Homeಮುಖಪುಟಉದಯ್‌ ಲಲಿತ್‌ ಮುಂದಿನ ಸಿಜೆಐ; ಜಸ್ಟೀಸ್‌ ಎನ್‌.ವಿ.ರಮಣ ಶಿಫಾರಸು

ಉದಯ್‌ ಲಲಿತ್‌ ಮುಂದಿನ ಸಿಜೆಐ; ಜಸ್ಟೀಸ್‌ ಎನ್‌.ವಿ.ರಮಣ ಶಿಫಾರಸು

- Advertisement -
- Advertisement -

ಜಸ್ಟಿಸ್ ಉದಯ್ ಯು ಲಲಿತ್ ಅವರು ಆಗಸ್ಟ್ 27ರಂದು ಭಾರತದ 49ನೇ ಮುಖ್ಯ ನ್ಯಾಯಮೂರ್ತಿಯಾಗಿ (ಸಿಜೆಐ) ಅಧಿಕಾರ ವಹಿಸಿಕೊಳ್ಳಲಿದ್ದಾರೆ. ಪ್ರಸ್ತುತ ಮುಖ್ಯ ನ್ಯಾಯಮೂರ್ತಿಯವಾಗಿರುವ ಎನ್‌ವಿ ರಮಣ ಅವರು ಮುಂದಿನ ಸಿಜೆಐ ಸ್ಥಾನಕ್ಕೆ ಲಲಿತ್ ಅವರ ಹೆಸರನ್ನು ಶಿಫಾರಸ್ಸು ಮಾಡಿದ್ದಾರೆ.

ರಮಣ ಅವರು ಬುಧವಾರದಂದು ಕೇಂದ್ರ ಕಾನೂನು ಸಚಿವಾಲಯಕ್ಕೆ ಶಿಫಾರಸ್ಸು ಮಾಡಿದ್ದು ಮುಂದಿನ ಸಿಜೆಐ ಆಗಲು ಲಲಿತ್ ಅವರನ್ನು ಹೆಸರಿಸಿದ್ದಾರೆ.

ನ್ಯಾಯಮೂರ್ತಿ ಎಸ್‌.ಎಂ.ಸಿಕ್ರಿ ಅವರ ನಂತರದಲ್ಲಿ ವಕೀಲರ ವಿಭಾಗದಿಂದ ಮೇಲ್ದರ್ಜೆಗೇರಿ ಸಿಜೆಐ ಆಗುತ್ತಿರುವ ಎರಡನೇ ನ್ಯಾಯಾಮೂರ್ತಿ ಎಂಬ ಹೆಗ್ಗಳಿಕೆಗೆ ಲಲಿತ್‌ ಪಾತ್ರರಾಗುತ್ತಿದ್ದಾರೆ. ಸಿಕ್ರಿ ಅವರು 1971 ಮತ್ತು 1973 ರ ನಡುವೆ ಸಿಜೆಐ ಆಗಿದ್ದರು. ಲಲಿತ್ ಅವರು ಆಗಸ್ಟ್ 2014ರಲ್ಲಿ ಸುಪ್ರೀಂ ಕೋರ್ಟ್‌ನಲ್ಲಿ ನ್ಯಾಯಮೂರ್ತಿಯಾಗಿ ನೇಮಕಗೊಂಡಿದ್ದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಸಂಪ್ರದಾಯದಂತೆ, ಕೇಂದ್ರ ಕಾನೂನು ಸಚಿವಾಲಯವು ಸಿಜೆಐ ನಿವೃತ್ತಿಯ ಒಂದು ತಿಂಗಳ ಮೊದಲು ತಮ್ಮ ಉತ್ತರಾಧಿಕಾರಿಯನ್ನು ಹೆಸರಿಸುವಂತೆ ಮುಖ್ಯನ್ಯಾಯಮೂರ್ತಿಗೆ ಕೋರಿಕೆ ಪತ್ರ ಬರೆಯುತ್ತದೆ. ಹುದ್ದೆಯಲ್ಲಿರುವವರು ನಿವೃತ್ತಿಗೆ 30 ದಿನಗಳ ಮೊದಲು ಶಿಫಾರಸುಗಳನ್ನು ಸಚಿವಾಲಯಕ್ಕೆ ಕಳುಹಿಸುತ್ತಾರೆ. ಸಾಂಪ್ರದಾಯಿಕವಾಗಿ, ಅತ್ಯಂತ ಹಿರಿಯ ನ್ಯಾಯಮೂರ್ತಿಯವರನ್ನು ಸಿಜೆಐ ಆಗಿ ನೇಮಿಸಲಾಗುತ್ತದೆ.

1993ರಲ್ಲಿ ಎರಡನೇ ನ್ಯಾಯಾಧೀಶರ ಪ್ರಕರಣದ ಅನ್ವಯ ಸುಪ್ರೀಂ ಕೋರ್ಟ್‌ನ ಅತ್ಯಂತ ಹಿರಿಯ ನ್ಯಾಯಮೂರ್ತಿಯವರನ್ನು ಸಿಜೆಐ ಆಗಿ ನೇಮಿಸಲಾಗುತ್ತದೆ.

ಕೇಂದ್ರ ಕಾನೂನು ಸಚಿವರು ಸೂಕ್ತ ಸಮಯದಲ್ಲಿ, ಮುಂದಿನ ಸಿಜೆಐ ನೇಮಕಕ್ಕಾಗಿ ನಿರ್ಗಮಿಸಲಿರುವ ಮುಖ್ಯ ನ್ಯಾಯಮೂರ್ತಿಯವರನ್ನು ಕೋರುತ್ತಾರೆ. ಸಿಜೆಐ ಶಿಫಾರಸನ್ನು ಸ್ವೀಕರಿಸಿದ ನಂತರ ಸಚಿವರು, ನೇಮಕಾತಿ ವಿಷಯದಲ್ಲಿ ರಾಷ್ಟ್ರಪತಿಯವರಿಗೆ ಸಲಹೆ ನೀಡುವ ಪ್ರಧಾನಿಯವರಿಗೆ ಶಿಫಾರಸ್ಸನ್ನು ತಿಳಿಸುತ್ತಾರೆ.

ಈ ಬಾರಿ ಕಾನೂನು ಸಚಿವಾಲಯವು ರಮಣ ಅವರ ಶಿಫಾರಸನ್ನು ಕೋರಿ ಪತ್ರವನ್ನು ಬರೆಯುವಲ್ಲಿ ವಿಳಂಬ ಮಾಡಿತ್ತು. ಹೀಗಾಗಿ ಲಲಿತ್ ಅವರ ಹೆಸರನ್ನು ಶಿಫಾರಸ್ಸು ಮಾಡುವಲ್ಲಿಯೂ ತಡವಾಗಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...

ಕೇರಳ: ತಪ್ಪು ಪ್ರಕರಣದಲ್ಲಿ ಪೊಲೀಸರಿಂದ ಚಿತ್ರಹಿಂಸೆ: 29 ವರ್ಷದ ಮುಸ್ಲಿಂ ಯುವಕ ಸಾವು: ಕುಟುಂಬಕ್ಕಿದ್ದ ಒಂದೇ ಆಧಾರ ಕಳೆದುಕೊಂಡ ಪೋಷಕರು

ತಪ್ಪು ಗ್ರಹಿಕೆಯಿಂದ ಪೊಲೀಸ್ ಕಸ್ಟಡಿಗೆ ಪಡೆದ 29 ವರ್ಷದ ಮುಸ್ಲಿಂ ಯುವಕನೋರ್ವ, ಪೊಲೀಸರ ಕಠೋರ ಕಸ್ಟಡಿ ಚಿತ್ರಹಿಂಸೆಯಿಂದಾಗಿ ಪಕ್ಕೆಲುಬು ಮುರಿತಕ್ಕೊಳಗಾಗಿ, ಶ್ವಾಸಕೋಶದ ಸೋಂಕು ತೀವ್ರಗೊಂಡು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಅಮಾನವೀಯ ಹಾಗೂ ಆಘಾತಕಾರಿ...

ಮಾಧ್ಯಮ ತನಿಖಾ ವರದಿಗೆ ಹೆದರಿ ₹ 99 ಲಕ್ಷ ಸಬ್ಸಿಡಿ ವಾಪಸ್ ಮಾಡಿದ ಕೇಂದ್ರ BJP ಸಚಿವ

ತಮ್ಮದೇ ಸಚಿವಾಲಯದ ಯೋಜನೆಯಡಿ ಬರೋಬ್ಬರಿ 99 ಲಕ್ಷ ರೂಪಾಯಿ ಸರ್ಕಾರಿ ಸಬ್ಸಿಡಿ ಪಡೆದು ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾಗಿದ್ದ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವ ಭಾಗೀರಥ್ ಚೌಧರಿ, ಕೊನೆಗೂ ಆ...

ಕಾಮನ್‌ವೆಲ್ತ್ ಕ್ರೀಡಾಕೂಟ: ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಶರ್ಮಿಳಾ ಧನ್ಖರ್

ಎರಡು ವರ್ಷವಿದ್ದಾಗ ಪೋಲಿಯೊದಿಂದ ಅಂಗವಿಕಲಳಾಗಿ, ಬಾಲ್ಯದಲ್ಲಿ ದೌರ್ಜನ್ಯಕ್ಕೊಳಗಾದ, ವಿವಾಹದ ಆಘಾತದಿಂದ ಬದುಕುಳಿದ ಮಹಿಳೆ ಶರ್ಮಿಳಾ ಧನ್ಖರ್, ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಗ್ಲ್ಯಾಸ್ಗೋದಲ್ಲಿ...

ಬಿಹಾರ: ವಿದ್ಯಾರ್ಥಿಗಳ ವಿರುದ್ಧ ಎಕೆ-47 ರೈಫಲ್ ಬಳಕೆ: ಗುಂಡು ಹಾರಿಸಲು ಆದೇಶಿಸಿದವರ ವಿರುದ್ಧ ತನಿಖೆಗೆ ಮನೋಜ್ ಝಾ ಆಗ್ರಹ; ಸುಪ್ರೀಂ ಮೆಟ್ಟಿಲೇರಿದ ಪ್ರಕರಣ

ನೀಟ್ (NEET) ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪವನ್ನು ಖಂಡಿಸಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ, ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಎಕೆ-47 ರೈಫಲ್‌ನಿಂದ ಗಾಳಿಯಲ್ಲಿ ಗುಂಡು ಹಾರಿಸುತ್ತಿದ್ದ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್...

ಧರ್ಮೇಂದ್ರ ಪ್ರಧಾನ್ ಖಾತೆ ಬದಲಾವಣೆ ಪ್ರಸ್ತಾವನೆ ತಿರಸ್ಕರಿಸಿದ್ದ ಸಿಜೆಪಿ: ವರದಿ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಜುಲೈ 25 ರಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ತಮ್ಮ ರಾಜೀನಾಮೆ ಸಲ್ಲಿಸಿದ್ದಾರೆ. ಆದರೆ, ಅದಕ್ಕೂ ಮೊದಲು ಕೇಂದ್ರ ಸರ್ಕಾರವು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ)...

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...

ಕರೂರ್ ಕಾಲ್ತುಳಿತ ಮೃತರ ಕುಟುಂಬಸ್ಥರಿಗೆ ನೀಡಿದ್ದ ಸರ್ಕಾರಿ ಉದ್ಯೋಗವನ್ನು ರದ್ದುಗೊಳಿಸಿದ ಮದ್ರಾಸ್ ಹೈಕೋರ್ಟ್

ಕರೂರ್ ಕಾಲ್ತುಳಿತ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ಸರ್ಕಾರಿ ಉದ್ಯೋಗ ನೀಡಿದ್ದ ತಮಿಳುನಾಡು ಸರ್ಕಾರದ ಆದೇಶವನ್ನು ಮದ್ರಾಸ್ ಹೈಕೋರ್ಟ್ ಸೋಮವಾರ ರದ್ದುಗೊಳಿಸಿದೆ. ಈ ನೇಮಕಾತಿಗಳನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ (PIL) ವಿಚಾರಣೆ...