Homeಮುಖಪುಟಏಕರೂಪ ನಾಗರಿಕ ಸಂಹಿತೆ: ನೂತನ ಎನ್‌ಡಿಎ ಸರಕಾರದ ನಿಲುವೇನು?

ಏಕರೂಪ ನಾಗರಿಕ ಸಂಹಿತೆ: ನೂತನ ಎನ್‌ಡಿಎ ಸರಕಾರದ ನಿಲುವೇನು?

- Advertisement -
- Advertisement -

ಏಕರೂಪ ನಾಗರಿಕ ಸಂಹಿತೆ ಜಾರಿ ಸರ್ಕಾರದ ಕಾರ್ಯಸೂಚಿಯ ಭಾಗವಾಗಿದೆ ಎಂದು ಕೇಂದ್ರ ಕಾನೂನು ಸಚಿವ ಅರ್ಜುನ್ ರಾಮ್ ಮೇಘವಾಲ್ ಮಂಗಳವಾರ ಹೇಳಿದ್ದು, ಎನ್‌ಡಿಎ ಮೈತ್ರಿ ಸರಕಾರ ಅಧಿಕಾರಕ್ಕೆ ಬಂದರೂ ಹಿಂದಿನ ಬಿಜೆಪಿ ನೇತೃತ್ವದ ಎನ್‌ಡಿಎ ಸರಕಾರದ ಪ್ರಸ್ತಾವಿತ ಕಾಯ್ದೆ ಜಾರಿಗೆ ನೂತನ ಸರಕಾರ ಕೂಡ ಬದ್ಧವಾಗಿದೆ ಎಂದು ಹೇಳಿದ್ದಾರೆ.

ಹೈಕೋರ್ಟ್ ಮತ್ತು ಸುಪ್ರೀಂಕೋರ್ಟ್ ನ್ಯಾಯಾಧೀಶರ ನೇಮಕಾತಿ, ಪದೋನ್ನತಿ  ಮತ್ತು ವರ್ಗಾವಣೆ ಕುರಿತ ಅನುಸರಿಸಬೇಕಾದ ಪ್ರಕ್ರಿಯೆ ಕುರಿತು ಸೂಕ್ತ ಪರಿಹಾರೋಪಾಯ ಕಂಡುಕೊಳ್ಳಲಾಗುವುದು ಎಂದು ಅವರು ಇದೇ ಸಂದರ್ಭದಲ್ಲಿ ಹೇಳಿದ್ದಾರೆ.

ಸಚಿವಾಲಯದಲ್ಲಿನ ಪ್ರಮುಖ ಹುದ್ದೆಗಳ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅರ್ಜುನ್ ರಾಮ್ ಮೇಘವಾಲ್, ಸುಪ್ರೀಂಕೋರ್ಟ್, ಹೈಕೋರ್ಟ್ ಅಥವಾ ನಮ್ಮ ಸಚಿವಾಲಯ ಅಥವಾ ಅಧೀನ ನ್ಯಾಯಾಲಯಗಳಲ್ಲಿ ಎಲ್ಲೆಲ್ಲಿ ಹುದ್ದೆಗಳು ಖಾಲಿಯಿದ್ದರೂ, ನಾವು ಅವುಗಳನ್ನು ಶೀಘ್ರವಾಗಿ ಭರ್ತಿ ಮಾಡಲು ಪ್ರಯತ್ನಿಸುತ್ತೇವೆ. ಏಕಕಾಲಕ್ಕೆ ಚುನಾವಣೆ ವಿಚಾರವಾಗಿ ಮಾಜಿ ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ನೇತೃತ್ವದ ಸಮಿತಿಯು ತನ್ನ ವರದಿಯನ್ನು ಸಲ್ಲಿಸಿದ್ದು, ಅದರ ಬಗ್ಗೆ ನಾವು ನಂತರ ತಿಳಿಸುತ್ತೇವೆ ಎಂದು ಹೇಳಿದ್ದಾರೆ.

ಉನ್ನತ, ಕೆಳ ಮತ್ತು ಹೈಕೋರ್ಟ್‌ಗಳಲ್ಲಿ ಬಾಕಿ ಇರುವ ಪ್ರಕರಣಗಳಿಗೆ ಸಂಬಂಧಿಸಿ ಖಾಲಿ ಹುದ್ದೆಗಳ ಸಮಸ್ಯೆಗಳನ್ನು ಪರಿಹರಿಸುವುದು ಮೇಘವಾಲ್ ಅವರ ಮುಂದಿರುವ ಪ್ರಮುಖ ಸವಾಲುಗಳಾಗಿವೆ.

ಸರ್ಕಾರವು ಸಂಸತ್ತಿನೊಂದಿಗೆ ಹಂಚಿಕೊಂಡಿರುವ ಅಂಕಿಅಂಶಗಳ ಪ್ರಕಾರ, ಐದು ಕೋಟಿಗೂ ಹೆಚ್ಚು ಪ್ರಕರಣಗಳು ನ್ಯಾಯಾಲಯಗಳಾದ್ಯಂತ ಬಾಕಿ ಉಳಿದಿವೆ. ಕೆಳ ನ್ಯಾಯಾಲಯಗಳು, 25 ಉಚ್ಚ ನ್ಯಾಯಾಲಯಗಳು ಮತ್ತು ಸುಪ್ರೀಂ ಕೋರ್ಟ್‌ಗಳಲ್ಲಿ ಒಟ್ಟು 5 ಕೋಟಿಗೂ ಹೆಚ್ಚು ಪ್ರಕರಣಗಳು ಬಾಕಿ ಉಳಿದಿವೆ.

ಪ್ರಕರಣಗಳು ವಿಲೇವಾರಿ ವಿಳಂಬಕ್ಕೆ ವಿವಿಧ ಕಾರಣಗಳಿವೆ, ಇವುಗಳಲ್ಲಿ ನ್ಯಾಯಾಂಗದಲ್ಲಿ ಪ್ರಮುಖ ಹುದ್ದೆಗಳು ಖಾಲಿ ಇರುವುದು ಕೂಡ ಒಂದು ಕಾರಣವಾಗಿದೆ.

ಏಕರೂಪ ನಾಗರಿಕ ಸಂಹಿತೆ:

ಏಕರೂಪ ನಾಗರಿಕ ಸಂಹಿತೆ ಎಂದರೆ ಇಡೀ ದೇಶದಲ್ಲಿ ಪ್ರತಿಯೊಂದು ಧರ್ಮ, ಜಾತಿ, ಪಂಗಡ, ವರ್ಗಕ್ಕೆ ಒಂದೇ ನಿಯಮ ಜಾರಿಗೆ ತರುವುದು. ಪ್ರಸ್ತುತ ಹಿಂದೂ, ಮುಸ್ಲಿಂ, ಕ್ರಿಶ್ಚಿಯನ್ ಮತ್ತು ಪಾರ್ಸಿ ಸಮುದಾಯಗಳು ವಿಭಿನ್ನ ಧಾರ್ಮಿಕ ಕಾನೂನುಗಳನ್ನು ಹೊಂದಿವೆ. ಏಕರೂಪ ನಾಗರಿಕ ಸಂಹಿತೆ ಅನುಷ್ಠಾನವಾದರೆ ಬೇರೆಲ್ಲಾ ಧರ್ಮಗಳ ವೈಯಕ್ತಿಕ ಕಾನೂನುಗಳು ಅಂತ್ಯಗೊಳ್ಳುತ್ತವೆ.

ಏಕರೂಪ ಎನ್ನುವುದು ಭಾರತದ ಬಹುತ್ವ ಮತ್ತು ಒಕ್ಕೂಟ ವ್ಯವಸ್ಥೆಗೆ ವಿರುದ್ಧವಾದುದು. ಏಕರೂಪ ನಾಗರಿಕ ಸಂಹಿತೆಯು ಪ್ರಜಾಸತ್ತಾತ್ಮಕ ಜಾತ್ಯತೀತ ಮತ್ತು ಸಮಾಜವಾದಿ ತತ್ವಗಳ ಆಧಾರದ ಮೇಲೆ ಭಾರತೀಯ ಗಣರಾಜ್ಯವನ್ನು ಬಲಪಡಿಸುವ ಸಾಂವಿಧಾನಿಕ ಬದ್ಧತೆಯನ್ನು ಸೋಲಿಸುತ್ತದೆ.

2019ರ ಚುನಾವಣೆ ವೇಳೆ ಬಿಜೆಪಿ ಪ್ರಣಾಳಿಕೆಯಲ್ಲಿ ಸಮಾನ ನಾಗರಿಕ ಸಂಹಿತೆ ಜಾರಿ ಮಾಡುವ ಆಶ್ವಾಸನೆ ನೀಡಿತ್ತು. ದೇಶದ ಎಲ್ಲರಿಗೂ ಒಂದೇ ಕಾನೂನು ಇರಬೇಕು ಎಂದು ಬಿಜೆಪಿ ಹೇಳಿತ್ತು. ಒಂದು ವೇಳೆ ಈ ಕಾಯ್ದೆ ಜಾರಿಗೆ ಬಂದರೆ, ಹಿಂದೂ, ಮುಸ್ಲಿಂ, ಕ್ರೈಸ್ತ ಸೇರಿದಂತೆ ಯಾವುದೇ ಧರ್ಮಾಧಾರಿತ ಕಾನೂನುಗಳಿಗೆ ಬೆಲೆ ಇರುವುದಿಲ್ಲ. ವೈಯಕ್ತಿಕ ಕಾನೂನು, ಸಿವಿಲ್ ಕಾನೂನುಗಳು ರದ್ದುಗೊಳ್ಳುತ್ತದೆ.  ಹಿಂದೂ ವಿವಾಹ ಕಾಯ್ದೆ, ಮುಸ್ಲಿಂ ವಿವಾಹ ಕಾನೂನು ಹೀಗೆ ಆಯಾ ಧರ್ಮಕ್ಕೆ ಅವರದ್ದೇ ಆದ ಕಾನೂನು ಇದೆ. ವಿವಾಹ, ವಿಚ್ಛೇದನ, ಆಸ್ತಿ ಹಂಚಿಕೆ ಸೇರಿದಂತೆ ಹಲವು ಕಾನೂನುಗಳು ಹಿಂದೂಗಳಿಗೆ ಒಂದು ರೀತಿ ಇದ್ದರೆ, ಮುಸ್ಲಿಮರಿಗೆ ಮತ್ತೊಂದು ರೀತಿ ಇದೆ. ಏಕರೂಪ ನಾಗರಿಕ ನೀತಿ ಸಂಹಿತೆ ಜಾರಿಗೆ ಬಂದರೆ ಇದು ಬದಲಾಗುತ್ತದೆ.

ಸಂವಿಧಾನದ ಆರ್ಟಿಕಲ್ 25 ಹಾಗೂ 28ರ ಅಡಿ ದೇಶದ ಯಾವುದೇ ಪ್ರಜೆಗೆ ತನ್ನ ಧಾರ್ಮಿಕ ಆಚರಣೆಗಳನ್ನು ಪಾಲಿಸಲು ಸಂವಿಧಾನ ಅವಕಾಶ ನೀಡುತ್ತೆ. ಒಂದು ವೇಳೆ ಎಲ್ಲ ಧರ್ಮದವರಿಗೂ ಒಂದೇ ಕಾನೂನು ಜಾರಿ ಮಾಡಿದರೆ ವೈವಿಧ್ಯತೆಗೆ ಧಕ್ಕೆ ಬರಲಿದೆ.

ಇದನ್ನು ಓದಿ: ಮಹರಾಷ್ಟ್ರ: ಶಿಂಧೆ, ಅಜಿತ್‌ ಬಣದ 40 ಶಾಸಕರು ಘರ್ ವಾಪ್ಸಿ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಚಿವ ಸ್ಥಾನ ಸಿಗದಿದ್ದಕ್ಕೆ, ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ ಎಂಬುದು ಸುಳ್ಳು: ಶಾಸಕ ಬಿ. ಆರ್‌ ಪಾಟೀಲ್‌ ಸ್ಪಷ್ಟನೆ

ಕರ್ನಾಟಕ ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷ ಸ್ಥಾನಕ್ಕೆ ನಾನು ರಾಜೀನಾಮೆ ಸಲ್ಲಿಸಿರುವುದು ನಿಜ. ಆದರೆ, ಶಾಸಕ ಸ್ಥಾನಕ್ಕೂ ರಾಜೀನಾಮೆ ನೀಡುತ್ತಿದ್ದೇನೆ ಎಂದು ಮಾಧ್ಯಮಗಳು ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಹರಡುತ್ತಿರುವ ಸುದ್ದಿಗಳು...

ಪ್ರಧಾನಿ ಮೋದಿ ವಿಡಿಯೋ ತೆಗೆದುಹಾಕಿದ ಪ್ರಕರಣ: ಮಾರ್ಕ್ ಝುಕರ್‌ಬರ್ಗ್‌ ಕ್ಷಮೆಯಾಚಣೆಗೆ ಒತ್ತಾಯಿಸಿದ ಸಂಸದೀಯ ಸಮಿತಿ; 3 ದಿನಗಳ ಗಡುವು

ಪ್ರಧಾನಿ ನರೇಂದ್ರ ಮೋದಿಯವರ ವೀಡಿಯೊವನ್ನು ಫೇಸ್‌ಬುಕ್‌ನಿಂದ ತೆಗೆದುಹಾಕಿದ್ದಕ್ಕೆ ಸಂಬಂಧಿಸಿದಂತೆ ಮೆಟಾ ಮುಖ್ಯಸ್ಥ ಮಾರ್ಕ್ ಜುಕರ್‌ಬರ್ಗ್ ಕ್ಷಮೆಯಾಚಿಸಬೇಕೆಂದು ಸಂಸದೀಯ ಸ್ಥಾಯಿ ಸಮಿತಿ ಒತ್ತಾಯಿಸಿದ್ದು, ಈ ಕ್ರಮವನ್ನು ಗಂಭೀರವಾಗಿ ಪರಿಗಣಿಸಲಾಗಿದೆ ಎಂದು ಹೇಳಿದೆ. ಇಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ...

ಜನರ ಆತಂಕಗಳಿಗೆ ಧ್ವನಿಯಾಗಲು CJP ಸಿದ್ಧತೆ: ಮಹಾರಾಷ್ಟ್ರದಲ್ಲಿ ಅಭಿಜೀತ್ ದೀಪ್ಕೆ ನೇತೃತ್ವದಲ್ಲಿ ಉನ್ನತ ಮಟ್ಟದ ಸಭೆ

ಕಾಕ್ರೋಚ್ ಜನತಾ ಪಾರ್ಟಿ (CJP) ಸದ್ಯಕ್ಕೆ ಒತ್ತಡದ ಗುಂಪಾಗಿ ಕೆಲಸ ಮಾಡಲಿದ್ದು, ಪ್ರಸಕ್ತ ಭಾರತಕ್ಕೆ ಬೇಕಾಗಿರುವುದು ಕೂಡ ಅದೇ ಆಗಿದೆ ಎಂದು ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ ಬುಧವಾರ ಸ್ಪಷ್ಟಪಡಿಸಿದ್ದಾರೆ. ಮಹಾರಾಷ್ಟ್ರದ ಛತ್ರಪತಿ ಸಂಭಾಜಿನಗರದಲ್ಲಿ...

ರಾಯಚೂರು: ದಲಿತ ಮುಖಂಡ ಭೂಮಾನಂದ ಬರ್ಬರ ಹತ್ಯೆ; ಆಲ್ ಇಂಡಿಯಾ ಬಿಎಸ್‌ಪಿ ಹಾಗೂ ಜನಪರ ಸಂಘಟನೆಗಳ ತೀವ್ರ ಆಕ್ರೋಶ 

ರಾಯಚೂರು ಜಿಲ್ಲೆಯಲ್ಲಿ ದಲಿತ ಯುವ ನಾಯಕನೊಬ್ಬನ ಭೀಕರ ಕೊಲೆ ಪ್ರಕರಣ ವರದಿಯಾಗಿದ್ದು, ಇಡೀ ಜಿಲ್ಲೆಯಲ್ಲಿ ತೀವ್ರ ಆತಂಕ, ಕಾವು ಮತ್ತು ಆಕ್ರೋಶದ ವಾತಾವರಣ ನಿರ್ಮಾಣವಾಗಿದೆ. ದೇವದುರ್ಗ ತಾಲೂಕಿನ ಹದ್ದಿನಾಳ ಗ್ರಾಮದ ನಿವಾಸಿ, ಮಾದಿಗ...

ತಮಿಳುನಾಡು: ಹಿಂದೂ ‘ಮೇಲ್ಜಾತಿ’ ವ್ಯಕ್ತಿಯ ಜಮೀನಿನಲ್ಲಿ ಕುದುರೆ ಮೇಯಿಸುತ್ತಿದ್ದ ಎಂಬ ಕಾರಣಕ್ಕೆ 26 ವರ್ಷದ ದಲಿತ ವ್ಯಕ್ತಿಯ ಬರ್ಬರ ಹತ್ಯೆ 

ತಮಿಳುನಾಡಿನ ದಿಂಡಿಗಲ್ ಜಿಲ್ಲೆಯಲ್ಲಿ ಜಾತಿ ಗರ್ವದ ಬಲಿಪೀಠಕ್ಕೆ 26 ವರ್ಷದ ದಲಿತ ಯುವಕನೊಬ್ಬ ಬಲಿಯಾಗಿರುವ ಕ್ರೂರ ಘಟನೆ ವರದಿಯಾಗಿದೆ. ‘ಮೇಲ್ಜಾತಿ’ ಪ್ರಬಲ ಸಮುದಾಯಕ್ಕೆ ಸೇರಿದ ವ್ಯಕ್ತಿಯೊಬ್ಬನ ಜಮೀನಿನಲ್ಲಿ ಕುದುರೆ ಮೇಯುತ್ತಿತ್ತು ಎಂಬ ಕ್ಷುಲ್ಲಕ...

ಹಸು ಕೇವಲ ಉಪಯುಕ್ತ ಪ್ರಾಣಿ, ದೇವತೆಯಲ್ಲ ಎಂದಿದ್ದ ಸಾವರ್ಕರ್, ಕೋರ್ಟ್‌ನಲ್ಲಿ ಸಾವರ್ಕರ್ ಮೊಮ್ಮಗನ ಮಹತ್ವದ ಹೇಳಿಕೆ

ವಿನಾಯಕ ದಾಮೋದರ ಸಾವರ್ಕರ್ ಅವರು ಗೋಪೂಜೆಯನ್ನು ಸ್ಪಷ್ಟವಾಗಿ ವಿರೋಧಿಸಿದ್ದರು ಮತ್ತು ಹಸುವನ್ನು ಕೇವಲ ಒಂದು ಉಪಯುಕ್ತ ಪ್ರಾಣಿಯನ್ನಾಗಿಷ್ಟೇ ಪರಿಗಣಿಸುತ್ತಿದ್ದರು" ಎಂದು ಅವರ ಮೊಮ್ಮಗ ಸತ್ಯಕಿ ಸಾವರ್ಕರ್ ಪುಣೆಯ ವಿಶೇಷ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಹೇಳಿಕೆ...

ಯಾದಗಿರಿ: ಫಾರ್ಮಾ ಘಟಕದಲ್ಲಿ ವಿಷಾನಿಲ ಸೋರಿಕೆ, ಮೂವರು ಕಾರ್ಮಿಕರ ದಾರುಣ ಸಾವು, FIR ದಾಖಲು

ಜಿಲ್ಲೆಯ ಸೈದಾಪುರ ಪೊಲೀಸ್ ಠಾಣೆ ವ್ಯಾಪ್ತಿಯ ಕಡೇಚೂರು–ಬಾಡಿಯಾಳ ಕೈಗಾರಿಕಾ ಪ್ರದೇಶದಲ್ಲಿರುವ 'ಸಿಲ್ ಲ್ಯಾಬೊರೇಟರೀಸ್ ಪ್ರೈವೇಟ್ ಲಿಮಿಟೆಡ್' (Sil Laboratories Pvt Ltd) ಔಷಧಿ ತಯಾರಿಕಾ ಘಟಕದಲ್ಲಿ ಬುಧವಾರ ಮುಂಜಾನೆ ಸಂಭವಿಸಿದ ಭೀಕರ ರಾಸಾಯನಿಕ...

‘ಮದ್ರಸಾಗಳು ಭಯೋತ್ಪಾದನೆಯನ್ನು ಉತ್ಪಾದಿಸುತ್ತವೆ’: ಯುಪಿ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ದ್ವೇಷ ಭಾಷಣಕ್ಕೆ ವ್ಯಾಪಕ ಆಕ್ರೋಶ

‘ಮದ್ರಸಾಗಳು ಭಯೋತ್ಪಾದನೆಯನ್ನು ಉತ್ಪಾದಿಸುತ್ತವೆ’ ಎಂಬ ಉತ್ತರ ಪ್ರದೇಶದ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ಅವರ ಹೇಳಿಕೆಯು ತೀವ್ರ ಸ್ವರೂಪದ ವಿವಾದಕ್ಕೆ ಕಾರಣವಾಗಿದೆ. ಧಾರ್ಮಿಕ ಅಲ್ಪಸಂಖ್ಯಾತರ ಶಿಕ್ಷಣ ಸಂಸ್ಥೆಗಳನ್ನು ಗುರಿಯಾಗಿಸಿಕೊಂಡು ನೀಡಿರುವ ಈ ಹೇಳಿಕೆಯು...

ತಪ್ಪಾಗಿ ಸುದ್ದಿ ಪ್ರಕಟ : ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರಲ್ಲಿ ಕ್ಷಮೆಯಾಚಿಸಿದ PTI

ತಮ್ಮ ಹೇಳಿಕೆಯನ್ನು ತಪ್ಪಾಗಿ ಪ್ರಸಾರ ಮಾಡಿದ್ದ ಪ್ರೆಸ್ ಟ್ರಸ್ಟ್ ಆಫ್ ಇಂಡಿಯಾ (PTI) ಅಧಿಕೃತವಾಗಿ ಕ್ಷಮೆಯಾಚಿಸಿದರೂ, ಅದರಿಂದ ಈಗಾಗಲೇ ಉಂಟಾಗಿರುವ ಹಾನಿ ಸರಿಪಡಿಸಲು ಸಾಧ್ಯವಿಲ್ಲ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ಆ....

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...