Homeಕರ್ನಾಟಕವರ್ಗಾವಣೆ ಖಂಡಿಸಿ ಉದಯ ಟಿವಿ ಸಿಬ್ಬಂದಿ ನಡೆಸುತ್ತಿರುವ ಪ್ರತಿಭಟನೆ 7ನೇ ದಿನಕ್ಕೆ

ವರ್ಗಾವಣೆ ಖಂಡಿಸಿ ಉದಯ ಟಿವಿ ಸಿಬ್ಬಂದಿ ನಡೆಸುತ್ತಿರುವ ಪ್ರತಿಭಟನೆ 7ನೇ ದಿನಕ್ಕೆ

ಸನ್ ಟಿವಿ ನೆಟ್‌ವರ್ಕ್, ಬೆಂಗಳೂರು ಕೇಂದ್ರದಲ್ಲಿ ಕೆಲಸ ಮಾಡುತ್ತಿರುವವರನ್ನು ಕೋಲ್ಕತಾ, ನೋಯ್ಡಾ, ಮುಂಬಯಿ, ಹೈದರಾಬಾದ್, ಚೆನ್ನೈ ನಗರಗಳಿಗೆ ವರ್ಗಾವಣೆ ಮಾಡಿ ಆದೇಶ ಹೊರಡಿಸಿತ್ತು.

- Advertisement -
- Advertisement -

ಕಾನೂನು ಬಾಹಿರವಾಗಿ ಸಿಬ್ಬಂದಿಯನ್ನು ವರ್ಗಾವಣೆ ಮಾಡಲಾಗಿದೆ ಎಂದು ಆರೋಪಿಸಿ, ಆಡಳಿತ ಮಂಡಳಿಯ ಕ್ರಮವನ್ನು ಖಂಡಿಸಿ ಉದಯ ಟಿವಿ ಸಿಬ್ಬಂದಿ ಬೆಂಗಳೂರಿನ ಮಾರನ್ ಟವರ್ಸ್ ಮುಂದೆ ನಡೆಸುತ್ತಿರುವ ಪ್ರತಿಭಟನೆ 7ನೇ ದಿನಕ್ಕೆ ಕಾಲಿಟ್ಟಿದೆ.

ನವೆಂಬರ್‌ 26 ರಂದು ಆರಂಭಿಸಿರುವ ಪ್ರತಿಭಟನೆ ಇನ್ನು ನಡೆಯುತ್ತಲೇ ಇದೆ. ಇತ್ತ ದೇಶದ ರೈತರು ಚಳಿ, ಮಳೆ ಎನ್ನದೇ ಕೃಷಿ ಕಾನೂನುಗಳ ವಿರುದ್ಧ ಹೋರಾಡುತಿದ್ದರೆ, ಉದಯ ಟಿವಿ ನೌಕರರು ಕೂಡ ಚಳಿ, ಮಳೆಯ ನಡುವೆಯೇ ಉದಯ ಟಿವಿ ಕಚೇರಿಯ ಮುಖ್ಯದ್ವಾರದಲ್ಲಿ ಕೂತು ಮೌನ ಪ್ರತಿಭಟನೆಯನ್ನು ನಡೆಸುತ್ತಿದ್ದಾರೆ.

ಆಡಳಿತ ಮಂಡಳಿಯ ಅನುಚಿತ ನೀತಿ, ಕಾನೂನುಬಾಹಿರ ವರ್ಗಾವಣೆಯನ್ನು ಖಂಡಿಸಿ ಏಳನೇಯ ದಿನ ಕಚೇರಿಯ ಮುಂದೆ ಸಿಬ್ಬಂದಿ ವರ್ಗ ಮೌನ ಪ್ರತಿಭಟನೆಯನ್ನು ಮುಂದುವರೆಸಿ, ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹದ ಸುಳಿವು ನೀಡಿದ್ದಾರೆ.

ಇದನ್ನೂ ಓದಿ: ರಾಮನಗರ ಅರವಿಂದ್ ಫ್ಯಾಶನ್ ಲಿಮಿಟೆಡ್ ಕಾರ್ಖಾನೆ ಲಾಕೌಟ್: ಬೀದಿಗೆ ಬಿದ್ದ ಕಾರ್ಮಿಕರು

ರಾಜ್ಯದಲ್ಲಿ ಇಪ್ಪತ್ತೈದು ವರ್ಷಗಳಿಂದ ಕಾರ್ಯ ನಿರ್ವಹಿಸುತ್ತಿರುವ ಜನಪ್ರಿಯ ವಾಹಿನಿಯಾದ ಉದಯ ಟಿವಿ ಆಡಳಿತ ಮಂಡಳಿ, ಸಂಸ್ಥೆಯಲ್ಲಿ ಕಾರ್ಮಿಕ ಸಂಘ ಅಸ್ಥಿತ್ವಕ್ಕೆ ಬಂದಿರುವುದನ್ನು ಸಹಿಸಿಕೊಳ್ಳಲಾಗದೇ, ಪ್ರತಿಕಾರವಾಗಿ ಭಾಷೆಯೇ ಗೊತ್ತಿಲ್ಲದ ಸಿಬ್ಬಂದಿಯನ್ನು ಬಂಗಾಲಿ, ಹಿಂದಿ, ಮರಾಠಿ ಭಾಷೆಯ ಪ್ರದೇಶಗಳಿಗೆ ವರ್ಗಾವಣೆ ಮಾಡಿದೆ ಎಂದು ಪ್ರತಿಭಟನಾನಿರತ ಸಿಬ್ಬಂದಿ ವರ್ಗ ಆರೋಪಿಸಿದೆ.

’ಸಂಸ್ಥೆ ಕೆಲಸ ನೀಡಲು ನಿರಾಕರಿಸಿದೆ. ಮೂರು ತಿಂಗಳಿಂದ ವೇತನವಿಲ್ಲದೇ ನಮ್ಮ ಬದುಕು ಅಕ್ಷರಶಃ ಬೀದಿಗೆ ಬಿದ್ದಿದೆ. ನಮಗೆ ಭಾಷೆ ಗೊತ್ತಿಲ್ಲದ ಪ್ರದೇಶದಲ್ಲಿ, ಕೇವಲ ಹತ್ತು ಸಾವಿರ ರೂಪಾಯಿ ಸಂಬಳದಲ್ಲಿ ಕೋಲ್ಕತ್ತಾ ಹೋಗಿ ಹೇಗೆ ಕೆಲಸ ಮಾಡಬೇಕು..?” ಎಂದು ನೌಕರ ರಾಜೇಶ್ ತಮ್ಮ ಅಳಲು ತೋಡಿಕೊಂಡಿದ್ದಾರೆ.

PC: Voiceofworkers.In

ಆಡಳಿತ ಮಂಡಳಿ ಸ್ಟ್ಯಾಂಡಿಂಗ್ ಆರ್ಡರ್ ಜಾರಿಗೆ ತರದೇ ಇರುವುದೇ ಇಡೀ ಬಿಕ್ಕಟ್ಟಿಗೆ ಮೂಲ ಕಾರಣ ಎನ್ನಲಾಗುತ್ತಿದೆ. ಬೋನಸ್, ಕನಿಷ್ಠ ವೇತನ, ಇಂಕ್ರೀಮೆಂಟ್, ಟಿಎ, ಡಿಎ, ಇಎಸ್ಐ, ಪಿಎಫ್ ಗಳಂತಹ ಸಾಮಾನ್ಯ ಕಾರ್ಮಿಕ ಸವಲತ್ತುಗಳನ್ನು ನೀಡದೇ ಇರುವುದನ್ನು ಪ್ರಶ್ನಿಸಿದಕ್ಕೆ ಈ ರೀತಿ ಸೇಡು ತೀರಿಸಿಕೊಳ್ಳುತ್ತಿದೆ ಎಂದು ಸಿಬ್ಬಂದಿ ಆರೋಪಿಸಿದ್ದಾರೆ.

ಸನ್ ಟಿವಿ ನೆಟ್‌ವರ್ಕ್, ಬೆಂಗಳೂರು ಕೇಂದ್ರದಲ್ಲಿ ಕೆಲಸ ನಿರ್ವಹಿಸುತ್ತಿದ್ದ ಉದ್ಯೋಗಿಗಳನ್ನು ದೂರದ ಕೋಲ್ಕತಾ, ನೋಯ್ಡಾ, ಮುಂಬಯಿ, ಹೈದರಾಬಾದ್, ಚೆನ್ನೈ ನಗರಗಳಿಗೆ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ವರ್ಗಾವಣೆ ಒಪ್ಪದ ಸಿಬ್ಬಂದಿಗೆ ಕೆಲಸ ನೀಡದೇ ಹೊರಗಟ್ಟಿದೆ.


ಇದನ್ನೂ ಓದಿ: ಕರ್ನಾಟಕದ ಕಾರ್ಮಿಕರು ಮತ್ತು ಜಪಾನಿ ಆಡಳಿತದ ನಡುವಿನ ತಿಕ್ಕಾಟ: ಟೊಯೋಟಾದಲ್ಲಿ ನಡೆಯುತ್ತಿರುವುದೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸೋನಮ್ ವಾಂಗ್ಚುಕ್ ಮತ್ತು ಸರ್ಕಾರದ ಡೀಲ್‌ನಲ್ಲಿ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಅಂಶವೇ ಇಲ್ಲ

ಕೇಂದ್ರದ ಮೋದಿ ಸರ್ಕಾರ ತನ್ನ ಮೂರು ಪ್ರಮುಖ ಬೇಡಿಕೆಗಳನ್ನು ಈಡೇರಿಸಲು ಒಪ್ಪಿಕೊಂಡ ನಂತರ, ಪರಿಸರ ಹೋರಾಟಗಾರ ಸೋನಮ್ ವಾಂಗ್ಚುಕ್ ಜುಲೈ 23ರ ಗುರುವಾರ ತಮ್ಮ 26 ದಿನಗಳ ಸುದೀರ್ಘ ಉಪವಾಸ ಸತ್ಯಾಗ್ರಹವನ್ನು ಕೊನೆಗೊಳಿಸಿದ್ದಾರೆ....

“50 ಗ್ರಾಂ ಡ್ರಗ್ಸ್ ಇಟ್ಟು ಕೇಸ್ ಹಾಕ್ತೀನಿ!”: ಪ್ರತಿಭಟನಾ ನಿರತ ವಿದ್ಯಾರ್ಥಿಗಳಿಗೆ ಮಾದಕದ್ರವ್ಯ ಪ್ರಕರಣದ ಬೆದರಿಕೆಯೊಡ್ಡಿದ ಮುಂಬೈ ಪೊಲೀಸ್!

ಮುಂಬೈ: ದೇಶಾದ್ಯಂತ ವಿದ್ಯಾರ್ಥಿ ಸಮುದಾಯದ ಆಕ್ರೋಶ ತೀವ್ರಗೊಳ್ಳುತ್ತಿರುವ ಬೆನ್ನಲ್ಲೇ, ತಮ್ಮ ಹಕ್ಕುಗಳಿಗಾಗಿ ಧ್ವನಿ ಎತ್ತುತ್ತಿರುವ ಯುವಜನರನ್ನು ಹತೋಟಿಗೆ ತರಲು ಪೊಲೀಸರು ಯಾವ ಮಟ್ಟದ ದಮನಕಾರಿ ಮಾರ್ಗಗಳನ್ನು ತುಳಿಯುತ್ತಿದ್ದಾರೆ ಎಂಬುದಕ್ಕೆ ಮುಂಬೈನಲ್ಲಿ ನಡೆದ ಘಟನೆಯೊಂದು...

ಬಿಡದಿ ಟೌನ್‌ಶಿಪ್: 80% ರೈತರ ಒಪ್ಪಿಗೆ ಇದೆ ಎಂಬ ವಾದ ಸಾಬೀತುಪಡಿಸಿ – ಸರ್ಕಾರಕ್ಕೆ ಸಂಯುಕ್ತ ಹೋರಾಟ ಸವಾಲು

ಬಿಡದಿ ಟೌನ್‌ಶಿಪ್ ಯೋಜನೆಗೆ ಭೂಮಿ ನೀಡಲು ಉದ್ದೇಶಿತ ಪ್ರದೇಶದ ಶೇಕಡಾ 80 ರಷ್ಟು ರೈತರು ಒಪ್ಪಿದ್ದಾರೆ ಎಂಬ ಸರ್ಕಾರದ ವಾದಕ್ಕೆ ಯಾವುದೇ ವಾಸ್ತವಿಕ ಆಧಾರವಿಲ್ಲ. ಸರ್ಕಾರಕ್ಕೆ ಧೈರ್ಯವಿದ್ದರೆ ತನ್ನ ಈ ಹೇಳಿಕೆಯನ್ನು ಜನರ...

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...

ಪ್ರತಿಭಟನಾನಿರತ ಮಹಿಳೆಯ ಕೆನ್ನೆಗೆ ಹೊಡೆದ ದೆಹಲಿ ಪೊಲೀಸ್ ಅಧಿಕಾರಿ ಸಂದೀಪ್ ಲಂಬಾ: ವಿಡಿಯೋ ವೈರಲ್ ನಂತರ ವ್ಯಾಪಕ ಟೀಕೆ

ದೆಹಲಿ: ಶಾಂತಿಯುತವಾಗಿ ತಮ್ಮ ಹಕ್ಕುಗಳಿಗಾಗಿ ಹೋರಾಡುತ್ತಿದ್ದ ಪ್ರತಿಭಟನಾಕಾರರ ಮೇಲೆ ದೆಹಲಿ ಪೊಲೀಸರು ನಡೆಸಿದ ಕ್ರೂರ ದಮನ ಕಾರ್ಯಾಚರಣೆಯ ಭೀಕರ ಮುಖವಾಡವೊಂದು ಮತ್ತೆ ಜಗಜ್ಜಾಹೀರಾಗಿದೆ. ಸೋಮವಾರ ಸಂಸತ್ತಿನ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಪ್ರತಿಭಟನಾಕಾರರನ್ನು ಹತ್ತಿಕ್ಕುವ ನೆಪದಲ್ಲಿ,...

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...