Homeಮುಖಪುಟದ್ರೌಪದಿ ಮುರ್ಮು ಬೆಂಬಲಿಸುವಂತೆ ಉದ್ಧವ್‌ ಮೇಲೆ ಒತ್ತಡ ಹೇರಿಕೆ: ಯಶವಂತ ಸಿನ್ಹಾ

ದ್ರೌಪದಿ ಮುರ್ಮು ಬೆಂಬಲಿಸುವಂತೆ ಉದ್ಧವ್‌ ಮೇಲೆ ಒತ್ತಡ ಹೇರಿಕೆ: ಯಶವಂತ ಸಿನ್ಹಾ

- Advertisement -
- Advertisement -

ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರು ರಾಷ್ಟ್ರಪತಿ ಚುನಾವಣೆಯಲ್ಲಿ ಎನ್‌ಡಿಎ ಅಭ್ಯರ್ಥಿ ದ್ರೌಪದಿ ಮುರ್ಮು ಅವರನ್ನು ಬಲವಂತವಾಗಿ ಬೆಂಬಲಿಸುತ್ತಿದ್ದಾರೆ ಎಂದು ವಿರೋಧ ಪಕ್ಷದ ಅಭ್ಯರ್ಥಿ ಯಶವಂತ್ ಸಿನ್ಹಾ ತಿಳಿಸಿದ್ದಾರೆ.

“ನಾನು ರಾಜಕೀಯ ಪಕ್ಷದ ವಿರುದ್ಧ ಹೋರಾಡುತ್ತಿಲ್ಲ, ಆದರೆ ಕೇಂದ್ರ ಸರ್ಕಾರದ ವಿರುದ್ಧ ಹೋರಾಡುತ್ತಿದ್ದೇನೆ” ಎಂದು ಸಿನ್ಹಾ ಅವರು ಗುವಾಹಟಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಉದ್ಧವ್ ಠಾಕ್ರೆ ಆರಂಭದಲ್ಲಿ ವಿರೋಧ ಪಕ್ಷದ ಅಭ್ಯರ್ಥಿಯ ಬೆಂಬಲಿಗರಾಗಿದ್ದರು. ಆದರೆ ಶಿವಸೇನೆಯ 16 ಜನಪ್ರತಿನಿಧಿಗಳ ಗುಂಪು ಒತ್ತಾಯಿಸಿದ ನಂತರ ಈ ವಾರದ ಆರಂಭದಲ್ಲಿ ಮುರ್ಮು ಅವರಿಗೆ ಬೆಂಬಲವನ್ನು ಘೋಷಿಸಿದ್ದಾರೆ.

ಮಂಗಳವಾರ ಪ್ರತಿಕ್ರಿಯೆ ನೀಡಿದ್ದ ಉದ್ಧವ್‌, “ಪ್ರಸ್ತುತ ರಾಜಕೀಯ ವಾತಾವರಣವನ್ನು ನೋಡಿದರೆ, ನಾನು ಮುರ್ಮು ಅವರನ್ನು ಬೆಂಬಲಿಸಬಾರದಿತ್ತು, ಆದರೆ ನಾವು ಸಂಕುಚಿತ ಮನಸ್ಸಿನವರಲ್ಲ” ಎಂದು ಹೇಳಿಕೆ ನೀಡಿದ್ದಾರೆ.

ಆದಾಗ್ಯೂ, ಅವರು ಮುರ್ಮು ಅವರಿಗೆ ಬೆಂಬಲ ನೀಡಲು ಬಯಸಿದ್ದಾರೆ. ಶಿವಸೇನೆ ಪಕ್ಷದಲ್ಲಿ ಬೆಳೆಯುತ್ತಿರುವ ವಿಭಜನೆಯನ್ನು ತಡೆಯುವ ಪ್ರಯತ್ನವಾಗಿ ಉದ್ಧವ್ ಈ ಹೆಜ್ಜೆ ಇರಿಸಿದ್ದಾರೆಂದು ರಾಜಕೀಯ ವಿಶ್ಲೇಷಕರು ಅಭಿಪ್ರಾಯಪಡುತ್ತಿದ್ದಾರೆ.

ಮುಖ್ಯಮಂತ್ರಿಯಾಗಿರುವ ಏಕನಾಥ್ ಶಿಂಧೆ ಬಂಡಾಯವೆದ್ದ ನಂತರ ರಾಷ್ಟ್ರಪತಿ ಚುನಾವಣೆಗೂ ಮುನ್ನ ಮಹಾರಾಷ್ಟ್ರದಲ್ಲಿ ಮೈತ್ರಿ ಸರ್ಕಾರ ಕಳೆದ ತಿಂಗಳು ಪತನಗೊಂಡಿತ್ತು. 55 ಸೇನಾ ಶಾಸಕರ ಪೈಕಿ 40 ಮಂದಿ ಶಿಂಧೆ ಅವರನ್ನು ಬೆಂಬಲಿಸಿದ್ದರು. ಸಂಸತ್ತಿನಲ್ಲೂ ಕನಿಷ್ಠ ಆರು ಮಂದಿ ಸಂಸದರು ಇನ್ನೊಂದು ಬದಿಯಲ್ಲಿದ್ದಂತೆ ಕಂಡುಬಂದಿತು.

ರಾಷ್ಟ್ರಪತಿ ಚುನಾವಣೆಗೆ ಮುನ್ನ ಪ್ರತಿಪಕ್ಷಗಳನ್ನು ದುರ್ಬಲಗೊಳಿಸಲು ಕೇಂದ್ರವು ಎಲ್ಲ ರೀತಿಯಲ್ಲೂ ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದ ಯಶವಂತ್ ಸಿನ್ಹಾ, “ಜಾರಿ ನಿರ್ದೇಶನಾಲಯದ ದುರುಪಯೋಗ ನಡೆಯುತ್ತಿದೆ. ಸೆಂಟ್ರಲ್‌ ಏಜೆನ್ಸಿಗಳನ್ನು ಬಳಸಿಕೊಂಡು ಚುನಾಯಿತ ಸರ್ಕಾರಗಳನ್ನು ಉರುಳಿಸುತ್ತಿದ್ದಾರೆ” ಎಂದು ದೂರಿದ್ದಾರೆ.

ರಾಷ್ಟ್ರಪತಿ ಚುನಾವಣೆಗೂ ಮುನ್ನ ವಿರೋಧ ಪಕ್ಷಗಳನ್ನು ಒಡೆಯಲು ಕೇಂದ್ರ ಸರ್ಕಾರ ಪ್ರಯತ್ನಿಸುತ್ತಿದೆ ಎಂದು ಸಿನ್ಹಾ ಆರೋಪಿಸಿದ್ದಾರೆ.

ಇದನ್ನೂ ಓದಿರಿ: 10% ಮೀಸಲಾತಿ: ಆರ್‌‌ಎಸ್‌ಎಸ್‌ ಮಂದಿ ಹಬ್ಬಿಸಿರುವ 100% ಸುಳ್ಳುಗಳು!

ಆದರೆ ಪ್ರಾದೇಶಿಕ ಪಕ್ಷಗಳು ಒಂದರ ನಂತರ ಒಂದರಂತೆ ಮುರ್ಮುವನ್ನು ಬೆಂಬಲಿಸಲು ಉತ್ಸುಕತೆಯನ್ನು ತೋರಿಸುತ್ತಿದ್ದರೂ, ಸಿನ್ಹಾ ಲವಲವಿಕೆಯಿಂದ ಇದ್ದಾರೆ.

“ತೃಣಮೂಲ ಕಾಂಗ್ರೆಸ್‌ನ ಮಮತಾ ಬ್ಯಾನರ್ಜಿ ನನ್ನನ್ನು ಸಂಪೂರ್ಣವಾಗಿ ಬೆಂಬಲಿಸುತ್ತಿದ್ದಾರೆ. ಆಮ್ ಆದ್ಮಿ ಪಕ್ಷವು ಶೀಘ್ರದಲ್ಲೇ ಬೆಂಬಲ ಸೂಚಿಸುವುದೆಂದು ನನಗೆ ತಿಳಿದಿದೆ. ವಿರೋಧ ಪಕ್ಷದ ಪಾಳಯದಲ್ಲಿ ಕೇವಲ ಒಂದು ಪಕ್ಷ ಮಾತ್ರ ಎನ್‌ಡಿಎ ಅಭ್ಯರ್ಥಿಯನ್ನು ಬೆಂಬಲಿಸುತ್ತಿದೆ – ಅದು ಶಿವಸೇನೆ. ತೆಲಂಗಾಣ ರಾಷ್ಟ್ರ ಸಮಿತಿಯು ವಿರೋಧ ಪಕ್ಷದ ಸಭೆಯ ಭಾಗವಾಗಿರಲಿಲ್ಲ, ಆದರೆ ಆ ಪಕ್ಷವೂ ನನ್ನನ್ನು ಬೆಂಬಲಿಸಲಿದೆ. ಆದ್ದರಿಂದ ನಮಗೆ ಸಾಕಷ್ಟು ವಿರೋಧ ಪಕ್ಷದ ಬೆಂಬಲವಿದೆ” ಎಂದು ಸಿನ್ಹಾ ಪ್ರತಿಪಾದಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...