Homeರಾಷ್ಟ್ರೀಯಉದಯಪುರ ಟೈಲರ್‌ ಹತ್ಯೆ: BJP-RSS ಅಂಗಸಂಸ್ಥೆ ಎಂಆರ್‌ಎಂ ನಾಯಕನ ಸಂಪರ್ಕದಲ್ಲಿದ್ದ ಕೊಲೆ ಆರೋಪಿ?

ಉದಯಪುರ ಟೈಲರ್‌ ಹತ್ಯೆ: BJP-RSS ಅಂಗಸಂಸ್ಥೆ ಎಂಆರ್‌ಎಂ ನಾಯಕನ ಸಂಪರ್ಕದಲ್ಲಿದ್ದ ಕೊಲೆ ಆರೋಪಿ?

- Advertisement -
- Advertisement -

ರಾಜಸ್ಥಾನದ ಉದಯಪುರದಲ್ಲಿ ನಡೆದ ಟೈಲರ್ ಕನ್ಹಯ್ಯಾ ಲಾಲ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿಗಳಾದ ರಿಯಾಜ್ ಅತ್ತಾರಿ ಮತ್ತು ಮೊಹಮ್ಮದ್ ಗೌಸ್ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಈ ನಡುವೆ ಹತ್ಯೆ ಆರೋಪಿಯೊಬ್ಬ ಬಿಜೆಪಿ ಜೊತೆಗೆ ಸಂಪರ್ಕದಲ್ಲಿದ್ದ ಎಂದು ಇಂಡಿಯಾ ಟುಡೆ ಮಾಡಿರುವ ತನಿಖಾ ವರದಿ ಶುಕ್ರವಾರ ಬಹಿರಂಗಪಡಿಸಿದೆ. ಜೊತೆಗೆ RSS ಅಂಗಸಂಸ್ಥೆ ಎಂಆರ್‌ಎಂ ನಾಯಕ ಎಂದು ಪ್ರತಿಪಾದಿಸಲಾಗಿರುವ ವ್ಯಕ್ತಿಯ ಜೊತೆಗೆ ಆರೋಪಿ ಇದ್ದ ಚಿತ್ರಗಳು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದೆ.

ಹತ್ಯೆ ಆರೋಪಿಗಳಲ್ಲಿ ಒಬ್ಬನಾಗಿರುವ ರಿಯಾಜ್‌ ಅತ್ತಾರಿ ಉದಯಪುರದ ಬಿಜೆಪಿ ಕಾರ್ಯಕ್ರಮಗಳಲ್ಲಿ ಭಾಗವಹಿಸುತ್ತಿದ್ದನು ಎಂದು ಇಂಡಿಯಾ ಟುಡೆ ವರದಿ ಹೇಳಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಕಳೆದ ಹತ್ತು ವರ್ಷಗಳಿಂದ ರಾಜಸ್ಥಾನದ ಬಿಜೆಪಿಯ ಅಲ್ಪಸಂಖ್ಯಾತ ಮೋರ್ಚಾದ ಸದಸ್ಯರಾಗಿರುವ ಇರ್ಷಾದ್ ಚೈನ್‌ವಾಲಾ ಅವರು, ಆರೋಪಿ ರಿಯಾಜ್‌ ಅತ್ತಾರಿ 2019 ರಲ್ಲಿ ತೀರ್ಥಯಾತ್ರೆಗೆ ತೆರಳಿ ಹಿಂದಿರುಗಿದಾಗ ಸ್ವಾಗತಿಸಿದ್ದರು. ಈ ಚಿತ್ರವನ್ನು ಇಂಡಿಯಾ ಟುಡೆ ತನ್ನ ತನಿಖಾ ವರದಿಯಲ್ಲಿ ಬಹಿರಂಗ ಪಡಿಸಿದೆ.

ಹತ್ಯೆ ಆರೋಪಿ ರಿಯಾಜ್‌ ಅತ್ತಾರಿಗೆ ಹಾರ ಹಾಕಿ ಸ್ವಾಗತಿಸುತ್ತಿರುವ ಚೈನ್‌ವಾಲಾ

ಈ ಬಗ್ಗೆ ಇಂಡಿಯಾ ಟುಡೆ ಇರ್ಷಾದ್‌ ಚೈನ್‌ವಾಲಾ ಅವರನ್ನು ಮಾತನಾಡಿಸಿದ್ದು, ಆರೋಪಿ ರಿಯಾಜ್ ಅತ್ತಾರಿ ಉದಯಪುರದಲ್ಲಿ ನಡೆಯುತ್ತಿದ್ದ ಬಿಜೆಪಿ ಕಾರ್ಯಕ್ರಮಗಳಿಗೆ ಹಾಜರಾಗುತ್ತಿದ್ದ ಎಂದು ಒಪ್ಪಿಕೊಂಡಿದ್ದಾರೆ.

ಇದನ್ನೂ ಓದಿ: ತಾಲಿಬಾನೀಕರಣ ಸಹಿಸುವುದಿಲ್ಲ: ಉದಯ್‌ಪುರ್‌ ಘಟನೆಗೆ ರಾಜಕಾರಣಿಗಳು, ಧಾರ್ಮಿಕ ಮುಖಂಡರ ತೀವ್ರ ವಿರೋಧ

ಆರೋಪಿ ರಿಯಾಜ್‌ ಅತ್ತಾರಿಗೆ ಹಾರ ಹಾಕಿ ಸ್ವಾಗತಿಸುತ್ತಿರುವ ಚಿತ್ರದ ಬಗ್ಗೆ ಮಾತನಾಡಿರುವ ಚೈನ್‌ವಾಲಾ, “ಈ ಚಿತ್ರ ನನ್ನದು. ತೀರ್ಥ ಯಾತ್ರೆಗೆ ತೆರಳಿ ವಾಪಾಸಾದಾಗ ನಾನು ಅವರಿಗೆ ಹಾರ ಹಾಕಿ ಸ್ವಾಗತಿಸಿದ್ದೆ” ಎಂದು ಹೇಳಿದ್ದಾರೆ.

ಆರೋಪಿ ಬಿಜೆಪಿ ಕಾರ್ಯಕ್ರಮಗಳಲ್ಲಿ ಭಾಗವಹಿಸುತ್ತಿದ್ದರೆ ಎಂಬ ವರದಿಗಾರರ ಪ್ರಶ್ನೆಗೆ ಉತ್ತರಿಸಿದ ಚೈನ್‌ವಾಲಾ, “ಬಿಜೆಪಿ ನಾಯಕ ಗುಲಾಬ್ ಚಂದ್ ಕಟಾರಿಯಾ ಅವರ ಅನೇಕ ಕಾರ್ಯಕ್ರಮಗಳಲ್ಲಿ ಆರೋಪಿ ಭಾಗವಹಿಸಿದ್ದನು” ಎಂದು ಹೇಳಿದ್ದಾರೆ.

ಆರೋಪಿ ರಿಯಾಜ್ ಬಿಜೆಪಿ ಕಾರ್ಯಕ್ರಮಗಳಲ್ಲಿ ಆಹ್ವಾನಿಸದೆ ಆಗಾಗ್ಗೆ ಕಾಣಿಸಿಕೊಳ್ಳುತ್ತಿದ್ದನು ಎಂದು ಚೈನ್‌ವಾಲಾ ಹೇಳಿದ್ದಾರೆ. “ಅವನು ತಾನಾಗಿಯೆ ಬರುತ್ತಿದ್ದ, ಅವನು ಪಕ್ಷದಲ್ಲಿ ಕೆಲಸ ಮಾಡಲು ಬಯಸಿದ್ದನು. ಆದರೆ ಖಾಸಗಿಯಾಗಿ ರಿಯಾಜ್‌ ಬಿಜೆಪಿಯ ಕಟುಟೀಕಾಕರರಾಗಿದ್ದನು” ಎಂದು ಚೈನ್‌ವಾಲಾ ವಿವರಿಸಿದ್ದಾರೆ.

ಆರೋಪಿ ರಿಯಾಜ್ ಅತ್ತಾರಿ, ಬಿಜೆಪಿ ಕಾರ್ಯಕರ್ತ ಮೊಹಮ್ಮದ್ ತಾಹಿರ್ ಎಂಬ ವ್ಯಕ್ತಿಯ ಮೂಲಕ ಬಿಜೆಪಿ ಕಾರ್ಯಕ್ರಮಗಳಿಗೆ ಆಗಮಿಸುತ್ತಿದ್ದನು ಎಂದು ಚೈನ್‌ವಾಲಾ ಹೇಳಿದ್ದಾರೆ. “ತಾಹಿರ್ ನಮ್ಮ ಕಾರ್ಯಕರ್ತನಾಗಿದ್ದು. ತಾಹಿರ್‌ ಅವರಿಗೆ ಆರೋಪಿ ರಿಯಾಜ್ ಅತ್ತಾರಿ ಆಪ್ತನಾಗಿದ್ದ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಸಾಮಾಜಿಕ ಮಾಧ್ಯಮಗಳಲ್ಲಿ ನೂಪುರ್ ಶರ್ಮಾ ಬೆಂಬಲಿಸಿದ್ದಕ್ಕೆ ರಾಜಸ್ಥಾನದ ಉದಯಪುರದಲ್ಲಿ ಭೀಕರ ಹತ್ಯೆ; ಆರೋಪಿಗಳ ಬಂಧನ

ತಾಹಿರ್ ಮತ್ತು ರಿಯಾಜ್ ಇಬ್ಬರೂ ಒಟ್ಟಿಗೆ ಇರುವ ಫೋಟೋಗಳು ಬಹಿರಂಗವಾಗಿದೆ. ತಾಹಿರ್‌ ರಾಜಸ್ಥಾನದ ಸವೀನಾ ಎಂಬ ಪ್ರದೇಶದಲ್ಲಿ ವಾಸಿಸುತ್ತಿದ್ದು, ಆದರೆ ಅವರು ಇದೀಗ ನಾಪತ್ತೆಯಾಗಿದ್ದಾರೆ ಎಂದು ಇಂಡಿಯಾ ಟುಡೆ ವರದಿ ಮಾಡಿದೆ. ತಾಹಿತ್‌ ತನ್ನ ಬಾಡಿಗೆ ಮನೆ ಖಾಲಿ ಮಾಡಿದ್ದಾರೆ ಎಂದು ನೆರೆಹೊರೆಯವರು ತಿಳಿಸಿದ್ದು, ತನ್ನ ಮೊಬೈಲ್ ಫೋನ್ ಕೂಡ ಸ್ವಿಚ್ ಆಫ್ ಮಾಡಿದ್ದಾರೆ ಎಂದು ವರದಿ ಹೇಳಿದೆ.

ಮೊಹಮ್ಮದ್‌ ತಾಹಿರ್‌‌ ಅವರು ತನ್ನ ಫೇಸ್‌ಬುಕ್ ಪೋಸ್ಟ್‌ಗಳಲ್ಲಿ ಇರ್ಷಾದ್ ಚೈನ್‌ವಾಲಾ ಅವರನ್ನು ಎಂಆರ್‌ಎಂ (ಮುಸ್ಲಿಂ ರಾಷ್ಟ್ರೀಯ ಮಂಚ್‌) ಪ್ರಾಂತ ಸಂಯೋಜಕ ಎಂದು ಉಲ್ಲೇಖಿಸುತ್ತಾರೆ. ಎಂಆರ್‌ಎಂ ಎಂಬುವುದು ಆರೆಸ್ಸೆಸ್ಸಿನ ಅಂಗ ಸಂಸ್ಥೆಯಾಗಿದೆ. ಈ ಪೋಸ್ಟ್‌ನಲ್ಲಿ ಹತ್ಯೆಯ ಆರೋಪಿ ರಿಯಾಜ್ ಅತ್ತಾರಿಯನ್ನು ಬಿಜೆಪಿ ಕಾರ್ಯಕರ್ತ ಎಂದು ಉಲ್ಲೇಖಿಸಿದ್ದಾರೆ.

ಮೊಹಮ್ಮದ್‌ ತಾಹಿರ್‌‌ ಆರೋಪಿಯನ್ನು ಬಿಜೆಪಿ ಕಾರ್ಯಕರ್ತ ಎಂದು ಉಲ್ಲೇಖಿಸಿರುವ ಪೋಸ್ಟ್‌
ಬಿಜೆಪಿ ಜಿಲ್ಲಾ ಅಧ್ಯಕ್ಷ ಭಾಯಿ ಸಾಬ್ ರವೀಂದ್ರ ಶ್ರೀಮಾಲಿ ಜೊತೆಯಲ್ಲಿ ಹತ್ಯೆಯ ಆರೋಪಿ ರಿಯಾಜ್ ಅತ್ತಾರಿ
ಎಂಆರ್‌ಎಂ ಕಾರ್ಯಕ್ರಮದಲ್ಲಿ ಇರ್ಷಾದ್‌ ಚೈನ್‌ವಾಲಾ(ಕೊಲೆ ಆರೋಪಿ ರಿಯಾಜ್ ಅತ್ತಾರಿಯ ಆಪ್ತ, ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ಸದಸ್ಯ ಮೊಹಮ್ಮದ್ ತಾಹಿರ್‌ ಅವರ ಫೇಸ್‌ಬುಕ್ ಪೋಸ್ಟ್‌)
ಮೊಮ್ಮದ್ ತಾಹಿರ್‌(1) , ಇರ್ಷಾದ್ ಚೈನ್‌ವಾಲಾ(2) ಮತ್ತು ಕೊಲೆ ಆರೋಪಿ ರಿಯಾಜ್ ಅತ್ತಾರಿ(3) ಜೊತೆಯಲ್ಲಿ ಬಿಜೆಪಿ ನಾಯಕ
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

3 COMMENTS

  1. ಉದಯಪುರ ಹತ್ಯೇ ಮಾಡಿದವನು ನಿಮ್ಮ ಮಸೀದಿಯಲ್ಲೇ ವಾಸವಿದ್ದು ಅಲ್ಲೇ ಮಸೀದಿ ಕೆಲಸ ಮಾಡ್ತಿದ್ದ ಅಲ್ವೋ ಚೀನಾಗೆ ಹುಟ್ಟಿದ ಹೈ ಬ್ರೀಡ್ ಗಳಾ,ಅಂಗೈ ಹುಣ್ಣಿಗೆ ಯಾವೋನೋ ನಿನ್ನಂತವನು ಕನ್ನಡಿ ಹಿಡಿದನಂತೆ …..

  2. ಲೇ ರಾಜು ಅಡ್ಡ ಕಸುಬಿ ಬ್ಲೂ ಜೇಪೀ ಹ ಸೂ ಮಗನೇ….ಅವನು ಬ್ಲೂ ಜೇಪೀ ಕಾರ್ಯಕರ್ತ ಅಂತ ಗೊತ್ತಾದ ಮೇಲೂ ಈ ಹತ್ಯೆ ಹಿಂದೆ ಯಾರ ಕೈವಾಡ ಇದೆ ಅಂತ ಗೊತ್ತಾಗ್ತಾ ಇಲ್ವಾ.. ಥೂ ನಿಮ್ಮ ಜನ್ಮಕ್ಕೆ ಹೊಟ್ಟೆಗೆ ಅನ್ನ ತಿನ್ನಲ್ಲ ನೀವು….ದೇಶಕ್ಕೆ ಬೆಂಕಿ ಹಚ್ಚಲಿಕ್ಕೆ ಹುಟ್ಟಿರುವ ಹ ಸೂ ಮಕ್ಕಳು ನೀವು…

  3. 👏👏👏👏👏👏👏ಸಕ್ಕತ್ ಆಗಿ ನಿಜವಾದ ಮಾತು ಹೇಳದ್ರಿ. ಈ ಹಲ್ಕಟ್ ಯಾವಾಗ್ಲೂ ಅಷ್ಟೇ ಬರಿ ಒಂದು ಧರ್ಮದ ವಿರುದ್ಧ ಹೊಯ್ಕೋತಾನೆ. ಮೋಸ್ಟ್ಲಿ 2 ರೂಪಾಯಿ ಬೆಗ್ಗೆರ್ ಅನ್ಸುತ್ತೆ ಅವನು. ಧನ್ಯವಾದಗಳು ನಿಮಗೆ

LEAVE A REPLY

Please enter your comment!
Please enter your name here

- Advertisment -

ಯಾದಗಿರಿ: ಫಾರ್ಮಾ ಘಟಕದಲ್ಲಿ ವಿಷಾನಿಲ ಸೋರಿಕೆ, ಮೂವರು ಕಾರ್ಮಿಕರ ದಾರುಣ ಸಾವು, FIR ದಾಖಲು

ಜಿಲ್ಲೆಯ ಸೈದಾಪುರ ಪೊಲೀಸ್ ಠಾಣೆ ವ್ಯಾಪ್ತಿಯ ಕಡೇಚೂರು–ಬಾಡಿಯಾಳ ಕೈಗಾರಿಕಾ ಪ್ರದೇಶದಲ್ಲಿರುವ 'ಸಿಲ್ ಲ್ಯಾಬೊರೇಟರೀಸ್ ಪ್ರೈವೇಟ್ ಲಿಮಿಟೆಡ್' (Sil Laboratories Pvt Ltd) ಔಷಧಿ ತಯಾರಿಕಾ ಘಟಕದಲ್ಲಿ ಬುಧವಾರ ಮುಂಜಾನೆ ಸಂಭವಿಸಿದ ಭೀಕರ ರಾಸಾಯನಿಕ...

‘ಮದ್ರಸಾಗಳು ಭಯೋತ್ಪಾದನೆಯನ್ನು ಉತ್ಪಾದಿಸುತ್ತವೆ’: ಯುಪಿ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ದ್ವೇಷ ಭಾಷಣಕ್ಕೆ ವ್ಯಾಪಕ ಆಕ್ರೋಶ

‘ಮದ್ರಸಾಗಳು ಭಯೋತ್ಪಾದನೆಯನ್ನು ಉತ್ಪಾದಿಸುತ್ತವೆ’ ಎಂಬ ಉತ್ತರ ಪ್ರದೇಶದ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ಅವರ ಹೇಳಿಕೆಯು ತೀವ್ರ ಸ್ವರೂಪದ ವಿವಾದಕ್ಕೆ ಕಾರಣವಾಗಿದೆ. ಧಾರ್ಮಿಕ ಅಲ್ಪಸಂಖ್ಯಾತರ ಶಿಕ್ಷಣ ಸಂಸ್ಥೆಗಳನ್ನು ಗುರಿಯಾಗಿಸಿಕೊಂಡು ನೀಡಿರುವ ಈ ಹೇಳಿಕೆಯು...

ತಪ್ಪಾಗಿ ಸುದ್ದಿ ಪ್ರಕಟ : ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರಲ್ಲಿ ಕ್ಷಮೆಯಾಚಿಸಿದ PTI

ತಮ್ಮ ಹೇಳಿಕೆಯನ್ನು ತಪ್ಪಾಗಿ ಪ್ರಸಾರ ಮಾಡಿದ್ದ ಪ್ರೆಸ್ ಟ್ರಸ್ಟ್ ಆಫ್ ಇಂಡಿಯಾ (PTI) ಅಧಿಕೃತವಾಗಿ ಕ್ಷಮೆಯಾಚಿಸಿದರೂ, ಅದರಿಂದ ಈಗಾಗಲೇ ಉಂಟಾಗಿರುವ ಹಾನಿ ಸರಿಪಡಿಸಲು ಸಾಧ್ಯವಿಲ್ಲ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ಆ....

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...

ರಾಜ್ಯದಲ್ಲಿ ‘SIR’ ಅವಾಂತರ: 1.ಕೋಟಿಗೂ ಹೆಚ್ಚು ಮತದಾರರನ್ನು ಹೊರಗಿಡಲು ಸಂಚು, ‘SIR ವಿರೋಧಿ ಕರ್ನಾಟಕ’ ಆಕ್ರೋಶ

ಕರ್ನಾಟಕದಲ್ಲಿ ಜಾರಿಯಲ್ಲಿರುವ ಬೂತ್ ಮಟ್ಟದ ಮತದಾರರ ಪಟ್ಟಿ ಸರಿಪಡಿಸುವ 'ಎಸ್‌ಐಆರ್' (SIR) ಪ್ರಕ್ರಿಯೆಯಲ್ಲಿ ಭಾರೀ ಅವ್ಯವಹಾರ ಮತ್ತು ಕಪಟತನ ನಡೆದಿದ್ದು, ರಾಜ್ಯದ ಶೇ. 20 ರಷ್ಟು (ಆಗಸ್ಟ್ 2026ರ ಹೊತ್ತಿಗೆ ಸುಮಾರು 1.10...

‘ಜನರು ಬಿಜೆಪಿಯಿಂದ ಅತೃಪ್ತರಾಗಿದ್ದಾರೆ…’: ದಾಟಿಯಾ ಉಪಚುನಾವಣೆಯಲ್ಲಿ ಗೆಲುವಿನ ನಂತರ ಆಡಳಿತ ಪಕ್ಷದ ವಿರುದ್ಧ ಘನಶ್ಯಾಮ್ ಸಿಂಗ್ ವಾಗ್ದಾಳಿ

ಭೋಪಾಲ್ (ಮಧ್ಯಪ್ರದೇಶ): ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಶಾಸಕ ಘನಶ್ಯಾಮ್ ಸಿಂಗ್ ಅವರು, ತಮ್ಮ ಅಭೂತಪೂರ್ವ ಗೆಲುವನ್ನು ಬಿಜೆಪಿಯ 'ಭ್ರಷ್ಟಾಚಾರ'ಕ್ಕೆ ಸಾರ್ವಜನಿಕರು ನೀಡಿದ ತಕ್ಕ ಹಾಗೂ ಸೂಕ್ತ...

ಇಂದಿನ ವಿಚಾರಣೆ ಬಳಿಕ ಉದಯನಿಧಿ ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ನಿರ್ದೇಶನ

ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧಿತರಾದ ತಮಿಳುನಾಡು ವಿಧಾನಸಭೆಯ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು, ವಿಚಾರಣೆಯಯ ಬಳಿಕ ಸ್ಟೇಷನ್ ಬೇಲ್ (ಠಾಣಾ ಜಾಮೀನು) ಮೇಲೆ ಬಿಡುಗಡೆ ಮಾಡುವಂತೆ ಮದ್ರಾಸ್ ಹೈಕೋರ್ಟ್...