Homeಮುಖಪುಟಆಕ್ಸಿಜನ್ ಕೊರತೆ ಕುರಿತು ಪ್ರಧಾನಿಗೆ ಕರೆ ಮಾಡಿದ ಉದ್ಧವ್ ಠಾಕ್ರೆ: ಬಂಗಾಳ ಚುನಾವಣಾ ಪ್ರಚಾರದಲ್ಲಿದ್ದಾರೆ ಎಂದ...

ಆಕ್ಸಿಜನ್ ಕೊರತೆ ಕುರಿತು ಪ್ರಧಾನಿಗೆ ಕರೆ ಮಾಡಿದ ಉದ್ಧವ್ ಠಾಕ್ರೆ: ಬಂಗಾಳ ಚುನಾವಣಾ ಪ್ರಚಾರದಲ್ಲಿದ್ದಾರೆ ಎಂದ ಪಿಎಂಒ!

- Advertisement -
- Advertisement -

ರಾಜ್ಯದಲ್ಲಿ ಮಿತಿಮೀರಿರುವ ಕೊರೊನಾ ಪ್ರಕರಣಗಳನ್ನು ನಿಭಾಯಿಸಲು ಆಕ್ಸಿಜನ್ ಮತ್ತು ರೆಮ್‌ಡಿಸಿವಿರ್‌ ಔಷಧಿ ಕೊರತೆ ಕುರಿತು ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆಯವರು  ಪ್ರಧಾನಿಮಂತ್ರಿ ಮೋದಿಯವರೊಂದಿಗೆ ಮಾತನಾಡಲು ಪ್ರಯತ್ನಿಸಿದರೆ ಪ್ರಧಾನಿ ಬಂಗಾಳ ಪ್ರಚರದಲ್ಲಿದ್ದಾರೆ ಎಂಬ ಉತ್ತರ ಬಂದಿದೆ ಎಂದು ಮಹಾರಾಷ್ಟ್ರ ಸಚಿವ ನವಾಬ್ ಮಲ್ಲಿಕ್ ಆರೋಪಿಸಿದ್ದಾರೆ.

ಮಹಾರಾಷ್ಟ್ರದಲ್ಲಿ ಪರಿಸ್ಥಿತಿ ಕೈಮೀರುತ್ತಿದೆ. ನಮಗೆ ಆಮ್ಲಜನಕ ಮತ್ತು ರೆಮ್‌ಡಿಸಿವಿರ್‌ ಔಷಧಿಯ ಕೊರತೆಯುಂಟಾಗಿದೆ. ಈ ಕುರಿತು ಪ್ರಧಾನಿಯವರ ಸಹಾಯಕ್ಕಾಗಿ ಮುಖ್ಯಮಂತ್ರಿಗಳು ದೂರವಾಣಿ ಮೂಲಕ ಪ್ರಧಾನಿ ಕಾರ್ಯಾಲಯವನ್ನು ಸಂಪರ್ಕಿಸಿದರೆ ಪಿಎಂ ಬಂಗಾಳ ಪ್ರಚಾರದಲ್ಲಿದ್ದಾರೆ ಎಂಬ ಉತ್ತರ ಬರುತ್ತದೆ. ಇಲ್ಲಿ ಜನ ಸಾಯುತ್ತಿದ್ದರೆ ಮೋದಿ ಚುನಾವಣಾ ಪ್ರಚಾರದಲ್ಲಿದ್ದಾರೆ ಎಂದು ನವಾಬ್ ಮಲ್ಲಿಕ್ ಕಿಡಿಕಾರಿದ್ದಾರೆ.

ಆದರೆ ಪಿಎಂಒ ನವಾಬ್ ‌ಮಲ್ಲಿಕ್‌ರವರ ಆರೋಪಗಳನ್ನು ನಿರಾಕರಿಸಿದೆ. ಪ್ರಧಾನಿಯವರು ಶುಕ್ರವಾರದವರೆಗೂ ಕೊರೊನಾ ಕುರಿತು ಸಭೆ ನಡೆಸಿದ್ದಾರೆ. ರಾಜ್ಯಗಳೊಂದಿಗೆ ನಿರಂತರ ಸಂಪರ್ಕದಲ್ಲಿದ್ದು ಆಮ್ಲಜನಕ ಪೂರೈಕೆ ಮಾಡುತ್ತಿದ್ದಾರೆ ಎಂದಿದೆ.

ಬಂಗಾಳದ ಟಿಎಂಸಿ ನಾಯಕ ಡೆರೆಕ್ ಓ’ಬ್ರಿಯಾನ್ ಪ್ರತಿಕ್ರಿಯಿಸಿ “ಇದು ಆಘಾತಕಾರಿ ಬೆಳವಣಿಗೆ. ರಾಜ್ಯದ ಮುಖ್ಯಮಂತ್ರಿಯೊಬ್ಬರು ಆಮ್ಲಜನಕಕ್ಕಾಗಿ ಸಹಾಯ ಕೇಳಿದರೆ ಪ್ರಧಾನಿ ಪ್ರಚಾರದಲ್ಲಿದ್ದಾರೆ ಎಂದು ಹೇಳುವುದೇ? ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಕೇಂದ್ರ ರೈಲ್ವೆ ಸಚಿವ ಪಿಯೂಷ್ ಗೋಯಲ್ ಪ್ರತಿಕ್ರಿಯಿಸಿ “ಇದು ಕೀಳು ಮಟ್ಟದ ರಾಜಕೀಯ” ಎಂದು ಟೀಕಿಸಿದ್ದಾರೆ. ಅಲ್ಲದೇ ಮಹಾರಾಷ್ಟ್ರ ಸರ್ಕಾರವನ್ನು “ಅಸಮರ್ಥ ಮತ್ತು ಭ್ರಷ್ಟ” ಎಂದು ಕರೆದಿದ್ದಾರೆ.

“ಮಹಾರಾಷ್ಟ್ರ ಇದುವರೆಗೆ ಭಾರತದಲ್ಲಿ ಅತಿ ಹೆಚ್ಚು ಪ್ರಮಾಣದ ಆಮ್ಲಜನಕವನ್ನು ಪಡೆದಿದೆ … ಕೇಂದ್ರವು ರಾಜ್ಯಗಳೊಂದಿಗೆ ದೈನಂದಿನ ಸಂಪರ್ಕದಲ್ಲಿದೆ … ನಿನ್ನೆ ಪಿಎಂ ಮೋದಿ ಕೇಂದ್ರ ಮತ್ತು ರಾಜ್ಯಗಳಿಗೆ ಒಟ್ಟಾಗಿ ಕೆಲಸ ಮಾಡುವಂತೆ ಹೇಳಿದರು … ಉದ್ಧವ್ ಠಾಕ್ರೆ ಅವರು ನಡೆಸುತ್ತಿರುವ ಕೀಳು ರಾಜಕೀಯವನ್ನು ನೋಡಿ ಬೇಸರವಾಗಿದೆ” ಎಂದು ಗೋಯಲ್ ಟ್ವೀಟ್ ಮಾಡಿದ್ದಾರೆ.

ಕೇಂದ್ರ ಆರೋಗ್ಯ ಸಚಿವ ಡಾ. ಹರ್ಷ ವರ್ಧನ್ ಟ್ವೀಟ್ ಮಾಡಿ “ನಾನು ಮಹಾರಾಷ್ಟ್ರ ಮುಖ್ಯಮಂತ್ರಿಗಳೊಂದಿಗೆ ಮಾತನಾಡಿದ್ದೇನೆ. ಅತ್ಯಂತ ಹೆಚ್ಚು ಹಾನಿಗೊಳಗಾದ ಮಹಾರಾಷ್ಟ್ರಕ್ಕೆ “ವೈದ್ಯಕೀಯ ಆಮ್ಲಜನಕದ ಸಮರ್ಪಕ ಮತ್ತು ನಿರಂತರ ಪೂರೈಕೆ” ಸಿಗುತ್ತದೆ ಮತ್ತು ಕೇಂದ್ರವು 1,121 ವೆಂಟಿಲೇಟರ್‌ಗಳನ್ನು ಕಳುಹಿಸುತ್ತದೆ ಎಂದು ಭರವಸೆ ನೀಡಿದ್ದೇನೆ” ಎಂದಿದ್ದಾರೆ.

“ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆಜಿ ಅವರೊಂದಿಗೆ ಮಾತನಾಡಿದ್ದೇನೆ… ವೈದ್ಯಕೀಯ ಆಮ್ಲಜನಕದ ಸಮರ್ಪಕ ಮತ್ತು ತಡೆರಹಿತ ಪೂರೈಕೆ ಮತ್ತು ಆರೋಗ್ಯ ಮೂಲಸೌಕರ್ಯ, ಔಷಧಿಗಳು ಮತ್ತು ಚಿಕಿತ್ಸಕಗಳಿಗೆ ಸಂಬಂಧಿಸಿದಂತೆ ಎಲ್ಲ ರೀತಿಯ ಬೆಂಬಲವನ್ನು ನೀಡುವುದಾಗಿ ಭರವಸೆ ನೀಡಿದ್ದೇನೆ” ಎಂದು ಡಾ. ಹರ್ಷವರ್ಧನ್ ಟ್ವೀಟ್ ಮಾಡಿದ್ದಾರೆ.


ಇದನ್ನೂ ಓದಿ: ‘ಮಹಾರಾಷ್ಟ್ರಕ್ಕೆ ರೆಮ್‌ಡಿಸಿವಿರ್ ನೀಡಿದರೆ ಲೈಸನ್ಸ್‌ ರದ್ದು ಮಾಡುತ್ತೇವೆಂದು ಕಂಪನಿಗಳಿಗೆ ಕೇಂದ್ರ ಬೆದರಿಕೆ’

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ವೇಳೆ ಮತಪಟ್ಟಿಯಿಂದ ಹೆಸರು ಡಿಲೀಟ್: ‘ದಿ ಟೆಲಿಗ್ರಾಫ್’ ಮಾಜಿ ಸಂಪಾದಕ ರಾಜಗೋಪಾಲ್ ಪಾಸ್‌ಪೋರ್ಟ್ ನವೀಕರಣಕ್ಕೆ ತಡೆ

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ವೇಳೆ ಮತದಾರರ ಪಟ್ಟಿಯಿಂದ ಹೆಸರು ತೆಗೆದುಹಾಕಿದ ಕಾರಣ ಪಾಸ್‌ಪೋರ್ಟ್ ನವೀಕರಿಸಲು ಆಗುತ್ತಿಲ್ಲ ಎಂದು ದೇಶದ ಖ್ಯಾತ ಇಂಗ್ಲಿಷ್ ದಿನಪತ್ರಿಕೆ ‘ದಿ ಟೆಲಿಗ್ರಾಫ್’ನ ಮಾಜಿ ಸಂಪಾದಕ ಆರ್. ರಾಜಗೋಪಾಲ್...

‘ಈಗಲೂ ಮಮತಾ ಬ್ಯಾನರ್ಜಿಯೇ ನಮ್ಮ ನಾಯಕಿ’ : ಟಿಎಂಸಿ ಬಂಡಾಯ ಬಣದ ಅಧ್ಯಕ್ಷ ಅರೂಪ್ ರಾಯ್ ಹೇಳಿಕೆ

"ಮಮತಾ ಬ್ಯಾನರ್ಜಿ ಅವರೇ ಇಂದಿಗೂ ನಮ್ಮ ನಾಯಕಿ. ಅವರೇ ಈ ಪಕ್ಷವನ್ನು ಸ್ಥಾಪಿಸಿದವರು. ಅವರೇ ನಮ್ಮ ಪಕ್ಷದ ಕಾಂದಾರಿ (ಮಾರ್ಗದರ್ಶಕರು ಅಥವಾ ಪಕ್ಷವನ್ನು ಮುನ್ನಡೆಸುವವರು). ಮಮತಾ ಬ್ಯಾನರ್ಜಿ ಅವರಿಂದಾಗಿಯೇ ನಾವು ಈ ಪಕ್ಷವನ್ನು...

ಪಶ್ಚಿಮ ಬಂಗಾಳದ ಆಹಾರ ಸಂಸ್ಕೃತಿಯನ್ನು ಗೌರವಿಸುತ್ತೇವೆ ಎಂಬ ಬಿಜೆಪಿಯ ಚುನಾವಣಾ ಭರವಸೆಗೆ ಈಗ ‘ಮೊಟ್ಟೆ’ ಮೊದಲ ಬಲಿ

ಚುನಾವಣಾ ಸಮಯದಲ್ಲಿ, ಬಿಜೆಪಿ ಪರಿಸ್ಥಿತಿಯನ್ನು ಮತ್ತು ಮೀನಿನ ಮಾರುಕಟ್ಟೆಯ ನಾಡಿಮಿಡಿತವನ್ನು ಸರಿಯಾಗಿಯೇ ಅರ್ಥಮಾಡಿಕೊಂಡಿತ್ತು. ಅವರ ನಾಯಕರು ಟಿವಿ ಕ್ಯಾಮೆರಾಗಳ ಮುಂದೆ ಮೀನುಗಳನ್ನು ಪ್ರದರ್ಶಿಸಿದರು ಮತ್ತು ಕುರಿ ಮಾಂಸದೂಟವನ್ನು ಸವಿದಿದ್ದರು. ಬಂಗಾಳಿಗಳ ತಟ್ಟೆಗೆ (ಆಹಾರಕ್ಕೆ)...

24 ಗಂಟೆಗೂ ಮೊದಲೇ ಮಹಾರಾಷ್ಟ್ರದಲ್ಲಿ TET ಪ್ರಶ್ನೆ ಪತ್ರಿಕೆ ಸೋರಿಕೆ: ರದ್ದಾದ ಪರೀಕ್ಷೆ

ಮಹಾರಾಷ್ಟ್ರದಲ್ಲಿ ಮತ್ತೊಂದು ಪರೀಕ್ಷಾ ಅಕ್ರಮದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಜೂನ್ 28ರ ಭಾನುವಾರ ನಡೆಯಬೇಕಿದ್ದ ‘ಶಿಕ್ಷಕರ ಅರ್ಹತಾ ಪರೀಕ್ಷೆ’ (TET) ಆರಂಭಕ್ಕೆ ಕೇವಲ 24 ಗಂಟೆಗಳ ಮುನ್ನವೇ ಪ್ರಶ್ನೆ ಪತ್ರಿಕೆ ಸೋರಿಕೆಯಾದ...

ಸೌತೆಕಾಯಿ ಕೃಷಿಗೆ ತನ್ನ ಸಚಿವಾಲಯದಿಂದಲೇ ₹99 ಲಕ್ಷ ಸಬ್ಸಿಡಿ ಪಡೆದ ಕೇಂದ್ರ BJP ಸಚಿವ ಭಾಗೀರಥ್ ಚೌಧರಿ

ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವ ಭಾಗೀರಥ್ ಚೌಧರಿ ಅವರು ತಮ್ಮದೇ ಸಚಿವಾಲಯದ ವ್ಯಾಪ್ತಿಗೆ ಒರುವ ಯೋಜನೆಯಡಿ, ವಾಣಿಜ್ಯ ಸೌತೆಕಾಯಿ ಕೃಷಿ ಯೋಜನೆಗಾಗಿ 99.03 ಲಕ್ಷ ರೂ. ಸಬ್ಸಿಡಿ (ಸಹಾಯಧನ) ಪಡೆದಿರುವುದು ತನಿಖಾ...

‘ಆರ್‌ಎಸ್‌ಎಸ್‌ ನೋಂದಣಿಯಾದರೆ ಒಳ್ಳೆಯದು’: ರಾಮಮಂದಿರ ಹಗರಣ ವಿಚಾರದಲ್ಲಿ ‘ಸತ್ಯ ಹೊರಬರಬೇಕು’: ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ

‘ರಾಷ್ಟ್ರೀಯ ಸ್ವಯಂಸೇವಕ ಸಂಘವನ್ನು (ಆರ್‌ಎಸ್‌ಎಸ್‌) ನೋಂದಣಿ ಮಾಡಿಸಿದರೆ ಯಾರಿಗೂ ಆರೋಪ ಮಾಡಲು ಅವಕಾಶ ಇರುವುದಿಲ್ಲ’ ಎಂದು ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಶುಕ್ರವಾರ ಹೇಳಿದ್ದಾರೆ. ಆರ್‌ಎಸ್‌ಎಸ್ ನೋಂದಣಿ ಕುರಿತು ಕರ್ನಾಟಕದ ಗೃಹ ಸಚಿವ...

ತುಮಕೂರಿನಲ್ಲಿ ಮಲಹೊರುವ ಪದ್ದತಿ ಜೀವಂತ; ದಲಿತ ಕಾರ್ಮಿಕರನ್ನು ಶೌಚಗುಂಡಿ ಸ್ವಚ್ಛತೆಗೆ ನಿಯೋಜಿಸಿದ ಕೆಇಬಿ ಇಂಜಿನಿಯರ್ಸ್ ಸಂಘ

ದಶಕಗಳ ಹಿಂದೆಯೇ ತಲೆ ಮೇಲೆ ಮಲಹೊರುವ ಅನಿಷ್ಠ ಪದ್ಧತಿಯನ್ನು ದೇಶದಲ್ಲಿ ನಿಷೇಧಿಸಲಾಗಿದೆ. ಕಾನೂನಿನ ಪ್ರಕಾರ ಈ ಅಮಾನವೀಯ ಪದ್ಧತಿ ನಿಷೇದಗೊಂಡಿದ್ದರು ರಾಜ್ಯದಲ್ಲಿ ಮಾತ್ರ ಇನ್ನೂ ಜೀವಂತವಾಗಿರುವುದು ತುಮಕೂರಿನಲ್ಲಿ ಮತ್ತೊಮ್ಮೆ ಬಹಿರಂಗವಾಗಿದೆ. ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್...

ವರ್ಷ ಪೂರೈಸಿದ ಎಸ್‌ಐಆರ್‌ ಪ್ರಕ್ರಿಯೆ; ಸುಮಾರು 6 ಕೋಟಿ ಹೆಸರುಗಳು ಡಿಲೀಟ್

ಸುಮಾರು ಆರು ಕೋಟಿ ಮತದಾರರನ್ನು ಅಳಿಸಲು ಕಾರಣವಾದ, ವಿರೋಧ ಪಕ್ಷಗಳು ಮತ್ತು ಚುನಾವಣಾ ಆಯೋಗದ ನಡುವೆ ಘರ್ಷಣೆಗೆ ಕಾರಣವಾದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು 19 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ...

ರಾಮ ಮಂದಿರ ಹಗರಣ | ಶಿವಸೇನೆ ಕೊಟ್ಟ 1 ಕೋಟಿ ರೂ.ಗೆ ರಸೀದಿ ಸಿಕ್ಕಿಲ್ಲ : ಸಂಜಯ್ ರಾವತ್

ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರಕ್ಕೆ ನೀಡಿದ 1 ಕೋಟಿ ರೂಪಾಯಿ ದೇಣಿಗೆಗೆ ತಮ್ಮ ಪಕ್ಷ ಶಿವಸೇನೆ (ಯುಬಿಟಿ) ರಸೀದಿಯನ್ನು ಸ್ವೀಕರಿಸಿಲ್ಲ ಎಂದು ಸಂಜಯ್ ರಾವತ್ ಶುಕ್ರವಾರ (ಜೂ.26) ಹೇಳಿದ್ದಾರೆ. ರಾಮ ಮಂದಿರದ ದೇಣಿಗೆ...

ರಾಮ ಮಂದಿರ ಹಗರಣ: ಶ್ರೀರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಮತ್ತು ಟ್ರಸ್ಟಿ ಅನಿಲ್ ಮಿಶ್ರಾ ರಾಜೀನಾಮೆ

ಶ್ರೀ ರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್, ರಾಮ ಮಂದಿರ ದೇಣಿಗೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ನೈತಿಕ ಹೊಣೆ ಹೊತ್ತು, ಸದಸ್ಯ ಟ್ರಸ್ಟಿ ಅನಿಲ್ ಮಿಶ್ರಾ ಅವರೊಂದಿಗೆ ಶುಕ್ರವಾರ ರಾಜೀನಾಮೆ...