Homeಮುಖಪುಟಉದಯಪುರ್‌ ಘಟನೆ: ‘ತಾಲಿಬಾನೀಕರಣ’ ಚರ್ಚೆಯ ಜೊತೆಗೆ ಜುಬೈರ್‌‌ ಹೆಸರು ಥಳುಕುಹಾಕಿದ ಮಾಧ್ಯಮಗಳು!

ಉದಯಪುರ್‌ ಘಟನೆ: ‘ತಾಲಿಬಾನೀಕರಣ’ ಚರ್ಚೆಯ ಜೊತೆಗೆ ಜುಬೈರ್‌‌ ಹೆಸರು ಥಳುಕುಹಾಕಿದ ಮಾಧ್ಯಮಗಳು!

- Advertisement -
- Advertisement -

ರಾಜಸ್ಥಾನದ ಉದಯಪುರ್‌ನಲ್ಲಿ ನಡೆದ ಘಟನೆಯನ್ನು ‘ತಾಲೀಬಾನೀಕರಣ’ದ ಭಾಗವಾಗಿ ಚರ್ಚಿಸುತ್ತಿರುವ ಮಾಧ್ಯಮಗಳು, ಖ್ಯಾತ ಪತ್ರಕರ್ತ, ಆಲ್ಟ್‌ನ್ಯೂಸ್‌ ಸಹಸಂಸ್ಥಾಪಕ ಮೊಹಮ್ಮದ್ ಜುಬೇರ್‌ ಹೆಸರನ್ನು ಪ್ರಕರಣಕ್ಕೆ ಥಳುಕುಹಾಕುವ ಪ್ರಯತ್ನವನ್ನು ಮಾಡುತ್ತಿವೆ. ಈ ಕುರಿತು ‘ನ್ಯೂಸ್‌ಲಾಂಡ್ರಿ’ ಜಾಲತಾಣ ವಿಶೇಷ ವರದಿ ಮಾಡಿದೆ.

“ರಾಜಸ್ಥಾನದ ಉದಯಪುರದಲ್ಲಿ ಹಿಂದೂ ಟೈಲರ್‌ನ ಭೀಕರ ಹತ್ಯೆಯನ್ನು ಆಲ್ಟ್ ನ್ಯೂಸ್ ಸಹಸ್ಥಾಪಕ ಮೊಹಮ್ಮದ್ ಜುಬೇರ್ ಸಕ್ರಿಯಗೊಳಿಸಿದ್ದಾರೆ” ಎಂದು ನೀವು ನಂಬಬೇಕೆಂದು ಟೈಮ್ಸ್‌ನೌ ಪತ್ರಕರ್ತ ರಾಹುಲ್ ಶಿವಶಂಕರ್ ಹೇಳಿಬಿಟ್ಟರು.

“ಕಳೆದ ತಿಂಗಳು ಪ್ರವಾದಿ ಮುಹಮ್ಮದ್ ಕುರಿತು ಮಾಜಿ ಬಿಜೆಪಿ ವಕ್ತಾರೆ ನೂಪುರ್ ಶರ್ಮಾ ಹೇಳಿದ್ದನ್ನು ಜುಬೈರ್ ಬೆಳಕಿಗೆ ತಂದಿದ್ದಕ್ಕಾಗಿ ಧನ್ಯವಾದಗಳು. ಅದಕ್ಕಾಗಿ ದಂಡ ತೆರಬೇಕಾಯಿತು. ಆ ದಂಡವನ್ನು ಇಂದು ಕನ್ಹಯ್ಯಾ ಲಾಲ್ ಪಾವತಿಸಿದ್ದಾರೆ” ಎನ್ನುತ್ತಾರೆ ರಾಹುಲ್‌. ಕಳೆದ ರಾತ್ರಿ ಟೈಮ್ಸ್ ನೌ ಪ್ರೈಮ್‌ಟೈಮ್ ಚರ್ಚೆಯು ಹೀಗೆ ನಡೆಯುತ್ತದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಇಬ್ಬರು ಮತಾಂಧರು ಕನ್ಹಯ್ಯಾ ಲಾಲ್‌ ಅವರ ಶಿರಚ್ಛೇದನ ಮಾಡಿದ ಭಯಾನಕ ಚಿತ್ರಗಳು ಮತ್ತು ವೀಡಿಯೊಗಳು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದವು. ಆ ಇಬ್ಬರು ವ್ಯಕ್ತಿಗಳು (ಗೌಸ್ ಮೊಹಮ್ಮದ್ ಮತ್ತು ಮೊಹಮ್ಮದ್ ರಿಯಾಜ್ ಅಖ್ತರಿ) ಘಟನೆಯನ್ನು ಚಿತ್ರೀಕರಿಸಿದರು. ಪ್ರಧಾನಿ ನರೇಂದ್ರ ಮೋದಿ ಮತ್ತು ನೂಪುರ್ ಶರ್ಮಾ ಅವರಿಗೆ ಬೆದರಿಕೆ ಹಾಕಿದರು.

ಸಾಮಾಜಿಕ ಮಾಧ್ಯಮದಲ್ಲಿ ಶರ್ಮಾ ಅವರನ್ನು ಬೆಂಬಲಿಸಿ ಪೋಸ್ಟ್ ಮಾಡಿದ್ದರಿಂದ, ಸಹಾಯಕ್ಕಾಗಿ ಪೊಲೀಸರನ್ನು ಸಂಪರ್ಕಿಸಿದ್ದರಿಂದ ಲಾಲ್ ಅವರನ್ನು ಟಾರ್ಗೆಟ್ ಮಾಡಲಾಯಿತು ಎಂದು ವರದಿಗಳು ಹೇಳುತ್ತವೆ.

ಟೈಮ್ಸ್ ನೌನಲ್ಲಿ ಪತ್ರಕರ್ತ ಶಿವಶಂಕರ್ ಇದನ್ನು “ಐಸಿಸ್ ಶೈಲಿಯ ಶಿರಚ್ಛೇದನೆ” ಎಂದು ಕರೆಯುತ್ತಲೇ ಜುಬೇರ್‌ ಹೆಸರನ್ನು ಎಳೆದುತಂದರು.

ಪ್ಯಾನೆಲಿಸ್ಟ್ ತೆಹ್ಸೀನ್ ಪೂನಾವಾಲಾ ಅವರನ್ನು ಉದ್ದೇಶಿಸಿ ಮಾತನಾಡಿದ ಶಿವಶಂಕರ್‌‌, “ಈ ಐಸಿಸ್ ಮಾದರಿಯ ಪ್ರತೀಕಾರಕ್ಕೆ ಸಕ್ರಿಯರು ಇದ್ದಾರೆ. ನೀವು ಇಂದು ರಾತ್ರಿ ಜುಬೈರ್ ಹೆಸರು ತೆಗೆದುಕೊಳ್ಳುತ್ತೀರಾ?… ಇಲ್ಲ, ನೀವು ಅವರ ಹೆಸರನ್ನು ತೆಗೆದುಕೊಳ್ಳಬೇಕು..” – ಹೀಗೆ ಮಾತನಾಡುತ್ತಾರೆ.

ನೂಪುರ್‌‌ ಶರ್ಮಾ ಪ್ರವಾದಿ ವಿರುದ್ಧ ಕಾಮೆಂಟ್ ಮಾಡಿದ ವೀಡಿಯೊ ಕ್ಲಿಪ್ ಜುಬೇರ್‌ ಹಂಚಿಕೊಂಡಿದ್ದನ್ನು ಶಿವಶಂಕರ್‌ ಪ್ರಸ್ತಾಪಿಸುತ್ತಾರೆ. ಶರ್ಮಾ ಅವರು ತಮ್ಮ ಅಭಿಪ್ರಾಯವನ್ನು ಟೈಮ್ಸ್ ನೌನಲ್ಲಿ ಹೇಳಿದರು. ಒಮ್ಮೆ ಹಿನ್ನಡೆ ಪ್ರಾರಂಭವಾದಾಗ, ಚಾನಲ್ ತಕ್ಷಣವೇ ಈ ವಿಷಯದಿಂದ ಅಂತರ ಕಾಯ್ದುಕೊಂಡಿದೆ. “ನಮ್ಮ ಚರ್ಚೆಗಳಲ್ಲಿ ಭಾಗವಹಿಸುವವರು ಸಂಯಮವನ್ನು ಕಾಪಾಡಿಕೊಳ್ಳಲು, ಸಹ ಪ್ಯಾನೆಲಿಸ್ಟ್‌ಗಳ ವಿರುದ್ಧ ಅಸಂಸದೀಯ ಭಾಷೆಯಲ್ಲಿ ಮಾತನಾಡದಂತೆ ನಾವು ಒತ್ತಾಯಿಸುತ್ತೇವೆ” ಎಂದು ಟೈಮ್ಸ್ ನೌ ತಿಳಿಸಿದ್ದನ್ನು ಉಲ್ಲೇಖಿಸಲಾಗಿದೆ.

ಕಳೆದ ರಾತ್ರಿಯ ಚರ್ಚೆಯಲ್ಲಿ ಶಿವಶಂಕರ್, ಜುಬೈರ್ ಅವರ ಈ ಟ್ವೀಟ್ ಅನ್ನು ಉಲ್ಲೇಖಿಸಿದ್ದಾರೆ. “ನೀವು ಪ್ರವಾದಿಯನ್ನು ನಿಂದಿಸಿದಾಗ, ನೀವು ದಂಡ ಕಟ್ಟಬೇಕಾಗುತ್ತದೆ. ಆ ದಂಡವನ್ನು ಇಂದು ಕನ್ಹಯ್ಯಾ ಲಾಲ್ ಪಾವತಿಸಿದ್ದಾರೆ” ಎನ್ನುತ್ತಾರೆ.

ಇಂಡಿಯಾ ಟುಡೇಯಲ್ಲಿ ರಾಜ್‌ದೀಪ್ ಸರ್ದೇಸಾಯಿ ಉದಯ್‌ಪುರ ಹತ್ಯೆಯ ಕುರಿತು ಚರ್ಚೆ ನಡೆಸಿದಾಗ ಅಲ್ಲಿಯೂ ಜುಬೇರ್‌ ಹೆಸರು ಪ್ರಸ್ತಾಪವಾಗಿದೆ. “ರಾಜಸ್ಥಾನದಲ್ಲಿ ಐಸಿಸ್ ಶೈಲಿಯ ಹತ್ಯೆ” ಎಂಬ ಚರ್ಚೆ ನಡೆಯುತ್ತಿದ್ದಾಗ, “ಭಾರತವು ಕೋಮು ಹಿಂಸಾಚಾರವನ್ನು ಹೇಗೆ ನಿಲ್ಲಿಸಬಹುದು” ಎಂದು ಸರ್ದೇಸಾಯಿಯವರು ಬಿಜೆಪಿ ವಕ್ತಾರ ಆರ್‌ಪಿ ಸಿಂಗ್ ಅವರನ್ನು ಕೇಳುತ್ತಾರೆ. ಅದಕ್ಕೆ ಸಿಂಗ್, “ನೀವು ನೂಪುರ್ ಶರ್ಮಾ ಅಥವಾ ಬೇರೆ ಯಾರನ್ನಾದರೂ ಖಂಡಿಸಿದರೆ, ಜುಬೈರ್ ಅವರನ್ನೂ ಸಹ ಖಂಡಿಸಬೇಕು” ಎನ್ನುತ್ತಾರೆ.

ಅದಕ್ಕೆ ಪ್ರತಿಕ್ರಿಯೆ ನೀಡಿದ ಸರ್ದೇಸಾಯಿ, “ಉದಯಪುರ್ ಘಟನೆಯನ್ನು ಎಲ್ಲರೂ ಒಕ್ಕೊರಲಿನಿಂದ ಖಂಡಿಸಬೇಕು” ಎಂದು ಸ್ಪಷ್ಟಪಡಿಸುತ್ತಾರೆ.

ತಾಲೀಬಾನೀನಿಕರಣದ ಚರ್ಚೆ

ಈ ಭೀಕರ ಘಟನೆಯನ್ನು ‘ತಾಲೀಬಾನೀಕರಣ’ ಎಂದು ಹೆಸರಿಸಿ ಚರ್ಚೆಗಳು ಮಾಧ್ಯಮಗಳಲ್ಲಿ ನಡೆದಿದೆ.

ಆಜ್ ತಕ್ ಮಾಧ್ಯಮದಲ್ಲಿ ಚಿತ್ರಾ ತ್ರಿಪಾಠಿ, “ರಾಜಸ್ಥಾನದಲ್ಲಿ ತಾಲಿಬಾನ್ ತರಹದ ಪರಿಸ್ಥಿತಿ ಏಕೆ ಸಂಭವಿಸಿದೆ?” ಅಥವಾ “ಇದು ಕ್ರೌರ್ಯದ ಕಥೆ, ತಾಲಿಬಾನಿ ಚಟುವಟಿಕೆ” ಎಂದು ತಿಳಿಸಿದ್ದಾರೆ.

ಚಿತ್ರಾ ತ್ರಿಪಾಠಿಯವರು, “ತಾಲಿಬಾನಿ” ಪದವನ್ನು ಬಳಸುವುದನ್ನು ಕಾಂಗ್ರೆಸ್ ವಕ್ತಾರ ಅಲೋಕ್ ಶರ್ಮಾ ಆಕ್ಷೇಪಿಸಿದಾಗ ಅವರು, “ನಿಮಗೆ ಅವಮಾನವಿಲ್ಲವೇ? ಮೂರು ಮಕ್ಕಳ ತಂದೆಯನ್ನು ಹಗಲಿನಲ್ಲಿ ನಿರ್ದಯವಾಗಿ ಕೊಲ್ಲಲಾಯಿತು. ಇಲ್ಲಿ ನೀವು ಆಂಕರ್‌ ಬಾಯಿಂದ ಯಾವ ರೀತಿಯ ಪದಗಳು ಬರಬೇಕು ಎಂದು ಹೇಳುತ್ತಿದ್ದೀರಿ” ಎನ್ನುತ್ತಾರೆ.

ನ್ಯೂಸ್ 18 ಇಂಡಿಯಾದಲ್ಲಿ, ಅಮಿಶ್ ದೇವಗನ್ ಅವರ ಕಾರ್ಯಕ್ರಮದಲ್ಲೂ ತಾಲೀಬಾನೀಕರಣ ಚರ್ಚೆಯ ವಿಷಯವಾಗಿತ್ತು. “ಉದಯಪುರದಲ್ಲಿ ತಾಲಿಬಾನ್ ಮಾದರಿಯ ಕೊಲೆ ನಡೆದಿದೆ” ಎನ್ನುತ್ತಾರೆ ದೇವಗನ್‌.

ಬಿಜೆಪಿ ಐಟಿ ಮುಖ್ಯಸ್ಥ ಅಮಿತ್ ಮಾಳವೀಯ ಮಾತನಾಡಿ, “ಕಳೆದ ಕೆಲವು ತಿಂಗಳುಗಳಲ್ಲಿ, ಈ ರೀತಿಯ ಹಲವಾರು ಘಟನೆಗಳು ನಡೆದಿವೆ. ಅಲ್ಲಿ ಹಿಂದೂಗಳ ಮೇಲೆ ಇಂತಹ ದಾಳಿಗಳನ್ನು ಮಾಡಲಾಗಿದೆ. ಅದು ರಾಮ ನವಮಿ ಮೆರವಣಿಗೆಯಾಗಲಿ ಅಥವಾ ಹನುಮಾನ್ ಉತ್ಸವ ಮೆರವಣಿಗೆಯಾಗಲಿ, ಮುಸ್ಲಿಮರು ಅವರ ಮೇಲೆ ದಾಳಿ ಮಾಡಿದ್ದಾರೆ” ಎಂದು ದೂರುತ್ತಾರೆ.

ಝೀ ನ್ಯೂಸ್‌ನಲ್ಲಿ ಆಂಕರ್‌ ರೋಹಿತ್ ರಂಜನ್ ‍ಮಾತನಾಡುತ್ತಾ, “ಈ ಘಟನೆಯು ಧಾರ್ಮಿಕ ಯುದ್ಧದ ಭಾಗವಾಗಿದೆ” ಎನ್ನುತ್ತಾರೆ.

2015ರಲ್ಲಿ ಪ್ಯಾರಿಸ್‌ನಲ್ಲಿ ನಡೆದ ಚಾರ್ಲಿ ಹೆಬ್ಡೊ ದಾಳಿ ಮತ್ತು 2020ರಲ್ಲಿ ಫ್ರೆಂಚ್ ಶಿಕ್ಷಕನ ಶಿರಚ್ಛೇದ ಪ್ರಕರಣವನ್ನು ಪ್ರಸ್ತಾಪಿಸಿದ ರಂಜನ್, “ಯಾರಾದರೂ ಪ್ರವಾದಿ ಮುಹಮ್ಮದ್ ಅವರನ್ನು ಅವಮಾನಿಸಿದರೆ ಅವರನ್ನು ಕೊಲ್ಲಲಾಗುತ್ತದೆ. ಅಂತಹ ಹತ್ಯೆಯನ್ನು ಸಮರ್ಥಿಸಲಾಗುತ್ತದೆ ಎಂದು ಇಡೀ ಜಗತ್ತು ಮಾನಸಿಕವಾಗಿ ಒಪ್ಪಿಕೊಳ್ಳುವಂತೆ ಒತ್ತಾಯಿಸಲಾಗಿದೆ” ಎನ್ನುತ್ತಾರೆ. ವಿಚಿತ್ರವೆಂದರೆ, ಸಮುದಾಯ ಮಾರ್ಗಸೂಚಿಗಳನ್ನು ಉಲ್ಲಂಘಿಸಿದ್ದಕ್ಕಾಗಿ ಈ ಕಾರ್ಯಕ್ರಮದ ವಿಡಿಯೊವನ್ನು ಯೂಟ್ಯೂಬ್‌ನಲ್ಲಿ ತೆರವು ಮಾಡಲಾಗಿದೆ.

ಇದನ್ನೂ ಓದಿರಿ: ಪತ್ರಕರ್ತ ಜುಬೇರ್‌ ವಿರುದ್ಧ ದೂರು ನೀಡಿದ್ದ ಟ್ವಿಟರ್‌ ಅಕೌಂಟ್‌ ಡಿಲೀಟ್!

ಎಬಿಪಿ ನ್ಯೂಸ್‌ನಲ್ಲಿ ರೂಬಿಕಾ ಲಿಯಾಕತ್, “ರಾ‘ಜಸ್ಥಾನವು ಮತಾಂಧತೆಯ ಪ್ರಯೋಗಾಲಯ ಆಗಿ ಮಾರ್ಪಟ್ಟಿದೆಯೇ?” ಎಂದು ಕೇಳುತ್ತಾರೆ. ಕಾರ್ಯಕ್ರಮದ ವಾಯ್ಸ್‌ವೋವರ್‌ನಲ್ಲಿ, “ಭಾರತದಲ್ಲಿ ತಾಲಿಬಾನ್ ತರಹದ ಮನಸ್ಥಿತಿಯ ಕೆಲವು ಜನರು ಇದ್ದಾರೆ ಎಂಬ ಪ್ರಶ್ನೆಯನ್ನು ಈ ವೀಡಿಯೊ ಎತ್ತುವುದಿಲ್ಲವೇ?” ಎಂದು ಕೇಳಲಾಗುತ್ತದೆ.

NDTVಯಲ್ಲಿ ನಿಧಿ ರಜ್ದಾನ್ ಅವರು ಈ ಕುರಿತು ಚರ್ಚೆಯನ್ನು ನಡೆಸಿದರು. ಕಾಂಗ್ರೆಸ್ ವಕ್ತಾರರಾಗಿರುವ ಪ್ಯಾನೆಲಿಸ್ಟ್ ಗುರುದೀಪ್ ಸಿಂಗ್ ಸಪ್ಪಲ್ ಅವರು ಮಾತನಾಡುತ್ತಾ, “ಈ ಕೊಲೆಯು ಅನಾಗರಿಕವಾದದ್ದು. ತ್ವರಿತವಾಗಿ ತನಿಖೆ ನಡೆಸಲಾಗುವುದು” ಎಂದು ಭರವಸೆ ನೀಡಿದರು.

ಮಾಜಿ ಐಪಿಎಸ್ ಅಧಿಕಾರಿ ಯಶೋವರ್ಧನ್ ಆಜಾದ್ ಅವರು ಮಾತನಾಡಿ, “ಇದು ಐಸಿಸ್ ಶೈಲಿಯ ಮರಣದಂಡನೆ. ನಾವು ಎಚ್ಚರದಿಂದಿರಬೇಕು” ಅವರು ಎಚ್ಚರಿಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಲೋಫರ್ ಜುಬೇರ್ ನ ಪರ ಮಾತಾಡೋ ಲೋಫರ್ ಗಳನ್ನ ಸರ್ಕಾರವೇ ಗುಂಡುಕ್ಕಿ ಕೊಲ್ಲುವ ಸಮಯ ಹತ್ತಿರದಲ್ಲಿ ಇದೆ

LEAVE A REPLY

Please enter your comment!
Please enter your name here

- Advertisment -

‘ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆ ನಿವಾರಿಸಲು ಸರ್ಕಾರ ಬದ್ಧ’: ಮುಖ್ಯಮಂತ್ರಿ ಸಿದ್ದರಾಮಯ್ಯ

ಬಾಗಲಕೋಟೆ: ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆಯನ್ನು ನಿವಾರಿಸಲು ಸರ್ಕಾರ ಬದ್ಧವಾಗಿದ್ದು, ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಯುವ ಜನರ ಸರ್ಕಾರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಪಾದಿಸಿದರು.  ಮಾರ್ಚ್ 14ರಂದು, ಬಾಗಲಕೋಟೆ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಸಂಶೋಧನಾ...

ಮಣಿಪುರ ಹಿಂಸಾಚಾರ: ಕಾಮ್ಜಾಂಗ್‌ನಲ್ಲಿ ಇಬ್ಬರು ಕುಕಿ ಪುರುಷರು ಶವವಾಗಿ ಪತ್ತೆ; ಹೆಚ್ಚಿದ ಉದ್ವಿಗ್ನತೆ 

ಮಣಿಪುರದ ಕಾಮ್ಜಾಂಗ್ ಜಿಲ್ಲೆಯಲ್ಲಿ ಬುಧವಾರದಿಂದ ನಾಪತ್ತೆಯಾಗಿದ್ದ ಇಬ್ಬರು ಕುಕಿ ಪುರುಷರು ಗುರುವಾರ ಥವಾಯ್ ಕುಕಿ ಗ್ರಾಮದ ಅರಣ್ಯ ಪ್ರದೇಶದಲ್ಲಿ ಶವವಾಗಿ ಪತ್ತೆಯಾಗಿದ್ದರಿಂದ ಉದ್ವಿಗ್ನತೆ ಹೆಚ್ಚಾಗಿದೆ. ಜಿಲ್ಲೆಯ ಥಾವಾಯಿ ಕುಕಿ ಗ್ರಾಮದ 42 ವರ್ಷದ ಥೇಂಗಿನ್...

ಉತ್ತರ ಪ್ರದೇಶ | ಮುಸ್ಲಿಮರೊಂದಿಗಿನ ಶಾಂತಿ ಸಭೆಯಲ್ಲಿ ‘ಇರಾನ್‌ಗೆ ಹೋಗಿ’ ಎಂದ ಪೊಲೀಸ್‌ ಅಧಿಕಾರಿ : ತೀವ್ರ ಆಕ್ರೋಶ

ಉತ್ತರ ಪ್ರದೇಶದಲ್ಲಿ ಈದುಲ್ ಫಿತರ್ (ರಂಝಾನ್) ಹಬ್ಬಕ್ಕೆ ಪೂರ್ವಭಾವಿಯಾಗಿ ನಡೆದ ಶಾಂತಿ ಸಭೆಯಲ್ಲಿ ಪೊಲೀಸ್ ಅಧಿಕಾರಿಯೊಬ್ಬರು ನೀಡಿದ ಹೇಳಿಕೆ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಸಂಭಾಲ್ ಜಿಲ್ಲೆಯ ಅಸ್ಮೋಲಿ ಪ್ರದೇಶದಲ್ಲಿ ರಂಝಾನ್ ತಿಂಗಳ ಕೊನೆಯ...

ಪಶ್ಚಿಮ ಏಷ್ಯಾ ಸಂಘರ್ಷ: ಲೆಬನಾನ್‌ನಲ್ಲಿ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ದಾಳಿ: ವೈದ್ಯರು, ದಾದಿಯರು ಸೇರಿ 12 ಮಂದಿ ಸಾವು

ದಕ್ಷಿಣ ಲೆಬನಾನ್‌ನಲ್ಲಿರುವ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ನಡೆಸಿದ ದಾಳಿಯಲ್ಲಿ 12 ವೈದ್ಯಕೀಯ ಕಾರ್ಯಕರ್ತರು ಸಾವನ್ನಪ್ಪಿದ್ದಾರೆ ಎಂದು ಲೆಬನಾನಿನ ಸಾರ್ವಜನಿಕ ಆರೋಗ್ಯ ಸಚಿವಾಲಯ ವರದಿ ಮಾಡಿದೆ.  ಲೆಬನಾನ್‌ನಾದ್ಯಂತ ಇಸ್ರೇಲಿ ದಾಳಿಯಲ್ಲಿ ಈವರೆಗೂ 103 ಮಕ್ಕಳು...

ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಒಳಮೀಸಲಾತಿ ಪರ ತೀರ್ಮಾನಕ್ಕೆ ಎಲ್ಲರೂ ಸಹಕರಿಸಿ: ಒಳಮೀಸಲಾತಿ ಹೋರಾಟ ಸಮಿತಿ ಮನವಿ

ಬೆಂಗಳೂರು: ಒಳಮೀಸಲಾತಿ ಜಾರಿ ಮಾಡುವ ಪ್ರಕ್ರಿಯೆಯು ಕೊನೆಯ ಹಂತಕ್ಕೆ ತಲುಪಿದ್ದು, ಇದನ್ನು ಸುಲಲಿತವಾಗಿ ಬಗೆಹರಿಸಿ ಸಾಮಾಜಿಕ ನ್ಯಾಯವನ್ನು ಎತ್ತಿಹಿಡಿಯಲು ಆಗ್ರಹಿಸಿ ಇಂದು (14 ಮಾರ್ಚ್)‌ ನಗರದ ಪ್ರೆಸ್‌ ಕ್ಲಬ್‌ನಲ್ಲಿ ಒಳಮೀಸಲಾತಿ ಹೋರಾಟಗಾರರು...

ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಅಕ್ರಮ ನೇಮಕಾತಿ; ರೋಸ್ಟರ್ ಮೀಸಲು ಕ್ರಮ ಉಲ್ಲಂಘನೆ ಆರೋಪ: ನ್ಯಾಯಾಂಗ ತನಿಖೆಗೆ ಆಗ್ರಹ

ಕಲಬುರಗಿ: ಕಲಬುರಗಿ ಜಿಲ್ಲೆಯಲ್ಲಿರುವ Central University of Karnataka ದಲ್ಲಿ ಬೋಧಕ ಹುದ್ದೆಗಳ ನೇಮಕಾತಿಯಲ್ಲಿ ಮೀಸಲು ಕ್ರಮ ಉಲ್ಲಂಘನೆ ಹಾಗೂ ಅಕ್ರಮ ನೇಮಕಾತಿಗಳು ನಡೆದಿವೆ ಎಂಬ ಆರೋಪಗಳ ಹಿನ್ನೆಲೆಯಲ್ಲಿ ಹಾಲಿ ನ್ಯಾಯಾಧೀಶರ ನೇತೃತ್ವದಲ್ಲಿ...

ಸಂಭಾಲ್ | ಮಸೀದಿಯಲ್ಲಿ ನಮಾಝ್ ಮಾಡುವವರ ಸಂಖ್ಯೆ ಮಿತಿಗೊಳಿಸಲು ಸಾಧ್ಯವಿಲ್ಲ; ಕಾನೂನು ಸುವ್ಯವಸ್ಥೆ ಕಾಪಾಡಲು ಆಗದಿದ್ದರೆ ರಾಜೀನಾಮೆ ನೀಡಿ: ಅಧಿಕಾರಿಗಳಿಗೆ ಅಲಹಾಬಾದ್ ಹೈಕೋರ್ಟ್ ತರಾಟೆ

ಸಂಭಾಲ್ ಜಿಲ್ಲೆಯ ಮಸೀದಿಯೊಂದರಲ್ಲಿ ರಂಝಾನ್ ಸಮಯದಲ್ಲಿ ನಮಾಝ್ ಮಾಡುವವರ ಸಂಖ್ಯೆಯನ್ನು ಮಿತಿಗೊಳಿಸುವ ಉತ್ತರ ಪ್ರದೇಶ ಸರ್ಕಾರದ ನಿರ್ಧಾರವನ್ನು ಅಲಹಾಬಾದ್ ಹೈಕೋರ್ಟ್ ತಿರಸ್ಕರಿಸಿದೆ. ಕಾನೂನು ಸುವ್ಯವಸ್ಥೆ ಕಾಪಾಡುವುದು ಸರ್ಕಾರದ ಜವಾಬ್ದಾರಿ ಎಂದಿದೆ. ಫೆಬ್ರವರಿ 27ರಂದು...

ಇರಾನ್ ‘ಭಯೋತ್ಪಾದಕ ಆಡಳಿತ’ ಎಂದು ಕರೆದ NDTV ಹಿರಿಯ ಸಂಪಾದಕ: ವ್ಯಾಪಕ ಟೀಕೆಯ ನಂತರ ಪೋಸ್ಟ್ ಡಿಲಿಟ್ 

ಹೊಸದಿಲ್ಲಿ: ಅಮೆರಿಕ-ಇಸ್ರೇಲ್ ಮತ್ತು ಇರಾನ್ ನಡುವೆ ನಡೆಯುತ್ತಿರುವ ಯುದ್ಧದಿಂದಾಗಿ ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ಹೆಚ್ಚುತ್ತಿರುವ ಸಂದರ್ಭದಲ್ಲಿ ಭಾರತದ ಮುಖ್ಯ ಮಾಧ್ಯಮ ಸಂಸ್ಥೆ NDTV ಹಿರಿಯ ಸಂಪಾದಕ ಆದಿತ್ಯ ರಾಜ್ ಕೌಲ್ ಅವರು ಇರಾನ್ “ಭಯೋತ್ಪಾದಕ...

ಎಲ್‌ಪಿಜಿ ಬಿಕ್ಕಟ್ಟು: ಹೋಟೆಲ್ ಮಾಲೀಕರಿಗೆ ವಿದ್ಯುತ್ ಒಲೆಗಳನ್ನು ಬಳಸಲು ಸೂಚಿಸಿದ ಸಚಿವ ಕೆ.ಎಚ್. ​​ಮುನಿಯಪ್ಪ

ಬೆಂಗಳೂರು: ಪಶ್ಚಿಮ ಏಷ್ಯಾ ಸಂಘರ್ಷದ ಪ್ರಭಾವ ಭಾರತೀಯರ ಅಡುಗೆ ಮನೆಯನ್ನು ಪ್ರವೇಶಿಸಿದ್ದು, ಎಲ್‌ಪಿಜಿ  ಬಿಕ್ಕಟ್ಟಿನಿಂದ ನಾಗರೀಕರು, ಸೇರಿದಂತೆ ಹೋಟೆಲ್ ಉಧ್ಯಮ ತೀವ್ರ ಸಂಕಷ್ಟಕ್ಕೆ ಸಿಲುಕಿವೆ. ಈ ನಡುವೆ ಯುದ್ಧದ ಪರಿಣಾಮ ಭಾರತದ ಮೇಲೆ...

ಹೋರಾಟಗಾರ ಸೋನಮ್ ವಾಂಗ್ಚುಕ್ ಬಂಧನ ರದ್ದುಗೊಳಿಸಿದ ಕೇಂದ್ರ

ಲಡಾಖ್‌ನಲ್ಲಿ ಶಾಂತಿಯನ್ನು ಮರುಸ್ಥಾಪಿಸಲು ಮತ್ತು ಮಾತುಕತೆಗೆ ಪೂರಕವಾದ ವಾತಾವರಣವನ್ನು ನಿರ್ಮಿಸುವ ಉದ್ದೇಶದಿಂದ, ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ (ಎನ್‌ಎಸ್‌ಎ) ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಬಂಧನವನ್ನು ಕೇಂದ್ರ ಸರ್ಕಾರ ಹಿಂಪಡೆದಿದೆ ಎಂದು ವರದಿಯಾಗಿದೆ. ಸರ್ಕಾರ...