Homeಮುಖಪುಟ'ಭಗವಾನ್ ರಾಮನನ್ನು' ಬಿಜೆಪಿ ಅಭ್ಯರ್ಥಿಯಾಗಿ ಘೋಷಿಸಲು ಮಾತ್ರ ಬಾಕಿ ಉಳಿದಿದೆ: ಸಂಜಯ್ ರಾವತ್

‘ಭಗವಾನ್ ರಾಮನನ್ನು’ ಬಿಜೆಪಿ ಅಭ್ಯರ್ಥಿಯಾಗಿ ಘೋಷಿಸಲು ಮಾತ್ರ ಬಾಕಿ ಉಳಿದಿದೆ: ಸಂಜಯ್ ರಾವತ್

- Advertisement -
- Advertisement -

ಅಯೋಧ್ಯೆಯ ರಾಮಮಂದಿರ ಉದ್ಘಾಟಣೆ ಕಾರ್ಯಕ್ರಮವನ್ನು ರಾಜಕೀಯಗೊಳಿಸಿರುವ ಬಗ್ಗೆ ಶಿವಸೇನೆಯ (ಉದ್ಧವ್ ಬಣದ) ನಾಯಕ ಸಂಜಯ್ ರಾವತ್ ಅವರು ಬಿಜೆಪಿ ವಿರುದ್ಧ ವಾಗ್ಧಾಳಿಯನ್ನು ನಡೆಸಿದ್ದು, 2024ರ ಲೋಕಸಭೆ ಚುನಾವಣೆಗೆ ಭಗವಾನ್ ರಾಮನನ್ನು ತಮ್ಮ ಅಭ್ಯರ್ಥಿಯನ್ನಾಗಿ ಘೋಷಿಸುವುದು ಮಾತ್ರ ಬಿಜೆಪಿಗೆ ಬಾಕಿ ಉಳಿದಿದೆ ಎಂದು ಟೀಕಿಸಿದ್ದಾರೆ.

ಶಿವಸೇನೆ (ಯುಬಿಟಿ) ಮುಖ್ಯಸ್ಥ ಉದ್ಧವ್ ಠಾಕ್ರೆ ಅವರು ಅಯೋಧ್ಯೆಯ ರಾಮಮಂದಿರದಲ್ಲಿ ವಿಗ್ರಹ ಪ್ರತಿಷ್ಠಾಪನೆ ಸಮಾರಂಭದಲ್ಲಿ ಭಾಗವಹಿಸುತ್ತಾರೆಯೇ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಠಾಕ್ರೆ ಖಂಡಿತವಾಗಿಯೂ ಹೋಗುತ್ತಾರೆ ಆದರೆ ಬಿಜೆಪಿಯ ಕಾರ್ಯಕ್ರಮ ಮುಗಿದ ನಂತರ ಹೋಗುತ್ತಾರೆ. ಬಿಜೆಪಿ ಕಾರ್ಯಕ್ರಮಕ್ಕೆ ಯಾಕೆ ಹೋಗಬೇಕು? ಇದು ರಾಷ್ಟ್ರೀಯ ಕಾರ್ಯಕ್ರಮವಲ್ಲ. ಬಿಜೆಪಿಯವರು ಈ ಕಾರ್ಯಕ್ರಮಕ್ಕಾಗಿ ರ್ಯಾಲಿಗಳನ್ನು ನಡೆಸುತ್ತಿದ್ದಾರೆ ಮತ್ತು ಸಾಕಷ್ಟು ಪ್ರಚಾರ ಮಾಡುತ್ತಿದ್ದಾರೆ ಆದರೆ ಅದರಲ್ಲಿ ಶುದ್ಧತೆ ಎಲ್ಲಿದೆ ಎಂದು ಪ್ರಶ್ನಿಸಿದ್ದಾರೆ.

ಬಿಜೆಪಿಗೆ ಈಗ ಉಳಿದಿರುವ ಒಂದೇ ವಿಷಯವೆಂದರೆ ಭಗವಾನ್ ರಾಮನನ್ನು ಚುನಾವಣೆಗೆ ತಮ್ಮ ಅಭ್ಯರ್ಥಿ ಎಂದು ಘೋಷಿಸುವುದು ಮಾತ್ರವಾಗಿದೆ. ಭಗವಾನ್ ರಾಮನ ಹೆಸರಿನಲ್ಲಿ ಬಹಳ ರಾಜಕೀಯ ಮಾಡಲಾಗುತ್ತಿದೆ. ಜ.22ರಂದು ಅಯೋಧ್ಯೆಯಲ್ಲಿ ನಡೆಯುತ್ತಿರುವ ರಾಮ ಮಂದಿರ ಉದ್ಘಾಟನೆ ಕಾರ್ಯಕ್ರಮ ಬಿಜೆಪಿ ಕಾರ್ಯಕ್ರಮ ಇದು ರಾಷ್ಟ್ರೀಯ ಕಾರ್ಯಕ್ರಮವಲ್ಲ ಎಂದು ಸಂಜಯ್‌ ರಾವತ್ ಹೇಳಿದ್ದಾರೆ.

ದೇವಾಲಯದ ಶಂಕುಸ್ಥಾಪನೆ ಸಮಾರಂಭಕ್ಕೆ ಮುನ್ನ ಪ್ರಧಾನಿ ಮೋದಿ ಅಯೋಧ್ಯೆಯಲ್ಲಿ ಹೊಸ ವಿಮಾನ ನಿಲ್ದಾಣ ಮತ್ತು ನವೀಕರಿಸಿದ ರೈಲು ನಿಲ್ದಾಣ ಸೇರಿದಂತೆ ಒಟ್ಟು 11,000 ಕೋಟಿ ಯೋಜನೆಗಳ ಚಾಲನೆಗೆ ಇಂದು ಅಯೋಧ್ಯೆಯಲ್ಲಿದ್ದಾರೆ. ವಿಮಾನ ನಿಲ್ದಾಣವು ದೇವಾಲಯದ ವಾಸ್ತುಶಿಲ್ಪವನ್ನು ಪ್ರತಿಬಿಂಬಿಸುವ ಮುಂಭಾಗವನ್ನು ಹೊಂದಿದ್ದು, ನಗರಕ್ಕೆ ಪ್ರವಾಸೋದ್ಯಮವನ್ನು ಹೆಚ್ಚಿಸುವ ನಿರೀಕ್ಷೆಯಲ್ಲಿ ಅಭಿವೃದ್ಧಿಪಡಿಸಲಾಗಿದೆ ಎಂದು ಸರ್ಕಾರ ಹೇಳಿಕೊಂಡಿದೆ.

ಜ.22ರಂದು ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟಣೆ ಕಾರ್ಯಕ್ರಮ ನಡೆಯಲಿದೆ. ರಾಮಮಂದಿರ ಉದ್ಘಾಟನಾ ಕಾರ್ಯಕ್ರಮಕ್ಕೆ ಮಾಜಿ ಪ್ರಧಾನಿ ದೇವೇಗೌಡ, ದಲೈ ಲಾಮಾ, ನಟರಾದ ರಜನಿಕಾಂತ್, ಅಮಿತಾಬ್ ಬಚ್ಚನ್, ಮಾಧುರಿ ದೀಕ್ಷಿತ್ ಮತ್ತು ಕೈಗಾರಿಕೋದ್ಯಮಿಗಳಾದ ಮುಖೇಶ್ ಅಂಬಾನಿ ಮತ್ತು ಅನಿಲ್ ಅಂಬಾನಿ ಸೇರಿದಂತೆ ಹಲವು ಪ್ರಮುಖ ನಾಯಕರು, ಉದ್ಯಮಿಗಳಿಗೆ ಆಹ್ವಾನವನ್ನು ನೀಡಲಾಗಿದೆ. 4,000 ಸಂತರು ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ. 2,200ಕ್ಕೂ ಅಧಿಕ ಅತಿಥಿಗಳು ಭಾಗವಹಿಸಲಿದ್ದಾರೆ. ಅವರಿಗೆ ಬೇಕಿದ್ದ ಎಲ್ಲಾ ಸಿದ್ಧತೆಗಳನ್ನು ಮಾಡಲಾಗಿದೆ.

ರಾಮಮಂದಿರ ಉದ್ಘಾಟಣೆ ಕಾರ್ಯಕ್ರಮದಲ್ಲಿ ಭಾಗವಹಿಸುವುದಿಲ್ಲ ಎಂದು ಈಗಾಗಲೇ ಸಿಪಿಎಂ ಮತ್ತು ಟಿಎಂಸಿ ಹೇಳಿಕೊಂಡಿದೆ. ರಾಮಂದಿರ ಉದ್ಘಾಟನೆ ಕಾರ್ಯಕ್ರಮವನ್ನು ರಾಜಕೀಯ ಗೊಳಿಸಲಾಗುತ್ತಿದೆ ಎಂದು ಸಿಪಿಎಂ ಆರೋಪಿಸಿದೆ. ಧರ್ಮವು ವೈಯಕ್ತಿಕ ಆಯ್ಕೆಯಾಗಿದೆ ಮತ್ತು ಅದನ್ನು ರಾಜಕೀಯ ಲಾಭದ ಸಾಧನವಾಗಿ ಪರಿವರ್ತಿಸಬಾರದು ಎಂದು ಪಕ್ಷವು ನಂಬುತ್ತದೆ. ಆದ್ದರಿಂದ ನಾವು ಈ ಸಮಾರಂಭದಲ್ಲಿ ಭಾಗವಹಿಸುವುದಿಲ್ಲ. ಬಿಜೆಪಿ ಮತ್ತು ಆರೆಸ್ಸೆಸ್ ಧಾರ್ಮಿಕ ಸಮಾರಂಭವನ್ನು ಪ್ರಧಾನಮಂತ್ರಿ, ಯುಪಿ ಮುಖ್ಯಮಂತ್ರಿ ಮತ್ತು ಇತರ ಸರ್ಕಾರಿ ಅಧಿಕಾರಿಗಳನ್ನು ನೇರವಾಗಿ ಒಳಗೊಂಡ ಸರಕಾರದ ಕಾರ್ಯಕ್ರಮವನ್ನಾಗಿ ಪರಿವರ್ತಿಸಿರುವುದು ಅತ್ಯಂತ ದುರದೃಷ್ಟಕರ. ಸರಕಾರಕ್ಕೆ ಯಾವುದೇ ಧಾರ್ಮಿಕ ಒಲವುಗಳು ಇರಬಾರದು. ಇದು ಸಂವಿಧಾನ ಬಾಹಿರವಾಗಿದೆ. ಕಾರ್ಯಕ್ರಮದ ಆಯೋಜನೆ ವೇಳೆ ಈ ನಿಯಮವನ್ನು ಉಲ್ಲಂಘಿಸಲಾಗಿದೆ ಎಂದು ಸಿಪಿಐಎಂ ಹೇಳಿತ್ತು.

ಇದಕ್ಕೂ ಮೊದಲು ಮಾತನಾಡಿದ್ದ ಬೃಂದಾ ಕಾರಟ್, ರಾಮ ಮಂದಿರದ ಉದ್ಘಾಟನಾ ಕಾರ್ಯಕ್ರಮದಲ್ಲಿ ಕಮ್ಯೂನಿಷ್ಟ್ ಪಾರ್ಟಿ ಆಫ್ ಇಂಡಿಯಾ ಸಿಪಿಐ(ಎಂ) ಭಾಗವಹಿಸುವುದಿಲ್ಲ ಎಂದು ಹೇಳಿದ್ದರು. ನಮ್ಮ ಪಕ್ಷವು ಧಾರ್ಮಿಕ ನಂಬಿಕೆಗಳನ್ನು ಗೌರವಿಸಲಿದೆ. ಧರ್ಮದೊಂದಿಗೆ ರಾಜಕೀಯ ಬೆರೆಸುವುದು ಸರಿಯಲ್ಲ. ಬಿಜೆಪಿ ರಾಮ ಮಂದಿರ ಉದ್ಘಾಟನೆಯನ್ನು ಸಂಪೂರ್ಣವಾಗಿ ರಾಜಕೀಯಗೊಳಿಸುತ್ತಿದೆ ಎಂದು ಹೇಳಿದ್ದರು.

ಟಿಎಂಸಿ ನಾಯಕರೋರ್ವರು ಈ ಬಗ್ಗೆ ಹೇಳಿಕೆಯನ್ನು ನೀಡಿದ್ದು, ಮುಂದಿನ ತಿಂಗಳು ಅಯೋಧ್ಯೆಯಲ್ಲಿ ನಡೆಯುವ ರಾಮಮಂದಿರ ಉದ್ಘಾಟನೆಗೆ ಮಮತಾ ಬ್ಯಾನರ್ಜಿ ಅಥವಾ ಟಿಎಂಸಿಯ ಯಾವುದೇ ಪ್ರತಿನಿಧಿಗಳು ಭಾಗವಹಿಸುತ್ತಾರಾ ಎಂಬ ಪ್ರಶ್ನೆ ಇದೆ. ನಾವು ಯಾರೂ ಭಾಗವಹಿಸುವುದಿಲ್ಲ. ಧರ್ಮದೊಂದಿಗೆ ರಾಜಕೀಯ ಬೆರೆಸುವುದರಲ್ಲಿ ನಮಗೆ ನಂಬಿಕೆ ಇಲ್ಲ ಎಂದು ಹೇಳಿದ್ದರು.

ಇದನ್ನು ಓದಿ: ಕೇರಳ ವಿವಿ ಸೆನೆಟ್‌ಗೆ ರಾಜ್ಯಪಾಲರಿಂದ ನಾಮನಿರ್ದೇಶನಗೊಂಡಿದ್ದ ABVP ಕಾರ್ಯಕರ್ತ ಕೊಲೆ ಯತ್ನ ಕೇಸ್‌ನಲ್ಲಿ ಅರೆಸ್ಟ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...

ಗಣೇಶ ಮೆರವಣಿಗೆ ಡಿಜೆ ವಿಚಾರಕ್ಕೆ ಗಲಾಟೆ : ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; 31 ಜನರ ಮೇಲೆ ಎಫ್‌ಐಆರ್

ಗಣೇಶ ಮೆರವಣಿಗೆಯ ಡಿಜೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ....

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...