Homeಮುಖಪುಟಆಕ್ಸಿಜನ್ ಕೊರತೆ ಕುರಿತು ಪ್ರಧಾನಿಗೆ ಕರೆ ಮಾಡಿದ ಉದ್ಧವ್ ಠಾಕ್ರೆ: ಬಂಗಾಳ ಚುನಾವಣಾ ಪ್ರಚಾರದಲ್ಲಿದ್ದಾರೆ ಎಂದ...

ಆಕ್ಸಿಜನ್ ಕೊರತೆ ಕುರಿತು ಪ್ರಧಾನಿಗೆ ಕರೆ ಮಾಡಿದ ಉದ್ಧವ್ ಠಾಕ್ರೆ: ಬಂಗಾಳ ಚುನಾವಣಾ ಪ್ರಚಾರದಲ್ಲಿದ್ದಾರೆ ಎಂದ ಪಿಎಂಒ!

- Advertisement -
- Advertisement -

ರಾಜ್ಯದಲ್ಲಿ ಮಿತಿಮೀರಿರುವ ಕೊರೊನಾ ಪ್ರಕರಣಗಳನ್ನು ನಿಭಾಯಿಸಲು ಆಕ್ಸಿಜನ್ ಮತ್ತು ರೆಮ್‌ಡಿಸಿವಿರ್‌ ಔಷಧಿ ಕೊರತೆ ಕುರಿತು ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆಯವರು  ಪ್ರಧಾನಿಮಂತ್ರಿ ಮೋದಿಯವರೊಂದಿಗೆ ಮಾತನಾಡಲು ಪ್ರಯತ್ನಿಸಿದರೆ ಪ್ರಧಾನಿ ಬಂಗಾಳ ಪ್ರಚರದಲ್ಲಿದ್ದಾರೆ ಎಂಬ ಉತ್ತರ ಬಂದಿದೆ ಎಂದು ಮಹಾರಾಷ್ಟ್ರ ಸಚಿವ ನವಾಬ್ ಮಲ್ಲಿಕ್ ಆರೋಪಿಸಿದ್ದಾರೆ.

ಮಹಾರಾಷ್ಟ್ರದಲ್ಲಿ ಪರಿಸ್ಥಿತಿ ಕೈಮೀರುತ್ತಿದೆ. ನಮಗೆ ಆಮ್ಲಜನಕ ಮತ್ತು ರೆಮ್‌ಡಿಸಿವಿರ್‌ ಔಷಧಿಯ ಕೊರತೆಯುಂಟಾಗಿದೆ. ಈ ಕುರಿತು ಪ್ರಧಾನಿಯವರ ಸಹಾಯಕ್ಕಾಗಿ ಮುಖ್ಯಮಂತ್ರಿಗಳು ದೂರವಾಣಿ ಮೂಲಕ ಪ್ರಧಾನಿ ಕಾರ್ಯಾಲಯವನ್ನು ಸಂಪರ್ಕಿಸಿದರೆ ಪಿಎಂ ಬಂಗಾಳ ಪ್ರಚಾರದಲ್ಲಿದ್ದಾರೆ ಎಂಬ ಉತ್ತರ ಬರುತ್ತದೆ. ಇಲ್ಲಿ ಜನ ಸಾಯುತ್ತಿದ್ದರೆ ಮೋದಿ ಚುನಾವಣಾ ಪ್ರಚಾರದಲ್ಲಿದ್ದಾರೆ ಎಂದು ನವಾಬ್ ಮಲ್ಲಿಕ್ ಕಿಡಿಕಾರಿದ್ದಾರೆ.

ಆದರೆ ಪಿಎಂಒ ನವಾಬ್ ‌ಮಲ್ಲಿಕ್‌ರವರ ಆರೋಪಗಳನ್ನು ನಿರಾಕರಿಸಿದೆ. ಪ್ರಧಾನಿಯವರು ಶುಕ್ರವಾರದವರೆಗೂ ಕೊರೊನಾ ಕುರಿತು ಸಭೆ ನಡೆಸಿದ್ದಾರೆ. ರಾಜ್ಯಗಳೊಂದಿಗೆ ನಿರಂತರ ಸಂಪರ್ಕದಲ್ಲಿದ್ದು ಆಮ್ಲಜನಕ ಪೂರೈಕೆ ಮಾಡುತ್ತಿದ್ದಾರೆ ಎಂದಿದೆ.

ಬಂಗಾಳದ ಟಿಎಂಸಿ ನಾಯಕ ಡೆರೆಕ್ ಓ’ಬ್ರಿಯಾನ್ ಪ್ರತಿಕ್ರಿಯಿಸಿ “ಇದು ಆಘಾತಕಾರಿ ಬೆಳವಣಿಗೆ. ರಾಜ್ಯದ ಮುಖ್ಯಮಂತ್ರಿಯೊಬ್ಬರು ಆಮ್ಲಜನಕಕ್ಕಾಗಿ ಸಹಾಯ ಕೇಳಿದರೆ ಪ್ರಧಾನಿ ಪ್ರಚಾರದಲ್ಲಿದ್ದಾರೆ ಎಂದು ಹೇಳುವುದೇ? ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಕೇಂದ್ರ ರೈಲ್ವೆ ಸಚಿವ ಪಿಯೂಷ್ ಗೋಯಲ್ ಪ್ರತಿಕ್ರಿಯಿಸಿ “ಇದು ಕೀಳು ಮಟ್ಟದ ರಾಜಕೀಯ” ಎಂದು ಟೀಕಿಸಿದ್ದಾರೆ. ಅಲ್ಲದೇ ಮಹಾರಾಷ್ಟ್ರ ಸರ್ಕಾರವನ್ನು “ಅಸಮರ್ಥ ಮತ್ತು ಭ್ರಷ್ಟ” ಎಂದು ಕರೆದಿದ್ದಾರೆ.

“ಮಹಾರಾಷ್ಟ್ರ ಇದುವರೆಗೆ ಭಾರತದಲ್ಲಿ ಅತಿ ಹೆಚ್ಚು ಪ್ರಮಾಣದ ಆಮ್ಲಜನಕವನ್ನು ಪಡೆದಿದೆ … ಕೇಂದ್ರವು ರಾಜ್ಯಗಳೊಂದಿಗೆ ದೈನಂದಿನ ಸಂಪರ್ಕದಲ್ಲಿದೆ … ನಿನ್ನೆ ಪಿಎಂ ಮೋದಿ ಕೇಂದ್ರ ಮತ್ತು ರಾಜ್ಯಗಳಿಗೆ ಒಟ್ಟಾಗಿ ಕೆಲಸ ಮಾಡುವಂತೆ ಹೇಳಿದರು … ಉದ್ಧವ್ ಠಾಕ್ರೆ ಅವರು ನಡೆಸುತ್ತಿರುವ ಕೀಳು ರಾಜಕೀಯವನ್ನು ನೋಡಿ ಬೇಸರವಾಗಿದೆ” ಎಂದು ಗೋಯಲ್ ಟ್ವೀಟ್ ಮಾಡಿದ್ದಾರೆ.

ಕೇಂದ್ರ ಆರೋಗ್ಯ ಸಚಿವ ಡಾ. ಹರ್ಷ ವರ್ಧನ್ ಟ್ವೀಟ್ ಮಾಡಿ “ನಾನು ಮಹಾರಾಷ್ಟ್ರ ಮುಖ್ಯಮಂತ್ರಿಗಳೊಂದಿಗೆ ಮಾತನಾಡಿದ್ದೇನೆ. ಅತ್ಯಂತ ಹೆಚ್ಚು ಹಾನಿಗೊಳಗಾದ ಮಹಾರಾಷ್ಟ್ರಕ್ಕೆ “ವೈದ್ಯಕೀಯ ಆಮ್ಲಜನಕದ ಸಮರ್ಪಕ ಮತ್ತು ನಿರಂತರ ಪೂರೈಕೆ” ಸಿಗುತ್ತದೆ ಮತ್ತು ಕೇಂದ್ರವು 1,121 ವೆಂಟಿಲೇಟರ್‌ಗಳನ್ನು ಕಳುಹಿಸುತ್ತದೆ ಎಂದು ಭರವಸೆ ನೀಡಿದ್ದೇನೆ” ಎಂದಿದ್ದಾರೆ.

“ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆಜಿ ಅವರೊಂದಿಗೆ ಮಾತನಾಡಿದ್ದೇನೆ… ವೈದ್ಯಕೀಯ ಆಮ್ಲಜನಕದ ಸಮರ್ಪಕ ಮತ್ತು ತಡೆರಹಿತ ಪೂರೈಕೆ ಮತ್ತು ಆರೋಗ್ಯ ಮೂಲಸೌಕರ್ಯ, ಔಷಧಿಗಳು ಮತ್ತು ಚಿಕಿತ್ಸಕಗಳಿಗೆ ಸಂಬಂಧಿಸಿದಂತೆ ಎಲ್ಲ ರೀತಿಯ ಬೆಂಬಲವನ್ನು ನೀಡುವುದಾಗಿ ಭರವಸೆ ನೀಡಿದ್ದೇನೆ” ಎಂದು ಡಾ. ಹರ್ಷವರ್ಧನ್ ಟ್ವೀಟ್ ಮಾಡಿದ್ದಾರೆ.


ಇದನ್ನೂ ಓದಿ: ‘ಮಹಾರಾಷ್ಟ್ರಕ್ಕೆ ರೆಮ್‌ಡಿಸಿವಿರ್ ನೀಡಿದರೆ ಲೈಸನ್ಸ್‌ ರದ್ದು ಮಾಡುತ್ತೇವೆಂದು ಕಂಪನಿಗಳಿಗೆ ಕೇಂದ್ರ ಬೆದರಿಕೆ’

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಿಶಾ ಸಾಲ್ಯಾನ್ ಸಾವು ಪ್ರಕರಣ: ಸಿಬಿಐ ತನಿಖೆಗೆ ಬಾಂಬೆ ಹೈಕೋರ್ಟ್ ಆದೇಶ

ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ಆಗಿದ್ದ ದಿಶಾ ಸಾಲಿಯಾನ್ ಅವರ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಂಬೆ ಹೈಕೋರ್ಟ್ ಬುಧವಾರ (ಸೆಪ್ಟೆಂಬರ್ 2) ಸಿಬಿಐ ತನಿಖೆಗೆ ಆದೇಶಿಸಿದೆ. ಜೂನ್...

ಸಂವಿಧಾನ ಬದಲಿಸಿ ಮನುಸ್ಮೃತಿ ತರಲು SIR ಷಡ್ಯಂತ್ರ: ನಟ ಕಿಶೋರ್

ದೇಶದ ಬಹುಕೋಟಿ ಉದ್ಯಮಿ ಗೌತಮ್ ಅದಾನಿಯದ್ದೇ ಇರಲಿ ಅಥವಾ ಒಬ್ಬ ಬಡ ರೈತನದ್ದೇ ಇರಲಿ, ಪ್ರಜಾಪ್ರಭುತ್ವದಲ್ಲಿ ಎಲ್ಲರ ಮತವೂ ಒಂದೇ ಸಮ. ಪ್ರಜೆಗಳನ್ನೆಲ್ಲ ಸಮಾನವಾಗಿ ಕಾಣುವ ಏಕೈಕ ಅಸ್ತ್ರ ಎಂದರೆ ಅದು ಮತದಾನದ...

Nepal: ಭೀಕರ ಪ್ರವಾಹಕ್ಕೆ ಸವಾಲೆಸೆದು ನಿಂತ ‘ಗ್ರೀನ್ ಹೌಸ್’ ಸ್ಟೋರಿ

'ನಮ್ಮ ಬದುಕು ಇಷ್ಟಕ್ಕೇ ಅಂತ್ಯವಾಯಿತು ಎನಿಸುವ ಕ್ಷಣಗಳು ಎದುರಾದಾಗ ಮನಸ್ಸಿನಲ್ಲಿ ಏನು ಓಡಬಹುದು? ಪ್ರವಾಹ ಬಂದಾಗ ನನಗೂ ಅದೇ ಅನಿಸಿತ್ತು' ಇದು ನೇಪಾಳದ ನುವಾಕೋಟ್ ಜಿಲ್ಲೆಯ ತ್ರಿಶೂಲಿ ನದಿಯಲ್ಲಿ ಹರಿದುಬಂದ ಭೀಕರ ಪ್ರವಾಹದಿಂದ...

NEET: ದೇಶಾದ್ಯಂತ ಪ್ರತಿಭಟನಾಕಾರರ ವಿರುದ್ದ ದಾಖಲಾಗಿದ್ದ ಎಲ್ಲಾ FIRಗಳನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಮರುಪರೀಕ್ಷೆ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ಯ (CJP) ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಲ್ಲಾ FIR ಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿದೆ. ಕೇಂದ್ರ ಸರ್ಕಾರವು ಈ...

ಚುನಾವಣಾ ಆಯೋಗ ಚಲೋ: ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು SIR ಸಂತ್ರಸ್ತರು, ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

ಕರ್ನಾಟಕ ರಾಜ್ಯದ ಅರ್ಹ ಮತದಾರರ ‘ಮತಹರಣ’ ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಮ್ಮಿಕೊಂಡಿದ್ದ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್, ಕಿಶೋರ್ ಹಾಗೂ ಪ್ರಮುಖ ನಾಯಕರು ಸೇರಿದಂತೆ...

‘ಚುನಾವಣಾ ಆಯೋಗ ಚಲೋ’: ‘ಮುಚ್ಚಿದ ಬಾಗಿಲಿನ ಮಾತುಕತೆ ಬೇಡ, ಎಲ್ಲವೂ ಸಾರ್ವಜನಿಕರ ಮುಂದೆಯೇ ಇತ್ಯರ್ಥವಾಗಬೇಕು’: ನೂರ್ ಶ್ರೀಧರ್ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ರಾಜ್ಯದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಬೃಹತ್ ಕಳವಳವನ್ನು ಸೃಷ್ಟಿಸಿದೆ. ಕೇಂದ್ರ ಚುನಾವಣಾ ಆಯೋಗವು ಬಿಡುಗಡೆ ಮಾಡಿರುವ ನೂತನ ಕರಡು ಮತದಾರರ...

SIR ಎಂಬುದು ಪ್ರಜಾಪ್ರಭುತ್ವವನ್ನು ಹಾಳುಮಾಡುವ ದೊಡ್ಡ ಸಂಚು ಮತ್ತು ಮೋಸ: ಪ್ರಕಾಶ್ ರಾಜ್

"ನಾನು ಸಣ್ಣವನಿದ್ದಾಗ ಮುಕ್ಕೂಟಿ ಕನ್ನಡಿಗರು ಎನ್ನುತ್ತಿದ್ದರು. ದಶಕಗಳ ನಂತರ ಪಂಚಕೋಟಿ ಕನ್ನಡಿಗರಾಗಿ, ಈಗ ಶತಕೋಟಿ ಆಗಬೇಕಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಸಾಂದ್ರ ಪರಿಷ್ಕರಣೆ (SIR) ಹೆಸರಿನಲ್ಲಿ ಮತ್ತೆ ಮುಕ್ಕೂಟಿಗೆ ತಂದು ನಿಲ್ಲಿಸಲಾಗುತ್ತಿದೆ....

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...