Homeರಾಷ್ಟ್ರೀಯಉದಯಪುರ ಟೈಲರ್‌ ಹತ್ಯೆ: BJP-RSS ಅಂಗಸಂಸ್ಥೆ ಎಂಆರ್‌ಎಂ ನಾಯಕನ ಸಂಪರ್ಕದಲ್ಲಿದ್ದ ಕೊಲೆ ಆರೋಪಿ?

ಉದಯಪುರ ಟೈಲರ್‌ ಹತ್ಯೆ: BJP-RSS ಅಂಗಸಂಸ್ಥೆ ಎಂಆರ್‌ಎಂ ನಾಯಕನ ಸಂಪರ್ಕದಲ್ಲಿದ್ದ ಕೊಲೆ ಆರೋಪಿ?

- Advertisement -
- Advertisement -

ರಾಜಸ್ಥಾನದ ಉದಯಪುರದಲ್ಲಿ ನಡೆದ ಟೈಲರ್ ಕನ್ಹಯ್ಯಾ ಲಾಲ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿಗಳಾದ ರಿಯಾಜ್ ಅತ್ತಾರಿ ಮತ್ತು ಮೊಹಮ್ಮದ್ ಗೌಸ್ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಈ ನಡುವೆ ಹತ್ಯೆ ಆರೋಪಿಯೊಬ್ಬ ಬಿಜೆಪಿ ಜೊತೆಗೆ ಸಂಪರ್ಕದಲ್ಲಿದ್ದ ಎಂದು ಇಂಡಿಯಾ ಟುಡೆ ಮಾಡಿರುವ ತನಿಖಾ ವರದಿ ಶುಕ್ರವಾರ ಬಹಿರಂಗಪಡಿಸಿದೆ. ಜೊತೆಗೆ RSS ಅಂಗಸಂಸ್ಥೆ ಎಂಆರ್‌ಎಂ ನಾಯಕ ಎಂದು ಪ್ರತಿಪಾದಿಸಲಾಗಿರುವ ವ್ಯಕ್ತಿಯ ಜೊತೆಗೆ ಆರೋಪಿ ಇದ್ದ ಚಿತ್ರಗಳು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದೆ.

ಹತ್ಯೆ ಆರೋಪಿಗಳಲ್ಲಿ ಒಬ್ಬನಾಗಿರುವ ರಿಯಾಜ್‌ ಅತ್ತಾರಿ ಉದಯಪುರದ ಬಿಜೆಪಿ ಕಾರ್ಯಕ್ರಮಗಳಲ್ಲಿ ಭಾಗವಹಿಸುತ್ತಿದ್ದನು ಎಂದು ಇಂಡಿಯಾ ಟುಡೆ ವರದಿ ಹೇಳಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಕಳೆದ ಹತ್ತು ವರ್ಷಗಳಿಂದ ರಾಜಸ್ಥಾನದ ಬಿಜೆಪಿಯ ಅಲ್ಪಸಂಖ್ಯಾತ ಮೋರ್ಚಾದ ಸದಸ್ಯರಾಗಿರುವ ಇರ್ಷಾದ್ ಚೈನ್‌ವಾಲಾ ಅವರು, ಆರೋಪಿ ರಿಯಾಜ್‌ ಅತ್ತಾರಿ 2019 ರಲ್ಲಿ ತೀರ್ಥಯಾತ್ರೆಗೆ ತೆರಳಿ ಹಿಂದಿರುಗಿದಾಗ ಸ್ವಾಗತಿಸಿದ್ದರು. ಈ ಚಿತ್ರವನ್ನು ಇಂಡಿಯಾ ಟುಡೆ ತನ್ನ ತನಿಖಾ ವರದಿಯಲ್ಲಿ ಬಹಿರಂಗ ಪಡಿಸಿದೆ.

ಹತ್ಯೆ ಆರೋಪಿ ರಿಯಾಜ್‌ ಅತ್ತಾರಿಗೆ ಹಾರ ಹಾಕಿ ಸ್ವಾಗತಿಸುತ್ತಿರುವ ಚೈನ್‌ವಾಲಾ

ಈ ಬಗ್ಗೆ ಇಂಡಿಯಾ ಟುಡೆ ಇರ್ಷಾದ್‌ ಚೈನ್‌ವಾಲಾ ಅವರನ್ನು ಮಾತನಾಡಿಸಿದ್ದು, ಆರೋಪಿ ರಿಯಾಜ್ ಅತ್ತಾರಿ ಉದಯಪುರದಲ್ಲಿ ನಡೆಯುತ್ತಿದ್ದ ಬಿಜೆಪಿ ಕಾರ್ಯಕ್ರಮಗಳಿಗೆ ಹಾಜರಾಗುತ್ತಿದ್ದ ಎಂದು ಒಪ್ಪಿಕೊಂಡಿದ್ದಾರೆ.

ಇದನ್ನೂ ಓದಿ: ತಾಲಿಬಾನೀಕರಣ ಸಹಿಸುವುದಿಲ್ಲ: ಉದಯ್‌ಪುರ್‌ ಘಟನೆಗೆ ರಾಜಕಾರಣಿಗಳು, ಧಾರ್ಮಿಕ ಮುಖಂಡರ ತೀವ್ರ ವಿರೋಧ

ಆರೋಪಿ ರಿಯಾಜ್‌ ಅತ್ತಾರಿಗೆ ಹಾರ ಹಾಕಿ ಸ್ವಾಗತಿಸುತ್ತಿರುವ ಚಿತ್ರದ ಬಗ್ಗೆ ಮಾತನಾಡಿರುವ ಚೈನ್‌ವಾಲಾ, “ಈ ಚಿತ್ರ ನನ್ನದು. ತೀರ್ಥ ಯಾತ್ರೆಗೆ ತೆರಳಿ ವಾಪಾಸಾದಾಗ ನಾನು ಅವರಿಗೆ ಹಾರ ಹಾಕಿ ಸ್ವಾಗತಿಸಿದ್ದೆ” ಎಂದು ಹೇಳಿದ್ದಾರೆ.

ಆರೋಪಿ ಬಿಜೆಪಿ ಕಾರ್ಯಕ್ರಮಗಳಲ್ಲಿ ಭಾಗವಹಿಸುತ್ತಿದ್ದರೆ ಎಂಬ ವರದಿಗಾರರ ಪ್ರಶ್ನೆಗೆ ಉತ್ತರಿಸಿದ ಚೈನ್‌ವಾಲಾ, “ಬಿಜೆಪಿ ನಾಯಕ ಗುಲಾಬ್ ಚಂದ್ ಕಟಾರಿಯಾ ಅವರ ಅನೇಕ ಕಾರ್ಯಕ್ರಮಗಳಲ್ಲಿ ಆರೋಪಿ ಭಾಗವಹಿಸಿದ್ದನು” ಎಂದು ಹೇಳಿದ್ದಾರೆ.

ಆರೋಪಿ ರಿಯಾಜ್ ಬಿಜೆಪಿ ಕಾರ್ಯಕ್ರಮಗಳಲ್ಲಿ ಆಹ್ವಾನಿಸದೆ ಆಗಾಗ್ಗೆ ಕಾಣಿಸಿಕೊಳ್ಳುತ್ತಿದ್ದನು ಎಂದು ಚೈನ್‌ವಾಲಾ ಹೇಳಿದ್ದಾರೆ. “ಅವನು ತಾನಾಗಿಯೆ ಬರುತ್ತಿದ್ದ, ಅವನು ಪಕ್ಷದಲ್ಲಿ ಕೆಲಸ ಮಾಡಲು ಬಯಸಿದ್ದನು. ಆದರೆ ಖಾಸಗಿಯಾಗಿ ರಿಯಾಜ್‌ ಬಿಜೆಪಿಯ ಕಟುಟೀಕಾಕರರಾಗಿದ್ದನು” ಎಂದು ಚೈನ್‌ವಾಲಾ ವಿವರಿಸಿದ್ದಾರೆ.

ಆರೋಪಿ ರಿಯಾಜ್ ಅತ್ತಾರಿ, ಬಿಜೆಪಿ ಕಾರ್ಯಕರ್ತ ಮೊಹಮ್ಮದ್ ತಾಹಿರ್ ಎಂಬ ವ್ಯಕ್ತಿಯ ಮೂಲಕ ಬಿಜೆಪಿ ಕಾರ್ಯಕ್ರಮಗಳಿಗೆ ಆಗಮಿಸುತ್ತಿದ್ದನು ಎಂದು ಚೈನ್‌ವಾಲಾ ಹೇಳಿದ್ದಾರೆ. “ತಾಹಿರ್ ನಮ್ಮ ಕಾರ್ಯಕರ್ತನಾಗಿದ್ದು. ತಾಹಿರ್‌ ಅವರಿಗೆ ಆರೋಪಿ ರಿಯಾಜ್ ಅತ್ತಾರಿ ಆಪ್ತನಾಗಿದ್ದ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಸಾಮಾಜಿಕ ಮಾಧ್ಯಮಗಳಲ್ಲಿ ನೂಪುರ್ ಶರ್ಮಾ ಬೆಂಬಲಿಸಿದ್ದಕ್ಕೆ ರಾಜಸ್ಥಾನದ ಉದಯಪುರದಲ್ಲಿ ಭೀಕರ ಹತ್ಯೆ; ಆರೋಪಿಗಳ ಬಂಧನ

ತಾಹಿರ್ ಮತ್ತು ರಿಯಾಜ್ ಇಬ್ಬರೂ ಒಟ್ಟಿಗೆ ಇರುವ ಫೋಟೋಗಳು ಬಹಿರಂಗವಾಗಿದೆ. ತಾಹಿರ್‌ ರಾಜಸ್ಥಾನದ ಸವೀನಾ ಎಂಬ ಪ್ರದೇಶದಲ್ಲಿ ವಾಸಿಸುತ್ತಿದ್ದು, ಆದರೆ ಅವರು ಇದೀಗ ನಾಪತ್ತೆಯಾಗಿದ್ದಾರೆ ಎಂದು ಇಂಡಿಯಾ ಟುಡೆ ವರದಿ ಮಾಡಿದೆ. ತಾಹಿತ್‌ ತನ್ನ ಬಾಡಿಗೆ ಮನೆ ಖಾಲಿ ಮಾಡಿದ್ದಾರೆ ಎಂದು ನೆರೆಹೊರೆಯವರು ತಿಳಿಸಿದ್ದು, ತನ್ನ ಮೊಬೈಲ್ ಫೋನ್ ಕೂಡ ಸ್ವಿಚ್ ಆಫ್ ಮಾಡಿದ್ದಾರೆ ಎಂದು ವರದಿ ಹೇಳಿದೆ.

ಮೊಹಮ್ಮದ್‌ ತಾಹಿರ್‌‌ ಅವರು ತನ್ನ ಫೇಸ್‌ಬುಕ್ ಪೋಸ್ಟ್‌ಗಳಲ್ಲಿ ಇರ್ಷಾದ್ ಚೈನ್‌ವಾಲಾ ಅವರನ್ನು ಎಂಆರ್‌ಎಂ (ಮುಸ್ಲಿಂ ರಾಷ್ಟ್ರೀಯ ಮಂಚ್‌) ಪ್ರಾಂತ ಸಂಯೋಜಕ ಎಂದು ಉಲ್ಲೇಖಿಸುತ್ತಾರೆ. ಎಂಆರ್‌ಎಂ ಎಂಬುವುದು ಆರೆಸ್ಸೆಸ್ಸಿನ ಅಂಗ ಸಂಸ್ಥೆಯಾಗಿದೆ. ಈ ಪೋಸ್ಟ್‌ನಲ್ಲಿ ಹತ್ಯೆಯ ಆರೋಪಿ ರಿಯಾಜ್ ಅತ್ತಾರಿಯನ್ನು ಬಿಜೆಪಿ ಕಾರ್ಯಕರ್ತ ಎಂದು ಉಲ್ಲೇಖಿಸಿದ್ದಾರೆ.

ಮೊಹಮ್ಮದ್‌ ತಾಹಿರ್‌‌ ಆರೋಪಿಯನ್ನು ಬಿಜೆಪಿ ಕಾರ್ಯಕರ್ತ ಎಂದು ಉಲ್ಲೇಖಿಸಿರುವ ಪೋಸ್ಟ್‌
ಬಿಜೆಪಿ ಜಿಲ್ಲಾ ಅಧ್ಯಕ್ಷ ಭಾಯಿ ಸಾಬ್ ರವೀಂದ್ರ ಶ್ರೀಮಾಲಿ ಜೊತೆಯಲ್ಲಿ ಹತ್ಯೆಯ ಆರೋಪಿ ರಿಯಾಜ್ ಅತ್ತಾರಿ
ಎಂಆರ್‌ಎಂ ಕಾರ್ಯಕ್ರಮದಲ್ಲಿ ಇರ್ಷಾದ್‌ ಚೈನ್‌ವಾಲಾ(ಕೊಲೆ ಆರೋಪಿ ರಿಯಾಜ್ ಅತ್ತಾರಿಯ ಆಪ್ತ, ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ಸದಸ್ಯ ಮೊಹಮ್ಮದ್ ತಾಹಿರ್‌ ಅವರ ಫೇಸ್‌ಬುಕ್ ಪೋಸ್ಟ್‌)
ಮೊಮ್ಮದ್ ತಾಹಿರ್‌(1) , ಇರ್ಷಾದ್ ಚೈನ್‌ವಾಲಾ(2) ಮತ್ತು ಕೊಲೆ ಆರೋಪಿ ರಿಯಾಜ್ ಅತ್ತಾರಿ(3) ಜೊತೆಯಲ್ಲಿ ಬಿಜೆಪಿ ನಾಯಕ
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

3 COMMENTS

  1. ಉದಯಪುರ ಹತ್ಯೇ ಮಾಡಿದವನು ನಿಮ್ಮ ಮಸೀದಿಯಲ್ಲೇ ವಾಸವಿದ್ದು ಅಲ್ಲೇ ಮಸೀದಿ ಕೆಲಸ ಮಾಡ್ತಿದ್ದ ಅಲ್ವೋ ಚೀನಾಗೆ ಹುಟ್ಟಿದ ಹೈ ಬ್ರೀಡ್ ಗಳಾ,ಅಂಗೈ ಹುಣ್ಣಿಗೆ ಯಾವೋನೋ ನಿನ್ನಂತವನು ಕನ್ನಡಿ ಹಿಡಿದನಂತೆ …..

  2. ಲೇ ರಾಜು ಅಡ್ಡ ಕಸುಬಿ ಬ್ಲೂ ಜೇಪೀ ಹ ಸೂ ಮಗನೇ….ಅವನು ಬ್ಲೂ ಜೇಪೀ ಕಾರ್ಯಕರ್ತ ಅಂತ ಗೊತ್ತಾದ ಮೇಲೂ ಈ ಹತ್ಯೆ ಹಿಂದೆ ಯಾರ ಕೈವಾಡ ಇದೆ ಅಂತ ಗೊತ್ತಾಗ್ತಾ ಇಲ್ವಾ.. ಥೂ ನಿಮ್ಮ ಜನ್ಮಕ್ಕೆ ಹೊಟ್ಟೆಗೆ ಅನ್ನ ತಿನ್ನಲ್ಲ ನೀವು….ದೇಶಕ್ಕೆ ಬೆಂಕಿ ಹಚ್ಚಲಿಕ್ಕೆ ಹುಟ್ಟಿರುವ ಹ ಸೂ ಮಕ್ಕಳು ನೀವು…

  3. 👏👏👏👏👏👏👏ಸಕ್ಕತ್ ಆಗಿ ನಿಜವಾದ ಮಾತು ಹೇಳದ್ರಿ. ಈ ಹಲ್ಕಟ್ ಯಾವಾಗ್ಲೂ ಅಷ್ಟೇ ಬರಿ ಒಂದು ಧರ್ಮದ ವಿರುದ್ಧ ಹೊಯ್ಕೋತಾನೆ. ಮೋಸ್ಟ್ಲಿ 2 ರೂಪಾಯಿ ಬೆಗ್ಗೆರ್ ಅನ್ಸುತ್ತೆ ಅವನು. ಧನ್ಯವಾದಗಳು ನಿಮಗೆ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...