Homeಮುಖಪುಟ'ಭಗವಾನ್ ರಾಮನನ್ನು' ಬಿಜೆಪಿ ಅಭ್ಯರ್ಥಿಯಾಗಿ ಘೋಷಿಸಲು ಮಾತ್ರ ಬಾಕಿ ಉಳಿದಿದೆ: ಸಂಜಯ್ ರಾವತ್

‘ಭಗವಾನ್ ರಾಮನನ್ನು’ ಬಿಜೆಪಿ ಅಭ್ಯರ್ಥಿಯಾಗಿ ಘೋಷಿಸಲು ಮಾತ್ರ ಬಾಕಿ ಉಳಿದಿದೆ: ಸಂಜಯ್ ರಾವತ್

- Advertisement -
- Advertisement -

ಅಯೋಧ್ಯೆಯ ರಾಮಮಂದಿರ ಉದ್ಘಾಟಣೆ ಕಾರ್ಯಕ್ರಮವನ್ನು ರಾಜಕೀಯಗೊಳಿಸಿರುವ ಬಗ್ಗೆ ಶಿವಸೇನೆಯ (ಉದ್ಧವ್ ಬಣದ) ನಾಯಕ ಸಂಜಯ್ ರಾವತ್ ಅವರು ಬಿಜೆಪಿ ವಿರುದ್ಧ ವಾಗ್ಧಾಳಿಯನ್ನು ನಡೆಸಿದ್ದು, 2024ರ ಲೋಕಸಭೆ ಚುನಾವಣೆಗೆ ಭಗವಾನ್ ರಾಮನನ್ನು ತಮ್ಮ ಅಭ್ಯರ್ಥಿಯನ್ನಾಗಿ ಘೋಷಿಸುವುದು ಮಾತ್ರ ಬಿಜೆಪಿಗೆ ಬಾಕಿ ಉಳಿದಿದೆ ಎಂದು ಟೀಕಿಸಿದ್ದಾರೆ.

ಶಿವಸೇನೆ (ಯುಬಿಟಿ) ಮುಖ್ಯಸ್ಥ ಉದ್ಧವ್ ಠಾಕ್ರೆ ಅವರು ಅಯೋಧ್ಯೆಯ ರಾಮಮಂದಿರದಲ್ಲಿ ವಿಗ್ರಹ ಪ್ರತಿಷ್ಠಾಪನೆ ಸಮಾರಂಭದಲ್ಲಿ ಭಾಗವಹಿಸುತ್ತಾರೆಯೇ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಠಾಕ್ರೆ ಖಂಡಿತವಾಗಿಯೂ ಹೋಗುತ್ತಾರೆ ಆದರೆ ಬಿಜೆಪಿಯ ಕಾರ್ಯಕ್ರಮ ಮುಗಿದ ನಂತರ ಹೋಗುತ್ತಾರೆ. ಬಿಜೆಪಿ ಕಾರ್ಯಕ್ರಮಕ್ಕೆ ಯಾಕೆ ಹೋಗಬೇಕು? ಇದು ರಾಷ್ಟ್ರೀಯ ಕಾರ್ಯಕ್ರಮವಲ್ಲ. ಬಿಜೆಪಿಯವರು ಈ ಕಾರ್ಯಕ್ರಮಕ್ಕಾಗಿ ರ್ಯಾಲಿಗಳನ್ನು ನಡೆಸುತ್ತಿದ್ದಾರೆ ಮತ್ತು ಸಾಕಷ್ಟು ಪ್ರಚಾರ ಮಾಡುತ್ತಿದ್ದಾರೆ ಆದರೆ ಅದರಲ್ಲಿ ಶುದ್ಧತೆ ಎಲ್ಲಿದೆ ಎಂದು ಪ್ರಶ್ನಿಸಿದ್ದಾರೆ.

ಬಿಜೆಪಿಗೆ ಈಗ ಉಳಿದಿರುವ ಒಂದೇ ವಿಷಯವೆಂದರೆ ಭಗವಾನ್ ರಾಮನನ್ನು ಚುನಾವಣೆಗೆ ತಮ್ಮ ಅಭ್ಯರ್ಥಿ ಎಂದು ಘೋಷಿಸುವುದು ಮಾತ್ರವಾಗಿದೆ. ಭಗವಾನ್ ರಾಮನ ಹೆಸರಿನಲ್ಲಿ ಬಹಳ ರಾಜಕೀಯ ಮಾಡಲಾಗುತ್ತಿದೆ. ಜ.22ರಂದು ಅಯೋಧ್ಯೆಯಲ್ಲಿ ನಡೆಯುತ್ತಿರುವ ರಾಮ ಮಂದಿರ ಉದ್ಘಾಟನೆ ಕಾರ್ಯಕ್ರಮ ಬಿಜೆಪಿ ಕಾರ್ಯಕ್ರಮ ಇದು ರಾಷ್ಟ್ರೀಯ ಕಾರ್ಯಕ್ರಮವಲ್ಲ ಎಂದು ಸಂಜಯ್‌ ರಾವತ್ ಹೇಳಿದ್ದಾರೆ.

ದೇವಾಲಯದ ಶಂಕುಸ್ಥಾಪನೆ ಸಮಾರಂಭಕ್ಕೆ ಮುನ್ನ ಪ್ರಧಾನಿ ಮೋದಿ ಅಯೋಧ್ಯೆಯಲ್ಲಿ ಹೊಸ ವಿಮಾನ ನಿಲ್ದಾಣ ಮತ್ತು ನವೀಕರಿಸಿದ ರೈಲು ನಿಲ್ದಾಣ ಸೇರಿದಂತೆ ಒಟ್ಟು 11,000 ಕೋಟಿ ಯೋಜನೆಗಳ ಚಾಲನೆಗೆ ಇಂದು ಅಯೋಧ್ಯೆಯಲ್ಲಿದ್ದಾರೆ. ವಿಮಾನ ನಿಲ್ದಾಣವು ದೇವಾಲಯದ ವಾಸ್ತುಶಿಲ್ಪವನ್ನು ಪ್ರತಿಬಿಂಬಿಸುವ ಮುಂಭಾಗವನ್ನು ಹೊಂದಿದ್ದು, ನಗರಕ್ಕೆ ಪ್ರವಾಸೋದ್ಯಮವನ್ನು ಹೆಚ್ಚಿಸುವ ನಿರೀಕ್ಷೆಯಲ್ಲಿ ಅಭಿವೃದ್ಧಿಪಡಿಸಲಾಗಿದೆ ಎಂದು ಸರ್ಕಾರ ಹೇಳಿಕೊಂಡಿದೆ.

ಜ.22ರಂದು ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟಣೆ ಕಾರ್ಯಕ್ರಮ ನಡೆಯಲಿದೆ. ರಾಮಮಂದಿರ ಉದ್ಘಾಟನಾ ಕಾರ್ಯಕ್ರಮಕ್ಕೆ ಮಾಜಿ ಪ್ರಧಾನಿ ದೇವೇಗೌಡ, ದಲೈ ಲಾಮಾ, ನಟರಾದ ರಜನಿಕಾಂತ್, ಅಮಿತಾಬ್ ಬಚ್ಚನ್, ಮಾಧುರಿ ದೀಕ್ಷಿತ್ ಮತ್ತು ಕೈಗಾರಿಕೋದ್ಯಮಿಗಳಾದ ಮುಖೇಶ್ ಅಂಬಾನಿ ಮತ್ತು ಅನಿಲ್ ಅಂಬಾನಿ ಸೇರಿದಂತೆ ಹಲವು ಪ್ರಮುಖ ನಾಯಕರು, ಉದ್ಯಮಿಗಳಿಗೆ ಆಹ್ವಾನವನ್ನು ನೀಡಲಾಗಿದೆ. 4,000 ಸಂತರು ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ. 2,200ಕ್ಕೂ ಅಧಿಕ ಅತಿಥಿಗಳು ಭಾಗವಹಿಸಲಿದ್ದಾರೆ. ಅವರಿಗೆ ಬೇಕಿದ್ದ ಎಲ್ಲಾ ಸಿದ್ಧತೆಗಳನ್ನು ಮಾಡಲಾಗಿದೆ.

ರಾಮಮಂದಿರ ಉದ್ಘಾಟಣೆ ಕಾರ್ಯಕ್ರಮದಲ್ಲಿ ಭಾಗವಹಿಸುವುದಿಲ್ಲ ಎಂದು ಈಗಾಗಲೇ ಸಿಪಿಎಂ ಮತ್ತು ಟಿಎಂಸಿ ಹೇಳಿಕೊಂಡಿದೆ. ರಾಮಂದಿರ ಉದ್ಘಾಟನೆ ಕಾರ್ಯಕ್ರಮವನ್ನು ರಾಜಕೀಯ ಗೊಳಿಸಲಾಗುತ್ತಿದೆ ಎಂದು ಸಿಪಿಎಂ ಆರೋಪಿಸಿದೆ. ಧರ್ಮವು ವೈಯಕ್ತಿಕ ಆಯ್ಕೆಯಾಗಿದೆ ಮತ್ತು ಅದನ್ನು ರಾಜಕೀಯ ಲಾಭದ ಸಾಧನವಾಗಿ ಪರಿವರ್ತಿಸಬಾರದು ಎಂದು ಪಕ್ಷವು ನಂಬುತ್ತದೆ. ಆದ್ದರಿಂದ ನಾವು ಈ ಸಮಾರಂಭದಲ್ಲಿ ಭಾಗವಹಿಸುವುದಿಲ್ಲ. ಬಿಜೆಪಿ ಮತ್ತು ಆರೆಸ್ಸೆಸ್ ಧಾರ್ಮಿಕ ಸಮಾರಂಭವನ್ನು ಪ್ರಧಾನಮಂತ್ರಿ, ಯುಪಿ ಮುಖ್ಯಮಂತ್ರಿ ಮತ್ತು ಇತರ ಸರ್ಕಾರಿ ಅಧಿಕಾರಿಗಳನ್ನು ನೇರವಾಗಿ ಒಳಗೊಂಡ ಸರಕಾರದ ಕಾರ್ಯಕ್ರಮವನ್ನಾಗಿ ಪರಿವರ್ತಿಸಿರುವುದು ಅತ್ಯಂತ ದುರದೃಷ್ಟಕರ. ಸರಕಾರಕ್ಕೆ ಯಾವುದೇ ಧಾರ್ಮಿಕ ಒಲವುಗಳು ಇರಬಾರದು. ಇದು ಸಂವಿಧಾನ ಬಾಹಿರವಾಗಿದೆ. ಕಾರ್ಯಕ್ರಮದ ಆಯೋಜನೆ ವೇಳೆ ಈ ನಿಯಮವನ್ನು ಉಲ್ಲಂಘಿಸಲಾಗಿದೆ ಎಂದು ಸಿಪಿಐಎಂ ಹೇಳಿತ್ತು.

ಇದಕ್ಕೂ ಮೊದಲು ಮಾತನಾಡಿದ್ದ ಬೃಂದಾ ಕಾರಟ್, ರಾಮ ಮಂದಿರದ ಉದ್ಘಾಟನಾ ಕಾರ್ಯಕ್ರಮದಲ್ಲಿ ಕಮ್ಯೂನಿಷ್ಟ್ ಪಾರ್ಟಿ ಆಫ್ ಇಂಡಿಯಾ ಸಿಪಿಐ(ಎಂ) ಭಾಗವಹಿಸುವುದಿಲ್ಲ ಎಂದು ಹೇಳಿದ್ದರು. ನಮ್ಮ ಪಕ್ಷವು ಧಾರ್ಮಿಕ ನಂಬಿಕೆಗಳನ್ನು ಗೌರವಿಸಲಿದೆ. ಧರ್ಮದೊಂದಿಗೆ ರಾಜಕೀಯ ಬೆರೆಸುವುದು ಸರಿಯಲ್ಲ. ಬಿಜೆಪಿ ರಾಮ ಮಂದಿರ ಉದ್ಘಾಟನೆಯನ್ನು ಸಂಪೂರ್ಣವಾಗಿ ರಾಜಕೀಯಗೊಳಿಸುತ್ತಿದೆ ಎಂದು ಹೇಳಿದ್ದರು.

ಟಿಎಂಸಿ ನಾಯಕರೋರ್ವರು ಈ ಬಗ್ಗೆ ಹೇಳಿಕೆಯನ್ನು ನೀಡಿದ್ದು, ಮುಂದಿನ ತಿಂಗಳು ಅಯೋಧ್ಯೆಯಲ್ಲಿ ನಡೆಯುವ ರಾಮಮಂದಿರ ಉದ್ಘಾಟನೆಗೆ ಮಮತಾ ಬ್ಯಾನರ್ಜಿ ಅಥವಾ ಟಿಎಂಸಿಯ ಯಾವುದೇ ಪ್ರತಿನಿಧಿಗಳು ಭಾಗವಹಿಸುತ್ತಾರಾ ಎಂಬ ಪ್ರಶ್ನೆ ಇದೆ. ನಾವು ಯಾರೂ ಭಾಗವಹಿಸುವುದಿಲ್ಲ. ಧರ್ಮದೊಂದಿಗೆ ರಾಜಕೀಯ ಬೆರೆಸುವುದರಲ್ಲಿ ನಮಗೆ ನಂಬಿಕೆ ಇಲ್ಲ ಎಂದು ಹೇಳಿದ್ದರು.

ಇದನ್ನು ಓದಿ: ಕೇರಳ ವಿವಿ ಸೆನೆಟ್‌ಗೆ ರಾಜ್ಯಪಾಲರಿಂದ ನಾಮನಿರ್ದೇಶನಗೊಂಡಿದ್ದ ABVP ಕಾರ್ಯಕರ್ತ ಕೊಲೆ ಯತ್ನ ಕೇಸ್‌ನಲ್ಲಿ ಅರೆಸ್ಟ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇರಳದ 13ನೇ ಮುಖ್ಯಮಂತ್ರಿ ವಿ.ಡಿ. ಸತೀಶನ್: ವಿದ್ಯಾರ್ಥಿ ನಾಯಕನಿಂದ ಸಿಎಂ ಸ್ಥಾನದವರೆಗೆ ಸತೀಶನ್ ಪಯಣ

ತಿರುವನಂತಪುರಂ: ಕೇರಳಂನ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಅವರನ್ನು ಕಾಂಗ್ರೆಸ್ ಹೈಕಮಾಂಡ್ ಆಯ್ಕೆ ಮಾಡಿದೆ. ಆ ಮೂಲಕ ಹಲವು ದಿನಗಳಿಂದ ಈ ಬಗ್ಗೆ ನಡೆಯುತ್ತಿದ್ದ ಕುತೂಹಲ ಮತ್ತು ಚರ್ಚೆಗಳಿಗೆ ತೆರೆ ಬಿದ್ದಿದೆ.  ಅಖಿಲ ಭಾರತ...

ದಲಿತರ ನ್ಯಾಯಕ್ಕೆ ಹೊಸ ಅಡ್ಡಿಯಾಗಲಿದೆಯೇ ‘ಸಾರ್ವಜನಿಕ ವೀಕ್ಷಣೆ’ ನಿಯಮ? ಪರಿಶಿಷ್ಟರನ್ನು ಆತಂಕಕ್ಕೆ ತಳ್ಳಿದ ಸುಪ್ರೀಂ ತೀರ್ಪು

ಸಾರ್ವಜನಿಕರು ನೋಡದ ಜಾಗದಲ್ಲಿ, ಅಂದರೆ ಯಾರೂ ನೋಡದ ಜಾಗದಲ್ಲಿ ಜಾತಿ ನಿಂದನೆ ಅಥವಾ ಅವಮಾನ ನಡೆದರೆ, ಅದು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆ 1989ರ ಅಡಿಯಲ್ಲಿ ಅಪರಾಧ...

ಪಶ್ಚಿಮ ಬಂಗಾಳ: “ಇದು ಬುಲ್ಡೋಜರ್ ರಾಜ್ಯವಲ್ಲ”: ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಗುರುವಾರ ವಕೀಲರ ನಿಲುವಂಗಿಯನ್ನು ಧರಿಸಿ ಕಲ್ಕತ್ತಾ ಹೈಕೋರ್ಟ್‌ಗೆ ಬಂದ ಅವರು ವಿಧಾನಸಭಾ...

ದಾವಣಗೆರೆ ಉಪ ಚುನಾವಣೆ ಅಡ್ಡ ಪರಿಣಾಮ: ಮುಸ್ಲಿಮ್ ಮುಖಂಡರ ಮೇಲೆ ಖರ್ಗೆ-ಡಿಕೆಶಿ ಶಿಸ್ತು ಪ್ರಹಾರ ಕಾಂಗ್ರೆಸ್‌ನ ಆತ್ಮಹತ್ಯಾತ್ಮಕ ರಾಜಕಾರಣ!!

ದಾವಣಗೆರೆ ದಕ್ಷಿಣ ಉಪ ಚುನಾವಣೆ ರಾಜ್ಯದ ಆಡಳಿತಾರೂಢ ಕಾಂಗ್ರೆಸ್‌ನ ಗದ್ದುಗೆ ಗುದ್ದಾಟಕ್ಕೆ ರೋಚಕ ಆಯಾಮ ನೀಡಿಬಿಟ್ಟಿದೆ. ಅಹಿಂದ ಸಮುದಾಯವೇ ಬಹುಜನರಾಗಿರುವ ದಾವಣಗೆರೆ ದಕ್ಷಿಣ ಅಸೆಂಬ್ಲಿ ಕ್ಷೇತ್ರದಲ್ಲಿ ಕಾಂಗ್ರೆಸ್ ನ್ಯಾಯವಾಗಿ ಆ ವರ್ಗದ ಅರ್ಹರೊಬ್ಬರಿಗೆ...

ನೀಟ್ ವಿವಾದ: ಪ್ರಶ್ನೆ ಪತ್ರಿಕೆ ಸೋರಿಕೆ ಜೊತೆಗೆ ಹೆಚ್ಚುತ್ತಿರುವ ವಿದ್ಯಾರ್ಥಿಗಳ ಆತ್ಮಹತ್ಯೆ

ರಾಜಸ್ಥಾನದಲ್ಲಿ ನಡೆದ ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ (ಸಿಬಿಐ) ತನಿಖೆ ವೇಗ ಪಡೆದುಕೊಂಡಿದೆ. ದೇಶದಾದ್ಯಂತ ಹಲವು ವಿದ್ಯಾರ್ಥಿ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿವೆ. ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ...

ಎಸ್‌ಐಆರ್‌ನಲ್ಲಿ ಮತದಾನದ ಹಕ್ಕು ಹೋಯ್ತು..ಈಗ ಸರ್ಕಾರಿ ಸೌಲಭ್ಯದ ಸರದಿ..ಮುಂದೆ ನಾಗರಿಕತ್ವ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುವುದು ಚುನಾವಣಾ ಆಯೋಗ ಭಾರತದ ಕೋಟ್ಯಾಂತರ ನಾಗರಿಕ ಅಮೂಲ್ಯವಾದ ಮತದಾನದ ಹಕ್ಕನ್ನು ಕಿತ್ತುಕೊಂಡ ಒಂದು ವ್ಯವಸ್ಥಿತ ಸಂಚು ಎನ್ನಬಹುದು. ಬಿಹಾರ, ಪಶ್ಚಿಮ ಬಂಗಾಳ, ತಮಿಳುನಾಡು,...

ಜೋಸೆಫ್ ವಿಜಯ್‌ ಅವರ ಐತಿಹಾಸಿಕ ಗೆಲುವು: ರಾಜ್ಯಪಾಲರ ಸೋಲು ಮತ್ತು ದ್ರಾವಿಡ ನೆಲದ ರಾಜಕೀಯ: ಒಂದು ವಿಶ್ಲೇಷಣೆ

ತಮಿಳಗ ವೆಟ್ರಿ ಕಝಗಂ (TVK) ಪಕ್ಷವು ತಮಿಳುನಾಡು ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸಿ ಸರ್ಕಾರ ರಚಿಸುವ ಜವಾಬ್ದಾರಿ ತೆಗೆದುಕೊಂಡಿದೆ. ಮೇ 13, 2026ರ ಬುಧವಾರ ನಡೆದ ನಾಟಕೀಯ ವಿಶ್ವಾಸ ಮತಯಾಚನೆಯಲ್ಲಿ 144 ಮತಗಳ ಬೆಂಬಲ...

FACT CHECK: ಟಿವಿಕೆ ಪಕ್ಷ ಅಧಿಕಾರಕ್ಕೆ ಬರುತ್ತಿದಂತೆ ಹಿಂದಿ ಹೇರಿಕೆ ವಿರುದ್ದ ಪ್ರತಿಭಟನೆ ಎಂದು ಹಳೆಯ ವಿಡಿಯೋ ಹಂಚಿಕೆ

ಹಿಂದಿ ಹೇರಿಕೆ ವಿರುದ್ದದ ಹೋರಾಟವು ತಮಿಳುನಾಡಿಗೆ ಹೊಸದೇನು ಅಲ್ಲ. ಆದರೆ ಚೆನ್ನೈನ ಜವಾಹರಲಾಲ್ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷ ಅಧಿಕಾರ ವಹಿಸಿಕೊಂಡ ನಂತರ ...

ನೀಟ್: ಪ್ರಶ್ನೆಪತ್ರಿಕೆ ಸೋರಿಕೆಯ ಆತಂಕ ಮತ್ತು ಪ್ರಾದೇಶಿಕ ಹಿತಾಸಕ್ತಿಗಳ ಬಲಿ

ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ...

ಕೇಂದ್ರ ಸಚಿವ ಬಂಡಿ ಸಂಜಯ್ ಮಗನ ವಿರುದ್ಧ ಪೋಕ್ಸೋ ಕೇಸ್ : ಕ್ರಮ ಕೈಗೊಳ್ಳದೆ ಕಥೆ ಹೇಳುತ್ತಿರುವ ಪೊಲೀಸರು, ಅಂತರ ಕಾಯ್ದುಕೊಂಡ ಬಿಜೆಪಿ

ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ, ತೆಲಂಗಾಣದ ಪ್ರಮುಖ ಬಿಜೆಪಿ ನಾಯಕ ಬಂಡಿ ಸಂಜಯ್ ಕುಮಾರ್ ಅವರ ಮಗ ಬಂಡಿ ಸಾಯಿ ಭಗೀರತ್ ವಿರುದ್ಧ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಪೋಕ್ಸೋ...