Homeಮುಖಪುಟಭೀಮಶಕ್ತಿಯ ಜೊತೆಗೂಡಿದ ಶಿವಶಕ್ತಿ: ಪ್ರಕಾಶ್ ಅಂಬೇಡ್ಕರ್‌ರವರ ವಂಚಿತ್ ಬಹುಜನ ಆಘಾಡಿಯೊಂದಿಗೆ ಉದ್ಧವ್ ಠಾಕ್ರೆ ಮೈತ್ರಿ

ಭೀಮಶಕ್ತಿಯ ಜೊತೆಗೂಡಿದ ಶಿವಶಕ್ತಿ: ಪ್ರಕಾಶ್ ಅಂಬೇಡ್ಕರ್‌ರವರ ವಂಚಿತ್ ಬಹುಜನ ಆಘಾಡಿಯೊಂದಿಗೆ ಉದ್ಧವ್ ಠಾಕ್ರೆ ಮೈತ್ರಿ

- Advertisement -
- Advertisement -

ಮಹಾರಾಷ್ಟ್ರದ ಪ್ರಮುಖ ರಾಜಕೀಯ ಬೆಳವಣಿಗೆಗಳಲ್ಲಿ ಪ್ರಕಾಶ್ ಅಂಬೇಡ್ಕರ್‌ರವರ ವಂಚಿತ್ ಬಹುಜನ ಆಘಾಡಿಯೊಂದಿಗೆ ಉದ್ಧವ್ ಠಾಕ್ರೆಯವರ ಶಿವಸೇನೆ ಪಕ್ಷವು ಮೈತ್ರಿಗೆ ಮುಂದಾಗಿದೆ. ಭೀಮಶಕ್ತಿ ಮತ್ತು ಶಿವಶಕ್ತಿ ಜೊತೆಗೂಡಿದ್ದು ಇದು ಮುಂಬರುವ ಬಿಎಂಸಿ ಮತ್ತು ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯಲ್ಲಿ ಪ್ರಭಾವ ಬೀರಲಿದೆ ಎಂಬ ಮಾತುಗಳು ಕೇಳಿಬರುತ್ತಿವೆ.

“ಉದ್ಧವ್ ಠಾಕ್ರೆ ಕೆಲವು ದಿನಗಳ ಹಿಂದೆ ಚುನಾವಣಾ ಪೂರ್ವ ಮೈತ್ರಿ ವಿಷಯ ಪ್ರಸ್ತಾಪಿಸಿದ್ದರು. ನಮ್ಮ ವಂಚಿತ್ ಬಹುಜನ್ ಅಘಾಡಿಯಲ್ಲಿ ಎಚ್ಚರಿಕೆಯಿಂದ ಚರ್ಚಿಸಿದ ನಂತರ ನಾವು ಶಿವಸೇನೆ (ಉದ್ಧವ್ ಬಾಳಾಸಾಹೇಬ್ ಠಾಕ್ರೆ) ಜೊತೆ ಮೈತ್ರಿ ಹೊಂದಲು ನಿರ್ಧರಿಸಿದ್ದೇವೆ.” ಎಂದು ಪ್ರಕಾಶ್ ಅಂಬೇಡ್ಕರ್ ಹೇಳಿದ್ದಾರೆ.

ಆದರೂ ಈ ಮೈತ್ರಿ ಎಷ್ಟರಮಟ್ಟಿಗೆ ಸಫಲವಾಗುತ್ತದೆ ಎಂಬುದು ಉದ್ಧವ್ ಠಾಕ್ರೆಯವರ ನಡೆಯ ಮೇಲೆ ನಿಂತಿದೆ. ಏಕೆಂದರೆ ಮಹಾ ವಿಕಾಸ್ ಅಘಾಡಿಯ ನಾಲ್ಕನೇ ಪಕ್ಷವಾಗಿ ನಮ್ಮ ವಂಚಿತ್ ಬಹುಜನ್ ಅಘಾಡಿ ಸೇರಿಕೊಳ್ಳುತ್ತದೆಯೊ ಅಥವಾ ಎನ್‌ಸಿಪಿ, ಕಾಂಗ್ರೆಸ್ ಬಿಟ್ಟು ಕೇವಲ ಶಿವಸೇನೆ ಮತ್ತು ನಾವು ಮೈತ್ರಿ ಮಾಡಿಕೊಳ್ಳುತ್ತೇವೆಯೋ ಎಂಬುದನ್ನು ಅವರೆ ಹೇಳಬೇಕು. ಏಕೆಂದರೆ ಸೀಟು ಹಂಚಿಕೆ ಸೇರಿದಂತೆ ಹಲವು ಕ್ಲಿಷ್ಟ ವಿಷಯಗಳು ಇಲ್ಲಿ ಅಡಗಿವೆ ಎಂದು ಪ್ರಕಾಶ್ ಅಂಬೇಡ್ಕರ್ ಹೇಳಿದ್ದಾರೆ.

2019ರ ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯಲ್ಲಿ ಶಿವಸೇನೆ ಬಿಜೆಪಿಯೊಂದಿಗೆ ಚುನಾವಣಾ ಪೂರ್ವ ಮೈತ್ರಿ ಮಾಡಿಕೊಂಡು ಚುನಾವಣೆ ಎದುರಿಸಿತ್ತು. ಆಗ ಬಿಜೆಪಿ 105, ಶಿವಸೇನೆ-56 ಕ್ಷೇತ್ರಗಳಲ್ಲಿ ಜಯಗಳಿಸಿದ್ದವು. ಎನ್.ಸಿ.ಪಿ 54, ಕಾಂಗ್ರೆಸ್ 44 ಕ್ಷೇತ್ರಗಳಿಗೆ ತೃಪ್ತಿಪಟ್ಟುಕೊಂಡಿದ್ದವು. ಆದರೆ ಮುಖ್ಯಮಂತ್ರಿ ಯಾರಾಗಬೇಕೆಂಬ ವಿವಾದದಿಂದಾಗಿ ಶಿವಸೇನೆ ಬಿಜೆಪಿಯೊಂದಿಗೆ ಮೈತ್ರಿ ಮುರಿದುಕೊಂಡು ಕಾಂಗ್ರೆಸ್ ಮತ್ತು ಎನ್‌ಸಿಪಿ ಜೊತೆ ಸೇರಿ ಮಹಾ ವಿಕಾಸ್ ಅಘಾಡಿ ರಚಿಸಿತ್ತು.

ಆದರೆ 2022ರ ಜೂನ್‌ನಲ್ಲಿ ಶಿವಸೇನೆ ಬಣದಲ್ಲಿನ ಕೆಲವನ್ನು ಆಪರೇಷನ್ ಮಾಡಿದ ಬಿಜೆಪಿ ಕೊನೆಗೂ ಏಕನಾಥ್ ಶಿಂಧೆಯ ಶಿವಸೇನೆ ಬಣದೊಂದಿಗೆ ಸೇರಿ ಅಧಿಕಾರ ಹಿಡಿದಿದೆ. ಇದು ಉದ್ಧವ್ ಠಾಕ್ರೆ ನೇತೃತ್ವದ ಬಲ ಕುಂದಿಸಲು ಬಿಜೆಪಿ ಮಾಡಿದ ಯತ್ನ ಎನ್ನಲಾಗುತ್ತಿತ್ತು. ಅದಕ್ಕೆ ಪ್ರತಿಯಾಗಿ ಉದ್ಧವ್ ದಲಿತರ ಬೆಂಬಲವಿರುವ ಪ್ರಕಾಶ್ ಅಂಬೇಡ್ಕರ್ ಜೊತೆ ಮೈತ್ರಿಗೆ ಮುಂದಾಗಿದ್ದಾರೆ.

ವಂಚಿತ್ ಬಹುಜನ್ ಅಘಾಡಿಯ ಶಕ್ತಿ

ಪ್ರಕಾಶ್ ಅಂಬೇಡ್ಕರ್‌ರವರ ವಂಚಿತ್ ಬಹುಜನ್ ಅಘಾಡಿ ಒಬ್ಬ ಸಂಸದ ಅಥವಾ ಒಬ್ಬ ಶಾಸಕನನ್ನೂ ಸಹ ಹೊಂದಿಲ್ಲ. ಆದರೂ ಅದು 2019ರ ಲೋಕಸಭಾ ಚುನಾವಣೆಯಲ್ಲಿ ಶೇ.6.92 ರಷ್ಟು ಮತಗಳನ್ನು ಪಡೆದಿತ್ತು. ಇದರಿಂದಾಗಿ ಎನ್‌ಸಿಪಿ, ಕಾಂಗ್ರೆಸ್‌ನ 10ಕ್ಕೂ ಹೆಚ್ಚು ಅಭ್ಯರ್ಥಿಗಳು ಸೋಲು ಅನುಭವಿಸಿದ್ದರು. ಸದ್ಯ ಬಿಜೆಪಿಯನ್ನು ಗುರಿಯಾಗಿಸಿಕೊಂಡಿರುವ ಅವರು ಜಾತ್ಯಾತೀತ ಶಕ್ತಿಗಳ ಜೊತೆ ಮೈತ್ರಿಗೆ ಮುಂದಾಗಿದ್ದಾರೆ.

ಇತ್ತೀಚೆಗೆ ಶಿವಸೇನೆ ಸಂಸ್ಥಾಪಕ ಉದ್ಧವ್ ಠಾಕ್ರೆಯವರ ತಾತ ಪ್ರಬೋಧಂಕರ್ ಠಾಕ್ರೆಯವರ ನೆನಪಿನಲ್ಲಿ ಪ್ರಬೋಧಂಕರ್.ಕಾಂ ವೆಬ್‌ಸೈಟ್ ಉದ್ಘಾಟನಾ ಕಾರ್ಯಕ್ರಮದಲ್ಲಿ ಉದ್ಧವ್ ಠಾಕ್ರೆ ಮತ್ತು ಪ್ರಕಾಶ್ ಅಂಬೇಡ್ಕರ್ ಜೊತೆ ಸೇರಿದ್ದರು. ಆಗ ಮಾತನಾಡಿದ ಪ್ರಕಾಶ್ ಅಂಬೇಡ್ಕರ್, “1950ರ ದಶಕದಲ್ಲಿ ನಮ್ಮ ತಾತ ಡಾ.ಬಿ.ಆರ್ ಅಂಬೇಡ್ಕರ್ ಮತ್ತು ಉದ್ಧವ್‌ರವರ ತಾತ ಪ್ರಬೋಧಂಕರ್ ಠಾಕ್ರೆ ಜೊತೆಗೂಡಿ, ಅಸ್ಪೃಶ್ಯತೆ, ಜಾತೀಯತೆ ಮತ್ತು ವರದಕ್ಷಿಣೆಯಂತಹ ಪಿಡುಗುಗಳ ವಿರುದ್ಧ ಹೋರಾಡಿದ್ದರು. ಈಗ ನಾವು ಪ್ರಜಾಪ್ರಭುತ್ವ ಮತ್ತು ಸಂವಿಧಾನದ ಉಳಿವಿಗಾಗಿ ಸಮಾಜಕ್ಕೆ ಮಾರಕವಾಗಿರುವ ಬಿಜೆಪಿ ವಿರುದ್ಧ ಹೋರಾಡುತ್ತೇವೆ” ಎಂದಿದ್ದರು.

ನಮ್ಮ ವಂಚಿತ್ ಬಹುಜನ್ ಅಘಾಡಿ ಪಕ್ಷವು ಅಂಚಿಗೆ ತಳ್ಳಲ್ಪಟ್ಟವರ ಮತ್ತು ಹಿಂದುಳಿದ ಜಾತಿ, ಧರ್ಮಗಳ ದನಿಯಾಗಿದೆ. ನಾವು ಬಡವರನ್ನು ಪ್ರತಿನಿಧಿಸುತ್ತೇವೆ. ನಮ್ಮ ಮೈತ್ರಿಗೆ ಮತ ಪರಿವರ್ತಿಸುವ ಶಕ್ತಿ ನಮಗೆ. ಅದು ಮುಂದಿನ ಬಿಎಂಸಿ ಚುನಾವಣೆಯಲ್ಲಿ ಸಾಬೀತಾಗಲಿದೆ ಎಂದಿದ್ದಾರೆ.

ಇದನ್ನೂ ಓದಿ: ಬಿಜೆಪಿ ಕೈವಾಡದ ಆರೋಪ: ಕರ್ನಾಟಕದ 27 ಲಕ್ಷ ಮತದಾರರ ಹೆಸರು ಕೈಬಿಟ್ಟಿದ್ದು ಹೇಗೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಹಲ್ಗಾಮ್ ದಾಳಿ ಕುರಿತ ಪೋಸ್ಟ್‌: ಜಾನಪದ ಗಾಯಕಿ ನೇಹಾ ಸಿಂಗ್ ರಾಥೋಡ್‌ಗೆ ನಿರೀಕ್ಷಣಾ ಜಾಮೀನು ನೀಡಿದ ಸುಪ್ರೀಂ ಕೋರ್ಟ್

ನವದೆಹಲಿ: ಪಹಲ್ಗಾಮ್ ಭಯೋತ್ಪಾದಕ ದಾಳಿಯ ಕುರಿತು ಸಾಮಾಜಿಕ ಮಾಧ್ಯಮ ಪೋಸ್ಟ್‌ಗೆ ಸಂಬಂಧಿಸಿದಂತೆ ಜಾನಪದ ಗಾಯಕಿ ನೇಹಾ ಸಿಂಗ್ ರಾಥೋಡ್ ಅವರ ವಿರುದ್ಧ ದಾಖಲಾಗಿದ್ದ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಂಗಳವಾರ ಅವರಿಗೆ ನಿರೀಕ್ಷಣಾ ಜಾಮೀನು...

ಮಧ್ಯಪ್ರಾಚ್ಯ ಉದ್ವಿಗ್ನತೆ: ಎಲ್‌ಪಿಜಿ ಕೊರತೆಗೆ ಮುಂಬೈನಲ್ಲಿ ಶೇ. 20 ರಷ್ಟು ಹೋಟೆಲ್‌, ರೆಸ್ಟೋರೆಂಟ್‌ ಬಂದ್: ಬೆಂಗಳೂರು, ಚೆನ್ನೈನಲ್ಲೂ ಸಮಸ್ಯೆ

ಪಶ್ಚಿಮ ಏಷ್ಯಾ ಸಂಘರ್ಷ ಹತ್ತು ದಿನಗಳಿಗೂ ಹೆಚ್ಚು ಕಾಲ ಮುಂದುವರಿದಿರುವುದರಿಂದ, ಭಾರತದ ಹೋಟೆಲ್‌ಗಳು ಮತ್ತು ಇತರ ಉಧ್ಯಮಗಳು ಎಲ್‌ಪಿಜಿ ಪೂರೈಕೆ ಬಿಕ್ಕಟ್ಟನ್ನು ಎದುರಿಸುತ್ತಿವೆ. ಬೆಂಗಳೂರಿನ ನಂತರ, ಚೆನ್ನೈ ಮತ್ತು ಮುಂಬೈನಂತಹ ಇತರ ನಗರಗಳು ಸಹ...

‘ಕೋವಿಡ್ ಲಸಿಕೆ ಪೀಡಿತರಿಗಾಗಿ ಪರಿಹಾರ ನೀತಿ ಅಳವಡಿಸಿಕೊಳ್ಳಿ..’; ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕೋವಿಡ್ ವಿರುದ್ಧ ರೋಗನಿರೋಧಕ ಶಕ್ತಿಯಾಗಿ ಲಸಿಕೆ ನೀಡಿದ ನಂತರ ಉಂಟಾಗುವ ಪ್ರತಿಕೂಲ ಪರಿಣಾಮಗಳ ವೈಜ್ಞಾನಿಕ ಮೌಲ್ಯಮಾಪನಕ್ಕಾಗಿ ಅಸ್ತಿತ್ವದಲ್ಲಿರುವ ಕಾರ್ಯವಿಧಾನವನ್ನು ಮುಂದುವರಿಸಬೇಕೆಂದು ಸುಪ್ರೀಂ ಕೋರ್ಟ್ ಮಂಗಳವಾರ ಆದೇಶಿಸಿದೆ. ಅದೇ ಸಮಯದಲ್ಲಿ, ಕೋವಿಡ್ -19 ವ್ಯಾಕ್ಸಿನೇಷನ್ ನಂತರದ...

ಮೇಘಾಲಯ|ಜಿಲ್ಲಾ ಪರಿಷತ್ ಚುನಾವಣೆಯಲ್ಲಿ ವಿವಾದಾತ್ಮಕ ಅಧಿಸೂಚನೆ: ಪಶ್ಚಿಮ ಗಾರೋ ಬೆಟ್ಟಗಳಲ್ಲಿ ಭುಗಿಲೆದ್ದ ಹಿಂಸಾಚಾರ; ಇಬ್ಬರ ಸಾವು

ಗುವಾಹಟಿ: ಏಪ್ರಿಲ್ 10 ರಂದು ನಡೆಯಲಿರುವ ಗಾರೋ ಹಿಲ್ಸ್ ಸ್ವಾಯತ್ತ ಜಿಲ್ಲಾ ಮಂಡಳಿ (ಜಿಎಚ್‌ಎಡಿಸಿ) ಚುನಾವಣೆಯಲ್ಲಿ ಬುಡಕಟ್ಟು ಜನಾಂಗದವರಲ್ಲದವರು ಸ್ಪರ್ಧಿಸುವುದನ್ನು ನಿಷೇಧಿಸುವ ವಿವಾದಾತ್ಮಕ ಅಧಿಸೂಚನೆಯನ್ನು ವಿರೋಧಿಸಿ ಮೇಘಾಲಯದ ಪಶ್ಚಿಮ ಗಾರೋ ಹಿಲ್ಸ್ ಜಿಲ್ಲೆಯಲ್ಲಿ...

ಸಂವಿಧಾನ, ಸದನದ ಘನತೆ ಉಳಿಸಲು ಲೋಕಸಭಾ ಸ್ಪೀಕರ್ ವಿರುದ್ಧ ನಿರ್ಣಯ: ಕಾಂಗ್ರೆಸ್ ಸಂಸದ ಗೊಗೊಯ್

ಸ್ಪೀಕರ್ ಓಂ ಬಿರ್ಲಾ ಪಕ್ಷಪಾತಿ ವರ್ತನೆ ಹೊಂದಿದ್ದಾರೆ. ಹಾಗಾಗಿ, ಸಂವಿಧಾನ ಉಳಿಸಲು ವಿರೋಧ ಪಕ್ಷವು ಅವರನ್ನು ಪದಚ್ಯುತಗೊಳಿಸುವ ನಿರ್ಣಯ ತರಬೇಕಾಯಿತು ಎಂದು ಕಾಂಗ್ರೆಸ್ ಸಂಸದ ಗೌರವ್ ಗೊಗೊಯ್ ಮಂಗಳವಾರ (ಮಾ.10) ಲೋಕಸಭೆಯಲ್ಲಿ ಹೇಳಿದರು....

ನಿರಂತರ ಎಲ್‌ಪಿಜಿ ಪೂರೈಕೆ ಖಚಿತಪಡಿಸಿಕೊಳ್ಳಲು ‘ಅಗತ್ಯ ಸರಕು ಕಾಯ್ದೆ’ ಜಾರಿಗೆ ತಂದ ಕೇಂದ್ರ

ಹೋಟೆಲ್‌ ಮತ್ತು ರೆಸ್ಟೋರೆಂಟ್‌ಗಳು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆ ಕುರಿತು ದೂರು ನೀಡಿದ ನಂತರ, ದೇಶೀಯ ಅಡುಗೆ ಅನಿಲದ ನಿರಂತರ ಪೂರೈಕೆಯನ್ನು ಖಚಿತಪಡಿಸಿಕೊಳ್ಳಲು ಸರ್ಕಾರವು 'ಅಗತ್ಯ ಸರಕು ಕಾಯ್ದೆ'ಯನ್ನು ಜಾರಿಗೆ ತಂದಿದೆ ಎಂದು...

‘ಯುದ್ಧ ಯಾವಾಗ ಕೊನೆಗೊಳ್ಳುತ್ತದೆ ಎಂಬುದನ್ನು ಇರಾನ್ ನಿರ್ಧರಿಸುತ್ತದೆ’: ಟ್ರಂಪ್ ‘ಅಲ್ಪಾವಧಿಯ ಸಂಘರ್ಷ’ ಹೇಳಿಕೆಗೆ ಇರಾನ್ ತಿರುಗೇಟು 

ಟೆಹ್ರಾನ್: ಇರಾನ್‌ನಲ್ಲಿ ಯುದ್ಧವನ್ನು ಕೊನೆಗೊಳಿಸುವ ಬಗ್ಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಟೆಹ್ರಾನ್ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದು, ಅಮೆರಿಕ ಮತ್ತು ಇಸ್ರೇಲಿ ಗುರಿಗಳ ವಿರುದ್ಧದ ಮಿಲಿಟರಿ ಕ್ರಮಗಳು ಯಾವಾಗ ನಿಂತವು ಎಂಬುದನ್ನು...

ಮಹಿಳಾ ಮೀಸಲಾತಿ ಮಸೂದೆ; ತ್ವರಿತ ಅನುಷ್ಠಾನಕ್ಕೆ ವಿಪಕ್ಷಗಳ ಅಭಿಪ್ರಾಯ ಕೇಳಿದ ಕೇಂದ್ರ ಸರ್ಕಾರ

ನವದೆಹಲಿ: ಮಹಿಳಾ ಮೀಸಲಾತಿ ಕಾನೂನಿನ ಅನುಷ್ಠಾನವನ್ನು ತ್ವರಿತಗೊಳಿಸುವ ಪ್ರಯತ್ನದಲ್ಲಿ, ಲೋಕಸಭೆ ಮತ್ತು ರಾಜ್ಯ ಶಾಸಕಾಂಗ ಸಭೆಗಳಲ್ಲಿ ಮಹಿಳೆಯರಿಗೆ ಶೇ 33 ರಷ್ಟು ಮೀಸಲಾತಿ ನೀಡುವ ಶಾಸನವನ್ನು ತಿದ್ದುಪಡಿ ಮಾಡುವ ಪ್ರಸ್ತಾಪದ ಕುರಿತು ಅಭಿಪ್ರಾಯಗಳನ್ನು...

ಕೋಲ್ಕತ್ತಾ : ಕಾಳಿಘಾಟ್ ಬಳಿಕ ದಕ್ಷಿಣೇಶ್ವರದಲ್ಲೂ ಮುಖ್ಯ ಚುನಾವಣಾ ಆಯುಕ್ತರ ವಿರುದ್ಧ ‘ಗೋ ಬ್ಯಾಕ್ ಘೋಷಣೆ’

ಕಾಳಿಘಾಟ್ ಬಳಿಕ ಕೋಲ್ಕತ್ತಾದ ದಕ್ಷಿಣೇಶ್ವರ ದೇವಸ್ಥಾನದಲ್ಲೂ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಿರುದ್ದ 'ಗೋ ಬ್ಯಾಕ್ ಘೋಷಣೆಗಳು' ಕೇಳಿ ಬಂದಿವೆ. ಮಂಗಳವಾರ (ಮಾ.10) ಬೆಳಿಗ್ಗೆ ಜ್ಞಾನೇಶ್ ಕುಮಾರ್ ದಕ್ಷಿಣೇಶ್ವರ ಕಾಳಿ ದೇವಸ್ಥಾನಕ್ಕೆ ಭೇಟಿ...

ಉತ್ತರ ಪ್ರದೇಶ| ಹೋಳಿ ಹಬ್ಬದ ಶುಭ ಕೋರಿದ ದಲಿತ ಯುವಕನನ್ನು ಕೊಂದ ಪ್ರಬಲಜಾತಿ ಕುಟುಂಬ

ಉತ್ತರ ಪ್ರದೇಶದ ಲಕ್ನೋದ ದುಬಗ್ಗಾ ಪ್ರದೇಶದಲ್ಲಿ, ಹೋಳಿ ಹಬ್ಬದ ಸಂದರ್ಭದಲ್ಲಿ ಶುಭಕೋರಿದ 22 ವರ್ಷದ ದಲಿತ ವ್ಯಕ್ತಿಯನ್ನು ಬ್ರಾಹ್ಮಣ ಕುಟುಂಬದ ಸದಸ್ಯರು ಇರಿದು ಕೊಂದಿದ್ದಾರೆ ಎಂದು ಆರೋಪಿಸಲಾಗಿದೆ. ಈ ಘಟನೆ ಮಾರ್ಚ್ 4...