಿ ಮಾಡುವ ಆಶ್ವಾಸನೆ ನೀಡಿತ್ತು. ದೇಶದ ಎಲ್ಲರಿಗೂ ಒಂದೇ ಕಾನೂನು ಇರಬೇಕು ಎಂದು ಬಿಜೆಪಿ ಹೇಳಿತ್ತು. ಒಂದು ವೇಳೆ ಈ ಕಾಯ್ದೆ ಜಾರಿಗೆ ಬಂದರೆ, ಹಿಂದೂ, ಮುಸ್ಲಿಂ, ಕ್ರೈಸ್ತ ಸೇರಿದಂತೆ ಯಾವುದೇ ಧರ್ಮಾಧಾರಿತ ಕಾನೂನುಗಳಿಗೆ ಬೆಲೆ ಇರುವುದಿಲ್ಲ. ವೈಯಕ್ತಿಕ ಕಾನೂನು, ಸಿವಿಲ್ ಕಾನೂನುಗಳು ರದ್ದುಗೊಳ್ಳುತ್ತದೆ.  ಹಿಂದೂ ವಿವಾಹ ಕಾಯ್ದೆ, ಮುಸ್ಲಿಂ ವಿವಾಹ ಕಾನೂನು ಹೀಗೆ ಆಯಾ ಧರ್ಮಕ್ಕೆ ಅವರದ್ದೇ ಆದ ಕಾನೂನು ಇದೆ. ವಿವಾಹ, ವಿಚ್ಛೇದನ, ಆಸ್ತಿ ಹಂಚಿಕೆ ಸೇರಿದಂತೆ ಹಲವು ಕಾನೂನುಗಳು ಹಿಂದೂಗಳಿಗೆ ಒಂದು ರೀತಿ ಇದ್ದರೆ, ಮುಸ್ಲಿಮರಿಗೆ ಮತ್ತೊಂದು ರೀತಿ ಇದೆ. ಏಕರೂಪ ನಾಗರಿಕ ನೀತಿ ಸಂಹಿತೆ ಜಾರಿಗೆ ಬಂದರೆ ಇದು ಬದಲಾಗುತ್ತದೆ.

ಸಂವಿಧಾನದ ಆರ್ಟಿಕಲ್ 25 ಹಾಗೂ 28ರ ಅಡಿ ದೇಶದ ಯಾವುದೇ ಪ್ರಜೆಗೆ ತನ್ನ ಧಾರ್ಮಿಕ ಆಚರಣೆಗಳನ್ನು ಪಾಲಿಸಲು ಸಂವಿಧಾನ ಅವಕಾಶ ನೀಡುತ್ತೆ. ಒಂದು ವೇಳೆ ಎಲ್ಲ ಧರ್ಮದವರಿಗೂ ಒಂದೇ ಕಾನೂನು ಜಾರಿ ಮಾಡಿದರೆ ವೈವಿಧ್ಯತೆಗೆ ಧಕ್ಕೆ ಬರಲಿದೆ.

ಇದನ್ನು ಓದಿ: ಮಹರಾಷ್ಟ್ರ: ಶಿಂಧೆ, ಅಜಿತ್‌ ಬಣದ 40 ಶಾಸಕರು ಘರ್ ವಾಪ್ಸಿ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...

ಗಣೇಶ ಮೆರವಣಿಗೆ ಡಿಜೆ ವಿಚಾರಕ್ಕೆ ಗಲಾಟೆ : ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; 31 ಜನರ ಮೇಲೆ ಎಫ್‌ಐಆರ್

ಗಣೇಶ ಮೆರವಣಿಗೆಯ ಡಿಜೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ....

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...