Homeಮುಖಪುಟಶಿಂಧೆಯನ್ನು ಪಕ್ಷದ ನಾಯಕತ್ವದಿಂದ ಕೆಳಗಿಳಿಸುವ ಅಧಿಕಾರ ಉದ್ಧವ್‌ಗೆ ಇರಲಿಲ್ಲ: ಸ್ಪೀಕರ್ ತೀರ್ಪು

ಶಿಂಧೆಯನ್ನು ಪಕ್ಷದ ನಾಯಕತ್ವದಿಂದ ಕೆಳಗಿಳಿಸುವ ಅಧಿಕಾರ ಉದ್ಧವ್‌ಗೆ ಇರಲಿಲ್ಲ: ಸ್ಪೀಕರ್ ತೀರ್ಪು

- Advertisement -
- Advertisement -

‘ಶಿವಸೇನೆ v/s ಶಿವಸೇನೆ’ ಪ್ರಕರಣದ ತೀರ್ಪನ್ನು ಪ್ರಕಟಿಸಿದ ಮಹಾರಾಷ್ಟ್ರ ವಿಧಾನಸಭೆ ಸ್ಪೀಕರ್ ರಾಹುಲ್ ನಾರ್ವೇಕರ್, ‘ಶಿವಸೇನೆಯ ಸಂವಿಧಾನದ ಪ್ರಕಾರ, ಏಕನಾಥ್ ಶಿಂಧೆಯನ್ನು ಶಾಸಕಾಂಗ ಪಕ್ಷದ ನಾಯಕನ ಸ್ಥಾನದಿಂದ ತೆಗೆದುಹಾಕಲು ಉದ್ಧವ್ ಠಾಕ್ರೆ ಅವರಿಗೆ ಯಾವುದೇ ಅಧಿಕಾರವಿಲ್ಲ’ ಎಂದು ಹೇಳಿದ್ದಾರೆ.

‘ಪಕ್ಷದ ನಾಯಕತ್ವ ರಚನೆಯನ್ನು ಗುರುತಿಸಲು ಪಕ್ಷದ ಸಂವಿಧಾನವು ಪ್ರಸ್ತುತವಾಗಿದೆ’ ಎಂದು ಹೇಳಿದರು. ಆ ಮೂಲಕ, ಶಿಂಧೆ ನೇತೃತ್ವದ ಬಣವನ್ನು ನಿಜವಾದ ಶಿವಸೇನೆ ಎಂದು ಸ್ಪೀಕರ್ ಘೋಷಿಸಿದ್ದಾರೆ. ‘ಉದ್ಧವ್ ಠಾಕ್ರೆ ಬಣವು ಪ್ರಸ್ತುತಪಡಿಸಿದ ವಾದಗಳಲ್ಲಿ ಹುರುಳಿಲ್ಲ. ಯಾವುದೇ ನಾಯಕನನ್ನು ಪಕ್ಷದಿಂದ ತೆಗೆದುಹಾಕುವ ಅಧಿಕಾರ ಶಿವಸೇನೆ ‘ಪ್ರಮುಖ’ಗೆ ಇಲ್ಲ’ ಎಂದು ನಾರ್ವೇಕರ್ ಅವರು ತಮ್ಮ ತೀರ್ಪಿನಲ್ಲಿ ಹೇಳಿದ್ದಾರೆ.

‘2018ರ ಪಕ್ಷದ ಸಂವಿಧಾನವನ್ನು ಗಣನೆಗೆ ತೆಗೆದುಕೊಳ್ಳಲಾಗುವುದಿಲ್ಲ. ಚುನಾವಣಾ ಆಯೋಗವು ಹೊರಡಿಸಿದ ಶಿವಸೇನೆ ಸಂವಿಧಾನವು ಅಧಿಕೃತ ದಾಖಲೆಯಾಗಿದೆ. ಇನ್ನು ಮುಂದೆ ಇದನ್ನು ಪಕ್ಷದ ಸಂವಿಧಾನ ಎಂದು ಉಲ್ಲೇಖಿಸಲಾಗುತ್ತದೆ’ ಎಂದು ಹೇಳಿದ್ದಾರೆ.

‘ಇಂದಿನ ತೀರ್ಪಿಗೂ ಮೊದಲು ಸ್ಪೀಕರ್ ಅವರು ಸಿಎಂ ಏಕನಾಥ್ ಶಿಂಧೆ ಅವರನ್ನು ಭೇಟಿ ಮಾಡಿದ್ದಾರೆ. ಇದು ಮ್ಯಾಚ್ ಫಿಕ್ಸಿಂಗ್’ ಎಂದು ಹೇಳಿರುವ ಉದ್ಧವ್ ಬಣ, ಈಗಾಗಲೇ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದೆ. ‘ಮೊದಲನೆಯಯಾದಾಗಿ, ತೀರ್ಪಿಗೆ ಮುನ್ನ ಸ್ಪೀಕರ್ ಮುಖ್ಯಮಂತ್ರಿಯನ್ನು ಭೇಟಿಯಾಗಿರುವುದನ್ನು ನಾವು ನೋಡಿದ್ದೇವೆ. ನಂತರ, ನ್ಯಾಯ ನೀಡಬೇಕಾದವರು ಆರೋಪಿಗಳ ಬಳಿಗೆ ಹೋದರು ಎಂಬ ಭಾವನೆಯನ್ನು ಮೂಡಿಸಲು ಪ್ರಯತ್ನಿಸುತ್ತಿದೆ. ಇದು ಇತಿಹಾಸದಲ್ಲಿ ಎಂದಿಗೂ ಸಂಭವಿಸಿಲ್ಲ’ ಎಂದು ಮಾಜಿ ಸಚಿವ ಮತ್ತು ಶಾಸಕ ಆದಿತ್ಯ ಠಾಕ್ರೆ ಹೇಳಿದ್ದಾರೆ.

2022ರಲ್ಲಿ ಏಕನಾಥ್ ಶಿಂಧೆ ಅವರು ಸುಮಾರು 50 ಶಾಸಕರ ಬೆಂಬಲದೊಂದಿಗೆ ಅಂದಿನ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ವಿರುದ್ಧ ಬಂಡಾಯ ಸಾರಿದಾಗ ಅಧಿಕಾರದ ಹೋರಾಟ ಪ್ರಾರಂಭವಾಯಿತು. ಜೂನ್ 2022: ಶಿಂಧೆ ಅವರು ಬಂಡಾಯವನ್ನು ಘೋಷಿಸಿದರು. ತಮ್ಮ ಬೆಂಬಲಿಗರೊಂದಿಗೆ ಅಸ್ಸಾಂಗೆ ಹೋಗಿ, ನಂತರ ಬಿಜೆಪಿಯ ಸಹಾಯದಿಂದ ಸರ್ಕಾರಕ್ಕೆ ಹಕ್ಕು ಸಾಧಿಸಿದರು. ಜೂನ್ 29, 2022ರಂದು ಮಹಾರಾಷ್ಟ್ರ ರಾಜ್ಯಪಾಲರು ತಮ್ಮ ಬಹುಮತವನ್ನು ಸಾಬೀತುಪಡಿಸಲು ಉದ್ಧವ್ ಅವರನ್ನು ಕೇಳಿದ ನಂತರ, ಸುಪ್ರೀಂ ಕೋರ್ಟ್ ಅಸೆಂಬ್ಲಿಯಲ್ಲಿ ವಿಶ್ವಾಸಮತ ಪರೀಕ್ಷೆಗೆ ಅನುಮತಿ ನೀಡಿತು. ನಂತರ ಉದ್ಧವ್ ಠಾಕ್ರೆ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದರು.

ಬಿಜೆಪಿ ಬೆಂಬಲದೊಂದಿಗೆ ಜೂನ್ 30, 2022ರಂದು ಏಕನಾಥ್ ಶಿಂಧೆ ಮುಖ್ಯಮಂತ್ರಿಯಾದರು. ಜುಲೈ 4, 2022ರಂದು ಏಕನಾಥ್ ಶಿಂಧೆ ಅವರು ವಿಧಾನಸಭೆಯಲ್ಲಿ ವಿಶ್ವಾಸಮತ ಪರೀಕ್ಷೆಯನ್ನು ಗೆದ್ದರು. ಅಕ್ಟೋಬರ್ 2022ರಂದು ಚುನಾವಣಾ ಆಯೋಗವು ಶಿವಸೇನೆಯ ಬಿಲ್ಲು ಮತ್ತು ಬಾಣದ ಚಿಹ್ನೆಯನ್ನು ಸ್ಥಗಿತಗೊಳಿಸಿತು. 2023 ಫೆಬ್ರವರಿಯಲ್ಲಿ ಚುನಾವಣಾ ಆಯೋಗವು ಶಿಂಧೆ ಬಣಕ್ಕೆ ಬಿಲ್ಲು ಮತ್ತು ಬಾಣದ ಚಿಹ್ನೆಯನ್ನು ನೀಡಿತು.

2023ರ ಮೇನಲ್ಲಿ  ಐವರು ನ್ಯಾಯಾಧೀಶರ ಸಂವಿಧಾನ ಪೀಠವು ಏಕನಾಥ್ ಶಿಂಧೆ ನೇತೃತ್ವದ ಮಹಾರಾಷ್ಟ್ರ ಸರ್ಕಾರವನ್ನು ಅನರ್ಹಗೊಳಿಸಲು ಮತ್ತು ಉದ್ಧವ್ ಠಾಕ್ರೆ ಅವರನ್ನು ಮುಖ್ಯಮಂತ್ರಿಯಾಗಿ ಮರುಸ್ಥಾಪಿಸಲು ಸಾಧ್ಯವಿಲ್ಲ ಎಂದು ಹೇಳಿತು. ಏಕೆಂದರೆ, ಉದ್ಧವ್ ವಿಶ್ವಾಸಮತ ಯಾಚಿಸುವ  ಮೊದಲು ರಾಜೀನಾಮೆನೀಡಿದ್ದಾರೆ ಎಂದು ಹೇಳಿತು. 2023, ಡಿಸೆಂಬರ್ 15ರಂದು ಶಿಂಧೆ ಸೇರಿದಂತೆ ಶಾಸಕರ ವಿರುದ್ಧದ ಅನರ್ಹತೆ ಅರ್ಜಿಗಳ ತೀರ್ಪು ಪ್ರಕಟಿಸಲು ಸ್ಪೀಕರ್‌ಗೆ ಸುಪ್ರೀಂ ಕೋರ್ಟ್ ಜನವರಿ 10 ರವರೆಗೆ ಸಮಯವನ್ನು ವಿಸ್ತರಿಸಿತು.

ಇದನ್ನೂ ಓದಿ; ರಾಮಮಂದಿರ ಉದ್ಘಾಟನೆ ಕಾರ್ಯಕ್ರಮದಲ್ಲಿ ಸೋನಿಯಾ, ಖರ್ಗೆ ಭಾಗವಹಿಸುವುದಿಲ್ಲ: ಕಾಂಗ್ರೆಸ್‌ ಸ್ಪಷ್ಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...