Homeಮುಖಪುಟಆಕ್ಸಿಜನ್ ಕೊರತೆ ಕುರಿತು ಪ್ರಧಾನಿಗೆ ಕರೆ ಮಾಡಿದ ಉದ್ಧವ್ ಠಾಕ್ರೆ: ಬಂಗಾಳ ಚುನಾವಣಾ ಪ್ರಚಾರದಲ್ಲಿದ್ದಾರೆ ಎಂದ...

ಆಕ್ಸಿಜನ್ ಕೊರತೆ ಕುರಿತು ಪ್ರಧಾನಿಗೆ ಕರೆ ಮಾಡಿದ ಉದ್ಧವ್ ಠಾಕ್ರೆ: ಬಂಗಾಳ ಚುನಾವಣಾ ಪ್ರಚಾರದಲ್ಲಿದ್ದಾರೆ ಎಂದ ಪಿಎಂಒ!

- Advertisement -
- Advertisement -

ರಾಜ್ಯದಲ್ಲಿ ಮಿತಿಮೀರಿರುವ ಕೊರೊನಾ ಪ್ರಕರಣಗಳನ್ನು ನಿಭಾಯಿಸಲು ಆಕ್ಸಿಜನ್ ಮತ್ತು ರೆಮ್‌ಡಿಸಿವಿರ್‌ ಔಷಧಿ ಕೊರತೆ ಕುರಿತು ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆಯವರು  ಪ್ರಧಾನಿಮಂತ್ರಿ ಮೋದಿಯವರೊಂದಿಗೆ ಮಾತನಾಡಲು ಪ್ರಯತ್ನಿಸಿದರೆ ಪ್ರಧಾನಿ ಬಂಗಾಳ ಪ್ರಚರದಲ್ಲಿದ್ದಾರೆ ಎಂಬ ಉತ್ತರ ಬಂದಿದೆ ಎಂದು ಮಹಾರಾಷ್ಟ್ರ ಸಚಿವ ನವಾಬ್ ಮಲ್ಲಿಕ್ ಆರೋಪಿಸಿದ್ದಾರೆ.

ಮಹಾರಾಷ್ಟ್ರದಲ್ಲಿ ಪರಿಸ್ಥಿತಿ ಕೈಮೀರುತ್ತಿದೆ. ನಮಗೆ ಆಮ್ಲಜನಕ ಮತ್ತು ರೆಮ್‌ಡಿಸಿವಿರ್‌ ಔಷಧಿಯ ಕೊರತೆಯುಂಟಾಗಿದೆ. ಈ ಕುರಿತು ಪ್ರಧಾನಿಯವರ ಸಹಾಯಕ್ಕಾಗಿ ಮುಖ್ಯಮಂತ್ರಿಗಳು ದೂರವಾಣಿ ಮೂಲಕ ಪ್ರಧಾನಿ ಕಾರ್ಯಾಲಯವನ್ನು ಸಂಪರ್ಕಿಸಿದರೆ ಪಿಎಂ ಬಂಗಾಳ ಪ್ರಚಾರದಲ್ಲಿದ್ದಾರೆ ಎಂಬ ಉತ್ತರ ಬರುತ್ತದೆ. ಇಲ್ಲಿ ಜನ ಸಾಯುತ್ತಿದ್ದರೆ ಮೋದಿ ಚುನಾವಣಾ ಪ್ರಚಾರದಲ್ಲಿದ್ದಾರೆ ಎಂದು ನವಾಬ್ ಮಲ್ಲಿಕ್ ಕಿಡಿಕಾರಿದ್ದಾರೆ.

ಆದರೆ ಪಿಎಂಒ ನವಾಬ್ ‌ಮಲ್ಲಿಕ್‌ರವರ ಆರೋಪಗಳನ್ನು ನಿರಾಕರಿಸಿದೆ. ಪ್ರಧಾನಿಯವರು ಶುಕ್ರವಾರದವರೆಗೂ ಕೊರೊನಾ ಕುರಿತು ಸಭೆ ನಡೆಸಿದ್ದಾರೆ. ರಾಜ್ಯಗಳೊಂದಿಗೆ ನಿರಂತರ ಸಂಪರ್ಕದಲ್ಲಿದ್ದು ಆಮ್ಲಜನಕ ಪೂರೈಕೆ ಮಾಡುತ್ತಿದ್ದಾರೆ ಎಂದಿದೆ.

ಬಂಗಾಳದ ಟಿಎಂಸಿ ನಾಯಕ ಡೆರೆಕ್ ಓ’ಬ್ರಿಯಾನ್ ಪ್ರತಿಕ್ರಿಯಿಸಿ “ಇದು ಆಘಾತಕಾರಿ ಬೆಳವಣಿಗೆ. ರಾಜ್ಯದ ಮುಖ್ಯಮಂತ್ರಿಯೊಬ್ಬರು ಆಮ್ಲಜನಕಕ್ಕಾಗಿ ಸಹಾಯ ಕೇಳಿದರೆ ಪ್ರಧಾನಿ ಪ್ರಚಾರದಲ್ಲಿದ್ದಾರೆ ಎಂದು ಹೇಳುವುದೇ? ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಕೇಂದ್ರ ರೈಲ್ವೆ ಸಚಿವ ಪಿಯೂಷ್ ಗೋಯಲ್ ಪ್ರತಿಕ್ರಿಯಿಸಿ “ಇದು ಕೀಳು ಮಟ್ಟದ ರಾಜಕೀಯ” ಎಂದು ಟೀಕಿಸಿದ್ದಾರೆ. ಅಲ್ಲದೇ ಮಹಾರಾಷ್ಟ್ರ ಸರ್ಕಾರವನ್ನು “ಅಸಮರ್ಥ ಮತ್ತು ಭ್ರಷ್ಟ” ಎಂದು ಕರೆದಿದ್ದಾರೆ.

“ಮಹಾರಾಷ್ಟ್ರ ಇದುವರೆಗೆ ಭಾರತದಲ್ಲಿ ಅತಿ ಹೆಚ್ಚು ಪ್ರಮಾಣದ ಆಮ್ಲಜನಕವನ್ನು ಪಡೆದಿದೆ … ಕೇಂದ್ರವು ರಾಜ್ಯಗಳೊಂದಿಗೆ ದೈನಂದಿನ ಸಂಪರ್ಕದಲ್ಲಿದೆ … ನಿನ್ನೆ ಪಿಎಂ ಮೋದಿ ಕೇಂದ್ರ ಮತ್ತು ರಾಜ್ಯಗಳಿಗೆ ಒಟ್ಟಾಗಿ ಕೆಲಸ ಮಾಡುವಂತೆ ಹೇಳಿದರು … ಉದ್ಧವ್ ಠಾಕ್ರೆ ಅವರು ನಡೆಸುತ್ತಿರುವ ಕೀಳು ರಾಜಕೀಯವನ್ನು ನೋಡಿ ಬೇಸರವಾಗಿದೆ” ಎಂದು ಗೋಯಲ್ ಟ್ವೀಟ್ ಮಾಡಿದ್ದಾರೆ.

ಕೇಂದ್ರ ಆರೋಗ್ಯ ಸಚಿವ ಡಾ. ಹರ್ಷ ವರ್ಧನ್ ಟ್ವೀಟ್ ಮಾಡಿ “ನಾನು ಮಹಾರಾಷ್ಟ್ರ ಮುಖ್ಯಮಂತ್ರಿಗಳೊಂದಿಗೆ ಮಾತನಾಡಿದ್ದೇನೆ. ಅತ್ಯಂತ ಹೆಚ್ಚು ಹಾನಿಗೊಳಗಾದ ಮಹಾರಾಷ್ಟ್ರಕ್ಕೆ “ವೈದ್ಯಕೀಯ ಆಮ್ಲಜನಕದ ಸಮರ್ಪಕ ಮತ್ತು ನಿರಂತರ ಪೂರೈಕೆ” ಸಿಗುತ್ತದೆ ಮತ್ತು ಕೇಂದ್ರವು 1,121 ವೆಂಟಿಲೇಟರ್‌ಗಳನ್ನು ಕಳುಹಿಸುತ್ತದೆ ಎಂದು ಭರವಸೆ ನೀಡಿದ್ದೇನೆ” ಎಂದಿದ್ದಾರೆ.

“ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆಜಿ ಅವರೊಂದಿಗೆ ಮಾತನಾಡಿದ್ದೇನೆ… ವೈದ್ಯಕೀಯ ಆಮ್ಲಜನಕದ ಸಮರ್ಪಕ ಮತ್ತು ತಡೆರಹಿತ ಪೂರೈಕೆ ಮತ್ತು ಆರೋಗ್ಯ ಮೂಲಸೌಕರ್ಯ, ಔಷಧಿಗಳು ಮತ್ತು ಚಿಕಿತ್ಸಕಗಳಿಗೆ ಸಂಬಂಧಿಸಿದಂತೆ ಎಲ್ಲ ರೀತಿಯ ಬೆಂಬಲವನ್ನು ನೀಡುವುದಾಗಿ ಭರವಸೆ ನೀಡಿದ್ದೇನೆ” ಎಂದು ಡಾ. ಹರ್ಷವರ್ಧನ್ ಟ್ವೀಟ್ ಮಾಡಿದ್ದಾರೆ.


ಇದನ್ನೂ ಓದಿ: ‘ಮಹಾರಾಷ್ಟ್ರಕ್ಕೆ ರೆಮ್‌ಡಿಸಿವಿರ್ ನೀಡಿದರೆ ಲೈಸನ್ಸ್‌ ರದ್ದು ಮಾಡುತ್ತೇವೆಂದು ಕಂಪನಿಗಳಿಗೆ ಕೇಂದ್ರ ಬೆದರಿಕೆ’

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...