Homeಮುಖಪುಟಉದಯ್‌ ಲಲಿತ್‌ ಮುಂದಿನ ಸಿಜೆಐ; ಜಸ್ಟೀಸ್‌ ಎನ್‌.ವಿ.ರಮಣ ಶಿಫಾರಸು

ಉದಯ್‌ ಲಲಿತ್‌ ಮುಂದಿನ ಸಿಜೆಐ; ಜಸ್ಟೀಸ್‌ ಎನ್‌.ವಿ.ರಮಣ ಶಿಫಾರಸು

- Advertisement -
- Advertisement -

ಜಸ್ಟಿಸ್ ಉದಯ್ ಯು ಲಲಿತ್ ಅವರು ಆಗಸ್ಟ್ 27ರಂದು ಭಾರತದ 49ನೇ ಮುಖ್ಯ ನ್ಯಾಯಮೂರ್ತಿಯಾಗಿ (ಸಿಜೆಐ) ಅಧಿಕಾರ ವಹಿಸಿಕೊಳ್ಳಲಿದ್ದಾರೆ. ಪ್ರಸ್ತುತ ಮುಖ್ಯ ನ್ಯಾಯಮೂರ್ತಿಯವಾಗಿರುವ ಎನ್‌ವಿ ರಮಣ ಅವರು ಮುಂದಿನ ಸಿಜೆಐ ಸ್ಥಾನಕ್ಕೆ ಲಲಿತ್ ಅವರ ಹೆಸರನ್ನು ಶಿಫಾರಸ್ಸು ಮಾಡಿದ್ದಾರೆ.

ರಮಣ ಅವರು ಬುಧವಾರದಂದು ಕೇಂದ್ರ ಕಾನೂನು ಸಚಿವಾಲಯಕ್ಕೆ ಶಿಫಾರಸ್ಸು ಮಾಡಿದ್ದು ಮುಂದಿನ ಸಿಜೆಐ ಆಗಲು ಲಲಿತ್ ಅವರನ್ನು ಹೆಸರಿಸಿದ್ದಾರೆ.

ನ್ಯಾಯಮೂರ್ತಿ ಎಸ್‌.ಎಂ.ಸಿಕ್ರಿ ಅವರ ನಂತರದಲ್ಲಿ ವಕೀಲರ ವಿಭಾಗದಿಂದ ಮೇಲ್ದರ್ಜೆಗೇರಿ ಸಿಜೆಐ ಆಗುತ್ತಿರುವ ಎರಡನೇ ನ್ಯಾಯಾಮೂರ್ತಿ ಎಂಬ ಹೆಗ್ಗಳಿಕೆಗೆ ಲಲಿತ್‌ ಪಾತ್ರರಾಗುತ್ತಿದ್ದಾರೆ. ಸಿಕ್ರಿ ಅವರು 1971 ಮತ್ತು 1973 ರ ನಡುವೆ ಸಿಜೆಐ ಆಗಿದ್ದರು. ಲಲಿತ್ ಅವರು ಆಗಸ್ಟ್ 2014ರಲ್ಲಿ ಸುಪ್ರೀಂ ಕೋರ್ಟ್‌ನಲ್ಲಿ ನ್ಯಾಯಮೂರ್ತಿಯಾಗಿ ನೇಮಕಗೊಂಡಿದ್ದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಸಂಪ್ರದಾಯದಂತೆ, ಕೇಂದ್ರ ಕಾನೂನು ಸಚಿವಾಲಯವು ಸಿಜೆಐ ನಿವೃತ್ತಿಯ ಒಂದು ತಿಂಗಳ ಮೊದಲು ತಮ್ಮ ಉತ್ತರಾಧಿಕಾರಿಯನ್ನು ಹೆಸರಿಸುವಂತೆ ಮುಖ್ಯನ್ಯಾಯಮೂರ್ತಿಗೆ ಕೋರಿಕೆ ಪತ್ರ ಬರೆಯುತ್ತದೆ. ಹುದ್ದೆಯಲ್ಲಿರುವವರು ನಿವೃತ್ತಿಗೆ 30 ದಿನಗಳ ಮೊದಲು ಶಿಫಾರಸುಗಳನ್ನು ಸಚಿವಾಲಯಕ್ಕೆ ಕಳುಹಿಸುತ್ತಾರೆ. ಸಾಂಪ್ರದಾಯಿಕವಾಗಿ, ಅತ್ಯಂತ ಹಿರಿಯ ನ್ಯಾಯಮೂರ್ತಿಯವರನ್ನು ಸಿಜೆಐ ಆಗಿ ನೇಮಿಸಲಾಗುತ್ತದೆ.

1993ರಲ್ಲಿ ಎರಡನೇ ನ್ಯಾಯಾಧೀಶರ ಪ್ರಕರಣದ ಅನ್ವಯ ಸುಪ್ರೀಂ ಕೋರ್ಟ್‌ನ ಅತ್ಯಂತ ಹಿರಿಯ ನ್ಯಾಯಮೂರ್ತಿಯವರನ್ನು ಸಿಜೆಐ ಆಗಿ ನೇಮಿಸಲಾಗುತ್ತದೆ.

ಕೇಂದ್ರ ಕಾನೂನು ಸಚಿವರು ಸೂಕ್ತ ಸಮಯದಲ್ಲಿ, ಮುಂದಿನ ಸಿಜೆಐ ನೇಮಕಕ್ಕಾಗಿ ನಿರ್ಗಮಿಸಲಿರುವ ಮುಖ್ಯ ನ್ಯಾಯಮೂರ್ತಿಯವರನ್ನು ಕೋರುತ್ತಾರೆ. ಸಿಜೆಐ ಶಿಫಾರಸನ್ನು ಸ್ವೀಕರಿಸಿದ ನಂತರ ಸಚಿವರು, ನೇಮಕಾತಿ ವಿಷಯದಲ್ಲಿ ರಾಷ್ಟ್ರಪತಿಯವರಿಗೆ ಸಲಹೆ ನೀಡುವ ಪ್ರಧಾನಿಯವರಿಗೆ ಶಿಫಾರಸ್ಸನ್ನು ತಿಳಿಸುತ್ತಾರೆ.

ಈ ಬಾರಿ ಕಾನೂನು ಸಚಿವಾಲಯವು ರಮಣ ಅವರ ಶಿಫಾರಸನ್ನು ಕೋರಿ ಪತ್ರವನ್ನು ಬರೆಯುವಲ್ಲಿ ವಿಳಂಬ ಮಾಡಿತ್ತು. ಹೀಗಾಗಿ ಲಲಿತ್ ಅವರ ಹೆಸರನ್ನು ಶಿಫಾರಸ್ಸು ಮಾಡುವಲ್ಲಿಯೂ ತಡವಾಗಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಶಿಕ್ಷಕಿಯಿಂದ ಹಲ್ಲೆ

ಶಾಲಾ ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಹಲ್ಲೆ ನಡೆಸಿದ ಶಿಕ್ಷಕಿ, ಆಕೆಯ ಹೆಸರನ್ನು ದಾಖಲಾತಿಯಿಂದ ತೆಗೆದು ಹಾಕುವುದಾಗಿ ಬೆದರಿಕೆ ಹಾಕಿರುವ ಆರೋಪ ಕೇಳಿ ಬಂದಿದೆ. ಉತ್ತರ ಪ್ರದೇಶದ ಅಲೀಗಢ ಜಿಲ್ಲೆಯ...

ಚಿಕ್ಕಮಗಳೂರಿನಲ್ಲಿ ಒಂದೇ ವಾರದಲ್ಲಿ ಕಾಡಾನೆ ದಾಳಿಗೆ ಎರಡನೇ ಸಾವು; ಆನೆ ಸೆರೆ; ಸರ್ಕಾರದ ವಿರುದ್ಧ ಸ್ಥಳೀಯರ ಪ್ರತಿಭಟನೆ

ಚಿಕ್ಕಮಗಳೂರಿನ ವ್ಯಾಪ್ತಿಯಲ್ಲಿ ದಿನದಿಂದ ದಿನಕ್ಕೆ ಮಾನವ ಹಾಗೂ ಪ್ರಾಣಿಗಳ ಸಂಘರ್ಷ ಹೆಚ್ಚಾಗುತ್ತಿದ್ದು, ಒಂದೇ ವಾರದಲ್ಲಿ ಕಾಡಾನೆ ದಾಳಿಯಿಂದ ಇಬ್ಬರು ಮೃತಪಟ್ಟಿದ್ದಾರೆ. ಭಾನುವಾರ ಬೆಳಗ್ಗೆ ತೋಟದ ಕೆಲಸಕ್ಕೆ ತೆರಳಿದಾಗ ಹೊಸಪೇಟೆ ಮೂಲದ ಬೋರಮ್ಮ(34), ಕಾಡಾನೆ...

ಬಿಜೆಪಿ ಸೇರ್ಪಡೆಯಾದ ಅಸ್ಸಾಂ ಕಾಂಗ್ರೆಸ್ ಮಾಜಿ ಅಧ್ಯಕ್ಷ ಭೂಪೇನ್ ಬೋರಾ

ವಿಧಾನಸಭೆ ಚುನಾವಣೆಯ ಹೊಸ್ತಿಲಲ್ಲಿ ಅಸ್ಸಾಂ ಕಾಂಗ್ರೆಸ್‌ನ ಮಾಜಿ ರಾಜ್ಯಾಧ್ಯಕ್ಷ ಭೂಪೇನ್ ಬೋರಾ ಭಾನುವಾರ (ಫೆ.22) ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಬೋರಾ ಫೆ. 16ರಂದು ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದರು. ಪಕ್ಷದಲ್ಲಿ ತಮ್ಮನ್ನು ನಿರ್ಲಕ್ಷಿಸಲಾಗುತ್ತಿದೆ...

ದೆಹಲಿಯಲ್ಲಿ ಭಯೋತ್ಪಾದನಾ ಸಂಚು ಆರೋಪ: ಬಾಂಗ್ಲಾದೇಶಿ ಪ್ರಜೆಗಳು ಸೇರಿ ಎಂಟು ಮಂದಿ ಬಂಧನ

ನವದೆಹಲಿ: ಪಾಕಿಸ್ತಾನದ ಐಎಸ್‌ಐ ಮತ್ತು ಬಾಂಗ್ಲಾದೇಶ ಮೂಲದ ಉಗ್ರಗಾಮಿ ಸಂಘಟನೆಗಳ ಸೂಚನೆಯ ಮೇರೆಗೆ ದೆಹಲಿಯಲ್ಲಿ ಪ್ರಮುಖ ಭಯೋತ್ಪಾದಕ ಪಿತೂರಿ ನಡೆಸಲು ಸಂಚು ರೂಪಿಸಿದ್ದ ಆರೋಪದ ಮೇಲೆ ಎಂಟು ಶಂಕಿತರನ್ನು ಬಂಧಿಸಲಾಗಿದೆ ಎಂದು ಪೊಲೀಸ್...

ಕ್ಷುಲ್ಲಕ ಕಾರಣಕ್ಕೆ ಮೂವರು ಮುಸ್ಲಿಮರ ಮೇಲೆ ಹಲ್ಲೆ ನಡೆಸಿದ ದುಷ್ಕರ್ಮಿ

ಕ್ಷುಲ್ಲಕ ಕಾರಣಕ್ಕೆ ಇಬ್ಬರು ಹಿರಿಯ ವಯಸ್ಕರು ಸೇರಿದಂತೆ ಮೂವರು ಮುಸ್ಲಿಂ ವ್ಯಕ್ತಿಗಳ ಮೇಲೆ ದುಷ್ಕರ್ಮಿಯೊಬ್ಬ ಅಮಾನವೀಯವಾಗಿ ಹಲ್ಲೆ ನಡೆಸಿರುವ ಘಟನೆ ಉತ್ತರ ಪ್ರದೇಶದ ಬದೌನ್ ಜಿಲ್ಲೆಯಲ್ಲಿ ನಡೆದಿದೆ. ಫೆಬ್ರವರಿ 15ರಂದು ಜಿಲ್ಲೆಯ ರುದಾಯನ್ ಪಟ್ಟಣದಲ್ಲಿ...

ಎಸ್‌ಐಆರ್ ಬಳಿಕ 9 ರಾಜ್ಯ, ಕೇಂದ್ರಾಡಳಿತ ಪ್ರದೇಶಗಳ ಮತದಾರರ ಸಂಖ್ಯೆ 1.70 ಕೋಟಿ ಇಳಿಕೆ

ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಬಳಿಕ 9 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಮತದಾರರ ಒಟ್ಟು ಸಂಖ್ಯೆಯಲ್ಲಿ 1.70 ಕೋಟಿ ಇಳಿಕೆ ಕಂಡಿದೆ. ಗುಜರಾತ್, ಪುದುಚೇರಿ, ಲಕ್ಷದ್ವೀಪ, ರಾಜಸ್ಥಾನ, ಛತ್ತೀಸ್‌ಗಢ, ಅಂಡಮಾನ್...

ಅಫ್ಘಾನ್ ಗಡಿಯಲ್ಲಿ ಪಾಕಿಸ್ತಾನ ವೈಮಾನಿಕ ದಾಳಿ : 20ಕ್ಕೂ ಹೆಚ್ಚು ಜನರು ಸಾವನ್ನಪ್ಪಿರುವ ಶಂಕೆ

ಅಫ್ಘಾನಿಸ್ತಾನದ ಗಡಿ ಪ್ರದೇಶಗಳಲ್ಲಿ ಪಾಕಿಸ್ತಾನ ಭಾನುವಾರ (ಫೆ.22) ಭಾರೀ ವೈಮಾನಿಕ ದಾಳಿ ನಡೆಸಿರುವುದಾಗಿ ವರದಿಯಾಗಿದೆ. ಪಾಕಿಸ್ತಾನದ ವಾಯುಪಡೆಯು ಅಫ್ಘಾನಿಸ್ತಾನದ ಪಕ್ತಿಕಾ ಮತ್ತು ನಂಗರ್ಹಾರ್ ಪ್ರಾಂತ್ಯಗಳಲ್ಲಿರುವ ಏಳು ಸಶಸ್ತ್ರ ಗುಂಪುಗಳ ಅಡಗುತಾಣಗಳ ಮೇಲೆ ದಾಳಿ ನಡೆಸಿದೆ...

ಹೊಸ ಜಾಗತಿಕ ಸುಂಕವನ್ನು ಶೇ.15ಕ್ಕೆ ಏರಿಸಿದ ಟ್ರಂಪ್

ಪ್ರತಿ ಸುಂಕ ನೀತಿಯನ್ನು ರದ್ದುಗೊಳಿಸಿದ್ದ ಸುಪ್ರೀಂ ಕೋರ್ಟ್ ಆದೇಶಕ್ಕೆ ಸೆಡ್ಡು ಹೊಡೆದು, ಎಲ್ಲಾ ದೇಶಗಳ ಆಮದಿನ ಮೇಲೆ ಹೊಸದಾಗಿ 10 ಶೇಕಡ ಜಾಗತಿಕ ಸುಂಕ ಘೋಷಿಸಿದ್ದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಶನಿವಾರ...

ಲಂಚ ಪಡೆಯುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕ; ಲೋಕಾಯುಕ್ತ ಪೊಲೀಸರಿಂದ ಚಂದ್ರು ಲಮಾಣಿ ಬಂಧನ

ಲಂಚ ಪಡೆಯುವಾಗಲೇ ಲೋಕಾಯುಕ್ತ ಪೊಲೀಸರು ಬಿಜೆಪಿ ಶಾಸಕ ಚಂದ್ರು ಲಮಾಣಿ ಅವರನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ಗುತ್ತಿಗೆದಾರ ವಿಜಯ್ ಪೂಜಾರ್ ಅವರ ದೂರಿನ ಮೇರೆಗೆ ಗದಗ ಲೋಕಾಯುಕ್ತ ಪೊಲೀಸರು ನಡೆಸಿದ...

ಎಐ ಶೃಂಗಸಭೆಯಲ್ಲಿ ಪ್ರತಿಭಟನೆ : ನಾಲ್ವರು ಯುವ ಕಾಂಗ್ರೆಸ್‌ ಕಾರ್ಯಕರ್ತರು 5 ದಿನ ಪೊಲೀಸ್ ಕಸ್ಟಡಿಗೆ

ನವದೆಹಲಿಯ ಭಾರತ ಮಂಟಪದಲ್ಲಿ ಆಯೋಜಿಸಿದ್ದ ಎಐ ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಪ್ರತಿಭಟಿಸಿದ್ದ ನಾಲ್ವರು ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ದೆಹಲಿ ನ್ಯಾಯಾಲಯ ಶನಿವಾರ (ಫೆ.21) 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ. ದೆಹಲಿ ಪೊಲೀಸರು...