Homeರಾಷ್ಟ್ರೀಯಉದಯಪುರ ಟೈಲರ್‌ ಹತ್ಯೆ: BJP-RSS ಅಂಗಸಂಸ್ಥೆ ಎಂಆರ್‌ಎಂ ನಾಯಕನ ಸಂಪರ್ಕದಲ್ಲಿದ್ದ ಕೊಲೆ ಆರೋಪಿ?

ಉದಯಪುರ ಟೈಲರ್‌ ಹತ್ಯೆ: BJP-RSS ಅಂಗಸಂಸ್ಥೆ ಎಂಆರ್‌ಎಂ ನಾಯಕನ ಸಂಪರ್ಕದಲ್ಲಿದ್ದ ಕೊಲೆ ಆರೋಪಿ?

- Advertisement -
- Advertisement -

ರಾಜಸ್ಥಾನದ ಉದಯಪುರದಲ್ಲಿ ನಡೆದ ಟೈಲರ್ ಕನ್ಹಯ್ಯಾ ಲಾಲ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿಗಳಾದ ರಿಯಾಜ್ ಅತ್ತಾರಿ ಮತ್ತು ಮೊಹಮ್ಮದ್ ಗೌಸ್ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಈ ನಡುವೆ ಹತ್ಯೆ ಆರೋಪಿಯೊಬ್ಬ ಬಿಜೆಪಿ ಜೊತೆಗೆ ಸಂಪರ್ಕದಲ್ಲಿದ್ದ ಎಂದು ಇಂಡಿಯಾ ಟುಡೆ ಮಾಡಿರುವ ತನಿಖಾ ವರದಿ ಶುಕ್ರವಾರ ಬಹಿರಂಗಪಡಿಸಿದೆ. ಜೊತೆಗೆ RSS ಅಂಗಸಂಸ್ಥೆ ಎಂಆರ್‌ಎಂ ನಾಯಕ ಎಂದು ಪ್ರತಿಪಾದಿಸಲಾಗಿರುವ ವ್ಯಕ್ತಿಯ ಜೊತೆಗೆ ಆರೋಪಿ ಇದ್ದ ಚಿತ್ರಗಳು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದೆ.

ಹತ್ಯೆ ಆರೋಪಿಗಳಲ್ಲಿ ಒಬ್ಬನಾಗಿರುವ ರಿಯಾಜ್‌ ಅತ್ತಾರಿ ಉದಯಪುರದ ಬಿಜೆಪಿ ಕಾರ್ಯಕ್ರಮಗಳಲ್ಲಿ ಭಾಗವಹಿಸುತ್ತಿದ್ದನು ಎಂದು ಇಂಡಿಯಾ ಟುಡೆ ವರದಿ ಹೇಳಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಕಳೆದ ಹತ್ತು ವರ್ಷಗಳಿಂದ ರಾಜಸ್ಥಾನದ ಬಿಜೆಪಿಯ ಅಲ್ಪಸಂಖ್ಯಾತ ಮೋರ್ಚಾದ ಸದಸ್ಯರಾಗಿರುವ ಇರ್ಷಾದ್ ಚೈನ್‌ವಾಲಾ ಅವರು, ಆರೋಪಿ ರಿಯಾಜ್‌ ಅತ್ತಾರಿ 2019 ರಲ್ಲಿ ತೀರ್ಥಯಾತ್ರೆಗೆ ತೆರಳಿ ಹಿಂದಿರುಗಿದಾಗ ಸ್ವಾಗತಿಸಿದ್ದರು. ಈ ಚಿತ್ರವನ್ನು ಇಂಡಿಯಾ ಟುಡೆ ತನ್ನ ತನಿಖಾ ವರದಿಯಲ್ಲಿ ಬಹಿರಂಗ ಪಡಿಸಿದೆ.

ಹತ್ಯೆ ಆರೋಪಿ ರಿಯಾಜ್‌ ಅತ್ತಾರಿಗೆ ಹಾರ ಹಾಕಿ ಸ್ವಾಗತಿಸುತ್ತಿರುವ ಚೈನ್‌ವಾಲಾ

ಈ ಬಗ್ಗೆ ಇಂಡಿಯಾ ಟುಡೆ ಇರ್ಷಾದ್‌ ಚೈನ್‌ವಾಲಾ ಅವರನ್ನು ಮಾತನಾಡಿಸಿದ್ದು, ಆರೋಪಿ ರಿಯಾಜ್ ಅತ್ತಾರಿ ಉದಯಪುರದಲ್ಲಿ ನಡೆಯುತ್ತಿದ್ದ ಬಿಜೆಪಿ ಕಾರ್ಯಕ್ರಮಗಳಿಗೆ ಹಾಜರಾಗುತ್ತಿದ್ದ ಎಂದು ಒಪ್ಪಿಕೊಂಡಿದ್ದಾರೆ.

ಇದನ್ನೂ ಓದಿ: ತಾಲಿಬಾನೀಕರಣ ಸಹಿಸುವುದಿಲ್ಲ: ಉದಯ್‌ಪುರ್‌ ಘಟನೆಗೆ ರಾಜಕಾರಣಿಗಳು, ಧಾರ್ಮಿಕ ಮುಖಂಡರ ತೀವ್ರ ವಿರೋಧ

ಆರೋಪಿ ರಿಯಾಜ್‌ ಅತ್ತಾರಿಗೆ ಹಾರ ಹಾಕಿ ಸ್ವಾಗತಿಸುತ್ತಿರುವ ಚಿತ್ರದ ಬಗ್ಗೆ ಮಾತನಾಡಿರುವ ಚೈನ್‌ವಾಲಾ, “ಈ ಚಿತ್ರ ನನ್ನದು. ತೀರ್ಥ ಯಾತ್ರೆಗೆ ತೆರಳಿ ವಾಪಾಸಾದಾಗ ನಾನು ಅವರಿಗೆ ಹಾರ ಹಾಕಿ ಸ್ವಾಗತಿಸಿದ್ದೆ” ಎಂದು ಹೇಳಿದ್ದಾರೆ.

ಆರೋಪಿ ಬಿಜೆಪಿ ಕಾರ್ಯಕ್ರಮಗಳಲ್ಲಿ ಭಾಗವಹಿಸುತ್ತಿದ್ದರೆ ಎಂಬ ವರದಿಗಾರರ ಪ್ರಶ್ನೆಗೆ ಉತ್ತರಿಸಿದ ಚೈನ್‌ವಾಲಾ, “ಬಿಜೆಪಿ ನಾಯಕ ಗುಲಾಬ್ ಚಂದ್ ಕಟಾರಿಯಾ ಅವರ ಅನೇಕ ಕಾರ್ಯಕ್ರಮಗಳಲ್ಲಿ ಆರೋಪಿ ಭಾಗವಹಿಸಿದ್ದನು” ಎಂದು ಹೇಳಿದ್ದಾರೆ.

ಆರೋಪಿ ರಿಯಾಜ್ ಬಿಜೆಪಿ ಕಾರ್ಯಕ್ರಮಗಳಲ್ಲಿ ಆಹ್ವಾನಿಸದೆ ಆಗಾಗ್ಗೆ ಕಾಣಿಸಿಕೊಳ್ಳುತ್ತಿದ್ದನು ಎಂದು ಚೈನ್‌ವಾಲಾ ಹೇಳಿದ್ದಾರೆ. “ಅವನು ತಾನಾಗಿಯೆ ಬರುತ್ತಿದ್ದ, ಅವನು ಪಕ್ಷದಲ್ಲಿ ಕೆಲಸ ಮಾಡಲು ಬಯಸಿದ್ದನು. ಆದರೆ ಖಾಸಗಿಯಾಗಿ ರಿಯಾಜ್‌ ಬಿಜೆಪಿಯ ಕಟುಟೀಕಾಕರರಾಗಿದ್ದನು” ಎಂದು ಚೈನ್‌ವಾಲಾ ವಿವರಿಸಿದ್ದಾರೆ.

ಆರೋಪಿ ರಿಯಾಜ್ ಅತ್ತಾರಿ, ಬಿಜೆಪಿ ಕಾರ್ಯಕರ್ತ ಮೊಹಮ್ಮದ್ ತಾಹಿರ್ ಎಂಬ ವ್ಯಕ್ತಿಯ ಮೂಲಕ ಬಿಜೆಪಿ ಕಾರ್ಯಕ್ರಮಗಳಿಗೆ ಆಗಮಿಸುತ್ತಿದ್ದನು ಎಂದು ಚೈನ್‌ವಾಲಾ ಹೇಳಿದ್ದಾರೆ. “ತಾಹಿರ್ ನಮ್ಮ ಕಾರ್ಯಕರ್ತನಾಗಿದ್ದು. ತಾಹಿರ್‌ ಅವರಿಗೆ ಆರೋಪಿ ರಿಯಾಜ್ ಅತ್ತಾರಿ ಆಪ್ತನಾಗಿದ್ದ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಸಾಮಾಜಿಕ ಮಾಧ್ಯಮಗಳಲ್ಲಿ ನೂಪುರ್ ಶರ್ಮಾ ಬೆಂಬಲಿಸಿದ್ದಕ್ಕೆ ರಾಜಸ್ಥಾನದ ಉದಯಪುರದಲ್ಲಿ ಭೀಕರ ಹತ್ಯೆ; ಆರೋಪಿಗಳ ಬಂಧನ

ತಾಹಿರ್ ಮತ್ತು ರಿಯಾಜ್ ಇಬ್ಬರೂ ಒಟ್ಟಿಗೆ ಇರುವ ಫೋಟೋಗಳು ಬಹಿರಂಗವಾಗಿದೆ. ತಾಹಿರ್‌ ರಾಜಸ್ಥಾನದ ಸವೀನಾ ಎಂಬ ಪ್ರದೇಶದಲ್ಲಿ ವಾಸಿಸುತ್ತಿದ್ದು, ಆದರೆ ಅವರು ಇದೀಗ ನಾಪತ್ತೆಯಾಗಿದ್ದಾರೆ ಎಂದು ಇಂಡಿಯಾ ಟುಡೆ ವರದಿ ಮಾಡಿದೆ. ತಾಹಿತ್‌ ತನ್ನ ಬಾಡಿಗೆ ಮನೆ ಖಾಲಿ ಮಾಡಿದ್ದಾರೆ ಎಂದು ನೆರೆಹೊರೆಯವರು ತಿಳಿಸಿದ್ದು, ತನ್ನ ಮೊಬೈಲ್ ಫೋನ್ ಕೂಡ ಸ್ವಿಚ್ ಆಫ್ ಮಾಡಿದ್ದಾರೆ ಎಂದು ವರದಿ ಹೇಳಿದೆ.

ಮೊಹಮ್ಮದ್‌ ತಾಹಿರ್‌‌ ಅವರು ತನ್ನ ಫೇಸ್‌ಬುಕ್ ಪೋಸ್ಟ್‌ಗಳಲ್ಲಿ ಇರ್ಷಾದ್ ಚೈನ್‌ವಾಲಾ ಅವರನ್ನು ಎಂಆರ್‌ಎಂ (ಮುಸ್ಲಿಂ ರಾಷ್ಟ್ರೀಯ ಮಂಚ್‌) ಪ್ರಾಂತ ಸಂಯೋಜಕ ಎಂದು ಉಲ್ಲೇಖಿಸುತ್ತಾರೆ. ಎಂಆರ್‌ಎಂ ಎಂಬುವುದು ಆರೆಸ್ಸೆಸ್ಸಿನ ಅಂಗ ಸಂಸ್ಥೆಯಾಗಿದೆ. ಈ ಪೋಸ್ಟ್‌ನಲ್ಲಿ ಹತ್ಯೆಯ ಆರೋಪಿ ರಿಯಾಜ್ ಅತ್ತಾರಿಯನ್ನು ಬಿಜೆಪಿ ಕಾರ್ಯಕರ್ತ ಎಂದು ಉಲ್ಲೇಖಿಸಿದ್ದಾರೆ.

ಮೊಹಮ್ಮದ್‌ ತಾಹಿರ್‌‌ ಆರೋಪಿಯನ್ನು ಬಿಜೆಪಿ ಕಾರ್ಯಕರ್ತ ಎಂದು ಉಲ್ಲೇಖಿಸಿರುವ ಪೋಸ್ಟ್‌
ಬಿಜೆಪಿ ಜಿಲ್ಲಾ ಅಧ್ಯಕ್ಷ ಭಾಯಿ ಸಾಬ್ ರವೀಂದ್ರ ಶ್ರೀಮಾಲಿ ಜೊತೆಯಲ್ಲಿ ಹತ್ಯೆಯ ಆರೋಪಿ ರಿಯಾಜ್ ಅತ್ತಾರಿ
ಎಂಆರ್‌ಎಂ ಕಾರ್ಯಕ್ರಮದಲ್ಲಿ ಇರ್ಷಾದ್‌ ಚೈನ್‌ವಾಲಾ(ಕೊಲೆ ಆರೋಪಿ ರಿಯಾಜ್ ಅತ್ತಾರಿಯ ಆಪ್ತ, ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ಸದಸ್ಯ ಮೊಹಮ್ಮದ್ ತಾಹಿರ್‌ ಅವರ ಫೇಸ್‌ಬುಕ್ ಪೋಸ್ಟ್‌)
ಮೊಮ್ಮದ್ ತಾಹಿರ್‌(1) , ಇರ್ಷಾದ್ ಚೈನ್‌ವಾಲಾ(2) ಮತ್ತು ಕೊಲೆ ಆರೋಪಿ ರಿಯಾಜ್ ಅತ್ತಾರಿ(3) ಜೊತೆಯಲ್ಲಿ ಬಿಜೆಪಿ ನಾಯಕ
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

3 COMMENTS

  1. ಉದಯಪುರ ಹತ್ಯೇ ಮಾಡಿದವನು ನಿಮ್ಮ ಮಸೀದಿಯಲ್ಲೇ ವಾಸವಿದ್ದು ಅಲ್ಲೇ ಮಸೀದಿ ಕೆಲಸ ಮಾಡ್ತಿದ್ದ ಅಲ್ವೋ ಚೀನಾಗೆ ಹುಟ್ಟಿದ ಹೈ ಬ್ರೀಡ್ ಗಳಾ,ಅಂಗೈ ಹುಣ್ಣಿಗೆ ಯಾವೋನೋ ನಿನ್ನಂತವನು ಕನ್ನಡಿ ಹಿಡಿದನಂತೆ …..

  2. ಲೇ ರಾಜು ಅಡ್ಡ ಕಸುಬಿ ಬ್ಲೂ ಜೇಪೀ ಹ ಸೂ ಮಗನೇ….ಅವನು ಬ್ಲೂ ಜೇಪೀ ಕಾರ್ಯಕರ್ತ ಅಂತ ಗೊತ್ತಾದ ಮೇಲೂ ಈ ಹತ್ಯೆ ಹಿಂದೆ ಯಾರ ಕೈವಾಡ ಇದೆ ಅಂತ ಗೊತ್ತಾಗ್ತಾ ಇಲ್ವಾ.. ಥೂ ನಿಮ್ಮ ಜನ್ಮಕ್ಕೆ ಹೊಟ್ಟೆಗೆ ಅನ್ನ ತಿನ್ನಲ್ಲ ನೀವು….ದೇಶಕ್ಕೆ ಬೆಂಕಿ ಹಚ್ಚಲಿಕ್ಕೆ ಹುಟ್ಟಿರುವ ಹ ಸೂ ಮಕ್ಕಳು ನೀವು…

  3. 👏👏👏👏👏👏👏ಸಕ್ಕತ್ ಆಗಿ ನಿಜವಾದ ಮಾತು ಹೇಳದ್ರಿ. ಈ ಹಲ್ಕಟ್ ಯಾವಾಗ್ಲೂ ಅಷ್ಟೇ ಬರಿ ಒಂದು ಧರ್ಮದ ವಿರುದ್ಧ ಹೊಯ್ಕೋತಾನೆ. ಮೋಸ್ಟ್ಲಿ 2 ರೂಪಾಯಿ ಬೆಗ್ಗೆರ್ ಅನ್ಸುತ್ತೆ ಅವನು. ಧನ್ಯವಾದಗಳು ನಿಮಗೆ

LEAVE A REPLY

Please enter your comment!
Please enter your name here

- Advertisment -

ಎಸ್‌ಐಆರ್‌ಗೂ ಸರ್ಕಾರಿ ಸೌಲಭ್ಯಕ್ಕೂ ಲಿಂಕ್; ಅರ್ಜಿ ವಿಚಾರಣೆಗೆ ಸುಪ್ರೀಂ ನಕಾರ : ನಿಜವಾದ ಆತಂಕ

ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳದ ಹೊಸ ಸರ್ಕಾರ ನೀಡಿರುವ ಆದೇಶಗಳ ವಿರುದ್ಧ ಸಲ್ಲಿಕೆಯಾಗಿದ್ದ ಅರ್ಜಿಯೊಂದರ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ 23 ಜೂನ್ 2026ರಂದು ನಿರಾಕರಿಸಿದೆ. ವಿಧಾನಸಭೆ ಚುನಾವಣೆಗೆ ಮುನ್ನ ನಡೆದ ವಿಶೇಷ...

ಒಂಬತ್ತನೇ ತರಗತಿ ಪಠ್ಯಪುಸ್ತಕದಲ್ಲಿ ತುರ್ತು ಪರಿಸ್ಥಿತಿ ಅಧ್ಯಾಯ ಸೇರಿಸಿದ ಎನ್‌ಸಿಇಆರ್‌ಟಿ

ಭಾರತದಲ್ಲಿ ತುರ್ತು ಪರಿಸ್ಥಿತಿ ಘೋಷಿಸಲ್ಪಟ್ಟ ಸುಮಾರು ಐದು ದಶಕಗಳ ನಂತರ, ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಈ ವಿಷಯವನ್ನು 9 ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ಮೊದಲ...

‘ಆರ್‌ಎಸ್‌ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದೆ’: ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಹಾಗೂ ಆಡಳಿತಾರೂಢ ಬಿಜೆಪಿ ವಿರುದ್ಧ ಕರ್ನಾಟಕದ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಮತ್ತೊಮ್ಮೆ ತೀವ್ರ ಸ್ವರೂಪದ ಸೈದ್ಧಾಂತಿಕ ದಾಳಿ ನಡೆಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಸರಣಿ ಪ್ರಶ್ನೆಗಳನ್ನು...

ಹೊಸ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಜಾರಿಯ ಜೊತೆಯಲ್ಲೆ ಸುಪ್ರೀಂ ಕೋರ್ಟ್‌ಗೆ ಹೋಗಲು ಕರ್ನಾಟಕ ಸಜ್ಜು

ಕೇಂದ್ರ ಸರ್ಕಾರದ ಹೊಸ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ‘ವಿಕಸಿತ ಭಾರತ-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ)’ (VB-G RAM G) ಕಾಯ್ದೆಯ ಹಲವು ನಿಯಮಗಳಿಗೆ ತೀವ್ರ ವಿರೋಧ ವ್ಯಕ್ತಪಡಿಸಿದ್ದರೂ...

ಉತ್ತರ ಪ್ರದೇಶ: ಮದುವೆ ರಿಸೆಪ್ಷನ್‌ನಲ್ಲಿ ಗೋಮಾಂಸ ಬಡಿಸಿದ ಆರೋಪ; ವರನ ತಂದೆ ಸೇರಿ ಏಳು ಮಂದಿ ಬಂಧನ, ಮಂಟಪ ಸೀಲ್

ಶಾಮ್ಲಿ (ಉತ್ತರ ಪ್ರದೇಶ): ಉತ್ತರ ಪ್ರದೇಶದ ಶಾಮ್ಲಿ ಜಿಲ್ಲೆಯ ಕೈರಾನಾ ಪಟ್ಟಣದಲ್ಲಿ ನಡೆದ ಮದುವೆ ಆರತಕ್ಷತೆ (ವಲೀಮಾ) ಸಮಾರಂಭವೊಂದು ಈಗ ಭಾರೀ ವಿವಾದಕ್ಕೆ ಕಾರಣವಾಗಿದೆ. ಸಮಾರಂಭದಲ್ಲಿ ಅತಿಥಿಗಳಿಗೆ ಗೋಮಾಂಸವನ್ನು ಬೇಯಿಸಿ ಬಡಿಸಲಾಗಿದೆ ಎಂಬ...

ರಾಮ ಮಂದಿರ ದೇಣಿಗೆ ವಿವಾದ: ಎಫ್‌ಐಆರ್ ದಾಖಲಿಸಿ ತ್ವರಿತ ನ್ಯಾಯಾಲಯದ ವಿಚಾರಣೆಗೆ ವಿಶ್ವ ಹಿಂದೂ ಪರಿಷತ್ ಆಗ್ರಹ

ರಾಮ ದೇಣಿಗೆ ವಿವಾದ ದುರುಪಯೋಗ ಕುರಿತು ಎಸ್‌ಐಟಿ ತನ್ನ ಪ್ರಾಥಮಿಕ ವರದಿಯನ್ನು ಸಲ್ಲಿಸಿದ ಕೂಡಲೇ, ಬಲಪಂಥೀಯ ಹಿಂದುತ್ವ ಸಂಘಟನೆ ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ಪ್ರಕರಣದಲ್ಲಿ ಎಫ್‌ಐಆರ್ ದಾಖಲಿಸಬೇಕೆಂದು ಒತ್ತಾಯಿಸಿದೆ. ವಿಎಚ್‌ಪಿ ಅಂತರರಾಷ್ಟ್ರೀಯ...

ಪಾಸ್‌ಪೋರ್ಟ್ ಪೌರತ್ವದ ದಾಖಲೆಯಲ್ಲ: ವಿದೇಶಾಂಗ ಸಚಿವಾಲಯ

ಪಾಸ್‌ಪೋರ್ಟ್ ಒಂದು ಪ್ರಯಾಣದ ದಾಖಲೆಯಾಗಿದೆಯೇ ಹೊರತು, ಪೌರತ್ವದ ದಾಖಲೆಯಲ್ಲ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ (ಎಂಇಎ) ಅಧಿಕಾರಿಗಳು ಬುಧವಾರ (ಜೂನ್ 24) ತಿಳಿಸಿದ್ದಾರೆ. ಈ ಮೂಲಕ ಅವರು ಭಾರತೀಯ ಪೌರತ್ವವನ್ನು ಖಚಿತವಾಗಿ ಸಾಬೀತುಪಡಿಸುವ...

90 ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ, ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ಹಾಳಾಗಿದೆ ಆದರೆ ಪ್ರಧಾನ್ ತಮ್ಮ ಕುರ್ಚಿಗೆ ಅಂಟಿಕೊಂಡಿದ್ದಾರೆ: ಮಲ್ಲಿಕಾರ್ಜುನ ಖರ್ಗೆ

ನವದೆಹಲಿ: ದೇಶಾದ್ಯಂತ ಭಾರಿ ಸಂಚಲನ ಮೂಡಿಸಿರುವ 'ನೀಟ್' (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ವಿರೋಧ ಪಕ್ಷಗಳು ತಮ್ಮ ಆಕ್ರೋಶವನ್ನು ಮತ್ತಷ್ಟು ತೀವ್ರಗೊಳಿಸಿವೆ. ಪರೀಕ್ಷಾ ಅಕ್ರಮಗಳನ್ನು ವಿರೋಧಿಸಿ...

2023ರಿಂದ 20 ಸಾವಿರಕ್ಕೂ ಹೆಚ್ಚು ಪ್ಯಾಲೆಸ್ತೀನ್ ಮಕ್ಕಳನ್ನು ಹತ್ಯೆಗೈದ ಇಸ್ರೇಲ್; ಉದ್ದೇಶಪೂರ್ವಕ ‘ನರಮೇಧ’ ಎಂದ ವರದಿ

ಪ್ಯಾಲೆಸ್ತೀನ್ ಮಕ್ಕಳನ್ನು ಉದ್ದೇಶಪೂರ್ವಕವಾಗಿ ಗುರಿಯಾಗಿಸಿಕೊಂಡು ಹತ್ಯೆ ಮಾಡುವ ಮೂಲಕ ಇಸ್ರೇಲ್‌ ಸೇನೆ ನರಮೇಧ ನಡೆಸಿದೆ ಎಂದು ವಿಶ್ವಸಂಸ್ಥೆಯ ಸ್ವತಂತ್ರ ಅಂತಾರಾಷ್ಟ್ರೀಯ ವಿಚಾರಣಾ ಆಯೋಗ ಮಂಗಳವಾರ (ಜೂ.23) ತಿಳಿಸಿದೆ. ಇಸ್ರೇಲ್ ಪಡೆಗಳು ಅಕ್ಟೋಬರ್ 2023ರಿಂದ ಈವರೆಗೆ...

ಮೀಸಲಾತಿ ರದ್ದುಗೊಳಿಸಲು ಬಿಜೆಪಿ ಮೂರನೇ ಎರಡರಷ್ಟು ಬಹುಮತ ಬಯಸುತ್ತಿದೆ: ಜೈರಾಮ್‌ ರಮೇಶ್‌

ಲೋಕಸಭೆಯಲ್ಲಿ ಬಿಜೆಪಿ ಮೂರನೇ ಎರಡರಷ್ಟು ಬಹುಮತಕ್ಕಾಗಿ ಶ್ರಮಿಸುತ್ತಿದೆ. ಏಕೆಂದರೆ, ಮೀಸಲಾತಿಯನ್ನು ಕೊನೆಗೊಳಿಸಲು ಸಂವಿಧಾನವನ್ನು ತಿದ್ದುಪಡಿ ಮಾಡುವುದು ಅದರ ನಿಜವಾದ ಮತ್ತು ಅಂತಿಮ ಗುರಿಯಾಗಿದೆ ಎಂದು ಕಾಂಗ್ರೆಸ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್...