Homeಮುಖಪುಟದ್ರೌಪದಿ ಮುರ್ಮು ಬೆಂಬಲಿಸುವಂತೆ ಉದ್ಧವ್‌ ಮೇಲೆ ಒತ್ತಡ ಹೇರಿಕೆ: ಯಶವಂತ ಸಿನ್ಹಾ

ದ್ರೌಪದಿ ಮುರ್ಮು ಬೆಂಬಲಿಸುವಂತೆ ಉದ್ಧವ್‌ ಮೇಲೆ ಒತ್ತಡ ಹೇರಿಕೆ: ಯಶವಂತ ಸಿನ್ಹಾ

- Advertisement -
- Advertisement -

ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರು ರಾಷ್ಟ್ರಪತಿ ಚುನಾವಣೆಯಲ್ಲಿ ಎನ್‌ಡಿಎ ಅಭ್ಯರ್ಥಿ ದ್ರೌಪದಿ ಮುರ್ಮು ಅವರನ್ನು ಬಲವಂತವಾಗಿ ಬೆಂಬಲಿಸುತ್ತಿದ್ದಾರೆ ಎಂದು ವಿರೋಧ ಪಕ್ಷದ ಅಭ್ಯರ್ಥಿ ಯಶವಂತ್ ಸಿನ್ಹಾ ತಿಳಿಸಿದ್ದಾರೆ.

“ನಾನು ರಾಜಕೀಯ ಪಕ್ಷದ ವಿರುದ್ಧ ಹೋರಾಡುತ್ತಿಲ್ಲ, ಆದರೆ ಕೇಂದ್ರ ಸರ್ಕಾರದ ವಿರುದ್ಧ ಹೋರಾಡುತ್ತಿದ್ದೇನೆ” ಎಂದು ಸಿನ್ಹಾ ಅವರು ಗುವಾಹಟಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಉದ್ಧವ್ ಠಾಕ್ರೆ ಆರಂಭದಲ್ಲಿ ವಿರೋಧ ಪಕ್ಷದ ಅಭ್ಯರ್ಥಿಯ ಬೆಂಬಲಿಗರಾಗಿದ್ದರು. ಆದರೆ ಶಿವಸೇನೆಯ 16 ಜನಪ್ರತಿನಿಧಿಗಳ ಗುಂಪು ಒತ್ತಾಯಿಸಿದ ನಂತರ ಈ ವಾರದ ಆರಂಭದಲ್ಲಿ ಮುರ್ಮು ಅವರಿಗೆ ಬೆಂಬಲವನ್ನು ಘೋಷಿಸಿದ್ದಾರೆ.

ಮಂಗಳವಾರ ಪ್ರತಿಕ್ರಿಯೆ ನೀಡಿದ್ದ ಉದ್ಧವ್‌, “ಪ್ರಸ್ತುತ ರಾಜಕೀಯ ವಾತಾವರಣವನ್ನು ನೋಡಿದರೆ, ನಾನು ಮುರ್ಮು ಅವರನ್ನು ಬೆಂಬಲಿಸಬಾರದಿತ್ತು, ಆದರೆ ನಾವು ಸಂಕುಚಿತ ಮನಸ್ಸಿನವರಲ್ಲ” ಎಂದು ಹೇಳಿಕೆ ನೀಡಿದ್ದಾರೆ.

ಆದಾಗ್ಯೂ, ಅವರು ಮುರ್ಮು ಅವರಿಗೆ ಬೆಂಬಲ ನೀಡಲು ಬಯಸಿದ್ದಾರೆ. ಶಿವಸೇನೆ ಪಕ್ಷದಲ್ಲಿ ಬೆಳೆಯುತ್ತಿರುವ ವಿಭಜನೆಯನ್ನು ತಡೆಯುವ ಪ್ರಯತ್ನವಾಗಿ ಉದ್ಧವ್ ಈ ಹೆಜ್ಜೆ ಇರಿಸಿದ್ದಾರೆಂದು ರಾಜಕೀಯ ವಿಶ್ಲೇಷಕರು ಅಭಿಪ್ರಾಯಪಡುತ್ತಿದ್ದಾರೆ.

ಮುಖ್ಯಮಂತ್ರಿಯಾಗಿರುವ ಏಕನಾಥ್ ಶಿಂಧೆ ಬಂಡಾಯವೆದ್ದ ನಂತರ ರಾಷ್ಟ್ರಪತಿ ಚುನಾವಣೆಗೂ ಮುನ್ನ ಮಹಾರಾಷ್ಟ್ರದಲ್ಲಿ ಮೈತ್ರಿ ಸರ್ಕಾರ ಕಳೆದ ತಿಂಗಳು ಪತನಗೊಂಡಿತ್ತು. 55 ಸೇನಾ ಶಾಸಕರ ಪೈಕಿ 40 ಮಂದಿ ಶಿಂಧೆ ಅವರನ್ನು ಬೆಂಬಲಿಸಿದ್ದರು. ಸಂಸತ್ತಿನಲ್ಲೂ ಕನಿಷ್ಠ ಆರು ಮಂದಿ ಸಂಸದರು ಇನ್ನೊಂದು ಬದಿಯಲ್ಲಿದ್ದಂತೆ ಕಂಡುಬಂದಿತು.

ರಾಷ್ಟ್ರಪತಿ ಚುನಾವಣೆಗೆ ಮುನ್ನ ಪ್ರತಿಪಕ್ಷಗಳನ್ನು ದುರ್ಬಲಗೊಳಿಸಲು ಕೇಂದ್ರವು ಎಲ್ಲ ರೀತಿಯಲ್ಲೂ ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದ ಯಶವಂತ್ ಸಿನ್ಹಾ, “ಜಾರಿ ನಿರ್ದೇಶನಾಲಯದ ದುರುಪಯೋಗ ನಡೆಯುತ್ತಿದೆ. ಸೆಂಟ್ರಲ್‌ ಏಜೆನ್ಸಿಗಳನ್ನು ಬಳಸಿಕೊಂಡು ಚುನಾಯಿತ ಸರ್ಕಾರಗಳನ್ನು ಉರುಳಿಸುತ್ತಿದ್ದಾರೆ” ಎಂದು ದೂರಿದ್ದಾರೆ.

ರಾಷ್ಟ್ರಪತಿ ಚುನಾವಣೆಗೂ ಮುನ್ನ ವಿರೋಧ ಪಕ್ಷಗಳನ್ನು ಒಡೆಯಲು ಕೇಂದ್ರ ಸರ್ಕಾರ ಪ್ರಯತ್ನಿಸುತ್ತಿದೆ ಎಂದು ಸಿನ್ಹಾ ಆರೋಪಿಸಿದ್ದಾರೆ.

ಇದನ್ನೂ ಓದಿರಿ: 10% ಮೀಸಲಾತಿ: ಆರ್‌‌ಎಸ್‌ಎಸ್‌ ಮಂದಿ ಹಬ್ಬಿಸಿರುವ 100% ಸುಳ್ಳುಗಳು!

ಆದರೆ ಪ್ರಾದೇಶಿಕ ಪಕ್ಷಗಳು ಒಂದರ ನಂತರ ಒಂದರಂತೆ ಮುರ್ಮುವನ್ನು ಬೆಂಬಲಿಸಲು ಉತ್ಸುಕತೆಯನ್ನು ತೋರಿಸುತ್ತಿದ್ದರೂ, ಸಿನ್ಹಾ ಲವಲವಿಕೆಯಿಂದ ಇದ್ದಾರೆ.

“ತೃಣಮೂಲ ಕಾಂಗ್ರೆಸ್‌ನ ಮಮತಾ ಬ್ಯಾನರ್ಜಿ ನನ್ನನ್ನು ಸಂಪೂರ್ಣವಾಗಿ ಬೆಂಬಲಿಸುತ್ತಿದ್ದಾರೆ. ಆಮ್ ಆದ್ಮಿ ಪಕ್ಷವು ಶೀಘ್ರದಲ್ಲೇ ಬೆಂಬಲ ಸೂಚಿಸುವುದೆಂದು ನನಗೆ ತಿಳಿದಿದೆ. ವಿರೋಧ ಪಕ್ಷದ ಪಾಳಯದಲ್ಲಿ ಕೇವಲ ಒಂದು ಪಕ್ಷ ಮಾತ್ರ ಎನ್‌ಡಿಎ ಅಭ್ಯರ್ಥಿಯನ್ನು ಬೆಂಬಲಿಸುತ್ತಿದೆ – ಅದು ಶಿವಸೇನೆ. ತೆಲಂಗಾಣ ರಾಷ್ಟ್ರ ಸಮಿತಿಯು ವಿರೋಧ ಪಕ್ಷದ ಸಭೆಯ ಭಾಗವಾಗಿರಲಿಲ್ಲ, ಆದರೆ ಆ ಪಕ್ಷವೂ ನನ್ನನ್ನು ಬೆಂಬಲಿಸಲಿದೆ. ಆದ್ದರಿಂದ ನಮಗೆ ಸಾಕಷ್ಟು ವಿರೋಧ ಪಕ್ಷದ ಬೆಂಬಲವಿದೆ” ಎಂದು ಸಿನ್ಹಾ ಪ್ರತಿಪಾದಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....