Homeಮುಖಪುಟಉದಯಪುರ್‌ ಘಟನೆ: ‘ತಾಲಿಬಾನೀಕರಣ’ ಚರ್ಚೆಯ ಜೊತೆಗೆ ಜುಬೈರ್‌‌ ಹೆಸರು ಥಳುಕುಹಾಕಿದ ಮಾಧ್ಯಮಗಳು!

ಉದಯಪುರ್‌ ಘಟನೆ: ‘ತಾಲಿಬಾನೀಕರಣ’ ಚರ್ಚೆಯ ಜೊತೆಗೆ ಜುಬೈರ್‌‌ ಹೆಸರು ಥಳುಕುಹಾಕಿದ ಮಾಧ್ಯಮಗಳು!

- Advertisement -
- Advertisement -

ರಾಜಸ್ಥಾನದ ಉದಯಪುರ್‌ನಲ್ಲಿ ನಡೆದ ಘಟನೆಯನ್ನು ‘ತಾಲೀಬಾನೀಕರಣ’ದ ಭಾಗವಾಗಿ ಚರ್ಚಿಸುತ್ತಿರುವ ಮಾಧ್ಯಮಗಳು, ಖ್ಯಾತ ಪತ್ರಕರ್ತ, ಆಲ್ಟ್‌ನ್ಯೂಸ್‌ ಸಹಸಂಸ್ಥಾಪಕ ಮೊಹಮ್ಮದ್ ಜುಬೇರ್‌ ಹೆಸರನ್ನು ಪ್ರಕರಣಕ್ಕೆ ಥಳುಕುಹಾಕುವ ಪ್ರಯತ್ನವನ್ನು ಮಾಡುತ್ತಿವೆ. ಈ ಕುರಿತು ‘ನ್ಯೂಸ್‌ಲಾಂಡ್ರಿ’ ಜಾಲತಾಣ ವಿಶೇಷ ವರದಿ ಮಾಡಿದೆ.

“ರಾಜಸ್ಥಾನದ ಉದಯಪುರದಲ್ಲಿ ಹಿಂದೂ ಟೈಲರ್‌ನ ಭೀಕರ ಹತ್ಯೆಯನ್ನು ಆಲ್ಟ್ ನ್ಯೂಸ್ ಸಹಸ್ಥಾಪಕ ಮೊಹಮ್ಮದ್ ಜುಬೇರ್ ಸಕ್ರಿಯಗೊಳಿಸಿದ್ದಾರೆ” ಎಂದು ನೀವು ನಂಬಬೇಕೆಂದು ಟೈಮ್ಸ್‌ನೌ ಪತ್ರಕರ್ತ ರಾಹುಲ್ ಶಿವಶಂಕರ್ ಹೇಳಿಬಿಟ್ಟರು.

“ಕಳೆದ ತಿಂಗಳು ಪ್ರವಾದಿ ಮುಹಮ್ಮದ್ ಕುರಿತು ಮಾಜಿ ಬಿಜೆಪಿ ವಕ್ತಾರೆ ನೂಪುರ್ ಶರ್ಮಾ ಹೇಳಿದ್ದನ್ನು ಜುಬೈರ್ ಬೆಳಕಿಗೆ ತಂದಿದ್ದಕ್ಕಾಗಿ ಧನ್ಯವಾದಗಳು. ಅದಕ್ಕಾಗಿ ದಂಡ ತೆರಬೇಕಾಯಿತು. ಆ ದಂಡವನ್ನು ಇಂದು ಕನ್ಹಯ್ಯಾ ಲಾಲ್ ಪಾವತಿಸಿದ್ದಾರೆ” ಎನ್ನುತ್ತಾರೆ ರಾಹುಲ್‌. ಕಳೆದ ರಾತ್ರಿ ಟೈಮ್ಸ್ ನೌ ಪ್ರೈಮ್‌ಟೈಮ್ ಚರ್ಚೆಯು ಹೀಗೆ ನಡೆಯುತ್ತದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಇಬ್ಬರು ಮತಾಂಧರು ಕನ್ಹಯ್ಯಾ ಲಾಲ್‌ ಅವರ ಶಿರಚ್ಛೇದನ ಮಾಡಿದ ಭಯಾನಕ ಚಿತ್ರಗಳು ಮತ್ತು ವೀಡಿಯೊಗಳು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದವು. ಆ ಇಬ್ಬರು ವ್ಯಕ್ತಿಗಳು (ಗೌಸ್ ಮೊಹಮ್ಮದ್ ಮತ್ತು ಮೊಹಮ್ಮದ್ ರಿಯಾಜ್ ಅಖ್ತರಿ) ಘಟನೆಯನ್ನು ಚಿತ್ರೀಕರಿಸಿದರು. ಪ್ರಧಾನಿ ನರೇಂದ್ರ ಮೋದಿ ಮತ್ತು ನೂಪುರ್ ಶರ್ಮಾ ಅವರಿಗೆ ಬೆದರಿಕೆ ಹಾಕಿದರು.

ಸಾಮಾಜಿಕ ಮಾಧ್ಯಮದಲ್ಲಿ ಶರ್ಮಾ ಅವರನ್ನು ಬೆಂಬಲಿಸಿ ಪೋಸ್ಟ್ ಮಾಡಿದ್ದರಿಂದ, ಸಹಾಯಕ್ಕಾಗಿ ಪೊಲೀಸರನ್ನು ಸಂಪರ್ಕಿಸಿದ್ದರಿಂದ ಲಾಲ್ ಅವರನ್ನು ಟಾರ್ಗೆಟ್ ಮಾಡಲಾಯಿತು ಎಂದು ವರದಿಗಳು ಹೇಳುತ್ತವೆ.

ಟೈಮ್ಸ್ ನೌನಲ್ಲಿ ಪತ್ರಕರ್ತ ಶಿವಶಂಕರ್ ಇದನ್ನು “ಐಸಿಸ್ ಶೈಲಿಯ ಶಿರಚ್ಛೇದನೆ” ಎಂದು ಕರೆಯುತ್ತಲೇ ಜುಬೇರ್‌ ಹೆಸರನ್ನು ಎಳೆದುತಂದರು.

ಪ್ಯಾನೆಲಿಸ್ಟ್ ತೆಹ್ಸೀನ್ ಪೂನಾವಾಲಾ ಅವರನ್ನು ಉದ್ದೇಶಿಸಿ ಮಾತನಾಡಿದ ಶಿವಶಂಕರ್‌‌, “ಈ ಐಸಿಸ್ ಮಾದರಿಯ ಪ್ರತೀಕಾರಕ್ಕೆ ಸಕ್ರಿಯರು ಇದ್ದಾರೆ. ನೀವು ಇಂದು ರಾತ್ರಿ ಜುಬೈರ್ ಹೆಸರು ತೆಗೆದುಕೊಳ್ಳುತ್ತೀರಾ?… ಇಲ್ಲ, ನೀವು ಅವರ ಹೆಸರನ್ನು ತೆಗೆದುಕೊಳ್ಳಬೇಕು..” – ಹೀಗೆ ಮಾತನಾಡುತ್ತಾರೆ.

ನೂಪುರ್‌‌ ಶರ್ಮಾ ಪ್ರವಾದಿ ವಿರುದ್ಧ ಕಾಮೆಂಟ್ ಮಾಡಿದ ವೀಡಿಯೊ ಕ್ಲಿಪ್ ಜುಬೇರ್‌ ಹಂಚಿಕೊಂಡಿದ್ದನ್ನು ಶಿವಶಂಕರ್‌ ಪ್ರಸ್ತಾಪಿಸುತ್ತಾರೆ. ಶರ್ಮಾ ಅವರು ತಮ್ಮ ಅಭಿಪ್ರಾಯವನ್ನು ಟೈಮ್ಸ್ ನೌನಲ್ಲಿ ಹೇಳಿದರು. ಒಮ್ಮೆ ಹಿನ್ನಡೆ ಪ್ರಾರಂಭವಾದಾಗ, ಚಾನಲ್ ತಕ್ಷಣವೇ ಈ ವಿಷಯದಿಂದ ಅಂತರ ಕಾಯ್ದುಕೊಂಡಿದೆ. “ನಮ್ಮ ಚರ್ಚೆಗಳಲ್ಲಿ ಭಾಗವಹಿಸುವವರು ಸಂಯಮವನ್ನು ಕಾಪಾಡಿಕೊಳ್ಳಲು, ಸಹ ಪ್ಯಾನೆಲಿಸ್ಟ್‌ಗಳ ವಿರುದ್ಧ ಅಸಂಸದೀಯ ಭಾಷೆಯಲ್ಲಿ ಮಾತನಾಡದಂತೆ ನಾವು ಒತ್ತಾಯಿಸುತ್ತೇವೆ” ಎಂದು ಟೈಮ್ಸ್ ನೌ ತಿಳಿಸಿದ್ದನ್ನು ಉಲ್ಲೇಖಿಸಲಾಗಿದೆ.

ಕಳೆದ ರಾತ್ರಿಯ ಚರ್ಚೆಯಲ್ಲಿ ಶಿವಶಂಕರ್, ಜುಬೈರ್ ಅವರ ಈ ಟ್ವೀಟ್ ಅನ್ನು ಉಲ್ಲೇಖಿಸಿದ್ದಾರೆ. “ನೀವು ಪ್ರವಾದಿಯನ್ನು ನಿಂದಿಸಿದಾಗ, ನೀವು ದಂಡ ಕಟ್ಟಬೇಕಾಗುತ್ತದೆ. ಆ ದಂಡವನ್ನು ಇಂದು ಕನ್ಹಯ್ಯಾ ಲಾಲ್ ಪಾವತಿಸಿದ್ದಾರೆ” ಎನ್ನುತ್ತಾರೆ.

ಇಂಡಿಯಾ ಟುಡೇಯಲ್ಲಿ ರಾಜ್‌ದೀಪ್ ಸರ್ದೇಸಾಯಿ ಉದಯ್‌ಪುರ ಹತ್ಯೆಯ ಕುರಿತು ಚರ್ಚೆ ನಡೆಸಿದಾಗ ಅಲ್ಲಿಯೂ ಜುಬೇರ್‌ ಹೆಸರು ಪ್ರಸ್ತಾಪವಾಗಿದೆ. “ರಾಜಸ್ಥಾನದಲ್ಲಿ ಐಸಿಸ್ ಶೈಲಿಯ ಹತ್ಯೆ” ಎಂಬ ಚರ್ಚೆ ನಡೆಯುತ್ತಿದ್ದಾಗ, “ಭಾರತವು ಕೋಮು ಹಿಂಸಾಚಾರವನ್ನು ಹೇಗೆ ನಿಲ್ಲಿಸಬಹುದು” ಎಂದು ಸರ್ದೇಸಾಯಿಯವರು ಬಿಜೆಪಿ ವಕ್ತಾರ ಆರ್‌ಪಿ ಸಿಂಗ್ ಅವರನ್ನು ಕೇಳುತ್ತಾರೆ. ಅದಕ್ಕೆ ಸಿಂಗ್, “ನೀವು ನೂಪುರ್ ಶರ್ಮಾ ಅಥವಾ ಬೇರೆ ಯಾರನ್ನಾದರೂ ಖಂಡಿಸಿದರೆ, ಜುಬೈರ್ ಅವರನ್ನೂ ಸಹ ಖಂಡಿಸಬೇಕು” ಎನ್ನುತ್ತಾರೆ.

ಅದಕ್ಕೆ ಪ್ರತಿಕ್ರಿಯೆ ನೀಡಿದ ಸರ್ದೇಸಾಯಿ, “ಉದಯಪುರ್ ಘಟನೆಯನ್ನು ಎಲ್ಲರೂ ಒಕ್ಕೊರಲಿನಿಂದ ಖಂಡಿಸಬೇಕು” ಎಂದು ಸ್ಪಷ್ಟಪಡಿಸುತ್ತಾರೆ.

ತಾಲೀಬಾನೀನಿಕರಣದ ಚರ್ಚೆ

ಈ ಭೀಕರ ಘಟನೆಯನ್ನು ‘ತಾಲೀಬಾನೀಕರಣ’ ಎಂದು ಹೆಸರಿಸಿ ಚರ್ಚೆಗಳು ಮಾಧ್ಯಮಗಳಲ್ಲಿ ನಡೆದಿದೆ.

ಆಜ್ ತಕ್ ಮಾಧ್ಯಮದಲ್ಲಿ ಚಿತ್ರಾ ತ್ರಿಪಾಠಿ, “ರಾಜಸ್ಥಾನದಲ್ಲಿ ತಾಲಿಬಾನ್ ತರಹದ ಪರಿಸ್ಥಿತಿ ಏಕೆ ಸಂಭವಿಸಿದೆ?” ಅಥವಾ “ಇದು ಕ್ರೌರ್ಯದ ಕಥೆ, ತಾಲಿಬಾನಿ ಚಟುವಟಿಕೆ” ಎಂದು ತಿಳಿಸಿದ್ದಾರೆ.

ಚಿತ್ರಾ ತ್ರಿಪಾಠಿಯವರು, “ತಾಲಿಬಾನಿ” ಪದವನ್ನು ಬಳಸುವುದನ್ನು ಕಾಂಗ್ರೆಸ್ ವಕ್ತಾರ ಅಲೋಕ್ ಶರ್ಮಾ ಆಕ್ಷೇಪಿಸಿದಾಗ ಅವರು, “ನಿಮಗೆ ಅವಮಾನವಿಲ್ಲವೇ? ಮೂರು ಮಕ್ಕಳ ತಂದೆಯನ್ನು ಹಗಲಿನಲ್ಲಿ ನಿರ್ದಯವಾಗಿ ಕೊಲ್ಲಲಾಯಿತು. ಇಲ್ಲಿ ನೀವು ಆಂಕರ್‌ ಬಾಯಿಂದ ಯಾವ ರೀತಿಯ ಪದಗಳು ಬರಬೇಕು ಎಂದು ಹೇಳುತ್ತಿದ್ದೀರಿ” ಎನ್ನುತ್ತಾರೆ.

ನ್ಯೂಸ್ 18 ಇಂಡಿಯಾದಲ್ಲಿ, ಅಮಿಶ್ ದೇವಗನ್ ಅವರ ಕಾರ್ಯಕ್ರಮದಲ್ಲೂ ತಾಲೀಬಾನೀಕರಣ ಚರ್ಚೆಯ ವಿಷಯವಾಗಿತ್ತು. “ಉದಯಪುರದಲ್ಲಿ ತಾಲಿಬಾನ್ ಮಾದರಿಯ ಕೊಲೆ ನಡೆದಿದೆ” ಎನ್ನುತ್ತಾರೆ ದೇವಗನ್‌.

ಬಿಜೆಪಿ ಐಟಿ ಮುಖ್ಯಸ್ಥ ಅಮಿತ್ ಮಾಳವೀಯ ಮಾತನಾಡಿ, “ಕಳೆದ ಕೆಲವು ತಿಂಗಳುಗಳಲ್ಲಿ, ಈ ರೀತಿಯ ಹಲವಾರು ಘಟನೆಗಳು ನಡೆದಿವೆ. ಅಲ್ಲಿ ಹಿಂದೂಗಳ ಮೇಲೆ ಇಂತಹ ದಾಳಿಗಳನ್ನು ಮಾಡಲಾಗಿದೆ. ಅದು ರಾಮ ನವಮಿ ಮೆರವಣಿಗೆಯಾಗಲಿ ಅಥವಾ ಹನುಮಾನ್ ಉತ್ಸವ ಮೆರವಣಿಗೆಯಾಗಲಿ, ಮುಸ್ಲಿಮರು ಅವರ ಮೇಲೆ ದಾಳಿ ಮಾಡಿದ್ದಾರೆ” ಎಂದು ದೂರುತ್ತಾರೆ.

ಝೀ ನ್ಯೂಸ್‌ನಲ್ಲಿ ಆಂಕರ್‌ ರೋಹಿತ್ ರಂಜನ್ ‍ಮಾತನಾಡುತ್ತಾ, “ಈ ಘಟನೆಯು ಧಾರ್ಮಿಕ ಯುದ್ಧದ ಭಾಗವಾಗಿದೆ” ಎನ್ನುತ್ತಾರೆ.

2015ರಲ್ಲಿ ಪ್ಯಾರಿಸ್‌ನಲ್ಲಿ ನಡೆದ ಚಾರ್ಲಿ ಹೆಬ್ಡೊ ದಾಳಿ ಮತ್ತು 2020ರಲ್ಲಿ ಫ್ರೆಂಚ್ ಶಿಕ್ಷಕನ ಶಿರಚ್ಛೇದ ಪ್ರಕರಣವನ್ನು ಪ್ರಸ್ತಾಪಿಸಿದ ರಂಜನ್, “ಯಾರಾದರೂ ಪ್ರವಾದಿ ಮುಹಮ್ಮದ್ ಅವರನ್ನು ಅವಮಾನಿಸಿದರೆ ಅವರನ್ನು ಕೊಲ್ಲಲಾಗುತ್ತದೆ. ಅಂತಹ ಹತ್ಯೆಯನ್ನು ಸಮರ್ಥಿಸಲಾಗುತ್ತದೆ ಎಂದು ಇಡೀ ಜಗತ್ತು ಮಾನಸಿಕವಾಗಿ ಒಪ್ಪಿಕೊಳ್ಳುವಂತೆ ಒತ್ತಾಯಿಸಲಾಗಿದೆ” ಎನ್ನುತ್ತಾರೆ. ವಿಚಿತ್ರವೆಂದರೆ, ಸಮುದಾಯ ಮಾರ್ಗಸೂಚಿಗಳನ್ನು ಉಲ್ಲಂಘಿಸಿದ್ದಕ್ಕಾಗಿ ಈ ಕಾರ್ಯಕ್ರಮದ ವಿಡಿಯೊವನ್ನು ಯೂಟ್ಯೂಬ್‌ನಲ್ಲಿ ತೆರವು ಮಾಡಲಾಗಿದೆ.

ಇದನ್ನೂ ಓದಿರಿ: ಪತ್ರಕರ್ತ ಜುಬೇರ್‌ ವಿರುದ್ಧ ದೂರು ನೀಡಿದ್ದ ಟ್ವಿಟರ್‌ ಅಕೌಂಟ್‌ ಡಿಲೀಟ್!

ಎಬಿಪಿ ನ್ಯೂಸ್‌ನಲ್ಲಿ ರೂಬಿಕಾ ಲಿಯಾಕತ್, “ರಾ‘ಜಸ್ಥಾನವು ಮತಾಂಧತೆಯ ಪ್ರಯೋಗಾಲಯ ಆಗಿ ಮಾರ್ಪಟ್ಟಿದೆಯೇ?” ಎಂದು ಕೇಳುತ್ತಾರೆ. ಕಾರ್ಯಕ್ರಮದ ವಾಯ್ಸ್‌ವೋವರ್‌ನಲ್ಲಿ, “ಭಾರತದಲ್ಲಿ ತಾಲಿಬಾನ್ ತರಹದ ಮನಸ್ಥಿತಿಯ ಕೆಲವು ಜನರು ಇದ್ದಾರೆ ಎಂಬ ಪ್ರಶ್ನೆಯನ್ನು ಈ ವೀಡಿಯೊ ಎತ್ತುವುದಿಲ್ಲವೇ?” ಎಂದು ಕೇಳಲಾಗುತ್ತದೆ.

NDTVಯಲ್ಲಿ ನಿಧಿ ರಜ್ದಾನ್ ಅವರು ಈ ಕುರಿತು ಚರ್ಚೆಯನ್ನು ನಡೆಸಿದರು. ಕಾಂಗ್ರೆಸ್ ವಕ್ತಾರರಾಗಿರುವ ಪ್ಯಾನೆಲಿಸ್ಟ್ ಗುರುದೀಪ್ ಸಿಂಗ್ ಸಪ್ಪಲ್ ಅವರು ಮಾತನಾಡುತ್ತಾ, “ಈ ಕೊಲೆಯು ಅನಾಗರಿಕವಾದದ್ದು. ತ್ವರಿತವಾಗಿ ತನಿಖೆ ನಡೆಸಲಾಗುವುದು” ಎಂದು ಭರವಸೆ ನೀಡಿದರು.

ಮಾಜಿ ಐಪಿಎಸ್ ಅಧಿಕಾರಿ ಯಶೋವರ್ಧನ್ ಆಜಾದ್ ಅವರು ಮಾತನಾಡಿ, “ಇದು ಐಸಿಸ್ ಶೈಲಿಯ ಮರಣದಂಡನೆ. ನಾವು ಎಚ್ಚರದಿಂದಿರಬೇಕು” ಅವರು ಎಚ್ಚರಿಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಲೋಫರ್ ಜುಬೇರ್ ನ ಪರ ಮಾತಾಡೋ ಲೋಫರ್ ಗಳನ್ನ ಸರ್ಕಾರವೇ ಗುಂಡುಕ್ಕಿ ಕೊಲ್ಲುವ ಸಮಯ ಹತ್ತಿರದಲ್ಲಿ ಇದೆ

LEAVE A REPLY

Please enter your comment!
Please enter your name here

- Advertisment -

ರಾಯಚೂರು: ದಲಿತ ಮುಖಂಡ ಭೂಮಾನಂದ ಬರ್ಬರ ಹತ್ಯೆ; ಬಿಎಸ್‌ಪಿ ತೀವ್ರ ಆಕ್ರೋಶ, ಕುಟುಂಬಕ್ಕೆ ನೆರವು ನೀಡುವಂತೆ ಸರ್ಕಾರಕ್ಕೆ ಆಗ್ರಹ

ರಾಯಚೂರು ಜಿಲ್ಲೆಯಲ್ಲಿ ಮತ್ತೊಂದು ಭೀಕರ ಕೊಲೆ ಪ್ರಕರಣ ವರದಿಯಾಗಿದ್ದು, ದಲಿತ ಮುಖಂಡ ಹಾಗೂ ಯುವಕ ಭೂಮಾನಂದ (32) ಅವರನ್ನು ದುಷ್ಕರ್ಮಿಗಳು ನಡುರಸ್ತೆಯಲ್ಲೇ ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿದ್ದಾರೆ. ಈ ಘಟನೆಯು ದೇವದುರ್ಗ...

ತಮಿಳುನಾಡು: ಹಿಂದೂ ‘ಮೇಲ್ಜಾತಿ’ ವ್ಯಕ್ತಿಯ ಜಮೀನಿನಲ್ಲಿ ಕುದುರೆ ಮೇಯಿಸುತ್ತಿದ್ದ ಎಂಬ ಕಾರಣಕ್ಕೆ 26 ವರ್ಷದ ದಲಿತ ವ್ಯಕ್ತಿಯ ಬರ್ಬರ ಹತ್ಯೆ 

ತಮಿಳುನಾಡಿನ ದಿಂಡಿಗಲ್ ಜಿಲ್ಲೆಯಲ್ಲಿ ಜಾತಿ ಗರ್ವದ ಬಲಿಪೀಠಕ್ಕೆ 26 ವರ್ಷದ ದಲಿತ ಯುವಕನೊಬ್ಬ ಬಲಿಯಾಗಿರುವ ಕ್ರೂರ ಘಟನೆ ವರದಿಯಾಗಿದೆ. ‘ಮೇಲ್ಜಾತಿ’ ಪ್ರಬಲ ಸಮುದಾಯಕ್ಕೆ ಸೇರಿದ ವ್ಯಕ್ತಿಯೊಬ್ಬನ ಜಮೀನಿನಲ್ಲಿ ಕುದುರೆ ಮೇಯುತ್ತಿತ್ತು ಎಂಬ ಕ್ಷುಲ್ಲಕ...

ಹಸು ಕೇವಲ ಉಪಯುಕ್ತ ಪ್ರಾಣಿ, ದೇವತೆಯಲ್ಲ ಎಂದಿದ್ದ ಸಾವರ್ಕರ್, ಕೋರ್ಟ್‌ನಲ್ಲಿ ಸಾವರ್ಕರ್ ಮೊಮ್ಮಗನ ಮಹತ್ವದ ಹೇಳಿಕೆ

ವಿನಾಯಕ ದಾಮೋದರ ಸಾವರ್ಕರ್ ಅವರು ಗೋಪೂಜೆಯನ್ನು ಸ್ಪಷ್ಟವಾಗಿ ವಿರೋಧಿಸಿದ್ದರು ಮತ್ತು ಹಸುವನ್ನು ಕೇವಲ ಒಂದು ಉಪಯುಕ್ತ ಪ್ರಾಣಿಯನ್ನಾಗಿಷ್ಟೇ ಪರಿಗಣಿಸುತ್ತಿದ್ದರು" ಎಂದು ಅವರ ಮೊಮ್ಮಗ ಸತ್ಯಕಿ ಸಾವರ್ಕರ್ ಪುಣೆಯ ವಿಶೇಷ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಹೇಳಿಕೆ...

ಯಾದಗಿರಿ: ಫಾರ್ಮಾ ಘಟಕದಲ್ಲಿ ವಿಷಾನಿಲ ಸೋರಿಕೆ, ಮೂವರು ಕಾರ್ಮಿಕರ ದಾರುಣ ಸಾವು, FIR ದಾಖಲು

ಜಿಲ್ಲೆಯ ಸೈದಾಪುರ ಪೊಲೀಸ್ ಠಾಣೆ ವ್ಯಾಪ್ತಿಯ ಕಡೇಚೂರು–ಬಾಡಿಯಾಳ ಕೈಗಾರಿಕಾ ಪ್ರದೇಶದಲ್ಲಿರುವ 'ಸಿಲ್ ಲ್ಯಾಬೊರೇಟರೀಸ್ ಪ್ರೈವೇಟ್ ಲಿಮಿಟೆಡ್' (Sil Laboratories Pvt Ltd) ಔಷಧಿ ತಯಾರಿಕಾ ಘಟಕದಲ್ಲಿ ಬುಧವಾರ ಮುಂಜಾನೆ ಸಂಭವಿಸಿದ ಭೀಕರ ರಾಸಾಯನಿಕ...

‘ಮದ್ರಸಾಗಳು ಭಯೋತ್ಪಾದನೆಯನ್ನು ಉತ್ಪಾದಿಸುತ್ತವೆ’: ಯುಪಿ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ದ್ವೇಷ ಭಾಷಣಕ್ಕೆ ವ್ಯಾಪಕ ಆಕ್ರೋಶ

‘ಮದ್ರಸಾಗಳು ಭಯೋತ್ಪಾದನೆಯನ್ನು ಉತ್ಪಾದಿಸುತ್ತವೆ’ ಎಂಬ ಉತ್ತರ ಪ್ರದೇಶದ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ಅವರ ಹೇಳಿಕೆಯು ತೀವ್ರ ಸ್ವರೂಪದ ವಿವಾದಕ್ಕೆ ಕಾರಣವಾಗಿದೆ. ಧಾರ್ಮಿಕ ಅಲ್ಪಸಂಖ್ಯಾತರ ಶಿಕ್ಷಣ ಸಂಸ್ಥೆಗಳನ್ನು ಗುರಿಯಾಗಿಸಿಕೊಂಡು ನೀಡಿರುವ ಈ ಹೇಳಿಕೆಯು...

ತಪ್ಪಾಗಿ ಸುದ್ದಿ ಪ್ರಕಟ : ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರಲ್ಲಿ ಕ್ಷಮೆಯಾಚಿಸಿದ PTI

ತಮ್ಮ ಹೇಳಿಕೆಯನ್ನು ತಪ್ಪಾಗಿ ಪ್ರಸಾರ ಮಾಡಿದ್ದ ಪ್ರೆಸ್ ಟ್ರಸ್ಟ್ ಆಫ್ ಇಂಡಿಯಾ (PTI) ಅಧಿಕೃತವಾಗಿ ಕ್ಷಮೆಯಾಚಿಸಿದರೂ, ಅದರಿಂದ ಈಗಾಗಲೇ ಉಂಟಾಗಿರುವ ಹಾನಿ ಸರಿಪಡಿಸಲು ಸಾಧ್ಯವಿಲ್ಲ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ಆ....

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...