Homeಮುಖಪುಟ'ಭಗವಾನ್ ರಾಮನನ್ನು' ಬಿಜೆಪಿ ಅಭ್ಯರ್ಥಿಯಾಗಿ ಘೋಷಿಸಲು ಮಾತ್ರ ಬಾಕಿ ಉಳಿದಿದೆ: ಸಂಜಯ್ ರಾವತ್

‘ಭಗವಾನ್ ರಾಮನನ್ನು’ ಬಿಜೆಪಿ ಅಭ್ಯರ್ಥಿಯಾಗಿ ಘೋಷಿಸಲು ಮಾತ್ರ ಬಾಕಿ ಉಳಿದಿದೆ: ಸಂಜಯ್ ರಾವತ್

- Advertisement -
- Advertisement -

ಅಯೋಧ್ಯೆಯ ರಾಮಮಂದಿರ ಉದ್ಘಾಟಣೆ ಕಾರ್ಯಕ್ರಮವನ್ನು ರಾಜಕೀಯಗೊಳಿಸಿರುವ ಬಗ್ಗೆ ಶಿವಸೇನೆಯ (ಉದ್ಧವ್ ಬಣದ) ನಾಯಕ ಸಂಜಯ್ ರಾವತ್ ಅವರು ಬಿಜೆಪಿ ವಿರುದ್ಧ ವಾಗ್ಧಾಳಿಯನ್ನು ನಡೆಸಿದ್ದು, 2024ರ ಲೋಕಸಭೆ ಚುನಾವಣೆಗೆ ಭಗವಾನ್ ರಾಮನನ್ನು ತಮ್ಮ ಅಭ್ಯರ್ಥಿಯನ್ನಾಗಿ ಘೋಷಿಸುವುದು ಮಾತ್ರ ಬಿಜೆಪಿಗೆ ಬಾಕಿ ಉಳಿದಿದೆ ಎಂದು ಟೀಕಿಸಿದ್ದಾರೆ.

ಶಿವಸೇನೆ (ಯುಬಿಟಿ) ಮುಖ್ಯಸ್ಥ ಉದ್ಧವ್ ಠಾಕ್ರೆ ಅವರು ಅಯೋಧ್ಯೆಯ ರಾಮಮಂದಿರದಲ್ಲಿ ವಿಗ್ರಹ ಪ್ರತಿಷ್ಠಾಪನೆ ಸಮಾರಂಭದಲ್ಲಿ ಭಾಗವಹಿಸುತ್ತಾರೆಯೇ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಠಾಕ್ರೆ ಖಂಡಿತವಾಗಿಯೂ ಹೋಗುತ್ತಾರೆ ಆದರೆ ಬಿಜೆಪಿಯ ಕಾರ್ಯಕ್ರಮ ಮುಗಿದ ನಂತರ ಹೋಗುತ್ತಾರೆ. ಬಿಜೆಪಿ ಕಾರ್ಯಕ್ರಮಕ್ಕೆ ಯಾಕೆ ಹೋಗಬೇಕು? ಇದು ರಾಷ್ಟ್ರೀಯ ಕಾರ್ಯಕ್ರಮವಲ್ಲ. ಬಿಜೆಪಿಯವರು ಈ ಕಾರ್ಯಕ್ರಮಕ್ಕಾಗಿ ರ್ಯಾಲಿಗಳನ್ನು ನಡೆಸುತ್ತಿದ್ದಾರೆ ಮತ್ತು ಸಾಕಷ್ಟು ಪ್ರಚಾರ ಮಾಡುತ್ತಿದ್ದಾರೆ ಆದರೆ ಅದರಲ್ಲಿ ಶುದ್ಧತೆ ಎಲ್ಲಿದೆ ಎಂದು ಪ್ರಶ್ನಿಸಿದ್ದಾರೆ.

ಬಿಜೆಪಿಗೆ ಈಗ ಉಳಿದಿರುವ ಒಂದೇ ವಿಷಯವೆಂದರೆ ಭಗವಾನ್ ರಾಮನನ್ನು ಚುನಾವಣೆಗೆ ತಮ್ಮ ಅಭ್ಯರ್ಥಿ ಎಂದು ಘೋಷಿಸುವುದು ಮಾತ್ರವಾಗಿದೆ. ಭಗವಾನ್ ರಾಮನ ಹೆಸರಿನಲ್ಲಿ ಬಹಳ ರಾಜಕೀಯ ಮಾಡಲಾಗುತ್ತಿದೆ. ಜ.22ರಂದು ಅಯೋಧ್ಯೆಯಲ್ಲಿ ನಡೆಯುತ್ತಿರುವ ರಾಮ ಮಂದಿರ ಉದ್ಘಾಟನೆ ಕಾರ್ಯಕ್ರಮ ಬಿಜೆಪಿ ಕಾರ್ಯಕ್ರಮ ಇದು ರಾಷ್ಟ್ರೀಯ ಕಾರ್ಯಕ್ರಮವಲ್ಲ ಎಂದು ಸಂಜಯ್‌ ರಾವತ್ ಹೇಳಿದ್ದಾರೆ.

ದೇವಾಲಯದ ಶಂಕುಸ್ಥಾಪನೆ ಸಮಾರಂಭಕ್ಕೆ ಮುನ್ನ ಪ್ರಧಾನಿ ಮೋದಿ ಅಯೋಧ್ಯೆಯಲ್ಲಿ ಹೊಸ ವಿಮಾನ ನಿಲ್ದಾಣ ಮತ್ತು ನವೀಕರಿಸಿದ ರೈಲು ನಿಲ್ದಾಣ ಸೇರಿದಂತೆ ಒಟ್ಟು 11,000 ಕೋಟಿ ಯೋಜನೆಗಳ ಚಾಲನೆಗೆ ಇಂದು ಅಯೋಧ್ಯೆಯಲ್ಲಿದ್ದಾರೆ. ವಿಮಾನ ನಿಲ್ದಾಣವು ದೇವಾಲಯದ ವಾಸ್ತುಶಿಲ್ಪವನ್ನು ಪ್ರತಿಬಿಂಬಿಸುವ ಮುಂಭಾಗವನ್ನು ಹೊಂದಿದ್ದು, ನಗರಕ್ಕೆ ಪ್ರವಾಸೋದ್ಯಮವನ್ನು ಹೆಚ್ಚಿಸುವ ನಿರೀಕ್ಷೆಯಲ್ಲಿ ಅಭಿವೃದ್ಧಿಪಡಿಸಲಾಗಿದೆ ಎಂದು ಸರ್ಕಾರ ಹೇಳಿಕೊಂಡಿದೆ.

ಜ.22ರಂದು ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟಣೆ ಕಾರ್ಯಕ್ರಮ ನಡೆಯಲಿದೆ. ರಾಮಮಂದಿರ ಉದ್ಘಾಟನಾ ಕಾರ್ಯಕ್ರಮಕ್ಕೆ ಮಾಜಿ ಪ್ರಧಾನಿ ದೇವೇಗೌಡ, ದಲೈ ಲಾಮಾ, ನಟರಾದ ರಜನಿಕಾಂತ್, ಅಮಿತಾಬ್ ಬಚ್ಚನ್, ಮಾಧುರಿ ದೀಕ್ಷಿತ್ ಮತ್ತು ಕೈಗಾರಿಕೋದ್ಯಮಿಗಳಾದ ಮುಖೇಶ್ ಅಂಬಾನಿ ಮತ್ತು ಅನಿಲ್ ಅಂಬಾನಿ ಸೇರಿದಂತೆ ಹಲವು ಪ್ರಮುಖ ನಾಯಕರು, ಉದ್ಯಮಿಗಳಿಗೆ ಆಹ್ವಾನವನ್ನು ನೀಡಲಾಗಿದೆ. 4,000 ಸಂತರು ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ. 2,200ಕ್ಕೂ ಅಧಿಕ ಅತಿಥಿಗಳು ಭಾಗವಹಿಸಲಿದ್ದಾರೆ. ಅವರಿಗೆ ಬೇಕಿದ್ದ ಎಲ್ಲಾ ಸಿದ್ಧತೆಗಳನ್ನು ಮಾಡಲಾಗಿದೆ.

ರಾಮಮಂದಿರ ಉದ್ಘಾಟಣೆ ಕಾರ್ಯಕ್ರಮದಲ್ಲಿ ಭಾಗವಹಿಸುವುದಿಲ್ಲ ಎಂದು ಈಗಾಗಲೇ ಸಿಪಿಎಂ ಮತ್ತು ಟಿಎಂಸಿ ಹೇಳಿಕೊಂಡಿದೆ. ರಾಮಂದಿರ ಉದ್ಘಾಟನೆ ಕಾರ್ಯಕ್ರಮವನ್ನು ರಾಜಕೀಯ ಗೊಳಿಸಲಾಗುತ್ತಿದೆ ಎಂದು ಸಿಪಿಎಂ ಆರೋಪಿಸಿದೆ. ಧರ್ಮವು ವೈಯಕ್ತಿಕ ಆಯ್ಕೆಯಾಗಿದೆ ಮತ್ತು ಅದನ್ನು ರಾಜಕೀಯ ಲಾಭದ ಸಾಧನವಾಗಿ ಪರಿವರ್ತಿಸಬಾರದು ಎಂದು ಪಕ್ಷವು ನಂಬುತ್ತದೆ. ಆದ್ದರಿಂದ ನಾವು ಈ ಸಮಾರಂಭದಲ್ಲಿ ಭಾಗವಹಿಸುವುದಿಲ್ಲ. ಬಿಜೆಪಿ ಮತ್ತು ಆರೆಸ್ಸೆಸ್ ಧಾರ್ಮಿಕ ಸಮಾರಂಭವನ್ನು ಪ್ರಧಾನಮಂತ್ರಿ, ಯುಪಿ ಮುಖ್ಯಮಂತ್ರಿ ಮತ್ತು ಇತರ ಸರ್ಕಾರಿ ಅಧಿಕಾರಿಗಳನ್ನು ನೇರವಾಗಿ ಒಳಗೊಂಡ ಸರಕಾರದ ಕಾರ್ಯಕ್ರಮವನ್ನಾಗಿ ಪರಿವರ್ತಿಸಿರುವುದು ಅತ್ಯಂತ ದುರದೃಷ್ಟಕರ. ಸರಕಾರಕ್ಕೆ ಯಾವುದೇ ಧಾರ್ಮಿಕ ಒಲವುಗಳು ಇರಬಾರದು. ಇದು ಸಂವಿಧಾನ ಬಾಹಿರವಾಗಿದೆ. ಕಾರ್ಯಕ್ರಮದ ಆಯೋಜನೆ ವೇಳೆ ಈ ನಿಯಮವನ್ನು ಉಲ್ಲಂಘಿಸಲಾಗಿದೆ ಎಂದು ಸಿಪಿಐಎಂ ಹೇಳಿತ್ತು.

ಇದಕ್ಕೂ ಮೊದಲು ಮಾತನಾಡಿದ್ದ ಬೃಂದಾ ಕಾರಟ್, ರಾಮ ಮಂದಿರದ ಉದ್ಘಾಟನಾ ಕಾರ್ಯಕ್ರಮದಲ್ಲಿ ಕಮ್ಯೂನಿಷ್ಟ್ ಪಾರ್ಟಿ ಆಫ್ ಇಂಡಿಯಾ ಸಿಪಿಐ(ಎಂ) ಭಾಗವಹಿಸುವುದಿಲ್ಲ ಎಂದು ಹೇಳಿದ್ದರು. ನಮ್ಮ ಪಕ್ಷವು ಧಾರ್ಮಿಕ ನಂಬಿಕೆಗಳನ್ನು ಗೌರವಿಸಲಿದೆ. ಧರ್ಮದೊಂದಿಗೆ ರಾಜಕೀಯ ಬೆರೆಸುವುದು ಸರಿಯಲ್ಲ. ಬಿಜೆಪಿ ರಾಮ ಮಂದಿರ ಉದ್ಘಾಟನೆಯನ್ನು ಸಂಪೂರ್ಣವಾಗಿ ರಾಜಕೀಯಗೊಳಿಸುತ್ತಿದೆ ಎಂದು ಹೇಳಿದ್ದರು.

ಟಿಎಂಸಿ ನಾಯಕರೋರ್ವರು ಈ ಬಗ್ಗೆ ಹೇಳಿಕೆಯನ್ನು ನೀಡಿದ್ದು, ಮುಂದಿನ ತಿಂಗಳು ಅಯೋಧ್ಯೆಯಲ್ಲಿ ನಡೆಯುವ ರಾಮಮಂದಿರ ಉದ್ಘಾಟನೆಗೆ ಮಮತಾ ಬ್ಯಾನರ್ಜಿ ಅಥವಾ ಟಿಎಂಸಿಯ ಯಾವುದೇ ಪ್ರತಿನಿಧಿಗಳು ಭಾಗವಹಿಸುತ್ತಾರಾ ಎಂಬ ಪ್ರಶ್ನೆ ಇದೆ. ನಾವು ಯಾರೂ ಭಾಗವಹಿಸುವುದಿಲ್ಲ. ಧರ್ಮದೊಂದಿಗೆ ರಾಜಕೀಯ ಬೆರೆಸುವುದರಲ್ಲಿ ನಮಗೆ ನಂಬಿಕೆ ಇಲ್ಲ ಎಂದು ಹೇಳಿದ್ದರು.

ಇದನ್ನು ಓದಿ: ಕೇರಳ ವಿವಿ ಸೆನೆಟ್‌ಗೆ ರಾಜ್ಯಪಾಲರಿಂದ ನಾಮನಿರ್ದೇಶನಗೊಂಡಿದ್ದ ABVP ಕಾರ್ಯಕರ್ತ ಕೊಲೆ ಯತ್ನ ಕೇಸ್‌ನಲ್ಲಿ ಅರೆಸ್ಟ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನರಿಗೆ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿ

ಹಿರಿಯ ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನ ಹಿರಿಯ ಸಾಧಕರು 2026ನೇ ಸಾಲಿನ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿಗೆ ಭಾಜನರಾಗಿದ್ದಾರೆ. ರಾಯಚೂರು ಜಿಲ್ಲೆಯ ಹಿರಿಯ ದಲಿತ ಹೋರಾಟಗಾರ...

ಗಾಜಾ; ಗೊಂಬೆಯೊಂದಿಗೆ ‘ಅಂತ್ಯಕ್ರಿಯೆ’ ಆಟ ಆಡುವ ಎಳೆಯ ಮಕ್ಕಳ ವಿಡಿಯೋ ವೈರಲ್; ಸುತ್ತಲಿನ ಘಟನೆಯನ್ನು ಪುನರಾವರ್ತಿಸುವ ಮಕ್ಕಳು

ಅಕ್ಟೋಬರ್ 2023 ರಲ್ಲಿ ಇಸ್ರೇಲಿ ಮಿಲಿಟರಿ ದಾಳಿಯನ್ನು ಪ್ರಾರಂಭಿಸಿದ ನಂತರ ಗಾಜಾದಿಂದ ದುಃಖಕರ ದೃಶ್ಯಗಳು ಹೊರಹೊಮ್ಮುತ್ತಿವೆ. ಇತ್ತೀಚಿನ ಒಂದು ಘಟನೆಯಲ್ಲಿ, ಚಿಕ್ಕ ಮಕ್ಕಳು ಅಂತ್ಯಕ್ರಿಯೆಗಾಗಿ ಗೊಂಬೆಯನ್ನು ಹೊತ್ತುಕೊಂಡು ಹೋಗುವುದನ್ನು ಕಾಣಬಹುದು - ಇದು ಅವರು...

ದೆಹಲಿ| ಆಳವಾದ ಚರಂಡಿಗೆ ಬಿದ್ದು ನೈರ್ಮಲ್ಯ ಕಾರ್ಮಿಕ ಸಾವು; ನ್ಯಾಯಕ್ಕೆ ಆಗ್ರಹಿಸಿದ ಮೃತನ ಕುಟುಂಬ

ಮಾರ್ಚ್ 30 ರಂದು ಪೂರ್ವ ದೆಹಲಿಯ ದಿಲ್ಶಾದ್ ಗಾರ್ಡನ್ ಪ್ರದೇಶದಲ್ಲಿ ಸುರಕ್ಷತಾ ಸಾಧನಗಳಿಲ್ಲದೆ ಆಳವಾದ ಚರಂಡಿ ಸ್ವಚ್ಛಗೊಳಿಸುವ ಸಮಯದಲ್ಲಿ ಯುವ ನೈರ್ಮಲ್ಯ ಕಾರ್ಮಿಕ ರಾಹುಲ್ ಎಂಬುವವರು ಸಾವನ್ನಪ್ಪಿದ್ದಾರೆ. ಮಧ್ಯಾಹ್ನ 2:00 ರ ಸುಮಾರಿಗೆ...

ನಿವೃತ್ತ ನ್ಯಾಯಮೂರ್ತಿ ಸಂತೋಷ್‌ ಹೆಗ್ಡೆ ಆಸ್ಪತ್ರೆಗೆ ದಾಖಲು; ಕಾರ್ಯಕ್ರಮದಲ್ಲಿ ಏಕಾಏಕಿ ಕುಸಿದು ಬಿದ್ದು ಅಸ್ವಸ್ಥ

ಬೆಂಗಳೂರು: ಕರ್ನಾಟಕದ ನಿವೃತ್ತ ಲೋಕಾಯುಕ್ತ ಎನ್‌.ಸಂತೋಷ್‌ ಹೆಗ್ಡೆ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಭಾಷಣದ ವೇಳೆ ಕುಸಿದು ಬಿದ್ದು ಅಸ್ವಸ್ಥರಾಗಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಏಪ್ರಿಲ್ 4ರ, ಶುಕ್ರವಾರ ಬೆಂಗಳೂರಿನ ಕೊಂಡಜಿ ಬಸಪ್ಪ ಸಭಾಂಗಣದಲ್ಲಿ...

ಎಸ್‌ಎಸ್‌ಎಲ್‌ಸಿಯಲ್ಲಿ ತೃತೀಯ ಭಾಷೆಗೆ ಗ್ರೇಡ್: ನಿರ್ಧಾರ ಪರಿಶೀಲಿಸುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿದ ರಾಜ್ಯಪಾಲ ಗೆಹ್ಲೋಟ್ 

ಬೆಂಗಳೂರು: 10ನೇ ತರಗತಿ ಪರೀಕ್ಷೆಯಲ್ಲಿ ತೃತೀಯ ಭಾಷೆಯ ವಿಷಯಕ್ಕೆ ಅಂಕಗಳನ್ನು ಬದಲಿಸುವ ನಿರ್ಧಾರವನ್ನು ಮರುಪರಿಶೀಲಿಸುವಂತೆ ಕರ್ನಾಟಕ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ರಾಜ್ಯ ಸರ್ಕಾರವನ್ನು ಕೇಳಿದ್ದಾರೆ. ಸರ್ಕಾರವು ಈ ನಿರ್ಧಾರವನ್ನು "ಸಮಗ್ರವಾಗಿ ಪರಿಶೀಲಿಸಬೇಕು" ಎಂದು ಲೋಕಭವನವು...

ತಿರುಚ್ಚಿ ಪೂರ್ವದ ಪೆರಂಬೂರಿನಲ್ಲಿ ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಅಫಿಡವಿಟ್‌ಗಳಲ್ಲಿ ಹಲವು ವ್ಯತ್ಯಾಸಗಳಿರುವುದಾಗಿ ವರದಿ  

ಚೆನ್ನೈ: ನಟ ಮತ್ತು ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಎರಡು ಪ್ರತ್ಯೇಕ ಚುನಾವಣಾ ಅಫಿಡವಿಟ್‌ಗಳಲ್ಲಿ ವ್ಯತ್ಯಾಸಗಳು ಕಾಣಿಸಿಕೊಂಡಿದ್ದು, ವಿಧಾನಸಭಾ ಚುನಾವಣೆಗೆ ಮುನ್ನ ಕಾನೂನು ಮತ್ತು ರಾಜಕೀಯ ಪರಿಶೀಲನೆಗೆ ಅವಕಾಶ ನೀಡುವ ಸಾಧ್ಯತೆಯಿದೆ. ಪೆರಂಬೂರು ಮತ್ತು...

ಉತ್ತಮ್ ನಗರದಲ್ಲಿ ಶಾಂತಿ ಕಾಪಾಡುವಲ್ಲಿ ದೆಹಲಿ ಪೊಲೀಸರ ಪ್ರಯತ್ನಗಳನ್ನು ಶ್ಲಾಘಿಸಿದ ಎಪಿಸಿಆರ್

ಈದ್ ಅಲ್-ಫಿತರ್, ರಾಮ ನವಮಿ ಮತ್ತು ಹನುಮಾನ್ ಜಯಂತಿ ಸೇರಿದಂತೆ ಧಾರ್ಮಿಕ ಹಬ್ಬಗಳ ಆಚರಣೆಯ ಸಂದರ್ಭದಲ್ಲಿ ರಾಷ್ಟ್ರ ರಾಜಧಾನಿಯ ಉತ್ತಮ್ ನಗರ ಪ್ರದೇಶದಲ್ಲಿ ಶಾಂತಿ ಮತ್ತು ಭದ್ರತೆಯನ್ನು ಕಾಪಾಡಿದ್ದಕ್ಕಾಗಿ ನಾಗರಿಕ ಹಕ್ಕುಗಳ ರಕ್ಷಣಾ...

ದಲಿತ ಸಮುದಾಯಕ್ಕೆ ಕ್ಷಮೆಯಾಚಿಸಿದ ನೇಪಾಳದ ಹೊಸ ಸರ್ಕಾರ

ಪ್ರಧಾನಿ ಬಾಲೇಂದ್ರ ಶಾ ಅವರ ನೇಪಾಳದ ಹೊಸ ಸರ್ಕಾರದ 100 ಅಂಶಗಳ ಸುಧಾರಣಾ ಕಾರ್ಯಸೂಚಿಯಡಿಯಲ್ಲಿ, ಮುಂದಿನ 15 ದಿನಗಳ ಒಳಗೆ ದಲಿತರು ಮತ್ತು ಐತಿಹಾಸಿಕವಾಗಿ ಹೊರಗಿಡಲ್ಪಟ್ಟ ಇತರೆ ಸಮುದಾಯಗಳಿಗೆ 'ಔಪಚಾರಿಕ ಕ್ಷಮೆಯಾಚನೆ' ಕೇಳುವುದಾಗಿ...

‘ಯಾರು ಹೆದರುತ್ತಾನೋ ಅವನು ಸತ್ತಂತೆ’: ರಾಘವ್ ಛಡ್ಡಾಗೆ ತೀವ್ರವಾಗಿ ಪ್ರತಿಕ್ರಿಯೆ ನೀಡಿದ ಎಎಪಿ ನಾಯಕ ಸೌರಭ್ ಭಾರದ್ವಾಜ್ 

ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಮತ್ತು ದೆಹಲಿ ಘಟಕದ ಮುಖ್ಯಸ್ಥ ಸೌರಭ್ ಭಾರದ್ವಾಜ್ ಅವರು ವೀಡಿಯೊ ಸಂದೇಶದಲ್ಲಿ ಆಪ್ ಸಂಸದ ರಾಘವ್ ಛಡ್ಡಾ ಅವರು ಸಂಸತ್ತಿನಲ್ಲಿ "ಸಾಫ್ಟ್ ಪಿಆರ್" ನಲ್ಲಿ ತೊಡಗಿದ್ದಾರೆ...

ಚಂಡೀಗಢ ಬಿಜೆಪಿ ಕಚೇರಿ ಸ್ಫೋಟ: ಪಂಜಾಬ್ ಕೌಂಟರ್ ಇಂಟೆಲಿಜೆನ್ಸ್ ಪಡೆಯಿಂದ ಇಬ್ಬರು ಶಂಕಿತರ ಮನೆಗಳ ಮೇಲೆ ದಾಳಿ

ಚಂಡೀಗಢದಲ್ಲಿರುವ ಪಂಜಾಬ್ ಬಿಜೆಪಿ ಕಚೇರಿಯ ಹೊರಗೆ ಸ್ಫೋಟ ನಡೆಸಿದ ಆರೋಪದ ಮೇಲೆ ಇಬ್ಬರು ಶಂಕಿತರ ಮನೆಗಳ ಮೇಲೆ  ಪಂಜಾಬ್ ಪೊಲೀಸರ ಗುಪ್ತಚರ ನಿಗ್ರಹ ದಳವು ಇಂದು ಮುಂಜಾನೆ ದಾಳಿ ನಡೆಸಿದೆ.  ರೋಪರ್ ಜಿಲ್ಲೆಯ ಮೊರಿಂಡಾ ಪ್ರದೇಶದ...