Homeರಾಷ್ಟ್ರೀಯಉದಯಪುರ ಟೈಲರ್‌ ಹತ್ಯೆ: BJP-RSS ಅಂಗಸಂಸ್ಥೆ ಎಂಆರ್‌ಎಂ ನಾಯಕನ ಸಂಪರ್ಕದಲ್ಲಿದ್ದ ಕೊಲೆ ಆರೋಪಿ?

ಉದಯಪುರ ಟೈಲರ್‌ ಹತ್ಯೆ: BJP-RSS ಅಂಗಸಂಸ್ಥೆ ಎಂಆರ್‌ಎಂ ನಾಯಕನ ಸಂಪರ್ಕದಲ್ಲಿದ್ದ ಕೊಲೆ ಆರೋಪಿ?

- Advertisement -
- Advertisement -

ರಾಜಸ್ಥಾನದ ಉದಯಪುರದಲ್ಲಿ ನಡೆದ ಟೈಲರ್ ಕನ್ಹಯ್ಯಾ ಲಾಲ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿಗಳಾದ ರಿಯಾಜ್ ಅತ್ತಾರಿ ಮತ್ತು ಮೊಹಮ್ಮದ್ ಗೌಸ್ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಈ ನಡುವೆ ಹತ್ಯೆ ಆರೋಪಿಯೊಬ್ಬ ಬಿಜೆಪಿ ಜೊತೆಗೆ ಸಂಪರ್ಕದಲ್ಲಿದ್ದ ಎಂದು ಇಂಡಿಯಾ ಟುಡೆ ಮಾಡಿರುವ ತನಿಖಾ ವರದಿ ಶುಕ್ರವಾರ ಬಹಿರಂಗಪಡಿಸಿದೆ. ಜೊತೆಗೆ RSS ಅಂಗಸಂಸ್ಥೆ ಎಂಆರ್‌ಎಂ ನಾಯಕ ಎಂದು ಪ್ರತಿಪಾದಿಸಲಾಗಿರುವ ವ್ಯಕ್ತಿಯ ಜೊತೆಗೆ ಆರೋಪಿ ಇದ್ದ ಚಿತ್ರಗಳು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದೆ.

ಹತ್ಯೆ ಆರೋಪಿಗಳಲ್ಲಿ ಒಬ್ಬನಾಗಿರುವ ರಿಯಾಜ್‌ ಅತ್ತಾರಿ ಉದಯಪುರದ ಬಿಜೆಪಿ ಕಾರ್ಯಕ್ರಮಗಳಲ್ಲಿ ಭಾಗವಹಿಸುತ್ತಿದ್ದನು ಎಂದು ಇಂಡಿಯಾ ಟುಡೆ ವರದಿ ಹೇಳಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಕಳೆದ ಹತ್ತು ವರ್ಷಗಳಿಂದ ರಾಜಸ್ಥಾನದ ಬಿಜೆಪಿಯ ಅಲ್ಪಸಂಖ್ಯಾತ ಮೋರ್ಚಾದ ಸದಸ್ಯರಾಗಿರುವ ಇರ್ಷಾದ್ ಚೈನ್‌ವಾಲಾ ಅವರು, ಆರೋಪಿ ರಿಯಾಜ್‌ ಅತ್ತಾರಿ 2019 ರಲ್ಲಿ ತೀರ್ಥಯಾತ್ರೆಗೆ ತೆರಳಿ ಹಿಂದಿರುಗಿದಾಗ ಸ್ವಾಗತಿಸಿದ್ದರು. ಈ ಚಿತ್ರವನ್ನು ಇಂಡಿಯಾ ಟುಡೆ ತನ್ನ ತನಿಖಾ ವರದಿಯಲ್ಲಿ ಬಹಿರಂಗ ಪಡಿಸಿದೆ.

ಹತ್ಯೆ ಆರೋಪಿ ರಿಯಾಜ್‌ ಅತ್ತಾರಿಗೆ ಹಾರ ಹಾಕಿ ಸ್ವಾಗತಿಸುತ್ತಿರುವ ಚೈನ್‌ವಾಲಾ

ಈ ಬಗ್ಗೆ ಇಂಡಿಯಾ ಟುಡೆ ಇರ್ಷಾದ್‌ ಚೈನ್‌ವಾಲಾ ಅವರನ್ನು ಮಾತನಾಡಿಸಿದ್ದು, ಆರೋಪಿ ರಿಯಾಜ್ ಅತ್ತಾರಿ ಉದಯಪುರದಲ್ಲಿ ನಡೆಯುತ್ತಿದ್ದ ಬಿಜೆಪಿ ಕಾರ್ಯಕ್ರಮಗಳಿಗೆ ಹಾಜರಾಗುತ್ತಿದ್ದ ಎಂದು ಒಪ್ಪಿಕೊಂಡಿದ್ದಾರೆ.

ಇದನ್ನೂ ಓದಿ: ತಾಲಿಬಾನೀಕರಣ ಸಹಿಸುವುದಿಲ್ಲ: ಉದಯ್‌ಪುರ್‌ ಘಟನೆಗೆ ರಾಜಕಾರಣಿಗಳು, ಧಾರ್ಮಿಕ ಮುಖಂಡರ ತೀವ್ರ ವಿರೋಧ

ಆರೋಪಿ ರಿಯಾಜ್‌ ಅತ್ತಾರಿಗೆ ಹಾರ ಹಾಕಿ ಸ್ವಾಗತಿಸುತ್ತಿರುವ ಚಿತ್ರದ ಬಗ್ಗೆ ಮಾತನಾಡಿರುವ ಚೈನ್‌ವಾಲಾ, “ಈ ಚಿತ್ರ ನನ್ನದು. ತೀರ್ಥ ಯಾತ್ರೆಗೆ ತೆರಳಿ ವಾಪಾಸಾದಾಗ ನಾನು ಅವರಿಗೆ ಹಾರ ಹಾಕಿ ಸ್ವಾಗತಿಸಿದ್ದೆ” ಎಂದು ಹೇಳಿದ್ದಾರೆ.

ಆರೋಪಿ ಬಿಜೆಪಿ ಕಾರ್ಯಕ್ರಮಗಳಲ್ಲಿ ಭಾಗವಹಿಸುತ್ತಿದ್ದರೆ ಎಂಬ ವರದಿಗಾರರ ಪ್ರಶ್ನೆಗೆ ಉತ್ತರಿಸಿದ ಚೈನ್‌ವಾಲಾ, “ಬಿಜೆಪಿ ನಾಯಕ ಗುಲಾಬ್ ಚಂದ್ ಕಟಾರಿಯಾ ಅವರ ಅನೇಕ ಕಾರ್ಯಕ್ರಮಗಳಲ್ಲಿ ಆರೋಪಿ ಭಾಗವಹಿಸಿದ್ದನು” ಎಂದು ಹೇಳಿದ್ದಾರೆ.

ಆರೋಪಿ ರಿಯಾಜ್ ಬಿಜೆಪಿ ಕಾರ್ಯಕ್ರಮಗಳಲ್ಲಿ ಆಹ್ವಾನಿಸದೆ ಆಗಾಗ್ಗೆ ಕಾಣಿಸಿಕೊಳ್ಳುತ್ತಿದ್ದನು ಎಂದು ಚೈನ್‌ವಾಲಾ ಹೇಳಿದ್ದಾರೆ. “ಅವನು ತಾನಾಗಿಯೆ ಬರುತ್ತಿದ್ದ, ಅವನು ಪಕ್ಷದಲ್ಲಿ ಕೆಲಸ ಮಾಡಲು ಬಯಸಿದ್ದನು. ಆದರೆ ಖಾಸಗಿಯಾಗಿ ರಿಯಾಜ್‌ ಬಿಜೆಪಿಯ ಕಟುಟೀಕಾಕರರಾಗಿದ್ದನು” ಎಂದು ಚೈನ್‌ವಾಲಾ ವಿವರಿಸಿದ್ದಾರೆ.

ಆರೋಪಿ ರಿಯಾಜ್ ಅತ್ತಾರಿ, ಬಿಜೆಪಿ ಕಾರ್ಯಕರ್ತ ಮೊಹಮ್ಮದ್ ತಾಹಿರ್ ಎಂಬ ವ್ಯಕ್ತಿಯ ಮೂಲಕ ಬಿಜೆಪಿ ಕಾರ್ಯಕ್ರಮಗಳಿಗೆ ಆಗಮಿಸುತ್ತಿದ್ದನು ಎಂದು ಚೈನ್‌ವಾಲಾ ಹೇಳಿದ್ದಾರೆ. “ತಾಹಿರ್ ನಮ್ಮ ಕಾರ್ಯಕರ್ತನಾಗಿದ್ದು. ತಾಹಿರ್‌ ಅವರಿಗೆ ಆರೋಪಿ ರಿಯಾಜ್ ಅತ್ತಾರಿ ಆಪ್ತನಾಗಿದ್ದ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಸಾಮಾಜಿಕ ಮಾಧ್ಯಮಗಳಲ್ಲಿ ನೂಪುರ್ ಶರ್ಮಾ ಬೆಂಬಲಿಸಿದ್ದಕ್ಕೆ ರಾಜಸ್ಥಾನದ ಉದಯಪುರದಲ್ಲಿ ಭೀಕರ ಹತ್ಯೆ; ಆರೋಪಿಗಳ ಬಂಧನ

ತಾಹಿರ್ ಮತ್ತು ರಿಯಾಜ್ ಇಬ್ಬರೂ ಒಟ್ಟಿಗೆ ಇರುವ ಫೋಟೋಗಳು ಬಹಿರಂಗವಾಗಿದೆ. ತಾಹಿರ್‌ ರಾಜಸ್ಥಾನದ ಸವೀನಾ ಎಂಬ ಪ್ರದೇಶದಲ್ಲಿ ವಾಸಿಸುತ್ತಿದ್ದು, ಆದರೆ ಅವರು ಇದೀಗ ನಾಪತ್ತೆಯಾಗಿದ್ದಾರೆ ಎಂದು ಇಂಡಿಯಾ ಟುಡೆ ವರದಿ ಮಾಡಿದೆ. ತಾಹಿತ್‌ ತನ್ನ ಬಾಡಿಗೆ ಮನೆ ಖಾಲಿ ಮಾಡಿದ್ದಾರೆ ಎಂದು ನೆರೆಹೊರೆಯವರು ತಿಳಿಸಿದ್ದು, ತನ್ನ ಮೊಬೈಲ್ ಫೋನ್ ಕೂಡ ಸ್ವಿಚ್ ಆಫ್ ಮಾಡಿದ್ದಾರೆ ಎಂದು ವರದಿ ಹೇಳಿದೆ.

ಮೊಹಮ್ಮದ್‌ ತಾಹಿರ್‌‌ ಅವರು ತನ್ನ ಫೇಸ್‌ಬುಕ್ ಪೋಸ್ಟ್‌ಗಳಲ್ಲಿ ಇರ್ಷಾದ್ ಚೈನ್‌ವಾಲಾ ಅವರನ್ನು ಎಂಆರ್‌ಎಂ (ಮುಸ್ಲಿಂ ರಾಷ್ಟ್ರೀಯ ಮಂಚ್‌) ಪ್ರಾಂತ ಸಂಯೋಜಕ ಎಂದು ಉಲ್ಲೇಖಿಸುತ್ತಾರೆ. ಎಂಆರ್‌ಎಂ ಎಂಬುವುದು ಆರೆಸ್ಸೆಸ್ಸಿನ ಅಂಗ ಸಂಸ್ಥೆಯಾಗಿದೆ. ಈ ಪೋಸ್ಟ್‌ನಲ್ಲಿ ಹತ್ಯೆಯ ಆರೋಪಿ ರಿಯಾಜ್ ಅತ್ತಾರಿಯನ್ನು ಬಿಜೆಪಿ ಕಾರ್ಯಕರ್ತ ಎಂದು ಉಲ್ಲೇಖಿಸಿದ್ದಾರೆ.

ಮೊಹಮ್ಮದ್‌ ತಾಹಿರ್‌‌ ಆರೋಪಿಯನ್ನು ಬಿಜೆಪಿ ಕಾರ್ಯಕರ್ತ ಎಂದು ಉಲ್ಲೇಖಿಸಿರುವ ಪೋಸ್ಟ್‌
ಬಿಜೆಪಿ ಜಿಲ್ಲಾ ಅಧ್ಯಕ್ಷ ಭಾಯಿ ಸಾಬ್ ರವೀಂದ್ರ ಶ್ರೀಮಾಲಿ ಜೊತೆಯಲ್ಲಿ ಹತ್ಯೆಯ ಆರೋಪಿ ರಿಯಾಜ್ ಅತ್ತಾರಿ
ಎಂಆರ್‌ಎಂ ಕಾರ್ಯಕ್ರಮದಲ್ಲಿ ಇರ್ಷಾದ್‌ ಚೈನ್‌ವಾಲಾ(ಕೊಲೆ ಆರೋಪಿ ರಿಯಾಜ್ ಅತ್ತಾರಿಯ ಆಪ್ತ, ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ಸದಸ್ಯ ಮೊಹಮ್ಮದ್ ತಾಹಿರ್‌ ಅವರ ಫೇಸ್‌ಬುಕ್ ಪೋಸ್ಟ್‌)
ಮೊಮ್ಮದ್ ತಾಹಿರ್‌(1) , ಇರ್ಷಾದ್ ಚೈನ್‌ವಾಲಾ(2) ಮತ್ತು ಕೊಲೆ ಆರೋಪಿ ರಿಯಾಜ್ ಅತ್ತಾರಿ(3) ಜೊತೆಯಲ್ಲಿ ಬಿಜೆಪಿ ನಾಯಕ
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

3 COMMENTS

  1. ಉದಯಪುರ ಹತ್ಯೇ ಮಾಡಿದವನು ನಿಮ್ಮ ಮಸೀದಿಯಲ್ಲೇ ವಾಸವಿದ್ದು ಅಲ್ಲೇ ಮಸೀದಿ ಕೆಲಸ ಮಾಡ್ತಿದ್ದ ಅಲ್ವೋ ಚೀನಾಗೆ ಹುಟ್ಟಿದ ಹೈ ಬ್ರೀಡ್ ಗಳಾ,ಅಂಗೈ ಹುಣ್ಣಿಗೆ ಯಾವೋನೋ ನಿನ್ನಂತವನು ಕನ್ನಡಿ ಹಿಡಿದನಂತೆ …..

  2. ಲೇ ರಾಜು ಅಡ್ಡ ಕಸುಬಿ ಬ್ಲೂ ಜೇಪೀ ಹ ಸೂ ಮಗನೇ….ಅವನು ಬ್ಲೂ ಜೇಪೀ ಕಾರ್ಯಕರ್ತ ಅಂತ ಗೊತ್ತಾದ ಮೇಲೂ ಈ ಹತ್ಯೆ ಹಿಂದೆ ಯಾರ ಕೈವಾಡ ಇದೆ ಅಂತ ಗೊತ್ತಾಗ್ತಾ ಇಲ್ವಾ.. ಥೂ ನಿಮ್ಮ ಜನ್ಮಕ್ಕೆ ಹೊಟ್ಟೆಗೆ ಅನ್ನ ತಿನ್ನಲ್ಲ ನೀವು….ದೇಶಕ್ಕೆ ಬೆಂಕಿ ಹಚ್ಚಲಿಕ್ಕೆ ಹುಟ್ಟಿರುವ ಹ ಸೂ ಮಕ್ಕಳು ನೀವು…

  3. 👏👏👏👏👏👏👏ಸಕ್ಕತ್ ಆಗಿ ನಿಜವಾದ ಮಾತು ಹೇಳದ್ರಿ. ಈ ಹಲ್ಕಟ್ ಯಾವಾಗ್ಲೂ ಅಷ್ಟೇ ಬರಿ ಒಂದು ಧರ್ಮದ ವಿರುದ್ಧ ಹೊಯ್ಕೋತಾನೆ. ಮೋಸ್ಟ್ಲಿ 2 ರೂಪಾಯಿ ಬೆಗ್ಗೆರ್ ಅನ್ಸುತ್ತೆ ಅವನು. ಧನ್ಯವಾದಗಳು ನಿಮಗೆ

LEAVE A REPLY

Please enter your comment!
Please enter your name here

- Advertisment -

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...

ಆಕಸ್ಮಿಕವಾಗಿ ಗಡಿ ದಾಟಿದ್ದ 7 ಭಾರತೀಯರನ್ನು ಹಸ್ತಾಂತರಿಸಿದ ಪಾಕಿಸ್ತಾನ

2023 ರ ಪ್ರವಾಹದ ಸಮಯದಲ್ಲಿ ಅಜಾಗರೂಕತೆಯಿಂದ ಗಡಿ ದಾಟಿದ ನಂತರ ಬಂಧಿಸಲ್ಪಟ್ಟ ಏಳು ಭಾರತೀಯ ನಾಗರಿಕರನ್ನು ಪಾಕಿಸ್ತಾನ ಶನಿವಾರ ಸ್ವದೇಶಕ್ಕೆ ವಾಪಸ್ ಕಳುಹಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪಂಜಾಬ್‌ನ ಅಟ್ಟಾರಿ ಇಂಟಿಗ್ರೇಟೆಡ್ ಚೆಕ್ ಪೋಸ್ಟ್‌ನಲ್ಲಿ...

ಮೀರತ್| ಅಪಹರಣ ಪ್ರಕರಣ ಹಿಂಪಡೆಯುವಂತೆ ಪೊಲೀಸರ ಒತ್ತಡ; ‘ಗೃಹಬಂಧನ’ದಲ್ಲಿ ದಲಿತ ಕುಟುಂಬ

ಜನವರಿ ತಿಂಗಳ ಆರಂಭದಲ್ಲಿ ಉತ್ತರ ಪ್ರದೇಶದ ಮೀರತ್ ಜಿಲ್ಲೆಯ ಕಪ್ಸಾದ್ ಗ್ರಾಮದಲ್ಲಿ ತಾಯಿಯ ಕೊಲೆಯ ನಂತರ ಅಪಹರಿಸಲ್ಪಟ್ಟ ದಲಿತ ಹುಡುಗಿಯ ಕುಟುಂಬ ಸದಸ್ಯರು ತಾವು ಗೃಹಬಂಧನದಲ್ಲಿದ್ದು, ಆರೋಪಿಗಳ ವಿರುದ್ಧ ಪ್ರಕರಣವನ್ನು ಮುಂದುವರಿಸದಂತೆ ಪೊಲೀಸರು...