Homeಕರ್ನಾಟಕಜೆಎನ್‌ಯು ಮೇಲಿನ ದಾಳಿ ನನಗೆ 26/11 ಭಯೋತ್ಪಾದಕ ದಾಳಿಯನ್ನು ನೆನಪಿಸುತ್ತದೆ": ಉದ್ಧವ್ ಠಾಕ್ರೆ

ಜೆಎನ್‌ಯು ಮೇಲಿನ ದಾಳಿ ನನಗೆ 26/11 ಭಯೋತ್ಪಾದಕ ದಾಳಿಯನ್ನು ನೆನಪಿಸುತ್ತದೆ”: ಉದ್ಧವ್ ಠಾಕ್ರೆ

- Advertisement -
- Advertisement -

ಮಹಾರಾಷ್ಟ್ರದ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರು ಕಳೆದ ರಾತ್ರಿ ಜೆಎನ್‌ಯು ವಿದ್ಯಾರ್ಥಿಗಳ ಮೇಲಿನ ಕ್ರೂರ ದಾಳಿಯನ್ನು 26/11 ಮುಂಬೈ ಭಯೋತ್ಪಾದಕ ದಾಳಿಗೆ ಹೋಲಿಸಿದ್ದಾರೆ. ಕಬ್ಬಿಣದ ಸರಳುಗಳಂತಹ ಶಸ್ತ್ರಗಳಿಂದ ಮುಖವಾಡ ಧರಿಸಿದ ಗೂಂಡಾಗಳು ನಡೆಸಿರುವ ಹಿಂಸಾತ್ಮಕ ದಾಳಿಯನ್ನು “ಹೇಡಿತನ” ಎಂದು ಅವರು ಕರೆದಿದ್ದಾರೆ.

ದೆಹಲಿ ಪೊಲೀಸರು ತ್ವರಿತವಾಗಿ ಮತ್ತು ನಿರ್ಣಾಯಕವಾಗಿ ವರ್ತಿಸಬೇಕು. ನಿಷ್ಪಕ್ಷಪಾತ ತನಿಖೆ ನಡೆಸಿ ತಪ್ಪಿತಸ್ಥರಿಗೆ ಶಿಕ್ಷೆ ಆಗುವ ಹಾಗೆ ಮಾಡಬೇಕು. ಈ ರೀತಿ ಮಾಡಲು ವಿಫಲವಾದರೆ ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡಲು ವಿಫಲವಾಗಿದ್ದೀರಿ ಎಂದೇ ಅರ್ಥ ಎಂದು ಉದ್ಧವ್‌ ಎಚ್ಚರಿಕೆ ನೀಡಿದ್ದಾರೆ.

“ಯುವಕರು ಭಯಭೀತರಾಗಿದ್ದಾರೆ ಮತ್ತು ಕೋಪಗೊಂಡಿದ್ದಾರೆ. ನಾವೆಲ್ಲರೂ ಒಗ್ಗೂಡಿ ಅವರಲ್ಲಿ ವಿಶ್ವಾಸ ಮೂಡಿಸಬೇಕಾಗಿದೆ. ನಮ್ಮ ಯುವಜನರು ಹೇಡಿಗಳಲ್ಲ. ಯುವಜನರನ್ನು ಪ್ರಚೋದಿಸುವ ಮೂಲಕ ಬಾಂಬ್ ಸ್ಫೋಟಿಸಬೇಡಿ. ಪೊಲೀಸರು ನಿಷ್ಪಕ್ಷಪಾತವಾಗಿ ವರ್ತಿಸದಿದ್ದರೆ, ಅವರ ಕಠೋರ ಪ್ರಶ್ನೆಗಳನ್ನು ಎದುರಿಸಬೇಕಾಗುತ್ತಿದೆ ಎಂದು ಠಾಕ್ರೆ ಹೇಳಿದ್ದಾರೆ.

2008 ರಲ್ಲಿ ಮುಂಬೈನ ಪ್ರಮುಖ ಸ್ಥಳಗಳ ಮೇಲೆ ಮೂರು ದಿನಗಳ ಕಾಲ ಭಯೋತ್ಪಾದಕರು ದಾಳಿ ಮಾಡಿದ್ದರು. ಇದರಿಂದ 160 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದರು ಮತ್ತು ನೂರಾರು ಜನರು ಗಾಯಗೊಂಡಿದ್ದರು. ಲಷ್ಕರ್-ಎ-ತೈಬಾ ಮುಖ್ಯಸ್ಥ ಹಫೀಜ್ ಸಯೀದ್ ಈ ದಾಳಿಯ ಮಾಸ್ಟರ್ ಮೈಂಡ್ ಆಗಿದ್ದ.

ಇನ್ನು ಕಾಂಗ್ರೆಸ್ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಕೂಡ ಜೆನ್‌ಎನ್‌ಯು ಹಿಂಸೆಯನ್ನು ಖಂಡಿಸಿದ್ದಾರೆ. “ಈ ಹಿಂಸೆಯು ಭಿನ್ನಾಭಿಪ್ರಾಯದ ಪ್ರತಿ ಧ್ವನಿಯನ್ನು ನಿಗ್ರಹಿಸಲು ಮತ್ತು ವಶಪಡಿಸಿಕೊಳ್ಳಲು ಸರ್ಕಾರವು ಎಂತಹ ಮಟ್ಟಕ್ಕೂ ಹೋಗಬಹುದು ಎಂಬುದರ ಕಠೋರ ಜ್ಞಾಪನೆಯಾಗಿದೆ” ಎಂದು ಅವರು ಹೇಳಿದ್ದಾರೆ.

ಭಾರತದ ಯುವಜನರ ಮತ್ತು ವಿದ್ಯಾರ್ಥಿಗಳ ಧ್ವನಿಯನ್ನು ಪ್ರತಿದಿನ ನಿಗ್ರಹಿಸಲಾಗುತ್ತಿದೆ. ಆಡಳಿತಾರೂಢ ಮೋದಿ ಸರ್ಕಾರವನ್ನು ಸಕ್ರಿಯವಾಗಿ ಬೆಂಬಲಿಸುವ ಗೂಂಡಾಗಳು ಭಾರತದ ಯುವಜನರ ಮೇಲೆ ನಡೆಸಿದ ಭಯಾನಕ ಹಿಂಸಾಚಾರವು ಶೋಚನೀಯ ಮತ್ತು ಸ್ವೀಕಾರಾರ್ಹವಲ್ಲ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಮಾಜಿ ಸಚಿವ ಪಿ ಚಿದಂಬರಂ ಮಾತನಾಡಿ ಜೆಎನ್‌ಯು ಹಿಂಸಾಚಾರದ ಈ ಘಟನೆಯು ಬಹುಶಃ ನಾವು ಅರಾಜಕತೆಗೆ ವೇಗವಾಗಿ ಇಳಿಯುತ್ತಿದ್ದೇವೆ ಎಂಬುದಕ್ಕೆ ಅತ್ಯಂತ ಸಾಕ್ಷಿಯಾಗಿದೆ. ಇದು ಕೇಂದ್ರ ಸರ್ಕಾರ, ಗೃಹ ಸಚಿವ, ಲೆಫ್ಟಿನೆಂಟ್‌ ಗರ್ವನರ್‌ ಮತ್ತು ಪೊಲೀಸ್ ಆಯುಕ್ತರ ಮೇಲ್ವಿಚಾರಣೆಯಲ್ಲಿ ದೆಹಲಿಯಲ್ಲಿರುವ ಭಾರತದ ಅಗ್ರಗಣ್ಯ ವಿಶ್ವವಿದ್ಯಾಲಯದಲ್ಲಿ ಸಂಭವಿಸಿದೆ ಸಂಭವಿಸಿದೆ ಎಂದು ಅಸಮಾಧಾಣ ವ್ಯಕ್ತಪಡಿಸಿದ್ದಾರೆ.

ಸಮಾಜವಾದಿ ಪಕ್ಷದ ಅಖಿಲೇಶ್ ಯಾದವ್ ಮಾತನಾಡಿ ಮುಖವಾಡದ ದಾಳಿಕೋರರು ದೆಹಲಿಯ ಜೆಎನ್‌ಯು ಕ್ಯಾಂಪಸ್‌ಗೆ ಹೇಗೆ ಪ್ರವೇಶಿಸಿದರು ಮತ್ತು ಯೋಜಿತ ರೀತಿಯಲ್ಲಿ ಹೇಗೆ ದಾಳಿ ಮಾಡಿದರು ಎಂಬುದನ್ನು ದೇಶ ಮತ್ತು ಜಗತ್ತು ನೋಡಿದೆ. ನ್ಯಾಯಯುತ ತನಿಖೆ ಅಗತ್ಯವಿದೆ ಏಕೆಂದರೆ ಇದರ ಹಿಂದೆ ಮುಖ್ಯ ಸಂಚುಕೋರ ಯಾರು ಎಂದು ನಾವು ತಿಳಿದುಕೊಳ್ಳಬೇಕಿದೆ ಎಂದು ಆಗ್ರಹಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ : ಪ್ರಧಾನಿ ಮನೆ ಬಳಿಯ ಕೊಳಗೇರಿಗಳ 717 ಕುಟುಂಬಗಳಿಗೆ ಮನೆ ಖಾಲಿ ಮಾಡುವಂತೆ ನೋಟಿಸ್

ನವದೆಹಲಿಯ ಪ್ರಧಾನಿ ನಿವಾಸದ ಬಳಿಯ ಮೂರು ಕೊಳಗೇರಿಗಳಲ್ಲಿ ವಾಸಿಸುತ್ತಿರುವ ಏಳುನೂರ ಹದಿನೇಳು ಕುಟುಂಬಗಳು ಮಾರ್ಚ್ 6ರೊಳಗೆ ತಮ್ಮ ಮನೆಗಳನ್ನು ಖಾಲಿ ಮಾಡುವಂತೆ ಸೂಚಿಸಲಾಗಿದೆ. ಇಲ್ಲದಿದ್ದರೆ ಕಾನೂನು ಕ್ರಮ ಎದುರಿಸಲು ಸಿದ್ದರಾಗುವಂತೆ ಎಚ್ಚರಿಕೆ ನೀಡಲಾಗಿದೆ...

ಹೊಸ ಅಸ್ತ್ರ ಪ್ರಯೋಗಿಸಿದ ಟ್ರಂಪ್ : ಎಲ್ಲಾ ರಾಷ್ಟ್ರಗಳ ಆಮದು ಮೇಲೆ ಶೇ.10ರಷ್ಟು ಜಾಗತಿಕ ಸುಂಕ ಘೋಷಣೆ

ಎಲ್ಲಾ ದೇಶಗಳ ಆಮದುಗಳ ಮೇಲೆ ಹೊಸದಾಗಿ ಶೇಕಡ 10 ಸುಂಕ ವಿಧಿಸುವ ಕಾರ್ಯನಿರ್ವಾಹಕ ಆದೇಶಕ್ಕೆ ಸಹಿ ಹಾಕಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ಘೋಷಿಸಿದ್ದಾರೆ. ಇದಕ್ಕೂ ಕೆಲ ಗಂಟೆಗಳ ಮೊದಲು,...

ಭಾರತದೊಂದಿಗಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಇಲ್ಲ: ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಟ್ರಂಪ್ ಹೇಳಿಕೆ

ಅಮೆರಿಕ ಸುಪ್ರೀಂ ಕೋರ್ಟ್ ಪ್ರತಿ ಸುಂಕ (Reciprocal tariffs) ನೀತಿಯನ್ನು ರದ್ದುಗೊಳಿಸಿದರೂ, ಭಾರತ-ಅಮೆರಿಕ ನಡುವಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ತಿಳಿಸಿದ್ದಾರೆ. ಶ್ವೇತಭವನದಲ್ಲಿ...

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...

ಬಂಗಾಳ ಎಸ್ಐಆರ್ ಪ್ರಕ್ರಿಯೆ: ಚುನಾವಣಾ ಆಯೋಗದ ಸಹಾಯಕ್ಕೆ ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸಲು ಕಲ್ಕತ್ತಾ ಹೈಕೋರ್ಟ್‌ಗೆ ಸುಪ್ರೀಂ ಸೂಚನೆ

ನವದೆಹಲಿ: ಪಶ್ಚಿಮ ಬಂಗಾಳ ಸರ್ಕಾರ ಮತ್ತು ಚುನಾವಣಾ ಆಯೋಗದ ನಡುವೆ ಮತದಾರರ ಪಟ್ಟಿ ಶುದ್ಧೀಕರಣ ಅಭಿಯಾನಕ್ಕೆ ಸಂಬಂಧಿಸಿದಂತೆ ದುರದೃಷ್ಟಕರ ಆರೋಪದ ಆಟ ನಡೆಯುತ್ತಿದೆ ಎಂದು ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್, ವಿಶೇಷ ತೀವ್ರ ಪರಿಷ್ಕರಣೆ...

ಬಾಲಿವುಡ್ ನಟ ರಣವೀರ್ ಸಿಂಗ್ ಗೆ ಬಿಷ್ಣೋಯಿ ಗ್ಯಾಂಗ್ ನಿಂದ ಜೀವಬೆದರಿಕೆ: ಅಮೆರಿಕಾ ನಂಬರ್ ನಿಂದ 10ಕೋಟಿ ರೂ. ಬೇಡಿಕೆ 

ಬಿಷ್ಣೋಯ್ ಗ್ಯಾಂಗ್ ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಂದ 10 ಕೋಟಿ ರೂ.ಗೆ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಅಮೆರಿಕದ ಸಂಖ್ಯೆಯಿಂದ ಬಂದ ವಾಯ್ಸ್ ನೋಟ್ ಮೂಲಕ ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ. ಮುಂಬೈ ಪೊಲೀಸ್...

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...

ನೆಲಮಂಗಲದಲ್ಲಿ ಹಾಸಿಗೆ ಹಿಡಿದ ಪತಿಯ ಎದುರೇ 60ವರ್ಷದ ಮಹಿಳೆಯ ಕೊಲೆ; ಐದು ಗಂಟೆಗಳಲ್ಲಿ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲದ ಪೇಟೆ ಬೀದಿಯಲ್ಲಿ ವೀಲ್‌ಚೇರ್‌ನಲ್ಲಿ ಕುಳಿತಿದ್ದ ಗಂಡನ ಮುಂದೆಯೇ ಮಹಿಳೆಯೊಬ್ಬಳ ಕೊಲೆಯಾದ ಐದು ಗಂಟೆಗಳಲ್ಲಿ ನೆಲಮಂಗಲ ಪಟ್ಟಣ ಪೊಲೀಸರು 45 ವರ್ಷದ ದಿನಸಿ ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಫೆಬ್ರವರಿ...