Homeರಾಷ್ಟ್ರೀಯಉದಯಪುರ ಟೈಲರ್‌ ಹತ್ಯೆ: BJP-RSS ಅಂಗಸಂಸ್ಥೆ ಎಂಆರ್‌ಎಂ ನಾಯಕನ ಸಂಪರ್ಕದಲ್ಲಿದ್ದ ಕೊಲೆ ಆರೋಪಿ?

ಉದಯಪುರ ಟೈಲರ್‌ ಹತ್ಯೆ: BJP-RSS ಅಂಗಸಂಸ್ಥೆ ಎಂಆರ್‌ಎಂ ನಾಯಕನ ಸಂಪರ್ಕದಲ್ಲಿದ್ದ ಕೊಲೆ ಆರೋಪಿ?

- Advertisement -
- Advertisement -

ರಾಜಸ್ಥಾನದ ಉದಯಪುರದಲ್ಲಿ ನಡೆದ ಟೈಲರ್ ಕನ್ಹಯ್ಯಾ ಲಾಲ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿಗಳಾದ ರಿಯಾಜ್ ಅತ್ತಾರಿ ಮತ್ತು ಮೊಹಮ್ಮದ್ ಗೌಸ್ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಈ ನಡುವೆ ಹತ್ಯೆ ಆರೋಪಿಯೊಬ್ಬ ಬಿಜೆಪಿ ಜೊತೆಗೆ ಸಂಪರ್ಕದಲ್ಲಿದ್ದ ಎಂದು ಇಂಡಿಯಾ ಟುಡೆ ಮಾಡಿರುವ ತನಿಖಾ ವರದಿ ಶುಕ್ರವಾರ ಬಹಿರಂಗಪಡಿಸಿದೆ. ಜೊತೆಗೆ RSS ಅಂಗಸಂಸ್ಥೆ ಎಂಆರ್‌ಎಂ ನಾಯಕ ಎಂದು ಪ್ರತಿಪಾದಿಸಲಾಗಿರುವ ವ್ಯಕ್ತಿಯ ಜೊತೆಗೆ ಆರೋಪಿ ಇದ್ದ ಚಿತ್ರಗಳು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದೆ.

ಹತ್ಯೆ ಆರೋಪಿಗಳಲ್ಲಿ ಒಬ್ಬನಾಗಿರುವ ರಿಯಾಜ್‌ ಅತ್ತಾರಿ ಉದಯಪುರದ ಬಿಜೆಪಿ ಕಾರ್ಯಕ್ರಮಗಳಲ್ಲಿ ಭಾಗವಹಿಸುತ್ತಿದ್ದನು ಎಂದು ಇಂಡಿಯಾ ಟುಡೆ ವರದಿ ಹೇಳಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಕಳೆದ ಹತ್ತು ವರ್ಷಗಳಿಂದ ರಾಜಸ್ಥಾನದ ಬಿಜೆಪಿಯ ಅಲ್ಪಸಂಖ್ಯಾತ ಮೋರ್ಚಾದ ಸದಸ್ಯರಾಗಿರುವ ಇರ್ಷಾದ್ ಚೈನ್‌ವಾಲಾ ಅವರು, ಆರೋಪಿ ರಿಯಾಜ್‌ ಅತ್ತಾರಿ 2019 ರಲ್ಲಿ ತೀರ್ಥಯಾತ್ರೆಗೆ ತೆರಳಿ ಹಿಂದಿರುಗಿದಾಗ ಸ್ವಾಗತಿಸಿದ್ದರು. ಈ ಚಿತ್ರವನ್ನು ಇಂಡಿಯಾ ಟುಡೆ ತನ್ನ ತನಿಖಾ ವರದಿಯಲ್ಲಿ ಬಹಿರಂಗ ಪಡಿಸಿದೆ.

ಹತ್ಯೆ ಆರೋಪಿ ರಿಯಾಜ್‌ ಅತ್ತಾರಿಗೆ ಹಾರ ಹಾಕಿ ಸ್ವಾಗತಿಸುತ್ತಿರುವ ಚೈನ್‌ವಾಲಾ

ಈ ಬಗ್ಗೆ ಇಂಡಿಯಾ ಟುಡೆ ಇರ್ಷಾದ್‌ ಚೈನ್‌ವಾಲಾ ಅವರನ್ನು ಮಾತನಾಡಿಸಿದ್ದು, ಆರೋಪಿ ರಿಯಾಜ್ ಅತ್ತಾರಿ ಉದಯಪುರದಲ್ಲಿ ನಡೆಯುತ್ತಿದ್ದ ಬಿಜೆಪಿ ಕಾರ್ಯಕ್ರಮಗಳಿಗೆ ಹಾಜರಾಗುತ್ತಿದ್ದ ಎಂದು ಒಪ್ಪಿಕೊಂಡಿದ್ದಾರೆ.

ಇದನ್ನೂ ಓದಿ: ತಾಲಿಬಾನೀಕರಣ ಸಹಿಸುವುದಿಲ್ಲ: ಉದಯ್‌ಪುರ್‌ ಘಟನೆಗೆ ರಾಜಕಾರಣಿಗಳು, ಧಾರ್ಮಿಕ ಮುಖಂಡರ ತೀವ್ರ ವಿರೋಧ

ಆರೋಪಿ ರಿಯಾಜ್‌ ಅತ್ತಾರಿಗೆ ಹಾರ ಹಾಕಿ ಸ್ವಾಗತಿಸುತ್ತಿರುವ ಚಿತ್ರದ ಬಗ್ಗೆ ಮಾತನಾಡಿರುವ ಚೈನ್‌ವಾಲಾ, “ಈ ಚಿತ್ರ ನನ್ನದು. ತೀರ್ಥ ಯಾತ್ರೆಗೆ ತೆರಳಿ ವಾಪಾಸಾದಾಗ ನಾನು ಅವರಿಗೆ ಹಾರ ಹಾಕಿ ಸ್ವಾಗತಿಸಿದ್ದೆ” ಎಂದು ಹೇಳಿದ್ದಾರೆ.

ಆರೋಪಿ ಬಿಜೆಪಿ ಕಾರ್ಯಕ್ರಮಗಳಲ್ಲಿ ಭಾಗವಹಿಸುತ್ತಿದ್ದರೆ ಎಂಬ ವರದಿಗಾರರ ಪ್ರಶ್ನೆಗೆ ಉತ್ತರಿಸಿದ ಚೈನ್‌ವಾಲಾ, “ಬಿಜೆಪಿ ನಾಯಕ ಗುಲಾಬ್ ಚಂದ್ ಕಟಾರಿಯಾ ಅವರ ಅನೇಕ ಕಾರ್ಯಕ್ರಮಗಳಲ್ಲಿ ಆರೋಪಿ ಭಾಗವಹಿಸಿದ್ದನು” ಎಂದು ಹೇಳಿದ್ದಾರೆ.

ಆರೋಪಿ ರಿಯಾಜ್ ಬಿಜೆಪಿ ಕಾರ್ಯಕ್ರಮಗಳಲ್ಲಿ ಆಹ್ವಾನಿಸದೆ ಆಗಾಗ್ಗೆ ಕಾಣಿಸಿಕೊಳ್ಳುತ್ತಿದ್ದನು ಎಂದು ಚೈನ್‌ವಾಲಾ ಹೇಳಿದ್ದಾರೆ. “ಅವನು ತಾನಾಗಿಯೆ ಬರುತ್ತಿದ್ದ, ಅವನು ಪಕ್ಷದಲ್ಲಿ ಕೆಲಸ ಮಾಡಲು ಬಯಸಿದ್ದನು. ಆದರೆ ಖಾಸಗಿಯಾಗಿ ರಿಯಾಜ್‌ ಬಿಜೆಪಿಯ ಕಟುಟೀಕಾಕರರಾಗಿದ್ದನು” ಎಂದು ಚೈನ್‌ವಾಲಾ ವಿವರಿಸಿದ್ದಾರೆ.

ಆರೋಪಿ ರಿಯಾಜ್ ಅತ್ತಾರಿ, ಬಿಜೆಪಿ ಕಾರ್ಯಕರ್ತ ಮೊಹಮ್ಮದ್ ತಾಹಿರ್ ಎಂಬ ವ್ಯಕ್ತಿಯ ಮೂಲಕ ಬಿಜೆಪಿ ಕಾರ್ಯಕ್ರಮಗಳಿಗೆ ಆಗಮಿಸುತ್ತಿದ್ದನು ಎಂದು ಚೈನ್‌ವಾಲಾ ಹೇಳಿದ್ದಾರೆ. “ತಾಹಿರ್ ನಮ್ಮ ಕಾರ್ಯಕರ್ತನಾಗಿದ್ದು. ತಾಹಿರ್‌ ಅವರಿಗೆ ಆರೋಪಿ ರಿಯಾಜ್ ಅತ್ತಾರಿ ಆಪ್ತನಾಗಿದ್ದ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಸಾಮಾಜಿಕ ಮಾಧ್ಯಮಗಳಲ್ಲಿ ನೂಪುರ್ ಶರ್ಮಾ ಬೆಂಬಲಿಸಿದ್ದಕ್ಕೆ ರಾಜಸ್ಥಾನದ ಉದಯಪುರದಲ್ಲಿ ಭೀಕರ ಹತ್ಯೆ; ಆರೋಪಿಗಳ ಬಂಧನ

ತಾಹಿರ್ ಮತ್ತು ರಿಯಾಜ್ ಇಬ್ಬರೂ ಒಟ್ಟಿಗೆ ಇರುವ ಫೋಟೋಗಳು ಬಹಿರಂಗವಾಗಿದೆ. ತಾಹಿರ್‌ ರಾಜಸ್ಥಾನದ ಸವೀನಾ ಎಂಬ ಪ್ರದೇಶದಲ್ಲಿ ವಾಸಿಸುತ್ತಿದ್ದು, ಆದರೆ ಅವರು ಇದೀಗ ನಾಪತ್ತೆಯಾಗಿದ್ದಾರೆ ಎಂದು ಇಂಡಿಯಾ ಟುಡೆ ವರದಿ ಮಾಡಿದೆ. ತಾಹಿತ್‌ ತನ್ನ ಬಾಡಿಗೆ ಮನೆ ಖಾಲಿ ಮಾಡಿದ್ದಾರೆ ಎಂದು ನೆರೆಹೊರೆಯವರು ತಿಳಿಸಿದ್ದು, ತನ್ನ ಮೊಬೈಲ್ ಫೋನ್ ಕೂಡ ಸ್ವಿಚ್ ಆಫ್ ಮಾಡಿದ್ದಾರೆ ಎಂದು ವರದಿ ಹೇಳಿದೆ.

ಮೊಹಮ್ಮದ್‌ ತಾಹಿರ್‌‌ ಅವರು ತನ್ನ ಫೇಸ್‌ಬುಕ್ ಪೋಸ್ಟ್‌ಗಳಲ್ಲಿ ಇರ್ಷಾದ್ ಚೈನ್‌ವಾಲಾ ಅವರನ್ನು ಎಂಆರ್‌ಎಂ (ಮುಸ್ಲಿಂ ರಾಷ್ಟ್ರೀಯ ಮಂಚ್‌) ಪ್ರಾಂತ ಸಂಯೋಜಕ ಎಂದು ಉಲ್ಲೇಖಿಸುತ್ತಾರೆ. ಎಂಆರ್‌ಎಂ ಎಂಬುವುದು ಆರೆಸ್ಸೆಸ್ಸಿನ ಅಂಗ ಸಂಸ್ಥೆಯಾಗಿದೆ. ಈ ಪೋಸ್ಟ್‌ನಲ್ಲಿ ಹತ್ಯೆಯ ಆರೋಪಿ ರಿಯಾಜ್ ಅತ್ತಾರಿಯನ್ನು ಬಿಜೆಪಿ ಕಾರ್ಯಕರ್ತ ಎಂದು ಉಲ್ಲೇಖಿಸಿದ್ದಾರೆ.

ಮೊಹಮ್ಮದ್‌ ತಾಹಿರ್‌‌ ಆರೋಪಿಯನ್ನು ಬಿಜೆಪಿ ಕಾರ್ಯಕರ್ತ ಎಂದು ಉಲ್ಲೇಖಿಸಿರುವ ಪೋಸ್ಟ್‌
ಬಿಜೆಪಿ ಜಿಲ್ಲಾ ಅಧ್ಯಕ್ಷ ಭಾಯಿ ಸಾಬ್ ರವೀಂದ್ರ ಶ್ರೀಮಾಲಿ ಜೊತೆಯಲ್ಲಿ ಹತ್ಯೆಯ ಆರೋಪಿ ರಿಯಾಜ್ ಅತ್ತಾರಿ
ಎಂಆರ್‌ಎಂ ಕಾರ್ಯಕ್ರಮದಲ್ಲಿ ಇರ್ಷಾದ್‌ ಚೈನ್‌ವಾಲಾ(ಕೊಲೆ ಆರೋಪಿ ರಿಯಾಜ್ ಅತ್ತಾರಿಯ ಆಪ್ತ, ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ಸದಸ್ಯ ಮೊಹಮ್ಮದ್ ತಾಹಿರ್‌ ಅವರ ಫೇಸ್‌ಬುಕ್ ಪೋಸ್ಟ್‌)
ಮೊಮ್ಮದ್ ತಾಹಿರ್‌(1) , ಇರ್ಷಾದ್ ಚೈನ್‌ವಾಲಾ(2) ಮತ್ತು ಕೊಲೆ ಆರೋಪಿ ರಿಯಾಜ್ ಅತ್ತಾರಿ(3) ಜೊತೆಯಲ್ಲಿ ಬಿಜೆಪಿ ನಾಯಕ
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

3 COMMENTS

  1. ಉದಯಪುರ ಹತ್ಯೇ ಮಾಡಿದವನು ನಿಮ್ಮ ಮಸೀದಿಯಲ್ಲೇ ವಾಸವಿದ್ದು ಅಲ್ಲೇ ಮಸೀದಿ ಕೆಲಸ ಮಾಡ್ತಿದ್ದ ಅಲ್ವೋ ಚೀನಾಗೆ ಹುಟ್ಟಿದ ಹೈ ಬ್ರೀಡ್ ಗಳಾ,ಅಂಗೈ ಹುಣ್ಣಿಗೆ ಯಾವೋನೋ ನಿನ್ನಂತವನು ಕನ್ನಡಿ ಹಿಡಿದನಂತೆ …..

  2. ಲೇ ರಾಜು ಅಡ್ಡ ಕಸುಬಿ ಬ್ಲೂ ಜೇಪೀ ಹ ಸೂ ಮಗನೇ….ಅವನು ಬ್ಲೂ ಜೇಪೀ ಕಾರ್ಯಕರ್ತ ಅಂತ ಗೊತ್ತಾದ ಮೇಲೂ ಈ ಹತ್ಯೆ ಹಿಂದೆ ಯಾರ ಕೈವಾಡ ಇದೆ ಅಂತ ಗೊತ್ತಾಗ್ತಾ ಇಲ್ವಾ.. ಥೂ ನಿಮ್ಮ ಜನ್ಮಕ್ಕೆ ಹೊಟ್ಟೆಗೆ ಅನ್ನ ತಿನ್ನಲ್ಲ ನೀವು….ದೇಶಕ್ಕೆ ಬೆಂಕಿ ಹಚ್ಚಲಿಕ್ಕೆ ಹುಟ್ಟಿರುವ ಹ ಸೂ ಮಕ್ಕಳು ನೀವು…

  3. 👏👏👏👏👏👏👏ಸಕ್ಕತ್ ಆಗಿ ನಿಜವಾದ ಮಾತು ಹೇಳದ್ರಿ. ಈ ಹಲ್ಕಟ್ ಯಾವಾಗ್ಲೂ ಅಷ್ಟೇ ಬರಿ ಒಂದು ಧರ್ಮದ ವಿರುದ್ಧ ಹೊಯ್ಕೋತಾನೆ. ಮೋಸ್ಟ್ಲಿ 2 ರೂಪಾಯಿ ಬೆಗ್ಗೆರ್ ಅನ್ಸುತ್ತೆ ಅವನು. ಧನ್ಯವಾದಗಳು ನಿಮಗೆ

LEAVE A REPLY

Please enter your comment!
Please enter your name here

- Advertisment -

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...

ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ : ಮೊದಲ ಬೀದಿ ಹೋರಾಟಕ್ಕೆ ಸಜ್ಜಾದ ಕಾಕ್ರೋಚ್ ಜನತಾ ಪಾರ್ಟಿ

ಸಾಮಾಜಿಕ ಜಾಲತಾಣಗಳಲ್ಲಿ ಹೊಸ ಅಲೆಯನ್ನು ಸೃಷ್ಟಿಸಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ತನ್ನ ಮೊದಲ ಬೀದಿ ಹೋರಾಟಕ್ಕೆ ಸಜ್ಜಾಗಿದೆ. ಜೂನ್ 6, 2026ರಂದು ನವದೆಹಲಿಯ ಜಂತರ್ ಮಂತರ್‌ನಲ್ಲಿ ಸಿಜೆಪಿ ಪ್ರತಿಭಟನೆ ಆಯೋಜಿಸಿದ್ದು, ಇದರ...

ದೆಹಲಿ: ‘ಮಾಳವೀಯ ನಗರ’ ಅಗ್ನಿ ದುರಂತಕ್ಕೆ 21 ಜನರು ಬಲಿ: ವ್ಯವಸ್ಥೆಯ ವೈಫಲ್ಯದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿರುವ ನಾಗರೀಕರು 

ದೆಹಲಿಯ ಅತ್ಯಂತ ಜನನಿಬಿಡ ಮತ್ತು ವಾಣಿಜ್ಯ ಪ್ರದೇಶವಾದ ಮಾಳವೀಯ ನಗರದಲ್ಲಿ 2026 ಜೂನ್ 3, ಬುಧವಾರ ನಸುಕಿನ ಜಾವ ಸಂಭವಿಸಿದ ಭೀಕರ ಅಗ್ನಿ ದುರಂತವು ಇಡೀ ದೇಶವನ್ನು ಬೆಚ್ಚಿಬೀಳಿಸಿದೆ. 'ಫ್ಲೋರಿಶ್ ಸ್ಟೇ ಬಿ...

“ವಿಷ ಕಾರದೆ ಮಾತನಾಡಿ”: ಕಲ್ಲಡ್ಕ ಪ್ರಭಾಕರ ಭಟ್‌ಗೆ ಹೈಕೋರ್ಟ್ ತಾಕೀತು

ಹೆಚ್ಚು ಮಕ್ಕಳನ್ನು ಹೆರುವ ಮುಸ್ಲಿಂ ಮಹಿಳೆಯರನ್ನು ಲೇವಡಿ ಮಾಡುವ ಮೂಲಕ ಕೋಮು ದ್ವೇಷ ಹರಡಿದ್ದಾರೆ ಎಂಬ ಆರೋಪ ಎದುರಿಸುತ್ತಿರುವ ಹಿಂದುತ್ವ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಕಲ್ಲಡ್ಕ ಅವರಿಗೆ ತಮ್ಮ ಮುಂದಿನ ಭಾಷಣಗಳಲ್ಲಿ...

ಪತ್ರಕರ್ತ- ಚಿತ್ರ ನಿರ್ಮಾಪಕ ಸೇರಿದಂತೆ ಹಲವು ಕ್ಷೇತ್ರಗಳ ಪ್ರಮುಖರನ್ನು ವಕ್ತಾರರನ್ನಾಗಿ ನೇಮಿಸಿದ ಸಿಜೆಪಿ

ಆನ್‌ಲೈನ್ ಸೆನ್ಸೇಷನ್ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ)ಯು ಶಿಕ್ಷಣ ವ್ಯವಸ್ಥೆಯಲ್ಲಿನ ವೈಫಲ್ಯಗಳ ವಿರುದ್ಧ ಪ್ರಸ್ತಾಪಿಸಿದ ಪ್ರತಿಭಟನೆಗೆ ಮುಂಚಿತವಾಗಿ ತನ್ನ ವ್ಯಾಪ್ತಿಯನ್ನು ವಿಸ್ತರಿಸುವ ಸಲುವಾಗಿ ಮೂವರು ವಕ್ತಾರರ ಹೆಸರನ್ನು ಘೋಷಿಸಿದೆ. ಎಕ್ಸ್‌ನಲ್ಲಿನ ಪೋಸ್ಟ್‌ ಮಾಡಿರುವ ಅಭಿಜೀತ್...

CBSE ಪರೀಕ್ಷೆಯಲ್ಲಿ OSM ವಿವಾದ | ಸಂಸದೀಯ ಸಮಿತಿಯ ಮುಂದೆ ಹಾಜರಾದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್

ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (ಸಿಬಿಎಸ್‌ಸಿ) ಆನ್-ಸ್ಕ್ರೀನ್ ಮಾರ್ಕಿಂಗ್ (ಒಎಸ್‌ಎಂ) ಮೌಲ್ಯಮಾಪನ ವ್ಯವಸ್ಥೆಯಲ್ಲಿನ ಗಂಭೀರ ಲೋಪಗಳ ಕುರಿತು ವಿವಾದ ಭುಗಿಲೆದ್ದಿರುವ ನಡುವೆ, 17 ವರ್ಷದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್ ನವದೆಹಲಿಯ ಸಂಸತ್ ಭವನದಲ್ಲಿ...