Homeಕರ್ನಾಟಕಜೆಎನ್‌ಯು ಮೇಲಿನ ದಾಳಿ ನನಗೆ 26/11 ಭಯೋತ್ಪಾದಕ ದಾಳಿಯನ್ನು ನೆನಪಿಸುತ್ತದೆ": ಉದ್ಧವ್ ಠಾಕ್ರೆ

ಜೆಎನ್‌ಯು ಮೇಲಿನ ದಾಳಿ ನನಗೆ 26/11 ಭಯೋತ್ಪಾದಕ ದಾಳಿಯನ್ನು ನೆನಪಿಸುತ್ತದೆ”: ಉದ್ಧವ್ ಠಾಕ್ರೆ

- Advertisement -
- Advertisement -

ಮಹಾರಾಷ್ಟ್ರದ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರು ಕಳೆದ ರಾತ್ರಿ ಜೆಎನ್‌ಯು ವಿದ್ಯಾರ್ಥಿಗಳ ಮೇಲಿನ ಕ್ರೂರ ದಾಳಿಯನ್ನು 26/11 ಮುಂಬೈ ಭಯೋತ್ಪಾದಕ ದಾಳಿಗೆ ಹೋಲಿಸಿದ್ದಾರೆ. ಕಬ್ಬಿಣದ ಸರಳುಗಳಂತಹ ಶಸ್ತ್ರಗಳಿಂದ ಮುಖವಾಡ ಧರಿಸಿದ ಗೂಂಡಾಗಳು ನಡೆಸಿರುವ ಹಿಂಸಾತ್ಮಕ ದಾಳಿಯನ್ನು “ಹೇಡಿತನ” ಎಂದು ಅವರು ಕರೆದಿದ್ದಾರೆ.

ದೆಹಲಿ ಪೊಲೀಸರು ತ್ವರಿತವಾಗಿ ಮತ್ತು ನಿರ್ಣಾಯಕವಾಗಿ ವರ್ತಿಸಬೇಕು. ನಿಷ್ಪಕ್ಷಪಾತ ತನಿಖೆ ನಡೆಸಿ ತಪ್ಪಿತಸ್ಥರಿಗೆ ಶಿಕ್ಷೆ ಆಗುವ ಹಾಗೆ ಮಾಡಬೇಕು. ಈ ರೀತಿ ಮಾಡಲು ವಿಫಲವಾದರೆ ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡಲು ವಿಫಲವಾಗಿದ್ದೀರಿ ಎಂದೇ ಅರ್ಥ ಎಂದು ಉದ್ಧವ್‌ ಎಚ್ಚರಿಕೆ ನೀಡಿದ್ದಾರೆ.

“ಯುವಕರು ಭಯಭೀತರಾಗಿದ್ದಾರೆ ಮತ್ತು ಕೋಪಗೊಂಡಿದ್ದಾರೆ. ನಾವೆಲ್ಲರೂ ಒಗ್ಗೂಡಿ ಅವರಲ್ಲಿ ವಿಶ್ವಾಸ ಮೂಡಿಸಬೇಕಾಗಿದೆ. ನಮ್ಮ ಯುವಜನರು ಹೇಡಿಗಳಲ್ಲ. ಯುವಜನರನ್ನು ಪ್ರಚೋದಿಸುವ ಮೂಲಕ ಬಾಂಬ್ ಸ್ಫೋಟಿಸಬೇಡಿ. ಪೊಲೀಸರು ನಿಷ್ಪಕ್ಷಪಾತವಾಗಿ ವರ್ತಿಸದಿದ್ದರೆ, ಅವರ ಕಠೋರ ಪ್ರಶ್ನೆಗಳನ್ನು ಎದುರಿಸಬೇಕಾಗುತ್ತಿದೆ ಎಂದು ಠಾಕ್ರೆ ಹೇಳಿದ್ದಾರೆ.

2008 ರಲ್ಲಿ ಮುಂಬೈನ ಪ್ರಮುಖ ಸ್ಥಳಗಳ ಮೇಲೆ ಮೂರು ದಿನಗಳ ಕಾಲ ಭಯೋತ್ಪಾದಕರು ದಾಳಿ ಮಾಡಿದ್ದರು. ಇದರಿಂದ 160 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದರು ಮತ್ತು ನೂರಾರು ಜನರು ಗಾಯಗೊಂಡಿದ್ದರು. ಲಷ್ಕರ್-ಎ-ತೈಬಾ ಮುಖ್ಯಸ್ಥ ಹಫೀಜ್ ಸಯೀದ್ ಈ ದಾಳಿಯ ಮಾಸ್ಟರ್ ಮೈಂಡ್ ಆಗಿದ್ದ.

ಇನ್ನು ಕಾಂಗ್ರೆಸ್ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಕೂಡ ಜೆನ್‌ಎನ್‌ಯು ಹಿಂಸೆಯನ್ನು ಖಂಡಿಸಿದ್ದಾರೆ. “ಈ ಹಿಂಸೆಯು ಭಿನ್ನಾಭಿಪ್ರಾಯದ ಪ್ರತಿ ಧ್ವನಿಯನ್ನು ನಿಗ್ರಹಿಸಲು ಮತ್ತು ವಶಪಡಿಸಿಕೊಳ್ಳಲು ಸರ್ಕಾರವು ಎಂತಹ ಮಟ್ಟಕ್ಕೂ ಹೋಗಬಹುದು ಎಂಬುದರ ಕಠೋರ ಜ್ಞಾಪನೆಯಾಗಿದೆ” ಎಂದು ಅವರು ಹೇಳಿದ್ದಾರೆ.

ಭಾರತದ ಯುವಜನರ ಮತ್ತು ವಿದ್ಯಾರ್ಥಿಗಳ ಧ್ವನಿಯನ್ನು ಪ್ರತಿದಿನ ನಿಗ್ರಹಿಸಲಾಗುತ್ತಿದೆ. ಆಡಳಿತಾರೂಢ ಮೋದಿ ಸರ್ಕಾರವನ್ನು ಸಕ್ರಿಯವಾಗಿ ಬೆಂಬಲಿಸುವ ಗೂಂಡಾಗಳು ಭಾರತದ ಯುವಜನರ ಮೇಲೆ ನಡೆಸಿದ ಭಯಾನಕ ಹಿಂಸಾಚಾರವು ಶೋಚನೀಯ ಮತ್ತು ಸ್ವೀಕಾರಾರ್ಹವಲ್ಲ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಮಾಜಿ ಸಚಿವ ಪಿ ಚಿದಂಬರಂ ಮಾತನಾಡಿ ಜೆಎನ್‌ಯು ಹಿಂಸಾಚಾರದ ಈ ಘಟನೆಯು ಬಹುಶಃ ನಾವು ಅರಾಜಕತೆಗೆ ವೇಗವಾಗಿ ಇಳಿಯುತ್ತಿದ್ದೇವೆ ಎಂಬುದಕ್ಕೆ ಅತ್ಯಂತ ಸಾಕ್ಷಿಯಾಗಿದೆ. ಇದು ಕೇಂದ್ರ ಸರ್ಕಾರ, ಗೃಹ ಸಚಿವ, ಲೆಫ್ಟಿನೆಂಟ್‌ ಗರ್ವನರ್‌ ಮತ್ತು ಪೊಲೀಸ್ ಆಯುಕ್ತರ ಮೇಲ್ವಿಚಾರಣೆಯಲ್ಲಿ ದೆಹಲಿಯಲ್ಲಿರುವ ಭಾರತದ ಅಗ್ರಗಣ್ಯ ವಿಶ್ವವಿದ್ಯಾಲಯದಲ್ಲಿ ಸಂಭವಿಸಿದೆ ಸಂಭವಿಸಿದೆ ಎಂದು ಅಸಮಾಧಾಣ ವ್ಯಕ್ತಪಡಿಸಿದ್ದಾರೆ.

ಸಮಾಜವಾದಿ ಪಕ್ಷದ ಅಖಿಲೇಶ್ ಯಾದವ್ ಮಾತನಾಡಿ ಮುಖವಾಡದ ದಾಳಿಕೋರರು ದೆಹಲಿಯ ಜೆಎನ್‌ಯು ಕ್ಯಾಂಪಸ್‌ಗೆ ಹೇಗೆ ಪ್ರವೇಶಿಸಿದರು ಮತ್ತು ಯೋಜಿತ ರೀತಿಯಲ್ಲಿ ಹೇಗೆ ದಾಳಿ ಮಾಡಿದರು ಎಂಬುದನ್ನು ದೇಶ ಮತ್ತು ಜಗತ್ತು ನೋಡಿದೆ. ನ್ಯಾಯಯುತ ತನಿಖೆ ಅಗತ್ಯವಿದೆ ಏಕೆಂದರೆ ಇದರ ಹಿಂದೆ ಮುಖ್ಯ ಸಂಚುಕೋರ ಯಾರು ಎಂದು ನಾವು ತಿಳಿದುಕೊಳ್ಳಬೇಕಿದೆ ಎಂದು ಆಗ್ರಹಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...