Homeಕರ್ನಾಟಕಕೆಚ್ಚಲು ಕೊಯ್ದ ಪ್ರಕರಣ - ಸಂತ್ರಸ್ತರಿಗೆ ಮೂರು ಹಸುಗಳನ್ನು ನೀಡಿದ ಸಚಿವ ಜಮೀರ್‌ ಅಹ್ಮದ್

ಕೆಚ್ಚಲು ಕೊಯ್ದ ಪ್ರಕರಣ – ಸಂತ್ರಸ್ತರಿಗೆ ಮೂರು ಹಸುಗಳನ್ನು ನೀಡಿದ ಸಚಿವ ಜಮೀರ್‌ ಅಹ್ಮದ್

- Advertisement -
- Advertisement -

ಚಾಮರಾಜಪೇಟೆಯ ವಿನಾಯಕ ನಗರದಲ್ಲಿ ನಡೆದ ಹಸುವಿನ ಕೆಚ್ಚಲು ಕೊಯ್ದ ಘಟನೆ ಹಿನ್ನೆಲೆಯಲ್ಲಿ ಹಸುವಿನ ಮಾಲೀಕ ಕರ್ಣ ಅವರ ತಾಯಿ ಸವರಿ ಅಮ್ಮಳ್, ಸಹೋದರಿ ಅಮುದಾ ಅವರಿಗೆ ಸಚಿವ ಜಮೀರ್ ಅಹಮದ್ ಖಾನ್ ಅವರು ಮೂರು ಲಕ್ಷ ರೂ. ವೆಚ್ಚದಲ್ಲಿ ಮೂರು ಹಸು ಖರೀದಿಸಿ ನೀಡಿದ್ದಾರೆ. ಕೆಚ್ಚಲು ಕೊಯ್ದ ಪ್ರಕರಣ

ಅಘಾತಕಾರಿ ಘಟನೆಯಲ್ಲಿ ದುಷ್ಕರ್ಮಿಯು ಎರಡು ಹಸುಗಳ ಕೆಚ್ಚಲು ಕೊಯ್ದು, ಮತ್ತೊಂದು ಹಸುವಿಗೆ ಗಾಯಗೊಳಿಸಿದ್ದನು. ಆರೋಪಿಯನ್ನು ಬೆಂಗಳೂರು ಪೊಲೀಸರು ಭಾನುವಾರ ರಾತ್ರಿ ಬಂಧಿಸಿದ್ದಾರೆ. ಆತನನ್ನು ಬಿಹಾರದ ಚಂಪಾರಣ್ ಜಿಲ್ಲೆಯ ಶೇಖ್ ನಸ್ರು ಎಂದು ಗುರುತಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.

ಜಮೀರ್ ಅವರ ನಡೆಯ ಬಗ್ಗೆ ಮಾತನಾಡಿದ ಅಮುದಾ, “ಹಸು ನಿರಾಕರಿಸಿದ ನನ್ನ ಸಹೋದರನ ಪರವಾಗಿ ನಾನು ಕ್ಷಮೆ ಕೋರುತ್ತೇನೆ. ಜಮೀರಣ್ಣ ಅವರು ಒಳ್ಳೆ ಮನಸ್ಸಿನಿಂದ ಹಸು ಕೊಡಿಸಿದ್ದಾರೆ. ಕೆಲವರು ಇದರಲ್ಲಿ ರಾಜಕಾರಣ ಮಾಡುತ್ತಿದ್ದು, ನಾವು ಶಾಸಕರ ಜತೆ ಇದ್ದೇವೆ” ಎಂದು ಹೇಳಿದ್ದಾರೆ. ಕೆಚ್ಚಲು ಕೊಯ್ದ ಪ್ರಕರಣ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಆರೋಪಿಯನ್ನು ಜನವರಿ 25 ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ವರದಿ ಹೇಳಿದೆ. ಹಸುಗಳ ಮೇಲೆ ದಾಳಿ ಮಾಡುವಾಗ ಆರೋಪಿಯು ಕುಡಿದಿದ್ದ ಎಂದು ಪೊಲೀಸರ (ಪಶ್ಚಿಮ) ಉಪ ಆಯುಕ್ತ ಎಸ್. ಗಿರೀಶ್ ಹೇಳಿದ್ದಾಗಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಘಟನೆ ನಡೆದ ಸ್ಥಳದಿಂದ 50 ಮೀಟರ್ ದೂರದಲ್ಲಿರುವ ಪ್ಲಾಸ್ಟಿಕ್ ಮತ್ತು ಬಟ್ಟೆ ಚೀಲ ಹೊಲಿಗೆ ಅಂಗಡಿಯಲ್ಲಿ ನಸ್ರು ಸಹಾಯಕನಾಗಿ ಕೆಲಸ ಮಾಡುತ್ತಿದ್ದ ಎಂದು ಗಿರೀಶ್ ಹೇಳಿದ್ದಾರೆ. ದುಷ್ಕೃತ್ಯದಲ್ಲಿ ಬೇರೆ ಯಾರೂ ಭಾಗಿಯಾಗಿಲ್ಲ ಎಂದು ಅವರು ಹೇಳಿದ್ದಾರೆ. ಹಸುಗಳಿಗೆ ಚಿಕಿತ್ಸೆ ನೀಡಲಾಗಿದ್ದು, ಪ್ರಸ್ತುತ ಅಪಾಯದಿಂದ ಪಾರಾಗಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಬೆಂಗಳೂರು

ಭಾನುವಾರ ಬೆಳಗಿನ ಜಾವ ಈ ಘಟನೆ ನಡೆದಿದೆ ಎಂದು ಹಾಲು ಮಾರಾಟಗಾರರಾಗಿರುವ ಹಸುಗಳ ಮಾಲೀಕ ಸುದ್ದಿಗಾರರಿಗೆ ತಿಳಿಸಿದ್ದಾರೆ. ಬೆಳಿಗ್ಗೆ ಹಾಲು ಕರೆಯಲು ತೆರಳಿದಾಗ ಹಸುಗಳ ಕೆಚ್ಚಲಿನಲ್ಲಿ ರಕ್ತಸ್ರಾವವಾಗುತ್ತಿತ್ತು ಎಂದು ಅವರು ಹೇಳಿದ್ದಾರೆ.

ಘಟನೆ ಬೆಳಕಿಗೆ ಬಂದ ಕೂಡಲೇ ಬಿಜೆಪಿ ಪ್ರತಿಭಟನೆ ನಡೆಸಿದ್ದು, ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಘಟನೆಯ ಹಿಂದೆ ಇರುವ ಜಿಹಾದಿಗಳ ವಿರುದ್ಧ ಸರ್ಕಾರ ಕಠಿಣ ಕ್ರಮ ಕೈಗೊಳ್ಳದಿದ್ದರೆ ನಾವು ‘ಕಪ್ಪು ಸಂಕ್ರಾಂತಿ’ ಆಚರಿಸುತ್ತೇವೆ ಎಂದು ಅಶೋಕ್ ಹೇಳಿದ್ದರು.

ಇದನ್ನೂಓದಿ:  ಹುಟ್ಟುಹಬ್ಬದ ನೆಪದಲ್ಲಿ ಕರೆಸಿ ಅಪ್ರಾಪ್ತೆಯ ಮೇಲೆ ಅತ್ಯಾಚಾರ

ಹುಟ್ಟುಹಬ್ಬದ ನೆಪದಲ್ಲಿ ಕರೆಸಿ ಅಪ್ರಾಪ್ತೆಯ ಮೇಲೆ ಅತ್ಯಾಚಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...

ಕನಿಷ್ಠ 20 ಸಾವಿರ ‘ಕಾಕ್ರೋಚ್‌’ಗಳಿಂದ ಸಂಸತ್ತಿಗೆ ಮೆರವಣಿಗೆ; ವಿದ್ಯಾರ್ಥಿಗಳ ಮೇಲೆ ಪೊಲೀಸರಿಂದ ಲಾಠಿಚಾರ್ಜ್ – ಅಶ್ರುವಾಯು

ಧರ್ಮೇಂದ್ರ ಪ್ರಧಾನ್ ರಾಜೀನಾಮಗೆ ಒತ್ತಾಯಿಸಿ ಮುಂಗಾರು ಅಧಿವೇಶನದ ಮೊದಲ ದಿನದಂದು ಸಂಸತ್ತಿಗೆ ಮೆರವಣಿಗೆ ನಡೆಸಲು ದೆಹಲಿಯಲ್ಲಿ ಜಮಾಯಿಸಿದ್ದ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಸಾವಿರಾರು ಬೆಂಬಲಿಗರನ್ನು ಚದುರಿಸಲು ದೆಹಲಿ ಪೊಳಿಸರು ಅಶ್ರುವಾಯು ಶೆಲ್‌ಗಳನ್ನು...

ಸಿಜೆಪಿ ಪ್ರತಿಭಟನೆಗೆ ನಡುಗಿದ ಕೇಂದ್ರ ಸರ್ಕಾರ; ತರಾತುರಿಯಲ್ಲಿ ಸಂಸತ್ತಿನ ಗೇಟ್ ಮುಚ್ಚಿದ ಭದ್ರತಾ ಸಿಬ್ಬಂದಿ

ನೀಟ್‌ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ವಿರೋಧಿಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ಇಂದು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಹಮ್ಮಿಕೊಂಡಿರುವ ಸಂಸತ್ ಮೆರವಣಿಗೆಗೆ ಕೇಂದ್ರ ಸರ್ಕಾರ...

ಹಕ್ಕುಗಳ ಕಾಯ್ದೆಗೆ 7 ವರ್ಷ: ಕಾಗದದಲ್ಲಷ್ಟೇ ಸಮಾನತೆ, ಉದ್ಯೋಗ ಸಿಗದೆ ಬೀದಿಗೆ ತಳ್ಳಲ್ಪಡುತ್ತಿರುವ ಟ್ರಾನ್ಸ್‌ಜೆಂಡರ್‌ ಸಮುದಾಯ

ಬೆಂಗಳೂರು: ರಾಷ್ಟ್ರೀಯ ಮಟ್ಟದಲ್ಲಿ ‘ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ಕಾಯ್ದೆ-2019’ ಜಾರಿಗೆ ಬಂದು ಏಳು ವರ್ಷಗಳು ಕಳೆದಿದ್ದರೂ, ಸಮುದಾಯದ ಆರ್ಥಿಕ ಸಬಲೀಕರಣ ಇನ್ನೂ ಕನಸಾಗಿಯೇ ಉಳಿದಿದೆ. ಬೆಂಗಳೂರಿನ ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆ...

ಸಂಸತ್‌ ಚಲೋ: ಕಾಕ್ರೋಚ್ ಜನತಾ ಪಾರ್ಟಿ ಪ್ರತಿಭಟನೆಗೆ ಭಾರೀ ಬೆಂಬಲ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್‌ (NEET) ಪ್ರಶ್ನೆಪತ್ರಿಕೆ ಸೋರಿಕೆ, ಸಾಲು ಸಾಲು ವಿದ್ಯಾರ್ಥಿಗಳ ಆತ್ಮಹತ್ಯೆ ಹಾಗೂ ದೇಶದ ಪರೀಕ್ಷಾ ವ್ಯವಸ್ಥೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ (CJP) ಆಯೋಜಿಸಿರುವ...

ಡಿಜಿಟಲೀಕರಣಗೊಂಡ 2002ರ ಮತದಾರರ ಪಟ್ಟಿಯಿಂದ ಬೆಂಗಳೂರಿನ ಮತಗಟ್ಟೆಗಳೇ ಮಾಯ: ಮಾಹಿತಿ ಸಿಗದೆ ಆತಂಕದಲ್ಲಿ ನೂರಾರು ಮತದಾರರು

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಹಲವು ಭಾಗಗಳಲ್ಲಿ 2002ರ ಡಿಜಿಟಲೀಕರಣಗೊಂಡ ಮತದಾರರ ಪಟ್ಟಿಯಿಂದ ಇಡೀ ಮತಗಟ್ಟೆಗಳೇ ಕಾಣೆಯಾಗಿರುವ ಗಂಭೀರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇದರಿಂದಾಗಿ ನೂರಾರು ಮತದಾರರು ಆತಂಕ ಮತ್ತು ಗೊಂದಲಕ್ಕೊಳಗಾಗಿದ್ದಾರೆ ಎಂದು...

‘ರಾಮನಿಗೆ ಅವಮಾನಿಸಿದ್ದಕ್ಕೆ ಶಾಯಿ ಎರಚಿದೆ’: ಜಂತರ್ ಮಂತರ್‌ನಲ್ಲಿ ಅಭಿಜೀತ್ ದೀಪ್ಕೆ ಮೇಲಿನ ದಾಳಿಯನ್ನು ಸಮರ್ಥಿಸಿಕೊಂಡ ಬರ್ಖಾ ಟ್ರೆಹಾನ್

ನವದೆಹಲಿ: ದೇಶದ ರಾಜಧಾನಿಯ ಜಂತರ್ ಮಂತರ್‌ನಲ್ಲಿ ಜುಲೈ 18 ರ ಶನಿವಾರದಂದು ನಡೆದ ಪ್ರತಿಭಟನಾ ಸಭೆಯಲ್ಲಿ ಭಾಷಣ ಮಾಡುತ್ತಿದ್ದ ‘ಜಿರಳೆ ಜನತಾ ಪಕ್ಷ’ದ ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರ ಮೇಲೆ ಶಾಯಿ ಎರಚಿದ...

ಸರ್ವಪಕ್ಷ ಸಭೆ: TMC ಬಂಡಾಯ ಸಂಸದರಿಗೆ ಸ್ಪೆಷಲ್ ಸೀಟು, INDIA ಮೈತ್ರಿಕೂಟದ ಸಂಸದರು ವಾಕೌಟ್

ಸಂಸತ್ತಿನ ಮುಂಗಾರು ಅಧಿವೇಶನ ಆರಂಭಕ್ಕೆ ಕೆಲವೇ ದಿನಗಳು ಬಾಕಿ ಇರುವಾಗ, ರವಿವಾರ ನಡೆದ ಸರ್ವಪಕ್ಷಗಳ ಸಭೆಯು ತೀವ್ರ ರಾಜಕೀಯ ಸಂಘರ್ಷಕ್ಕೆ ಸಾಕ್ಷಿಯಾಗಿದೆ. ತೃಣಮೂಲ ಕಾಂಗ್ರೆಸ್ (TMC) ಪಕ್ಷದಿಂದ ಬಂಡಾಯವೆದ್ದ ಸಂಸದರಿಗೆ ಕೇಂದ್ರ ಸರ್ಕಾರವು...

ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ಹಾದಿ ತಪ್ಪಿಸಲು BJP ಪಿತೂರಿ: ಸಿಜೆಪಿ ಗಂಭೀರ ಆರೋಪ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್ (NEET) ಪರೀಕ್ಷಾ ಹಗರಣದ ವಿರುದ್ಧ ಜಂತರ್ ಮಂತರ್‌ನಲ್ಲಿ ಸೋನಮ್ ವಾಂಗ್ಚುಕ್ ಹಾಗೂ ಕಾಕ್ರೋಚ್ ಜನತಾ ಪಾರ್ಟಿ (CJP) ಯುವಜನರು ನಡೆಸುತ್ತಿರುವ ಹೋರಾಟದ ಮೈದಾನದಿಂದ ಆತಂಕಕಾರಿ ವರದಿಗಳು...