Homeರಾಷ್ಟ್ರೀಯಉದಯಪುರ ಟೈಲರ್‌ ಹತ್ಯೆ: BJP-RSS ಅಂಗಸಂಸ್ಥೆ ಎಂಆರ್‌ಎಂ ನಾಯಕನ ಸಂಪರ್ಕದಲ್ಲಿದ್ದ ಕೊಲೆ ಆರೋಪಿ?

ಉದಯಪುರ ಟೈಲರ್‌ ಹತ್ಯೆ: BJP-RSS ಅಂಗಸಂಸ್ಥೆ ಎಂಆರ್‌ಎಂ ನಾಯಕನ ಸಂಪರ್ಕದಲ್ಲಿದ್ದ ಕೊಲೆ ಆರೋಪಿ?

- Advertisement -
- Advertisement -

ರಾಜಸ್ಥಾನದ ಉದಯಪುರದಲ್ಲಿ ನಡೆದ ಟೈಲರ್ ಕನ್ಹಯ್ಯಾ ಲಾಲ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿಗಳಾದ ರಿಯಾಜ್ ಅತ್ತಾರಿ ಮತ್ತು ಮೊಹಮ್ಮದ್ ಗೌಸ್ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಈ ನಡುವೆ ಹತ್ಯೆ ಆರೋಪಿಯೊಬ್ಬ ಬಿಜೆಪಿ ಜೊತೆಗೆ ಸಂಪರ್ಕದಲ್ಲಿದ್ದ ಎಂದು ಇಂಡಿಯಾ ಟುಡೆ ಮಾಡಿರುವ ತನಿಖಾ ವರದಿ ಶುಕ್ರವಾರ ಬಹಿರಂಗಪಡಿಸಿದೆ. ಜೊತೆಗೆ RSS ಅಂಗಸಂಸ್ಥೆ ಎಂಆರ್‌ಎಂ ನಾಯಕ ಎಂದು ಪ್ರತಿಪಾದಿಸಲಾಗಿರುವ ವ್ಯಕ್ತಿಯ ಜೊತೆಗೆ ಆರೋಪಿ ಇದ್ದ ಚಿತ್ರಗಳು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದೆ.

ಹತ್ಯೆ ಆರೋಪಿಗಳಲ್ಲಿ ಒಬ್ಬನಾಗಿರುವ ರಿಯಾಜ್‌ ಅತ್ತಾರಿ ಉದಯಪುರದ ಬಿಜೆಪಿ ಕಾರ್ಯಕ್ರಮಗಳಲ್ಲಿ ಭಾಗವಹಿಸುತ್ತಿದ್ದನು ಎಂದು ಇಂಡಿಯಾ ಟುಡೆ ವರದಿ ಹೇಳಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಕಳೆದ ಹತ್ತು ವರ್ಷಗಳಿಂದ ರಾಜಸ್ಥಾನದ ಬಿಜೆಪಿಯ ಅಲ್ಪಸಂಖ್ಯಾತ ಮೋರ್ಚಾದ ಸದಸ್ಯರಾಗಿರುವ ಇರ್ಷಾದ್ ಚೈನ್‌ವಾಲಾ ಅವರು, ಆರೋಪಿ ರಿಯಾಜ್‌ ಅತ್ತಾರಿ 2019 ರಲ್ಲಿ ತೀರ್ಥಯಾತ್ರೆಗೆ ತೆರಳಿ ಹಿಂದಿರುಗಿದಾಗ ಸ್ವಾಗತಿಸಿದ್ದರು. ಈ ಚಿತ್ರವನ್ನು ಇಂಡಿಯಾ ಟುಡೆ ತನ್ನ ತನಿಖಾ ವರದಿಯಲ್ಲಿ ಬಹಿರಂಗ ಪಡಿಸಿದೆ.

ಹತ್ಯೆ ಆರೋಪಿ ರಿಯಾಜ್‌ ಅತ್ತಾರಿಗೆ ಹಾರ ಹಾಕಿ ಸ್ವಾಗತಿಸುತ್ತಿರುವ ಚೈನ್‌ವಾಲಾ

ಈ ಬಗ್ಗೆ ಇಂಡಿಯಾ ಟುಡೆ ಇರ್ಷಾದ್‌ ಚೈನ್‌ವಾಲಾ ಅವರನ್ನು ಮಾತನಾಡಿಸಿದ್ದು, ಆರೋಪಿ ರಿಯಾಜ್ ಅತ್ತಾರಿ ಉದಯಪುರದಲ್ಲಿ ನಡೆಯುತ್ತಿದ್ದ ಬಿಜೆಪಿ ಕಾರ್ಯಕ್ರಮಗಳಿಗೆ ಹಾಜರಾಗುತ್ತಿದ್ದ ಎಂದು ಒಪ್ಪಿಕೊಂಡಿದ್ದಾರೆ.

ಇದನ್ನೂ ಓದಿ: ತಾಲಿಬಾನೀಕರಣ ಸಹಿಸುವುದಿಲ್ಲ: ಉದಯ್‌ಪುರ್‌ ಘಟನೆಗೆ ರಾಜಕಾರಣಿಗಳು, ಧಾರ್ಮಿಕ ಮುಖಂಡರ ತೀವ್ರ ವಿರೋಧ

ಆರೋಪಿ ರಿಯಾಜ್‌ ಅತ್ತಾರಿಗೆ ಹಾರ ಹಾಕಿ ಸ್ವಾಗತಿಸುತ್ತಿರುವ ಚಿತ್ರದ ಬಗ್ಗೆ ಮಾತನಾಡಿರುವ ಚೈನ್‌ವಾಲಾ, “ಈ ಚಿತ್ರ ನನ್ನದು. ತೀರ್ಥ ಯಾತ್ರೆಗೆ ತೆರಳಿ ವಾಪಾಸಾದಾಗ ನಾನು ಅವರಿಗೆ ಹಾರ ಹಾಕಿ ಸ್ವಾಗತಿಸಿದ್ದೆ” ಎಂದು ಹೇಳಿದ್ದಾರೆ.

ಆರೋಪಿ ಬಿಜೆಪಿ ಕಾರ್ಯಕ್ರಮಗಳಲ್ಲಿ ಭಾಗವಹಿಸುತ್ತಿದ್ದರೆ ಎಂಬ ವರದಿಗಾರರ ಪ್ರಶ್ನೆಗೆ ಉತ್ತರಿಸಿದ ಚೈನ್‌ವಾಲಾ, “ಬಿಜೆಪಿ ನಾಯಕ ಗುಲಾಬ್ ಚಂದ್ ಕಟಾರಿಯಾ ಅವರ ಅನೇಕ ಕಾರ್ಯಕ್ರಮಗಳಲ್ಲಿ ಆರೋಪಿ ಭಾಗವಹಿಸಿದ್ದನು” ಎಂದು ಹೇಳಿದ್ದಾರೆ.

ಆರೋಪಿ ರಿಯಾಜ್ ಬಿಜೆಪಿ ಕಾರ್ಯಕ್ರಮಗಳಲ್ಲಿ ಆಹ್ವಾನಿಸದೆ ಆಗಾಗ್ಗೆ ಕಾಣಿಸಿಕೊಳ್ಳುತ್ತಿದ್ದನು ಎಂದು ಚೈನ್‌ವಾಲಾ ಹೇಳಿದ್ದಾರೆ. “ಅವನು ತಾನಾಗಿಯೆ ಬರುತ್ತಿದ್ದ, ಅವನು ಪಕ್ಷದಲ್ಲಿ ಕೆಲಸ ಮಾಡಲು ಬಯಸಿದ್ದನು. ಆದರೆ ಖಾಸಗಿಯಾಗಿ ರಿಯಾಜ್‌ ಬಿಜೆಪಿಯ ಕಟುಟೀಕಾಕರರಾಗಿದ್ದನು” ಎಂದು ಚೈನ್‌ವಾಲಾ ವಿವರಿಸಿದ್ದಾರೆ.

ಆರೋಪಿ ರಿಯಾಜ್ ಅತ್ತಾರಿ, ಬಿಜೆಪಿ ಕಾರ್ಯಕರ್ತ ಮೊಹಮ್ಮದ್ ತಾಹಿರ್ ಎಂಬ ವ್ಯಕ್ತಿಯ ಮೂಲಕ ಬಿಜೆಪಿ ಕಾರ್ಯಕ್ರಮಗಳಿಗೆ ಆಗಮಿಸುತ್ತಿದ್ದನು ಎಂದು ಚೈನ್‌ವಾಲಾ ಹೇಳಿದ್ದಾರೆ. “ತಾಹಿರ್ ನಮ್ಮ ಕಾರ್ಯಕರ್ತನಾಗಿದ್ದು. ತಾಹಿರ್‌ ಅವರಿಗೆ ಆರೋಪಿ ರಿಯಾಜ್ ಅತ್ತಾರಿ ಆಪ್ತನಾಗಿದ್ದ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಸಾಮಾಜಿಕ ಮಾಧ್ಯಮಗಳಲ್ಲಿ ನೂಪುರ್ ಶರ್ಮಾ ಬೆಂಬಲಿಸಿದ್ದಕ್ಕೆ ರಾಜಸ್ಥಾನದ ಉದಯಪುರದಲ್ಲಿ ಭೀಕರ ಹತ್ಯೆ; ಆರೋಪಿಗಳ ಬಂಧನ

ತಾಹಿರ್ ಮತ್ತು ರಿಯಾಜ್ ಇಬ್ಬರೂ ಒಟ್ಟಿಗೆ ಇರುವ ಫೋಟೋಗಳು ಬಹಿರಂಗವಾಗಿದೆ. ತಾಹಿರ್‌ ರಾಜಸ್ಥಾನದ ಸವೀನಾ ಎಂಬ ಪ್ರದೇಶದಲ್ಲಿ ವಾಸಿಸುತ್ತಿದ್ದು, ಆದರೆ ಅವರು ಇದೀಗ ನಾಪತ್ತೆಯಾಗಿದ್ದಾರೆ ಎಂದು ಇಂಡಿಯಾ ಟುಡೆ ವರದಿ ಮಾಡಿದೆ. ತಾಹಿತ್‌ ತನ್ನ ಬಾಡಿಗೆ ಮನೆ ಖಾಲಿ ಮಾಡಿದ್ದಾರೆ ಎಂದು ನೆರೆಹೊರೆಯವರು ತಿಳಿಸಿದ್ದು, ತನ್ನ ಮೊಬೈಲ್ ಫೋನ್ ಕೂಡ ಸ್ವಿಚ್ ಆಫ್ ಮಾಡಿದ್ದಾರೆ ಎಂದು ವರದಿ ಹೇಳಿದೆ.

ಮೊಹಮ್ಮದ್‌ ತಾಹಿರ್‌‌ ಅವರು ತನ್ನ ಫೇಸ್‌ಬುಕ್ ಪೋಸ್ಟ್‌ಗಳಲ್ಲಿ ಇರ್ಷಾದ್ ಚೈನ್‌ವಾಲಾ ಅವರನ್ನು ಎಂಆರ್‌ಎಂ (ಮುಸ್ಲಿಂ ರಾಷ್ಟ್ರೀಯ ಮಂಚ್‌) ಪ್ರಾಂತ ಸಂಯೋಜಕ ಎಂದು ಉಲ್ಲೇಖಿಸುತ್ತಾರೆ. ಎಂಆರ್‌ಎಂ ಎಂಬುವುದು ಆರೆಸ್ಸೆಸ್ಸಿನ ಅಂಗ ಸಂಸ್ಥೆಯಾಗಿದೆ. ಈ ಪೋಸ್ಟ್‌ನಲ್ಲಿ ಹತ್ಯೆಯ ಆರೋಪಿ ರಿಯಾಜ್ ಅತ್ತಾರಿಯನ್ನು ಬಿಜೆಪಿ ಕಾರ್ಯಕರ್ತ ಎಂದು ಉಲ್ಲೇಖಿಸಿದ್ದಾರೆ.

ಮೊಹಮ್ಮದ್‌ ತಾಹಿರ್‌‌ ಆರೋಪಿಯನ್ನು ಬಿಜೆಪಿ ಕಾರ್ಯಕರ್ತ ಎಂದು ಉಲ್ಲೇಖಿಸಿರುವ ಪೋಸ್ಟ್‌
ಬಿಜೆಪಿ ಜಿಲ್ಲಾ ಅಧ್ಯಕ್ಷ ಭಾಯಿ ಸಾಬ್ ರವೀಂದ್ರ ಶ್ರೀಮಾಲಿ ಜೊತೆಯಲ್ಲಿ ಹತ್ಯೆಯ ಆರೋಪಿ ರಿಯಾಜ್ ಅತ್ತಾರಿ
ಎಂಆರ್‌ಎಂ ಕಾರ್ಯಕ್ರಮದಲ್ಲಿ ಇರ್ಷಾದ್‌ ಚೈನ್‌ವಾಲಾ(ಕೊಲೆ ಆರೋಪಿ ರಿಯಾಜ್ ಅತ್ತಾರಿಯ ಆಪ್ತ, ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ಸದಸ್ಯ ಮೊಹಮ್ಮದ್ ತಾಹಿರ್‌ ಅವರ ಫೇಸ್‌ಬುಕ್ ಪೋಸ್ಟ್‌)
ಮೊಮ್ಮದ್ ತಾಹಿರ್‌(1) , ಇರ್ಷಾದ್ ಚೈನ್‌ವಾಲಾ(2) ಮತ್ತು ಕೊಲೆ ಆರೋಪಿ ರಿಯಾಜ್ ಅತ್ತಾರಿ(3) ಜೊತೆಯಲ್ಲಿ ಬಿಜೆಪಿ ನಾಯಕ
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

3 COMMENTS

  1. ಉದಯಪುರ ಹತ್ಯೇ ಮಾಡಿದವನು ನಿಮ್ಮ ಮಸೀದಿಯಲ್ಲೇ ವಾಸವಿದ್ದು ಅಲ್ಲೇ ಮಸೀದಿ ಕೆಲಸ ಮಾಡ್ತಿದ್ದ ಅಲ್ವೋ ಚೀನಾಗೆ ಹುಟ್ಟಿದ ಹೈ ಬ್ರೀಡ್ ಗಳಾ,ಅಂಗೈ ಹುಣ್ಣಿಗೆ ಯಾವೋನೋ ನಿನ್ನಂತವನು ಕನ್ನಡಿ ಹಿಡಿದನಂತೆ …..

  2. ಲೇ ರಾಜು ಅಡ್ಡ ಕಸುಬಿ ಬ್ಲೂ ಜೇಪೀ ಹ ಸೂ ಮಗನೇ….ಅವನು ಬ್ಲೂ ಜೇಪೀ ಕಾರ್ಯಕರ್ತ ಅಂತ ಗೊತ್ತಾದ ಮೇಲೂ ಈ ಹತ್ಯೆ ಹಿಂದೆ ಯಾರ ಕೈವಾಡ ಇದೆ ಅಂತ ಗೊತ್ತಾಗ್ತಾ ಇಲ್ವಾ.. ಥೂ ನಿಮ್ಮ ಜನ್ಮಕ್ಕೆ ಹೊಟ್ಟೆಗೆ ಅನ್ನ ತಿನ್ನಲ್ಲ ನೀವು….ದೇಶಕ್ಕೆ ಬೆಂಕಿ ಹಚ್ಚಲಿಕ್ಕೆ ಹುಟ್ಟಿರುವ ಹ ಸೂ ಮಕ್ಕಳು ನೀವು…

  3. 👏👏👏👏👏👏👏ಸಕ್ಕತ್ ಆಗಿ ನಿಜವಾದ ಮಾತು ಹೇಳದ್ರಿ. ಈ ಹಲ್ಕಟ್ ಯಾವಾಗ್ಲೂ ಅಷ್ಟೇ ಬರಿ ಒಂದು ಧರ್ಮದ ವಿರುದ್ಧ ಹೊಯ್ಕೋತಾನೆ. ಮೋಸ್ಟ್ಲಿ 2 ರೂಪಾಯಿ ಬೆಗ್ಗೆರ್ ಅನ್ಸುತ್ತೆ ಅವನು. ಧನ್ಯವಾದಗಳು ನಿಮಗೆ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...