Homeಕರ್ನಾಟಕಕೆಚ್ಚಲು ಕೊಯ್ದ ಪ್ರಕರಣ - ಸಂತ್ರಸ್ತರಿಗೆ ಮೂರು ಹಸುಗಳನ್ನು ನೀಡಿದ ಸಚಿವ ಜಮೀರ್‌ ಅಹ್ಮದ್

ಕೆಚ್ಚಲು ಕೊಯ್ದ ಪ್ರಕರಣ – ಸಂತ್ರಸ್ತರಿಗೆ ಮೂರು ಹಸುಗಳನ್ನು ನೀಡಿದ ಸಚಿವ ಜಮೀರ್‌ ಅಹ್ಮದ್

- Advertisement -
- Advertisement -

ಚಾಮರಾಜಪೇಟೆಯ ವಿನಾಯಕ ನಗರದಲ್ಲಿ ನಡೆದ ಹಸುವಿನ ಕೆಚ್ಚಲು ಕೊಯ್ದ ಘಟನೆ ಹಿನ್ನೆಲೆಯಲ್ಲಿ ಹಸುವಿನ ಮಾಲೀಕ ಕರ್ಣ ಅವರ ತಾಯಿ ಸವರಿ ಅಮ್ಮಳ್, ಸಹೋದರಿ ಅಮುದಾ ಅವರಿಗೆ ಸಚಿವ ಜಮೀರ್ ಅಹಮದ್ ಖಾನ್ ಅವರು ಮೂರು ಲಕ್ಷ ರೂ. ವೆಚ್ಚದಲ್ಲಿ ಮೂರು ಹಸು ಖರೀದಿಸಿ ನೀಡಿದ್ದಾರೆ. ಕೆಚ್ಚಲು ಕೊಯ್ದ ಪ್ರಕರಣ

ಅಘಾತಕಾರಿ ಘಟನೆಯಲ್ಲಿ ದುಷ್ಕರ್ಮಿಯು ಎರಡು ಹಸುಗಳ ಕೆಚ್ಚಲು ಕೊಯ್ದು, ಮತ್ತೊಂದು ಹಸುವಿಗೆ ಗಾಯಗೊಳಿಸಿದ್ದನು. ಆರೋಪಿಯನ್ನು ಬೆಂಗಳೂರು ಪೊಲೀಸರು ಭಾನುವಾರ ರಾತ್ರಿ ಬಂಧಿಸಿದ್ದಾರೆ. ಆತನನ್ನು ಬಿಹಾರದ ಚಂಪಾರಣ್ ಜಿಲ್ಲೆಯ ಶೇಖ್ ನಸ್ರು ಎಂದು ಗುರುತಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.

ಜಮೀರ್ ಅವರ ನಡೆಯ ಬಗ್ಗೆ ಮಾತನಾಡಿದ ಅಮುದಾ, “ಹಸು ನಿರಾಕರಿಸಿದ ನನ್ನ ಸಹೋದರನ ಪರವಾಗಿ ನಾನು ಕ್ಷಮೆ ಕೋರುತ್ತೇನೆ. ಜಮೀರಣ್ಣ ಅವರು ಒಳ್ಳೆ ಮನಸ್ಸಿನಿಂದ ಹಸು ಕೊಡಿಸಿದ್ದಾರೆ. ಕೆಲವರು ಇದರಲ್ಲಿ ರಾಜಕಾರಣ ಮಾಡುತ್ತಿದ್ದು, ನಾವು ಶಾಸಕರ ಜತೆ ಇದ್ದೇವೆ” ಎಂದು ಹೇಳಿದ್ದಾರೆ. ಕೆಚ್ಚಲು ಕೊಯ್ದ ಪ್ರಕರಣ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಆರೋಪಿಯನ್ನು ಜನವರಿ 25 ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ವರದಿ ಹೇಳಿದೆ. ಹಸುಗಳ ಮೇಲೆ ದಾಳಿ ಮಾಡುವಾಗ ಆರೋಪಿಯು ಕುಡಿದಿದ್ದ ಎಂದು ಪೊಲೀಸರ (ಪಶ್ಚಿಮ) ಉಪ ಆಯುಕ್ತ ಎಸ್. ಗಿರೀಶ್ ಹೇಳಿದ್ದಾಗಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಘಟನೆ ನಡೆದ ಸ್ಥಳದಿಂದ 50 ಮೀಟರ್ ದೂರದಲ್ಲಿರುವ ಪ್ಲಾಸ್ಟಿಕ್ ಮತ್ತು ಬಟ್ಟೆ ಚೀಲ ಹೊಲಿಗೆ ಅಂಗಡಿಯಲ್ಲಿ ನಸ್ರು ಸಹಾಯಕನಾಗಿ ಕೆಲಸ ಮಾಡುತ್ತಿದ್ದ ಎಂದು ಗಿರೀಶ್ ಹೇಳಿದ್ದಾರೆ. ದುಷ್ಕೃತ್ಯದಲ್ಲಿ ಬೇರೆ ಯಾರೂ ಭಾಗಿಯಾಗಿಲ್ಲ ಎಂದು ಅವರು ಹೇಳಿದ್ದಾರೆ. ಹಸುಗಳಿಗೆ ಚಿಕಿತ್ಸೆ ನೀಡಲಾಗಿದ್ದು, ಪ್ರಸ್ತುತ ಅಪಾಯದಿಂದ ಪಾರಾಗಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಬೆಂಗಳೂರು

ಭಾನುವಾರ ಬೆಳಗಿನ ಜಾವ ಈ ಘಟನೆ ನಡೆದಿದೆ ಎಂದು ಹಾಲು ಮಾರಾಟಗಾರರಾಗಿರುವ ಹಸುಗಳ ಮಾಲೀಕ ಸುದ್ದಿಗಾರರಿಗೆ ತಿಳಿಸಿದ್ದಾರೆ. ಬೆಳಿಗ್ಗೆ ಹಾಲು ಕರೆಯಲು ತೆರಳಿದಾಗ ಹಸುಗಳ ಕೆಚ್ಚಲಿನಲ್ಲಿ ರಕ್ತಸ್ರಾವವಾಗುತ್ತಿತ್ತು ಎಂದು ಅವರು ಹೇಳಿದ್ದಾರೆ.

ಘಟನೆ ಬೆಳಕಿಗೆ ಬಂದ ಕೂಡಲೇ ಬಿಜೆಪಿ ಪ್ರತಿಭಟನೆ ನಡೆಸಿದ್ದು, ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಘಟನೆಯ ಹಿಂದೆ ಇರುವ ಜಿಹಾದಿಗಳ ವಿರುದ್ಧ ಸರ್ಕಾರ ಕಠಿಣ ಕ್ರಮ ಕೈಗೊಳ್ಳದಿದ್ದರೆ ನಾವು ‘ಕಪ್ಪು ಸಂಕ್ರಾಂತಿ’ ಆಚರಿಸುತ್ತೇವೆ ಎಂದು ಅಶೋಕ್ ಹೇಳಿದ್ದರು.

ಇದನ್ನೂಓದಿ:  ಹುಟ್ಟುಹಬ್ಬದ ನೆಪದಲ್ಲಿ ಕರೆಸಿ ಅಪ್ರಾಪ್ತೆಯ ಮೇಲೆ ಅತ್ಯಾಚಾರ

ಹುಟ್ಟುಹಬ್ಬದ ನೆಪದಲ್ಲಿ ಕರೆಸಿ ಅಪ್ರಾಪ್ತೆಯ ಮೇಲೆ ಅತ್ಯಾಚಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...