Homeಮುಖಪುಟ"ಉಚ್ಛಿಷ್ಟ" ಸೇತುರಾಮ್‌ರವರ ಮಾತಿನ ಮಹಲಿನ ಕೀಳು ಅಭಿರುಚಿಯ ನಾಟಕ...

“ಉಚ್ಛಿಷ್ಟ” ಸೇತುರಾಮ್‌ರವರ ಮಾತಿನ ಮಹಲಿನ ಕೀಳು ಅಭಿರುಚಿಯ ನಾಟಕ…

"ಉಚ್ಛಿಷ್ಟ"ದ ಮೂಲಕ ತನ್ನ ಮುಖಕ್ಕೆ ತಾನೆ ಉಗಿದುಕೊಂಡ ಸೇತುರಾಮ್...

- Advertisement -
- Advertisement -

ನಿನ್ನೇ ರವೀಂದ್ರ ಕಲಾಕ್ಷೇತ್ರದಲ್ಲಿ ಸೇತುರಾಮ್ ಅವರ ಉಚ್ಛಿಷ್ಟ ನಾಟಕ ಪ್ರದರ್ಶನಗೊಂಡಿತು. ಮೊದಲೆಲ್ಲ ಅವರ ಮಂಥನ ದಾರಾವಾಹಿ ಕಂತುಗಳನ್ನು ಹುಡುಕಿ ಹುಡುಕಿ ನೋಡಿದ್ದ ನಮಗೆ ಈ ನಾಟಕ ನೋಡಿದ ಮೇಲೆ ಅವರು ತಲುಪಿರುವ ದುರ್ಗಮ್ಯವನ್ನು ನೋಡಿ ಅಯ್ಯೋ ಅನ್ನಿಸುವುದಂತೂ ಸುಳ್ಳಲ್ಲ. ಈ ನಾಟಕದಲ್ಲಿ  ತಮ್ಮ ಚತುರ ಮತ್ತು ಮೋಹಕ ಸಂಭಾಷಣೆಯ ಮೂಲಕ ಸೇತುರಾಮ್ ಅವರು ಒಂದೇ ಕಲ್ಲಿನಲ್ಲಿ ತಮಗಾಗದ ಎರಡು ತಾತ್ವಿಕತೆಯವರಿಗೆ ಟಾಂಗ್ ಕೊಡಲು ಈ ರಂಗಭೂಮಿಯನ್ನು ದುರ್ಬಳಕೆ ಮಾಡಿಕೊಂಡಿದ್ದಾರೆ. ಒಂದು ಸ್ತ್ರಿವಾದಿ ಚಿಂತನೆಯ ಮಹಿಳೆಯರನ್ನು, ಮತ್ತೊಂದು ವೈಚಾರಿಕ ಪ್ರಗತಿಪರ ಸಾಹಿತಿಗಳನ್ನು. ಇವರಿಬ್ಬರನ್ನು ಹಿಗ್ಗಾಮುಗ್ಗಾ ವಿಡಂಬಿಸಲು ಹೋಗಿ ತಮ್ಮ ವಿಕೃತ ಮನಸ್ಥಿತಿಯನ್ನು ಹೊರಹಾಕಿದ್ದಾರೆ.

ಇಲ್ಲಿನ ಮುಖ್ಯಪಾತ್ರಧಾರಿಯಾದ 70 ವರ್ಷದ ವೃದ್ಧ ವೈಚಾರಿಕ ಸಾಹಿತಿಯನ್ನಂತೂ ಕನಿಷ್ಠ ಪ್ರಾಮಾಣಿಕತೆ ಇಲ್ಲದ ಸ್ವಾರ್ಥವೇ ತುಂಬಿದವರಂತೆ ತೋರಿಸಿದ್ದಾರೆ. ಈ ಸಾಹಿತಿ ಸದಾ ಒಂದಿಲ್ಲ ಒಂದು ಪ್ರಶಸ್ತಿಗೆ, ಅವಕಾಶಕ್ಕಾಗಿ ಹಪಹಪಿಸುತ್ತಿರುತ್ತಾನೆ. ತಾನು ಸತ್ತ ಮೇಲೆ ತನ್ನ ಸಾಹಿತ್ಯ ನಿರಂತರವಾಗಿಸಲು, ತನ್ನ ಹೆಸರಲ್ಲಿ ಪ್ರತಿಷ್ಠಾನ ಆಗಬೇಕು, ದತ್ತಿ ಪ್ರಶಸ್ತಿ ಸ್ಥಾಪನೆಯಾಗಬೇಕು, ರಾಜ್ಯಾದ್ಯಂತ ವಿಚಾರಸಂಕಿರಣಗಳು ನಡೆಯಬೇಕೆಂದು ತನ್ನ ಶಿಷ್ಯವೃಂಧದ ಮೂಲಕ ಲಾಬಿ ಮಾಡಿಸುತ್ತಿರುತ್ತಾನೆ. ಮನೆಯಲ್ಲಿ ಹೆಂಡತಿ ಇದ್ದರೂ ಕಚ್ಚೆಹರುಕ ಸ್ವಭಾವದವನಾದ ಆತ ತನ್ನ ಸಾಹಿತ್ಯ ಮೆಚ್ಚಿ ಬರುವ ಗಂಡ ಬಿಟ್ಟವಳಿಗೆ ಸಹಾಯ ಮಾಡುವ ನೆಪದಲ್ಲಿ, ಹೊಸ ಬದುಕು ಕಲ್ಪಿಸಿದೆನೆಂಬ ಭ್ರಮೆಯಲ್ಲಿ ಅವಳೊಂದಿಗೆ ಸಂಸಾರ ಮಾಡುತ್ತಾನೆ. ಅವಳ ಹೆಸರಲ್ಲಿ ತಾನೆ ಪುಸ್ತಕಗಳನ್ನು ಬರೆದು 500  ಪ್ರತಿ ಪ್ರಕಟಿಸಿ, ಲೈಬ್ರರಿಗೆ ಕಳಿಸಿ, ಉಳಿದವುಗಳನ್ನು ಪ್ರಶಸ್ತಿಗಾಗಿ ಕಳಿಸಿ, ಅಲ್ಲೂ ಪ್ರಭಾವ ಬೀರಿ ಪ್ರಶಸ್ತಿ ಕೊಡಿಸಿ, ಅವಳನ್ನು ಶ್ರೇಷ್ಠ ಲೇಖಕಿಯನ್ನಾಗಿ ಮಾಡುತ್ತಾನೆ.

ಸ್ವಾರ್ಥವೇ ತುಂಬಿರುವ ಇಂಥ ಸಾಹಿತಿ ಅದ್ಯಾವ ಲೋಕದಲ್ಲಿ ಬದುಕಿದ್ದಾರೋ, ಗೊತ್ತಿಲ್ಲ. ಪ್ರಶಸ್ತಿಯ ಹಪಾಹಪಿ, ವಸೂಲಿಬಾಜಿ ಮಾಡುವುದು, “ಬಕೇಟ್” ಹಿಡಿಯುವುದು ಕೆಲ ಬುದ್ಧಿ ಸಾಹಿತಿಗಳಿಗೆ ಇದ್ದೇ ಇರುತ್ತದೆ, ನಿಜ. ಅದು ಎಲ್ಲಾ ಧಾರೆಯ ಸಾಹಿತಿಗಳಿಗೂ ಇದೇ ಹೊರತು ಕೇವಲ ಒಂದು ವರ್ಗಕ್ಕಲ್ಲ. ಆದರೆ, ವಯಸ್ಸಾದಂತೆ ಸಾಹಿತಿ ಮಾಗುತ್ತಾ ಪ್ರಬುದ್ಧನಾಗುತ್ತಾನೆ. ದಾರ್ಶನಿಕನಾಗುತ್ತಾನೆ. ಕೀರ್ತಿಯ, ಪ್ರಶಸ್ತಿಯ ನಿರರ್ಥಕತೆ ಅರ್ಥವಾಗತೊಡಗಿದಂತೆ ಅವೆಲ್ಲದಕ್ಕಿಂತಲೂ ಬದುಕು ದೊಡ್ಡದು ಎನ್ನುವ ಸತ್ಯದ ಅರಿವಾಗಿ ಇಡೀ ಸಮಾಜಕ್ಕೆ ಪೊರೆಯುವ ತಾಯ್ತನ ಅವನಲ್ಲಿ ಹರಳುಗಟ್ಟತೊಡಗುತ್ತದೆ. ಆದರೆ, ವಯಸ್ಸಾದಂತೆ ತನ್ನ ಕೀರ್ತಿ ಶನಿಯ ಪ್ರತಿಮೆಯನ್ನು ತಾನೆ ತಯಾರಿಸಿಕೊಳ್ಳುವ, ಕನಿಷ್ಠ ಪ್ರಾಮಾಣಿಕತೆಯೂ ಇಲ್ಲದ, ಈ ನಾಟಕದಲ್ಲಿನ ಸಾಹಿತಿಯನ್ನು ಸೇತುರಾಮ್ ಅವರು ಅದೆಲ್ಲಿಂದ ಹುಡುಕಿ ತಂದಿದ್ದಾರೋ ಅವರಿಗೆ ಗೊತ್ತು.

ಇನ್ನು ಈ ಸಾಹಿತಿಯನ್ನು ನಂಬಿ ಬಂದಿರುವ ಆ ಹೆಣ್ಣುಮಗಳು ಕೂಡ ಕಿರುಕುಳ ಕೊಡುವ ಗಂಡನನ್ನು ಕುಕ್ಕರಿನ ಹಿಡಿಕೆಯಿಂದ ತಲೆಗೆ ಹೊಡೆದು ಮನೆ ಬಿಟ್ಟು ಓಡಿಸಿದವಳು.  ಆಮೇಲೆ ಬಂದು ಈ ಸಾಹಿತಿಯ ಆಶ್ರಯ ಪಡೆಯುತ್ತಾಳೆ. ಆದರೆ, ಲೋಕವೆಲ್ಲ  ತನ್ನ ಕಡೆ ಬೊಟ್ಟು ಮಾಡಿ ಹಾದರಗಿತ್ತಿ ಅಂತಿದೆ ಅನ್ನೋ ಗುಮಾನಿ ಸದಾ ಇವಳಿಗೆ. ತನ್ನದು ಹಾದರ ಎಂದು ಕರೆಯುವ ಈ ಸಮಾಜ ಮತ್ತು ಉಳಿದೆಲ್ಲ ಸ್ತ್ರೀಯರು ಹೇಗೆಲ್ಲ ಹಾದರ ಮಾಡ್ತಿದ್ದಾರೆ ಎಂದು ಆಗಾಗ ಸಿಡುಕುತ್ತಾ ಸಮರ್ಥಿಸಿಕೊಳ್ಳುತ್ತಾಳೆ. ಆಶ್ರಯ, ಮನೆ, ಹೆಸರು, ಕೀರ್ತಿಗಾಗಿ ಮಾತ್ರ ಈ ಮುದುಕನನ್ನು ಸಹಿಸಿಕೊಂಡಿದ್ದೇನೆ ಎಂದು ಬಾಯ್ಬಿಟ್ಟೆ ಹೇಳುತ್ತಿರುತ್ತಾಳೆ. ಮುಪ್ಪಿನ ಕಾಲದಲ್ಲಿ ಆ ಮುದುಕನ ವಿಸರ್ಜನೆಗಳೆಲ್ಲ ಹೇಗಪ್ಪ ಸ್ವಚ್ಚಗೊಳಿಸುವುದು ಎಂದು ಆಗಾಗ ಹಲಬುತ್ತಿರುತ್ತಾಳೆ.

ತಾಯಿ ಮಗಳ ನಡುವೆ ನಡೆಯುವ ಒಂದು ಸಂಭಾಷಣೆಯಂತೂ ಇಡೀ ಸ್ತ್ರೀಕುಲಕ್ಕೆ ಮಾಡುವ ಅವಮಾನದಂತಿದೆ. ಗಂಡನನ್ನು ಮನೆಬಿಟ್ಟು ಓಡಿಸಿರುವ ನೀನು, ಅವನ ಪಿಂಡವಾದ ನನ್ನನ್ನೇಕೆ ಸಾಕಿ ಸಲುಹಿದೆ ಎಂದು ಮಗಳು ಪ್ರಶ್ನಿಸುತ್ತಾಳೆ. ಆಗ ತಾಯಿ, “ನೀನು ಬೇಸರ ಮಾಡಿಕೊಳ್ಳುವುದಿಲ್ಲವೆಂದರೆ ಸತ್ಯ ಹೇಳುತ್ತೇನೆ ಕೇಳು. ಗರ್ಭದಲ್ಲಿದ್ದ ನಿನ್ನ ಮೇಲೆ ನನಗೆ ಯಾವ ಮೋಹವೂ ಇರಲಿಲ್ಲ. ನಿನ್ನನ್ನು ತೆಗೆಸಿಬಿಟ್ಟರೆ ನನ್ನ ಜೀವಕ್ಕೆ ಅಪಾಯ ಎಂಬ ಭಯದಿಂದ ತೆಗೆಸಿಲಿಲ್ಲ” ಎನ್ನುತ್ತಾಳೆ. ಹೊಟ್ಟೆಯಲ್ಲಿದ್ದ ಚೊಚ್ಚಲ ಗರ್ಭದ ಕುರಿತು ಎಂಥ ಕ್ರೂರಿ ಮಹಿಳೆಯಾದರೂ ಹೀಗೆ ಹೇಳಲಿಕ್ಕಿಲ್ಲ. ತಾಯ್ತನದ ಸಂಭ್ರಮವೇ ಅಂಥದ್ದು.  ಸೇತುರಾಮ್ ಅವರ ನಾಟಕದಲ್ಲಿನ ಹೆಣ್ಣುಮಗಳು ಮಾತ್ರ ಹೀಗೆ ಹೇಳಬಲ್ಲಳೇನೋ.

ನಾಟಕದ ಕೊನೆಯಲ್ಲಿ ಆ ಮುದಿ ಸಾಹಿತಿಯನ್ನು ಬಿಟ್ಟು ಹೋಗುವ ಮೂಲಕ, ಒಂಚೂರು ಮಹಿಳೆಯರ ಸ್ವಾತಂತ್ರ್ಯದ ಕಡೆ ವಾಲಿದಂತೆ ಅಷ್ಟೊತ್ತಿಗಾಗಲೇ ಸ್ತ್ರೀಕುಲದ ಮಾನವೆಲ್ಲ ಹರಾಜಾಗ್ತಿರದೆ ಅನ್ನೋದನ್ನ ಮರೆಯುವಂತಿಲ್ಲ.

ಹೀಗೆ ಮೂರೆ ಪಾತ್ರಗಳನ್ನಿಟ್ಟುಕೊಂಡು ಬರೀ ಮಾತು, ಮಾತು, ಮಾತುಗಳಿಂದಲೇ ಒಂದೂವರೆ ಗಂಟೆಯವರೆಗೂ ನಿರ್ದೇಶಕರು ನಾಟಕ ಓಡಿಸುತ್ತಾರೆ. ವರ್ಷಿಣಿ ಮತ್ತು ಅಕ್ಷತಾ ತಮಗೆ ಒಪ್ಪಿಸಿದ ಡೈಲಾಗ್ ಗಳನ್ನು ಅಚ್ಚುಕಟ್ಟಾಗಿ ಒಪ್ಪಿಸುವ ಮೂಲಕ ಪ್ರೇಕ್ಷಕರ ಚಪ್ಪಾಳೆ ಗಿಟ್ಟಿಸಿಕೊಂಡರು. ಹಿರಿಯ ಸಾಹಿತಿಯ ಪಾತ್ರಕ್ಕೆ ಸೇತುರಾಮ್ ಅವರು ಸಹ ಈ ಇಳಿ ವಯಸ್ಸಿನಲ್ಲೂ ನ್ಯಾಯ ಒದಗಿಸಿದ್ದನ್ನು ಮೆಚ್ಚಲೇಬೇಕು. ಆದರೆ, ಸಂಗೀತ, ಬೆಳಕು, ಮೇಕಪ್, ವಸ್ತ್ರ ವಿನ್ಯಾಸ ಇತ್ಯಾದಿ ರಂಗ ಸಾಧ್ಯತೆಗಳು ಇಲ್ಲಿ ಹುಡುಕಿದರೂ ಸಿಗಲಿಕ್ಕಿಲ್ಲ.  ಬೇರೆ ಬ್ಯಾನರಿನ ನಾಟಕಗಳನ್ನು ನೋಡಿದ ಪ್ರೇಕ್ಷಕರಿಗೆ ಈ ಮಾತಿನ ಮಹಲಿನ ನಾಟಕ ಖಂಡಿತ ಬೋರು ಹೊಡೆಸಬಹುದೇನೋ, ಆದ್ರೂ ಈ ನಾಟಕಕ್ಕೆ 200, 150 ಮತ್ತೂ 100 ರೂ.ಗಳ ಟಿಕೇಟ್ ಗಳನ್ನಿಟ್ಟು, ಅತಿ ಕಡಿಮೆ ದುಡ್ಡು ನೀಡಿದವರನ್ನು ಮೇಲಿನ ಬಾಲ್ಕಿನಿಗೆ (ಕೆಳಗಡೆ ಸಾಕಷ್ಟು ಆಸನಗಳು ಖಾಲಿಯಿದ್ದರೂ) ಕಳಿಸುವ ಮೂಲಕ ನಾನು ಗೊತ್ತಿರುವ ಮಟ್ಟಿಗೆ ರಂಗಭೂಮಿಯಲ್ಲಿ ಮೊದಲ ಬಾರಿಗೆ ಪ್ರೇಕ್ಷಕರನ್ನು ವಿಂಗಡಿಸಿದ್ದು ಮೊದಲಿಗೆ ಕಂಡು ಬಂತು.

ಇನ್ನೊಂದು ಮಾತು ಹೇಳಲೇಬೇಕು. ಸೇತುರಾಮ್ ಅವರ ಮೊದಲಿನ, ಗತಿ, ಅತೀತ, ನಾಟಕಗಳನ್ನು ನೋಡಿದವರಿಗಂತೂ ಈ ನಾಟಕದಲ್ಲಿ ಯಾವ ವಿಶೇಷವೂ ಸಿಗುವುದಿಲ್ಲ. ಅವವೇ ಡೈಲಾಗ್ ಗಳು ಈ ನಾಟಕದಲ್ಲೂ ರಿಪೀಟ್‌ ಆಗಿವೆ. ಉದಾಹರಣೆಗೆ “ಅತೀತ”ದಲ್ಲಿ ಬರುವ ಲಾಯರ್ ಪಾತ್ರ ಈ ನಾಟಕದಲ್ಲಿ ವಿಚಾರವಾದಿ ಸಾಹಿತಿಯಾಗಿದ್ದಾನಷ್ಟೇ. ಅಲ್ಲಿ ಲಾಯರ್ ಕೈ ಕೆಳಗೆ ಬರುವ ಯುವ ವಕೀಲೆ ಇಲ್ಲಿ ಗಂಡ ಬಿಟ್ಟ ಮಹಿಳೆಯಾಗಿದ್ದಾಳೆ. ಅಲ್ಲಿ ಲಾಯರ್ ಮಾತಾಡುವ  ಬಹುತೇಕ ಮಾತುಗಳನ್ನು ಇಲ್ಲಿ ಸಾಹಿತಿ ಮಾತನಾಡುತ್ತಾನೆ ಅಷ್ಟೆ.

ಉಚ್ಛಿಷ್ಟ ಎಂದರೆ ಇನ್ನೊಬ್ಬರು ತಿಂದುಬಿಟ್ಟ ಎಂಜಲು ಅಂಥ ಅರ್ಥ. ಗಂಡ ಬಿಟ್ಟ ಹೆಣ್ಣು ಎಷ್ಟೇ ಆದರೂ ಎಂಜಲು ಎಂದು ಹೇಳಲು ಈ ಹೆಸರಿಟ್ಟಿರಬಹುದು. ಇದನ್ನು ಇನ್ನೊಂದು ಅರ್ಥದಲ್ಲಿ ಅರ್ಥೈಸಬಹುದು. ಭೈರಪ್ಪನವರ ಹೇಳಿಬಿಟ್ಟಿರುವ ಈ ವಿಚಾರಗಳನ್ನೇ ಈ ನಾಟಕವೂ ಹೇಳುತ್ತಿರುವುದರಿಂದ ಇದನ್ನು ಅವರ ಉಚ್ಛಿಷ್ಟ ಎನ್ನಬಹುದೇನೋ. ಕವಲು ಕಾದಂಬರಿಯ ಪಾತ್ರಗಳ ಆತ್ಮ ಇಲ್ಲೂ ಕೂಡ ಜೀವನದುದ್ದಕ್ಕೂ ಮಾಡಬಾರದೆಲ್ಲವನ್ನು ಮಾಡಿ ತಮ್ಮನ್ನು ತಾವು ಸಮರ್ಥಿಸಿಕೊಳ್ಳುತ್ತಾ ಹುಯಿಲಿಡುತ್ತಿವೆ ಎನ್ನಿಸಿತು.

ಒಟ್ನಲ್ಲಿ ಈ ನಾಟಕ ತನ್ನ ಪಾಡಿಗೆ ತಾನು ಹುಟ್ಟಿಕೊಂಡ ನಾಟಕವಲ್ಲ, ತಮಗೆ ಆಗಿಬಾರದ ತಾತ್ವಿಕತೆಯನ್ನು ವಿರೋಧಿಸಲು ಕಷ್ಟಪಟ್ಟು ಆಕರ್ಷಕ ಸಂಭಾಷಣೆಗಳ ಮೂಲಕ ಕಟ್ಟಿಸಿಕೊಂಡ ನಾಟಕವಿದು. ಧಾರಾವಾಹಿ ನಿರ್ದೇಶಕರಾಗಿ, ಕಥೆಗಾರರಾಗಿ ಹೆಸರು ಮಾಡಿದ್ದ ಹಿರಿಯ ಬರಹಗಾರರಾದ ಸೇತುರಾಮ್ ಅವರು ಈ ನಾಟಕಗಳ ಮೂಲಕ ವಿಚಾರವಾದಿ ಸಾಹಿತಿಗಳಿಗೆ ಟಾಂಗ್ ಕೊಡಲು ಹೋಗಿ ತಮ್ಮತನ ಕಳೆದುಕೊಳ್ಳುತ್ತಿದ್ದಾರೆ. ಒಬ್ಬ ಸಾಹಿತಿಯಾಗಿ ತಮ್ಮ ಮುಖಕ್ಕೆ ತಾವೇ ಉಗಿದುಕೊಳ್ಳುತ್ತಿದ್ದಾರೆ. ಎಂದೆನಿಸಿದ್ದಂತೂ ಸುಳ್ಳಲ್ಲ. ಮುಂದಿನ ನಾಟಕಗಳಲ್ಲಿ ಹಾಗಾಗದಿರಲಿ ಅಂತ ಹಾರೈಸೋಣ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಹನಮಂತ ಹಾಲಿಗೇರಿ ಅವರಿಗೆ, ವಿಮರ್ಶಕರಿಗೆ ಜೀವನಾನುಭವ ಇರಬೇಕು ಅನ್ನುತ್ತಾರೆ. ಈ ನಾಟಕದ ಕುರಿತು ನೀವು ಹೇಳಿದ ಇದೊಂದು ಮಾತು ನಿಮಗೆ ಜೀವನಾನುಭವದ ಕೊರತೆ ಇದೆ ಎನ್ನುವುದನ್ನು ಪ್ರಕಟಪಡಿಸುತ್ತದೆ ಮತ್ತು ಕೊನೆ ಪಕ್ಷ ಹೀಗೂ ಇರಬಹುದೇ ಅನ್ನುವ ಬೆರಗಾದರೂ ನಿಮಗೆ ಇರಬೇಕಾಗಿತ್ತಲ್ಲವೇ ಎನ್ನಿಸುತ್ತದೆ.ಇಡೀ ಸ್ತ್ರೀ ಕುಲಕ್ಕೆ ಮಾನ ಯಾವುದು ಅವಮಾನ ಯಾವುದು ಎನ್ನುವುದನ್ನು ನೀವು ಒಂದು ಮಾತಿನ ಮೂಲಕ ನಿರ್ಧರಿಸುವಿರೇ?! ಮುಕ್ತ ಮನಸ್ಸು ಇಲ್ಲದಿದ್ದರೆ ಕಲೆಯನ್ನು ಅರ್ಥಮಾಡಿಕೊಳ್ಳಲು ಆಗುವುದಿಲ್ಲ. – (ತಾಯಿ ಮಗಳ ನಡುವೆ ನಡೆಯುವ ಒಂದು ಸಂಭಾಷಣೆಯಂತೂ ಇಡೀ ಸ್ತ್ರೀಕುಲಕ್ಕೆ ಮಾಡುವ ಅವಮಾನದಂತಿದೆ……”ತಾಯಿ, “ನೀನು ಬೇಸರ ಮಾಡಿಕೊಳ್ಳುವುದಿಲ್ಲವೆಂದರೆ ಸತ್ಯ ಹೇಳುತ್ತೇನೆ ಕೇಳು. ಗರ್ಭದಲ್ಲಿದ್ದ ನಿನ್ನ ಮೇಲೆ ನನಗೆ ಯಾವ ಮೋಹವೂ ಇರಲಿಲ್ಲ. ನಿನ್ನನ್ನು ತೆಗೆಸಿಬಿಟ್ಟರೆ ನನ್ನ ಜೀವಕ್ಕೆ ಅಪಾಯ ಎಂಬ ಭಯದಿಂದ ತೆಗೆಸಿಲಿಲ್ಲ” ಎನ್ನುತ್ತಾಳೆ. ಹೊಟ್ಟೆಯಲ್ಲಿದ್ದ ಚೊಚ್ಚಲ ಗರ್ಭದ ಕುರಿತು ಎಂಥ ಕ್ರೂರಿ ಮಹಿಳೆಯಾದರೂ ಹೀಗೆ ಹೇಳಲಿಕ್ಕಿಲ್ಲ. ತಾಯ್ತನದ ಸಂಭ್ರಮವೇ ಅಂಥದ್ದು.”)

  2. ಇಲ್ಲಿ ನಿರ್ದೇಶಕರು, ಒಂದು ವೇಳೆ ಎಲ್ಲಾ ಸಾಹಿತಿಗಳು, ಎಲ್ಲಾ ಹಣ್ಣು (ತಾಯಂದಿರು) ಮಕ್ಕಳು ಹೀಗೆಯೇ ಎಂದು ಹೇಳಿ(ಸಿ)ದರೆ ನಿಜಕ್ಕೂ ಅದು ತಪ್ಪು. ಆದರೆ ಈ ನಿರ್ದಶಕರು ಹಾಗೆ ಹೇಳಿ(ಸಿ)ರಲಿಕ್ಕಿಲ್ಲ. ಆದರೆ ಈ ಸರಸ್ವತಿಯ ದೇಗುಲದಲ್ಲಿ (ಅತೀ ವಿರಳ) ಇಂತಹವರೂ ಇರುತ್ತಾರೆ, ಇಂತಹವರು ತನ್ನ ಸ್ವಾರ್ಥಕ್ಕಾಗಿ
    ಅಬಲೆಯವರನ್ನು ದುರುಪಯೋಗ ಮಾಡಿಕೊಳ್ಳುತ್ತಾರೆ, ಎಂಬುದನ್ನು ಹೇಳಿ(ಸಿ)ದ್ದರೆ ಅದರಲ್ಲಿ ತಪ್ಪೇನಿಲ್ಲ. ಎನ್ನುವುದು ನನ್ನ ಅಭಿಮತ.

LEAVE A REPLY

Please enter your comment!
Please enter your name here

- Advertisment -

‘ಮೋದಿ ಅವರ ‘ದಿಮಾಗಿ ನಕ್ಸಲ್’ ಹೇಳಿಕೆಯು ಮುಂಬರುವ ಯುವ ಭಿನ್ನಾಭಿಪ್ರಾಯದ ಅಲೆಯನ್ನು ‘ರಾಷ್ಟ್ರವಿರೋಧಿ’ ಎಂದು ಬಿಂಬಿಸುವ ಪ್ರಯತ್ನವಾಗಿದೆ’: ಆನಂದ್ ತೇಲ್ತುಂಬ್ಡೆ

ಜೆನ್ ಝೀ ಅಲೆಯ ಹೊಸ ರೀತಿಯ ಪ್ರತಿಭಟನೆಗೆ ಬೆಚ್ಚಿಬಿದ್ದಿರುವ ಪ್ರಧಾನಿ ಮೋದಿಯವರ 'ದಿಮಾಗಿ ನಕ್ಸಲ್' ಹೇಳಿಕೆಯ ಮುಖವಾಡವನ್ನು 'ದಿ ವೈರ್' ಲೇಖನದಲ್ಲಿ ಪ್ರಸಿದ್ಧ ಚಿಂತಕ ಡಾ. ಆನಂದ್ ತೇಲ್ತುಂಬ್ಡೆ ಬಿಚ್ಚಿಟ್ಟಿದ್ದಾರೆ. ಆಡಳಿತದ ವಿಫಲ...

SIR : ಮೂರು ದೇಶಗಳಿಗೆ ಭಾರತದ ರಾಯಭಾರಿಯಾಗಿದ್ದ ನವದೀಪ್ ಸೂರಿಗೆ ಪೌರತ್ವ ಸಾಬೀತುಪಡಿಸುವ ಸವಾಲು!

ಪಂಜಾಬ್‌ನಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯಲ್ಲಿ ಪೌರತ್ವ ಸಾಬೀತುಪಡಿಸುವ ವಿಧಾನದ ಕುರಿತು ಮಾಜಿ ರಾಜತಾಂತ್ರಿಕ ನವದೀಪ್ ಸೂರಿ ಅವರು ಭಾನುವಾರ (ಆ.23) ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ....

ಸೊಹ್ರಾಬುದ್ದೀನ್ ಶೇಖ್ ಎನ್‌ಕೌಂಟರ್ ಪ್ರಕರಣ : 22 ಆರೋಪಿಗಳ ಖುಲಾಸೆ ಪ್ರಶ್ನಿಸಿ ಸುಪ್ರೀಂ ಮೆಟ್ಟಿಲೇರಿದ ಸಹೋದರ

ಸೊಹ್ರಾಬುದ್ದೀನ್ ಶೇಖ್ ಮತ್ತು ಅವರ ಪತ್ನಿ ಕೌಸರ್ ಬಿ ಹಾಗೂ ಆಪ್ತ ತುಳಸಿರಾಮ್ ಪ್ರಜಾಪತಿ ಅವರ 2005ರ ನಕಲಿ ಎನ್‌ಕೌಂಟರ್ ಪ್ರಕರಣದಲ್ಲಿ ಗುಜರಾತ್, ರಾಜಸ್ಥಾನ ಮತ್ತು ಆಂಧ್ರಪ್ರದೇಶದ 21 ಪೊಲೀಸರು ಸೇರಿದಂತೆ ಒಟ್ಟು...

ಉತ್ತರ ಪ್ರದೇಶ| ಚಲಿಸುವ ರೈಲಿನಲ್ಲಿ ಮದರಸಾ ವಿದ್ಯಾರ್ಥಿ ಮೇಲೆ ಹಲ್ಲೆ; ಬಲವಂತವಾಗಿ ಮದ್ಯ ಕುಡಿಸಿದ ದುಷ್ಕರ್ಮಿಗಳು

ಪಶ್ಚಿಮ ಉತ್ತರ ಪ್ರದೇಶದಲ್ಲಿ ಶನಿವಾರ ರಾತ್ರಿ ಚಲಿಸುತ್ತಿದ್ದ ರೈಲಿನಲ್ಲಿ ಮದರಸಾ ವಿದ್ಯಾರ್ಥಿಯೊಬ್ಬನ ಮೇಲೆ ಕುಡಿದ ಮತ್ತಿನಲ್ಲಿದ್ದ ಯುವಕರ ಗುಂಪೊಂದು ಹಲ್ಲೆ ನಡೆಸಿ, ಆತನ ಧಾರ್ಮಿಕ ಗುರುತನ್ನು ನಿಂದಿಸಿ, ಬಲವಂತವಾಗಿ ಮದ್ಯ ಕುಡಿಸಿರುವ ಘಟನೆ...

ಶೈಕ್ಷಣಿಕ ಬೇಡಿಕೆಗಳಿಗಾಗಿ ವಾರ್ಧಾ ಎಂಜಿಎಎಚ್‌ವಿಯಲ್ಲಿ ವಿದ್ಯಾರ್ಥಿಗಳ ಅಹೋರಾತ್ರಿ ಸತ್ಯಾಗ್ರಹ: 47ನೇ ದಿನಕ್ಕೆ ಕಾಲಿಟ್ಟ ಪ್ರತಿಭಟನೆ, 6 ವಿದ್ಯಾರ್ಥಿಗಳ ವಿರುದ್ಧ ಎಫ್‌ಐಆರ್

ವಾರ್ಧಾ (ಮಹಾರಾಷ್ಟ್ರ): ಮಹಾರಾಷ್ಟ್ರದ ವಾರ್ಧಾದಲ್ಲಿರುವ ಪ್ರತಿಷ್ಠಿತ ಮಹಾತ್ಮ ಗಾಂಧಿ ಅಂತರರಾಷ್ಟ್ರೀಯ ಹಿಂದಿ ವಿಶ್ವವಿದ್ಯಾಲಯದಲ್ಲಿ (ಎಂಜಿಎಎಚ್‌ವಿ) ಶೈಕ್ಷಣಿಕ ಹಾಗೂ ವಿದ್ಯಾರ್ಥಿ ಕಲ್ಯಾಣಕ್ಕೆ ಸಂಬಂಧಿಸಿದ ವಿವಿಧ ಮೂಲಭೂತ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ವಿದ್ಯಾರ್ಥಿಗಳು ನಡೆಸುತ್ತಿರುವ ಸತ್ಯಾಗ್ರಹವು...

ಮೀಸಲಾತಿ ವಿರೋಧಿ ಬೇಡಿಕೆಗಳ ವಿರುದ್ಧ ದೇಶದ್ರೋಹ ಪ್ರಕರಣ ದಾಖಲಿಸಿ: ಕೇಂದ್ರ ಸಚಿವ ಅಠಾವಳೆ ಆಗ್ರಹ

ಮೀಸಲಾತಿಯನ್ನು ವಿರೋಧಿಸುವ ಅಥವಾ ಅದನ್ನು ರದ್ದುಗೊಳಿಸಲು ಆಗ್ರಹಿಸುವವರ ವಿರುದ್ಧ ದೇಶದ್ರೋಹದ ಪ್ರಕರಣಗಳನ್ನು ದಾಖಲಿಸಬೇಕೆಂದು ಕೇಂದ್ರ ಸಚಿವ ಹಾಗೂ ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾ (ಅಠಾವಳೆ) ಅಧ್ಯಕ್ಷ ರಾಮದಾಸ್ ಅಠಾವಳೆ ಭಾನುವಾರ ಆಗ್ರಹಿಸಿದ್ದಾರೆ. ಮೀಸಲಾತಿ ವಿರೋಧಿಸಿ...

Karnataka SIR : ಇಂದು ಕರಡು ಪಟ್ಟಿ ಪ್ರಕಟ; 43.80 ಲಕ್ಷ ಮತದಾರರಿಗೆ ದಾಖಲೆ ಕೇಳಿ ನೋಟಿಸ್

ಕರ್ನಾಟಕದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್‌) ಮನೆ ಮನೆ ಗಣತಿಯ (ಎನ್ಯುಮರೇಷನ್ ಫಾರಂ ಹಂತ) ಬಳಿಕ ಕರಡು ಮತದಾರರ ಪಟ್ಟಿಯನ್ನು ರಾಜ್ಯ ಚುನಾವಣಾ ಆಯೋಗ ಇಂದು (ಆ.24, ಸೋಮವಾರ) ಪ್ರಕಟಿಸಲಿದೆ....

ಅಮೆರಿಕದೊಂದಿಗಿನ ಯುದ್ಧಕ್ಕೆ ಇರಾನ್ 40 ವರ್ಷಗಳಿಂದ ಸಿದ್ಧವಾಗಿತ್ತು: ನಿವೃತ್ತ ಲೆಫ್ಟಿನೆಂಟ್ ಜನರಲ್ ಧಿಲ್ಲೋನ್

"ತನ್ನ ಅತ್ಯುನ್ನತ ನಾಯಕತ್ವವನ್ನು ಕಳೆದುಕೊಳ್ಳುವಂತಹ ತುರ್ತು ಪರಿಸ್ಥಿತಿಗಳು ಸೇರಿದಂತೆ, ಅಮೆರಿಕದೊಂದಿಗಿನ ಸಂಭಾವ್ಯ ಯುದ್ಧಕ್ಕಾಗಿ ಇರಾನ್ ನಾಲ್ಕು ದಶಕಗಳಿಂದ ಸಿದ್ಧತೆ ನಡೆಸಿದೆ. ಹೀಗಾಗಿ ಎದುರಾಳಿಗಳಿಗೆ ಆ ದೇಶವನ್ನು ಸಂಪೂರ್ಣವಾಗಿ ನಾಶಪಡಿಸುವುದು ಕಷ್ಟಕರವಾಗಿದೆ" ಎಂದು ಭಾರತೀಯ...

ಸಚಿವ ಬಿ. ನಾಗೇಂದ್ರ ವಜಾಗೆ ಆಗ್ರಹಿಸಿ ಆಗಸ್ಟ್ 24ರಂದು ವಿಧಾನಸೌಧ ಮುತ್ತಿಗೆಗೆ ಕರೆ ನೀಡಿದ ಬಿಜೆಪಿ: ಉಲ್ಬಣಗೊಂಡ ರಾಜಕೀಯ ಸಂಘರ್ಷ

ಕರ್ನಾಟಕದ ರಾಜಕೀಯ ವಲಯದಲ್ಲಿ ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಣಕಾಸು ಅಕ್ರಮ ಪ್ರಕರಣವು ಭಾರಿ ಸಂಚಲನ ಮೂಡಿಸಿದ್ದು, ಆಡಳಿತಾರೂಢ ಕಾಂಗ್ರೆಸ್ ಸರ್ಕಾರ ಮತ್ತು ವಿರೋಧ ಪಕ್ಷಗಳ ನಡುವಿನ ಸಮರ...

ಕೇರಳ ವಿಶ್ವವಿದ್ಯಾಲಯದಲ್ಲಿ ಜಾತಿ ತಾರತಮ್ಯ; ದಲಿತ ಪಿಎಚ್‌ಡಿ ಸಂಶೋಧಕಿಯಿಂದ ಆರೋಪ

ತುಂಚತ್ ಎಝುತ್ತಚ್ಚನ್ ಮಲಯಾಳಂ ವಿಶ್ವವಿದ್ಯಾಲಯದ (ಟಿಇಎಂಯು) ದಲಿತ ಸಂಶೋಧಕಿಯೊಬ್ಬರು, "ಸಹಾಯಕ ಪ್ರಾಧ್ಯಾಪಕರೊಬ್ಬರು ತಮ್ಮ ವಿರುದ್ಧ ಜಾತಿ ಆಧಾರಿತ ತಾರತಮ್ಯ, ಕಿರುಕುಳ ಮತ್ತು ಪಿಎಚ್‌ಡಿ ಸಂಶೋಧನೆಗೆ ಅಡ್ಡಿಪಡಿಸುತ್ತಿದ್ದಾರೆ" ಎಂದು ಆರೋಪಿಸಿದ್ದಾರೆ. ಆಗಸ್ಟ್ 15 ರಿಂದ ತಿರೂರಿನ...