Homeಮುಖಪುಟ'ಭಗವಾನ್ ರಾಮನನ್ನು' ಬಿಜೆಪಿ ಅಭ್ಯರ್ಥಿಯಾಗಿ ಘೋಷಿಸಲು ಮಾತ್ರ ಬಾಕಿ ಉಳಿದಿದೆ: ಸಂಜಯ್ ರಾವತ್

‘ಭಗವಾನ್ ರಾಮನನ್ನು’ ಬಿಜೆಪಿ ಅಭ್ಯರ್ಥಿಯಾಗಿ ಘೋಷಿಸಲು ಮಾತ್ರ ಬಾಕಿ ಉಳಿದಿದೆ: ಸಂಜಯ್ ರಾವತ್

- Advertisement -
- Advertisement -

ಅಯೋಧ್ಯೆಯ ರಾಮಮಂದಿರ ಉದ್ಘಾಟಣೆ ಕಾರ್ಯಕ್ರಮವನ್ನು ರಾಜಕೀಯಗೊಳಿಸಿರುವ ಬಗ್ಗೆ ಶಿವಸೇನೆಯ (ಉದ್ಧವ್ ಬಣದ) ನಾಯಕ ಸಂಜಯ್ ರಾವತ್ ಅವರು ಬಿಜೆಪಿ ವಿರುದ್ಧ ವಾಗ್ಧಾಳಿಯನ್ನು ನಡೆಸಿದ್ದು, 2024ರ ಲೋಕಸಭೆ ಚುನಾವಣೆಗೆ ಭಗವಾನ್ ರಾಮನನ್ನು ತಮ್ಮ ಅಭ್ಯರ್ಥಿಯನ್ನಾಗಿ ಘೋಷಿಸುವುದು ಮಾತ್ರ ಬಿಜೆಪಿಗೆ ಬಾಕಿ ಉಳಿದಿದೆ ಎಂದು ಟೀಕಿಸಿದ್ದಾರೆ.

ಶಿವಸೇನೆ (ಯುಬಿಟಿ) ಮುಖ್ಯಸ್ಥ ಉದ್ಧವ್ ಠಾಕ್ರೆ ಅವರು ಅಯೋಧ್ಯೆಯ ರಾಮಮಂದಿರದಲ್ಲಿ ವಿಗ್ರಹ ಪ್ರತಿಷ್ಠಾಪನೆ ಸಮಾರಂಭದಲ್ಲಿ ಭಾಗವಹಿಸುತ್ತಾರೆಯೇ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಠಾಕ್ರೆ ಖಂಡಿತವಾಗಿಯೂ ಹೋಗುತ್ತಾರೆ ಆದರೆ ಬಿಜೆಪಿಯ ಕಾರ್ಯಕ್ರಮ ಮುಗಿದ ನಂತರ ಹೋಗುತ್ತಾರೆ. ಬಿಜೆಪಿ ಕಾರ್ಯಕ್ರಮಕ್ಕೆ ಯಾಕೆ ಹೋಗಬೇಕು? ಇದು ರಾಷ್ಟ್ರೀಯ ಕಾರ್ಯಕ್ರಮವಲ್ಲ. ಬಿಜೆಪಿಯವರು ಈ ಕಾರ್ಯಕ್ರಮಕ್ಕಾಗಿ ರ್ಯಾಲಿಗಳನ್ನು ನಡೆಸುತ್ತಿದ್ದಾರೆ ಮತ್ತು ಸಾಕಷ್ಟು ಪ್ರಚಾರ ಮಾಡುತ್ತಿದ್ದಾರೆ ಆದರೆ ಅದರಲ್ಲಿ ಶುದ್ಧತೆ ಎಲ್ಲಿದೆ ಎಂದು ಪ್ರಶ್ನಿಸಿದ್ದಾರೆ.

ಬಿಜೆಪಿಗೆ ಈಗ ಉಳಿದಿರುವ ಒಂದೇ ವಿಷಯವೆಂದರೆ ಭಗವಾನ್ ರಾಮನನ್ನು ಚುನಾವಣೆಗೆ ತಮ್ಮ ಅಭ್ಯರ್ಥಿ ಎಂದು ಘೋಷಿಸುವುದು ಮಾತ್ರವಾಗಿದೆ. ಭಗವಾನ್ ರಾಮನ ಹೆಸರಿನಲ್ಲಿ ಬಹಳ ರಾಜಕೀಯ ಮಾಡಲಾಗುತ್ತಿದೆ. ಜ.22ರಂದು ಅಯೋಧ್ಯೆಯಲ್ಲಿ ನಡೆಯುತ್ತಿರುವ ರಾಮ ಮಂದಿರ ಉದ್ಘಾಟನೆ ಕಾರ್ಯಕ್ರಮ ಬಿಜೆಪಿ ಕಾರ್ಯಕ್ರಮ ಇದು ರಾಷ್ಟ್ರೀಯ ಕಾರ್ಯಕ್ರಮವಲ್ಲ ಎಂದು ಸಂಜಯ್‌ ರಾವತ್ ಹೇಳಿದ್ದಾರೆ.

ದೇವಾಲಯದ ಶಂಕುಸ್ಥಾಪನೆ ಸಮಾರಂಭಕ್ಕೆ ಮುನ್ನ ಪ್ರಧಾನಿ ಮೋದಿ ಅಯೋಧ್ಯೆಯಲ್ಲಿ ಹೊಸ ವಿಮಾನ ನಿಲ್ದಾಣ ಮತ್ತು ನವೀಕರಿಸಿದ ರೈಲು ನಿಲ್ದಾಣ ಸೇರಿದಂತೆ ಒಟ್ಟು 11,000 ಕೋಟಿ ಯೋಜನೆಗಳ ಚಾಲನೆಗೆ ಇಂದು ಅಯೋಧ್ಯೆಯಲ್ಲಿದ್ದಾರೆ. ವಿಮಾನ ನಿಲ್ದಾಣವು ದೇವಾಲಯದ ವಾಸ್ತುಶಿಲ್ಪವನ್ನು ಪ್ರತಿಬಿಂಬಿಸುವ ಮುಂಭಾಗವನ್ನು ಹೊಂದಿದ್ದು, ನಗರಕ್ಕೆ ಪ್ರವಾಸೋದ್ಯಮವನ್ನು ಹೆಚ್ಚಿಸುವ ನಿರೀಕ್ಷೆಯಲ್ಲಿ ಅಭಿವೃದ್ಧಿಪಡಿಸಲಾಗಿದೆ ಎಂದು ಸರ್ಕಾರ ಹೇಳಿಕೊಂಡಿದೆ.

ಜ.22ರಂದು ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟಣೆ ಕಾರ್ಯಕ್ರಮ ನಡೆಯಲಿದೆ. ರಾಮಮಂದಿರ ಉದ್ಘಾಟನಾ ಕಾರ್ಯಕ್ರಮಕ್ಕೆ ಮಾಜಿ ಪ್ರಧಾನಿ ದೇವೇಗೌಡ, ದಲೈ ಲಾಮಾ, ನಟರಾದ ರಜನಿಕಾಂತ್, ಅಮಿತಾಬ್ ಬಚ್ಚನ್, ಮಾಧುರಿ ದೀಕ್ಷಿತ್ ಮತ್ತು ಕೈಗಾರಿಕೋದ್ಯಮಿಗಳಾದ ಮುಖೇಶ್ ಅಂಬಾನಿ ಮತ್ತು ಅನಿಲ್ ಅಂಬಾನಿ ಸೇರಿದಂತೆ ಹಲವು ಪ್ರಮುಖ ನಾಯಕರು, ಉದ್ಯಮಿಗಳಿಗೆ ಆಹ್ವಾನವನ್ನು ನೀಡಲಾಗಿದೆ. 4,000 ಸಂತರು ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ. 2,200ಕ್ಕೂ ಅಧಿಕ ಅತಿಥಿಗಳು ಭಾಗವಹಿಸಲಿದ್ದಾರೆ. ಅವರಿಗೆ ಬೇಕಿದ್ದ ಎಲ್ಲಾ ಸಿದ್ಧತೆಗಳನ್ನು ಮಾಡಲಾಗಿದೆ.

ರಾಮಮಂದಿರ ಉದ್ಘಾಟಣೆ ಕಾರ್ಯಕ್ರಮದಲ್ಲಿ ಭಾಗವಹಿಸುವುದಿಲ್ಲ ಎಂದು ಈಗಾಗಲೇ ಸಿಪಿಎಂ ಮತ್ತು ಟಿಎಂಸಿ ಹೇಳಿಕೊಂಡಿದೆ. ರಾಮಂದಿರ ಉದ್ಘಾಟನೆ ಕಾರ್ಯಕ್ರಮವನ್ನು ರಾಜಕೀಯ ಗೊಳಿಸಲಾಗುತ್ತಿದೆ ಎಂದು ಸಿಪಿಎಂ ಆರೋಪಿಸಿದೆ. ಧರ್ಮವು ವೈಯಕ್ತಿಕ ಆಯ್ಕೆಯಾಗಿದೆ ಮತ್ತು ಅದನ್ನು ರಾಜಕೀಯ ಲಾಭದ ಸಾಧನವಾಗಿ ಪರಿವರ್ತಿಸಬಾರದು ಎಂದು ಪಕ್ಷವು ನಂಬುತ್ತದೆ. ಆದ್ದರಿಂದ ನಾವು ಈ ಸಮಾರಂಭದಲ್ಲಿ ಭಾಗವಹಿಸುವುದಿಲ್ಲ. ಬಿಜೆಪಿ ಮತ್ತು ಆರೆಸ್ಸೆಸ್ ಧಾರ್ಮಿಕ ಸಮಾರಂಭವನ್ನು ಪ್ರಧಾನಮಂತ್ರಿ, ಯುಪಿ ಮುಖ್ಯಮಂತ್ರಿ ಮತ್ತು ಇತರ ಸರ್ಕಾರಿ ಅಧಿಕಾರಿಗಳನ್ನು ನೇರವಾಗಿ ಒಳಗೊಂಡ ಸರಕಾರದ ಕಾರ್ಯಕ್ರಮವನ್ನಾಗಿ ಪರಿವರ್ತಿಸಿರುವುದು ಅತ್ಯಂತ ದುರದೃಷ್ಟಕರ. ಸರಕಾರಕ್ಕೆ ಯಾವುದೇ ಧಾರ್ಮಿಕ ಒಲವುಗಳು ಇರಬಾರದು. ಇದು ಸಂವಿಧಾನ ಬಾಹಿರವಾಗಿದೆ. ಕಾರ್ಯಕ್ರಮದ ಆಯೋಜನೆ ವೇಳೆ ಈ ನಿಯಮವನ್ನು ಉಲ್ಲಂಘಿಸಲಾಗಿದೆ ಎಂದು ಸಿಪಿಐಎಂ ಹೇಳಿತ್ತು.

ಇದಕ್ಕೂ ಮೊದಲು ಮಾತನಾಡಿದ್ದ ಬೃಂದಾ ಕಾರಟ್, ರಾಮ ಮಂದಿರದ ಉದ್ಘಾಟನಾ ಕಾರ್ಯಕ್ರಮದಲ್ಲಿ ಕಮ್ಯೂನಿಷ್ಟ್ ಪಾರ್ಟಿ ಆಫ್ ಇಂಡಿಯಾ ಸಿಪಿಐ(ಎಂ) ಭಾಗವಹಿಸುವುದಿಲ್ಲ ಎಂದು ಹೇಳಿದ್ದರು. ನಮ್ಮ ಪಕ್ಷವು ಧಾರ್ಮಿಕ ನಂಬಿಕೆಗಳನ್ನು ಗೌರವಿಸಲಿದೆ. ಧರ್ಮದೊಂದಿಗೆ ರಾಜಕೀಯ ಬೆರೆಸುವುದು ಸರಿಯಲ್ಲ. ಬಿಜೆಪಿ ರಾಮ ಮಂದಿರ ಉದ್ಘಾಟನೆಯನ್ನು ಸಂಪೂರ್ಣವಾಗಿ ರಾಜಕೀಯಗೊಳಿಸುತ್ತಿದೆ ಎಂದು ಹೇಳಿದ್ದರು.

ಟಿಎಂಸಿ ನಾಯಕರೋರ್ವರು ಈ ಬಗ್ಗೆ ಹೇಳಿಕೆಯನ್ನು ನೀಡಿದ್ದು, ಮುಂದಿನ ತಿಂಗಳು ಅಯೋಧ್ಯೆಯಲ್ಲಿ ನಡೆಯುವ ರಾಮಮಂದಿರ ಉದ್ಘಾಟನೆಗೆ ಮಮತಾ ಬ್ಯಾನರ್ಜಿ ಅಥವಾ ಟಿಎಂಸಿಯ ಯಾವುದೇ ಪ್ರತಿನಿಧಿಗಳು ಭಾಗವಹಿಸುತ್ತಾರಾ ಎಂಬ ಪ್ರಶ್ನೆ ಇದೆ. ನಾವು ಯಾರೂ ಭಾಗವಹಿಸುವುದಿಲ್ಲ. ಧರ್ಮದೊಂದಿಗೆ ರಾಜಕೀಯ ಬೆರೆಸುವುದರಲ್ಲಿ ನಮಗೆ ನಂಬಿಕೆ ಇಲ್ಲ ಎಂದು ಹೇಳಿದ್ದರು.

ಇದನ್ನು ಓದಿ: ಕೇರಳ ವಿವಿ ಸೆನೆಟ್‌ಗೆ ರಾಜ್ಯಪಾಲರಿಂದ ನಾಮನಿರ್ದೇಶನಗೊಂಡಿದ್ದ ABVP ಕಾರ್ಯಕರ್ತ ಕೊಲೆ ಯತ್ನ ಕೇಸ್‌ನಲ್ಲಿ ಅರೆಸ್ಟ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...

ರಾಜ್ಯದಲ್ಲಿ ‘SIR’ ಅವಾಂತರ: 1.ಕೋಟಿಗೂ ಹೆಚ್ಚು ಮತದಾರರನ್ನು ಹೊರಗಿಡಲು ಸಂಚು, ‘SIR ವಿರೋಧಿ ಕರ್ನಾಟಕ’ ಆಕ್ರೋಶ

ಕರ್ನಾಟಕದಲ್ಲಿ ಜಾರಿಯಲ್ಲಿರುವ ಬೂತ್ ಮಟ್ಟದ ಮತದಾರರ ಪಟ್ಟಿ ಸರಿಪಡಿಸುವ 'ಎಸ್‌ಐಆರ್' (SIR) ಪ್ರಕ್ರಿಯೆಯಲ್ಲಿ ಭಾರೀ ಅವ್ಯವಹಾರ ಮತ್ತು ಕಪಟತನ ನಡೆದಿದ್ದು, ರಾಜ್ಯದ ಶೇ. 20 ರಷ್ಟು (ಆಗಸ್ಟ್ 2026ರ ಹೊತ್ತಿಗೆ ಸುಮಾರು 1.10...

‘ಜನರು ಬಿಜೆಪಿಯಿಂದ ಅತೃಪ್ತರಾಗಿದ್ದಾರೆ…’: ದಾಟಿಯಾ ಉಪಚುನಾವಣೆಯಲ್ಲಿ ಗೆಲುವಿನ ನಂತರ ಆಡಳಿತ ಪಕ್ಷದ ವಿರುದ್ಧ ಘನಶ್ಯಾಮ್ ಸಿಂಗ್ ವಾಗ್ದಾಳಿ

ಭೋಪಾಲ್ (ಮಧ್ಯಪ್ರದೇಶ): ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಶಾಸಕ ಘನಶ್ಯಾಮ್ ಸಿಂಗ್ ಅವರು, ತಮ್ಮ ಅಭೂತಪೂರ್ವ ಗೆಲುವನ್ನು ಬಿಜೆಪಿಯ 'ಭ್ರಷ್ಟಾಚಾರ'ಕ್ಕೆ ಸಾರ್ವಜನಿಕರು ನೀಡಿದ ತಕ್ಕ ಹಾಗೂ ಸೂಕ್ತ...

ಇಂದಿನ ವಿಚಾರಣೆ ಬಳಿಕ ಉದಯನಿಧಿ ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ನಿರ್ದೇಶನ

ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧಿತರಾದ ತಮಿಳುನಾಡು ವಿಧಾನಸಭೆಯ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು, ವಿಚಾರಣೆಯಯ ಬಳಿಕ ಸ್ಟೇಷನ್ ಬೇಲ್ (ಠಾಣಾ ಜಾಮೀನು) ಮೇಲೆ ಬಿಡುಗಡೆ ಮಾಡುವಂತೆ ಮದ್ರಾಸ್ ಹೈಕೋರ್ಟ್...

ರಾಜೀನಾಮೆ ನೀಡಿದರೆ ಕೆಲವೇ ನಿಮಿಷಗಳಲ್ಲಿ ಅಂಗೀಕರಿಸುವೆ, ಸಚಿವ ಸ್ಥಾನ ವಂಚಿತರ ಬೆದರಿಕೆಗೆ ಸಿಎಂ ಡಿ.ಕೆ. ಶಿವಕುಮಾರ್ ವಾರ್ನಿಂಗ್

ಪಕ್ಷದ ಹಿತವೇ ಎಲ್ಲಕ್ಕಿಂತ ಮುಖ್ಯ. ಸಚಿವ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ಯಾರಾದರೂ ರಾಜೀನಾಮೆ ಸಲ್ಲಿಸಿದರೆ, ಕೆಲವೇ ನಿಮಿಷಗಳಲ್ಲಿ ಅದನ್ನು ನಾನು ಅಂಗೀಕರಿಸುತ್ತೇನೆ" ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಶಾಸಕರ...

ನಮಗೆ ಚುನಾವಣಾ ರಾಜಕೀಯದ ಉದ್ದೇಶವಿಲ್ಲ, ಜನಾಂದೋಲನವೇ ನಮ್ಮ ಗುರಿ: ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ

ಕಾಕ್ರೋಚ್ ಜನತಾ ಪಾರ್ಟಿ (CJP) ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವ ಯಾವುದೇ ಉದ್ದೇಶವನ್ನು ಹೊಂದಿಲ್ಲ, ಬದಲಾಗಿ ದೇಶದ ಪ್ರಜಾಸತ್ತಾತ್ಮಕ ಸಂಸ್ಥೆಗಳ ಮೇಲಿನ ಜನರ ನಂಬಿಕೆಯನ್ನು ಮರುಸ್ಥಾಪಿಸಲು ಬೃಹತ್ ಜನಾಂದೋಲನವನ್ನು ಕಟ್ಟುವುದೇ ನಮ್ಮ ಮೂಲ ಗುರಿ...

ನೀಟ್ ಪ್ರತಿಭಟನೆ: ಮಧ್ಯಪ್ರದೇಶ ಪೊಲೀಸರು ಧರ್ಮದ ಕಾರಣಕ್ಕೆ ನನ್ನ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ: ಜೆಎನ್‌ಯು ವಿದ್ಯಾರ್ಥಿ ನಾಯಕಿ ಡ್ಯಾನಿಶ್ ಅಲಿ ಆರೋಪ

ದೇಶದ ಶಿಕ್ಷಣ ವ್ಯವಸ್ಥೆಯ ಜವಾಬ್ದಾರಿಯನ್ನು ಪ್ರಶ್ನಿಸಿ ನಡೆದ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದಕ್ಕಾಗಿ, ಮಧ್ಯಪ್ರದೇಶ ಪೊಲೀಸರು ತಮ್ಮ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ ಎಂದು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ...