Homeಮುಖಪುಟಶಿಂಧೆಯನ್ನು ಪಕ್ಷದ ನಾಯಕತ್ವದಿಂದ ಕೆಳಗಿಳಿಸುವ ಅಧಿಕಾರ ಉದ್ಧವ್‌ಗೆ ಇರಲಿಲ್ಲ: ಸ್ಪೀಕರ್ ತೀರ್ಪು

ಶಿಂಧೆಯನ್ನು ಪಕ್ಷದ ನಾಯಕತ್ವದಿಂದ ಕೆಳಗಿಳಿಸುವ ಅಧಿಕಾರ ಉದ್ಧವ್‌ಗೆ ಇರಲಿಲ್ಲ: ಸ್ಪೀಕರ್ ತೀರ್ಪು

- Advertisement -
- Advertisement -

‘ಶಿವಸೇನೆ v/s ಶಿವಸೇನೆ’ ಪ್ರಕರಣದ ತೀರ್ಪನ್ನು ಪ್ರಕಟಿಸಿದ ಮಹಾರಾಷ್ಟ್ರ ವಿಧಾನಸಭೆ ಸ್ಪೀಕರ್ ರಾಹುಲ್ ನಾರ್ವೇಕರ್, ‘ಶಿವಸೇನೆಯ ಸಂವಿಧಾನದ ಪ್ರಕಾರ, ಏಕನಾಥ್ ಶಿಂಧೆಯನ್ನು ಶಾಸಕಾಂಗ ಪಕ್ಷದ ನಾಯಕನ ಸ್ಥಾನದಿಂದ ತೆಗೆದುಹಾಕಲು ಉದ್ಧವ್ ಠಾಕ್ರೆ ಅವರಿಗೆ ಯಾವುದೇ ಅಧಿಕಾರವಿಲ್ಲ’ ಎಂದು ಹೇಳಿದ್ದಾರೆ.

‘ಪಕ್ಷದ ನಾಯಕತ್ವ ರಚನೆಯನ್ನು ಗುರುತಿಸಲು ಪಕ್ಷದ ಸಂವಿಧಾನವು ಪ್ರಸ್ತುತವಾಗಿದೆ’ ಎಂದು ಹೇಳಿದರು. ಆ ಮೂಲಕ, ಶಿಂಧೆ ನೇತೃತ್ವದ ಬಣವನ್ನು ನಿಜವಾದ ಶಿವಸೇನೆ ಎಂದು ಸ್ಪೀಕರ್ ಘೋಷಿಸಿದ್ದಾರೆ. ‘ಉದ್ಧವ್ ಠಾಕ್ರೆ ಬಣವು ಪ್ರಸ್ತುತಪಡಿಸಿದ ವಾದಗಳಲ್ಲಿ ಹುರುಳಿಲ್ಲ. ಯಾವುದೇ ನಾಯಕನನ್ನು ಪಕ್ಷದಿಂದ ತೆಗೆದುಹಾಕುವ ಅಧಿಕಾರ ಶಿವಸೇನೆ ‘ಪ್ರಮುಖ’ಗೆ ಇಲ್ಲ’ ಎಂದು ನಾರ್ವೇಕರ್ ಅವರು ತಮ್ಮ ತೀರ್ಪಿನಲ್ಲಿ ಹೇಳಿದ್ದಾರೆ.

‘2018ರ ಪಕ್ಷದ ಸಂವಿಧಾನವನ್ನು ಗಣನೆಗೆ ತೆಗೆದುಕೊಳ್ಳಲಾಗುವುದಿಲ್ಲ. ಚುನಾವಣಾ ಆಯೋಗವು ಹೊರಡಿಸಿದ ಶಿವಸೇನೆ ಸಂವಿಧಾನವು ಅಧಿಕೃತ ದಾಖಲೆಯಾಗಿದೆ. ಇನ್ನು ಮುಂದೆ ಇದನ್ನು ಪಕ್ಷದ ಸಂವಿಧಾನ ಎಂದು ಉಲ್ಲೇಖಿಸಲಾಗುತ್ತದೆ’ ಎಂದು ಹೇಳಿದ್ದಾರೆ.

‘ಇಂದಿನ ತೀರ್ಪಿಗೂ ಮೊದಲು ಸ್ಪೀಕರ್ ಅವರು ಸಿಎಂ ಏಕನಾಥ್ ಶಿಂಧೆ ಅವರನ್ನು ಭೇಟಿ ಮಾಡಿದ್ದಾರೆ. ಇದು ಮ್ಯಾಚ್ ಫಿಕ್ಸಿಂಗ್’ ಎಂದು ಹೇಳಿರುವ ಉದ್ಧವ್ ಬಣ, ಈಗಾಗಲೇ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದೆ. ‘ಮೊದಲನೆಯಯಾದಾಗಿ, ತೀರ್ಪಿಗೆ ಮುನ್ನ ಸ್ಪೀಕರ್ ಮುಖ್ಯಮಂತ್ರಿಯನ್ನು ಭೇಟಿಯಾಗಿರುವುದನ್ನು ನಾವು ನೋಡಿದ್ದೇವೆ. ನಂತರ, ನ್ಯಾಯ ನೀಡಬೇಕಾದವರು ಆರೋಪಿಗಳ ಬಳಿಗೆ ಹೋದರು ಎಂಬ ಭಾವನೆಯನ್ನು ಮೂಡಿಸಲು ಪ್ರಯತ್ನಿಸುತ್ತಿದೆ. ಇದು ಇತಿಹಾಸದಲ್ಲಿ ಎಂದಿಗೂ ಸಂಭವಿಸಿಲ್ಲ’ ಎಂದು ಮಾಜಿ ಸಚಿವ ಮತ್ತು ಶಾಸಕ ಆದಿತ್ಯ ಠಾಕ್ರೆ ಹೇಳಿದ್ದಾರೆ.

2022ರಲ್ಲಿ ಏಕನಾಥ್ ಶಿಂಧೆ ಅವರು ಸುಮಾರು 50 ಶಾಸಕರ ಬೆಂಬಲದೊಂದಿಗೆ ಅಂದಿನ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ವಿರುದ್ಧ ಬಂಡಾಯ ಸಾರಿದಾಗ ಅಧಿಕಾರದ ಹೋರಾಟ ಪ್ರಾರಂಭವಾಯಿತು. ಜೂನ್ 2022: ಶಿಂಧೆ ಅವರು ಬಂಡಾಯವನ್ನು ಘೋಷಿಸಿದರು. ತಮ್ಮ ಬೆಂಬಲಿಗರೊಂದಿಗೆ ಅಸ್ಸಾಂಗೆ ಹೋಗಿ, ನಂತರ ಬಿಜೆಪಿಯ ಸಹಾಯದಿಂದ ಸರ್ಕಾರಕ್ಕೆ ಹಕ್ಕು ಸಾಧಿಸಿದರು. ಜೂನ್ 29, 2022ರಂದು ಮಹಾರಾಷ್ಟ್ರ ರಾಜ್ಯಪಾಲರು ತಮ್ಮ ಬಹುಮತವನ್ನು ಸಾಬೀತುಪಡಿಸಲು ಉದ್ಧವ್ ಅವರನ್ನು ಕೇಳಿದ ನಂತರ, ಸುಪ್ರೀಂ ಕೋರ್ಟ್ ಅಸೆಂಬ್ಲಿಯಲ್ಲಿ ವಿಶ್ವಾಸಮತ ಪರೀಕ್ಷೆಗೆ ಅನುಮತಿ ನೀಡಿತು. ನಂತರ ಉದ್ಧವ್ ಠಾಕ್ರೆ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದರು.

ಬಿಜೆಪಿ ಬೆಂಬಲದೊಂದಿಗೆ ಜೂನ್ 30, 2022ರಂದು ಏಕನಾಥ್ ಶಿಂಧೆ ಮುಖ್ಯಮಂತ್ರಿಯಾದರು. ಜುಲೈ 4, 2022ರಂದು ಏಕನಾಥ್ ಶಿಂಧೆ ಅವರು ವಿಧಾನಸಭೆಯಲ್ಲಿ ವಿಶ್ವಾಸಮತ ಪರೀಕ್ಷೆಯನ್ನು ಗೆದ್ದರು. ಅಕ್ಟೋಬರ್ 2022ರಂದು ಚುನಾವಣಾ ಆಯೋಗವು ಶಿವಸೇನೆಯ ಬಿಲ್ಲು ಮತ್ತು ಬಾಣದ ಚಿಹ್ನೆಯನ್ನು ಸ್ಥಗಿತಗೊಳಿಸಿತು. 2023 ಫೆಬ್ರವರಿಯಲ್ಲಿ ಚುನಾವಣಾ ಆಯೋಗವು ಶಿಂಧೆ ಬಣಕ್ಕೆ ಬಿಲ್ಲು ಮತ್ತು ಬಾಣದ ಚಿಹ್ನೆಯನ್ನು ನೀಡಿತು.

2023ರ ಮೇನಲ್ಲಿ  ಐವರು ನ್ಯಾಯಾಧೀಶರ ಸಂವಿಧಾನ ಪೀಠವು ಏಕನಾಥ್ ಶಿಂಧೆ ನೇತೃತ್ವದ ಮಹಾರಾಷ್ಟ್ರ ಸರ್ಕಾರವನ್ನು ಅನರ್ಹಗೊಳಿಸಲು ಮತ್ತು ಉದ್ಧವ್ ಠಾಕ್ರೆ ಅವರನ್ನು ಮುಖ್ಯಮಂತ್ರಿಯಾಗಿ ಮರುಸ್ಥಾಪಿಸಲು ಸಾಧ್ಯವಿಲ್ಲ ಎಂದು ಹೇಳಿತು. ಏಕೆಂದರೆ, ಉದ್ಧವ್ ವಿಶ್ವಾಸಮತ ಯಾಚಿಸುವ  ಮೊದಲು ರಾಜೀನಾಮೆನೀಡಿದ್ದಾರೆ ಎಂದು ಹೇಳಿತು. 2023, ಡಿಸೆಂಬರ್ 15ರಂದು ಶಿಂಧೆ ಸೇರಿದಂತೆ ಶಾಸಕರ ವಿರುದ್ಧದ ಅನರ್ಹತೆ ಅರ್ಜಿಗಳ ತೀರ್ಪು ಪ್ರಕಟಿಸಲು ಸ್ಪೀಕರ್‌ಗೆ ಸುಪ್ರೀಂ ಕೋರ್ಟ್ ಜನವರಿ 10 ರವರೆಗೆ ಸಮಯವನ್ನು ವಿಸ್ತರಿಸಿತು.

ಇದನ್ನೂ ಓದಿ; ರಾಮಮಂದಿರ ಉದ್ಘಾಟನೆ ಕಾರ್ಯಕ್ರಮದಲ್ಲಿ ಸೋನಿಯಾ, ಖರ್ಗೆ ಭಾಗವಹಿಸುವುದಿಲ್ಲ: ಕಾಂಗ್ರೆಸ್‌ ಸ್ಪಷ್ಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...