Homeಮುಖಪುಟಭೀಮಶಕ್ತಿಯ ಜೊತೆಗೂಡಿದ ಶಿವಶಕ್ತಿ: ಪ್ರಕಾಶ್ ಅಂಬೇಡ್ಕರ್‌ರವರ ವಂಚಿತ್ ಬಹುಜನ ಆಘಾಡಿಯೊಂದಿಗೆ ಉದ್ಧವ್ ಠಾಕ್ರೆ ಮೈತ್ರಿ

ಭೀಮಶಕ್ತಿಯ ಜೊತೆಗೂಡಿದ ಶಿವಶಕ್ತಿ: ಪ್ರಕಾಶ್ ಅಂಬೇಡ್ಕರ್‌ರವರ ವಂಚಿತ್ ಬಹುಜನ ಆಘಾಡಿಯೊಂದಿಗೆ ಉದ್ಧವ್ ಠಾಕ್ರೆ ಮೈತ್ರಿ

- Advertisement -
- Advertisement -

ಮಹಾರಾಷ್ಟ್ರದ ಪ್ರಮುಖ ರಾಜಕೀಯ ಬೆಳವಣಿಗೆಗಳಲ್ಲಿ ಪ್ರಕಾಶ್ ಅಂಬೇಡ್ಕರ್‌ರವರ ವಂಚಿತ್ ಬಹುಜನ ಆಘಾಡಿಯೊಂದಿಗೆ ಉದ್ಧವ್ ಠಾಕ್ರೆಯವರ ಶಿವಸೇನೆ ಪಕ್ಷವು ಮೈತ್ರಿಗೆ ಮುಂದಾಗಿದೆ. ಭೀಮಶಕ್ತಿ ಮತ್ತು ಶಿವಶಕ್ತಿ ಜೊತೆಗೂಡಿದ್ದು ಇದು ಮುಂಬರುವ ಬಿಎಂಸಿ ಮತ್ತು ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯಲ್ಲಿ ಪ್ರಭಾವ ಬೀರಲಿದೆ ಎಂಬ ಮಾತುಗಳು ಕೇಳಿಬರುತ್ತಿವೆ.

“ಉದ್ಧವ್ ಠಾಕ್ರೆ ಕೆಲವು ದಿನಗಳ ಹಿಂದೆ ಚುನಾವಣಾ ಪೂರ್ವ ಮೈತ್ರಿ ವಿಷಯ ಪ್ರಸ್ತಾಪಿಸಿದ್ದರು. ನಮ್ಮ ವಂಚಿತ್ ಬಹುಜನ್ ಅಘಾಡಿಯಲ್ಲಿ ಎಚ್ಚರಿಕೆಯಿಂದ ಚರ್ಚಿಸಿದ ನಂತರ ನಾವು ಶಿವಸೇನೆ (ಉದ್ಧವ್ ಬಾಳಾಸಾಹೇಬ್ ಠಾಕ್ರೆ) ಜೊತೆ ಮೈತ್ರಿ ಹೊಂದಲು ನಿರ್ಧರಿಸಿದ್ದೇವೆ.” ಎಂದು ಪ್ರಕಾಶ್ ಅಂಬೇಡ್ಕರ್ ಹೇಳಿದ್ದಾರೆ.

ಆದರೂ ಈ ಮೈತ್ರಿ ಎಷ್ಟರಮಟ್ಟಿಗೆ ಸಫಲವಾಗುತ್ತದೆ ಎಂಬುದು ಉದ್ಧವ್ ಠಾಕ್ರೆಯವರ ನಡೆಯ ಮೇಲೆ ನಿಂತಿದೆ. ಏಕೆಂದರೆ ಮಹಾ ವಿಕಾಸ್ ಅಘಾಡಿಯ ನಾಲ್ಕನೇ ಪಕ್ಷವಾಗಿ ನಮ್ಮ ವಂಚಿತ್ ಬಹುಜನ್ ಅಘಾಡಿ ಸೇರಿಕೊಳ್ಳುತ್ತದೆಯೊ ಅಥವಾ ಎನ್‌ಸಿಪಿ, ಕಾಂಗ್ರೆಸ್ ಬಿಟ್ಟು ಕೇವಲ ಶಿವಸೇನೆ ಮತ್ತು ನಾವು ಮೈತ್ರಿ ಮಾಡಿಕೊಳ್ಳುತ್ತೇವೆಯೋ ಎಂಬುದನ್ನು ಅವರೆ ಹೇಳಬೇಕು. ಏಕೆಂದರೆ ಸೀಟು ಹಂಚಿಕೆ ಸೇರಿದಂತೆ ಹಲವು ಕ್ಲಿಷ್ಟ ವಿಷಯಗಳು ಇಲ್ಲಿ ಅಡಗಿವೆ ಎಂದು ಪ್ರಕಾಶ್ ಅಂಬೇಡ್ಕರ್ ಹೇಳಿದ್ದಾರೆ.

2019ರ ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯಲ್ಲಿ ಶಿವಸೇನೆ ಬಿಜೆಪಿಯೊಂದಿಗೆ ಚುನಾವಣಾ ಪೂರ್ವ ಮೈತ್ರಿ ಮಾಡಿಕೊಂಡು ಚುನಾವಣೆ ಎದುರಿಸಿತ್ತು. ಆಗ ಬಿಜೆಪಿ 105, ಶಿವಸೇನೆ-56 ಕ್ಷೇತ್ರಗಳಲ್ಲಿ ಜಯಗಳಿಸಿದ್ದವು. ಎನ್.ಸಿ.ಪಿ 54, ಕಾಂಗ್ರೆಸ್ 44 ಕ್ಷೇತ್ರಗಳಿಗೆ ತೃಪ್ತಿಪಟ್ಟುಕೊಂಡಿದ್ದವು. ಆದರೆ ಮುಖ್ಯಮಂತ್ರಿ ಯಾರಾಗಬೇಕೆಂಬ ವಿವಾದದಿಂದಾಗಿ ಶಿವಸೇನೆ ಬಿಜೆಪಿಯೊಂದಿಗೆ ಮೈತ್ರಿ ಮುರಿದುಕೊಂಡು ಕಾಂಗ್ರೆಸ್ ಮತ್ತು ಎನ್‌ಸಿಪಿ ಜೊತೆ ಸೇರಿ ಮಹಾ ವಿಕಾಸ್ ಅಘಾಡಿ ರಚಿಸಿತ್ತು.

ಆದರೆ 2022ರ ಜೂನ್‌ನಲ್ಲಿ ಶಿವಸೇನೆ ಬಣದಲ್ಲಿನ ಕೆಲವನ್ನು ಆಪರೇಷನ್ ಮಾಡಿದ ಬಿಜೆಪಿ ಕೊನೆಗೂ ಏಕನಾಥ್ ಶಿಂಧೆಯ ಶಿವಸೇನೆ ಬಣದೊಂದಿಗೆ ಸೇರಿ ಅಧಿಕಾರ ಹಿಡಿದಿದೆ. ಇದು ಉದ್ಧವ್ ಠಾಕ್ರೆ ನೇತೃತ್ವದ ಬಲ ಕುಂದಿಸಲು ಬಿಜೆಪಿ ಮಾಡಿದ ಯತ್ನ ಎನ್ನಲಾಗುತ್ತಿತ್ತು. ಅದಕ್ಕೆ ಪ್ರತಿಯಾಗಿ ಉದ್ಧವ್ ದಲಿತರ ಬೆಂಬಲವಿರುವ ಪ್ರಕಾಶ್ ಅಂಬೇಡ್ಕರ್ ಜೊತೆ ಮೈತ್ರಿಗೆ ಮುಂದಾಗಿದ್ದಾರೆ.

ವಂಚಿತ್ ಬಹುಜನ್ ಅಘಾಡಿಯ ಶಕ್ತಿ

ಪ್ರಕಾಶ್ ಅಂಬೇಡ್ಕರ್‌ರವರ ವಂಚಿತ್ ಬಹುಜನ್ ಅಘಾಡಿ ಒಬ್ಬ ಸಂಸದ ಅಥವಾ ಒಬ್ಬ ಶಾಸಕನನ್ನೂ ಸಹ ಹೊಂದಿಲ್ಲ. ಆದರೂ ಅದು 2019ರ ಲೋಕಸಭಾ ಚುನಾವಣೆಯಲ್ಲಿ ಶೇ.6.92 ರಷ್ಟು ಮತಗಳನ್ನು ಪಡೆದಿತ್ತು. ಇದರಿಂದಾಗಿ ಎನ್‌ಸಿಪಿ, ಕಾಂಗ್ರೆಸ್‌ನ 10ಕ್ಕೂ ಹೆಚ್ಚು ಅಭ್ಯರ್ಥಿಗಳು ಸೋಲು ಅನುಭವಿಸಿದ್ದರು. ಸದ್ಯ ಬಿಜೆಪಿಯನ್ನು ಗುರಿಯಾಗಿಸಿಕೊಂಡಿರುವ ಅವರು ಜಾತ್ಯಾತೀತ ಶಕ್ತಿಗಳ ಜೊತೆ ಮೈತ್ರಿಗೆ ಮುಂದಾಗಿದ್ದಾರೆ.

ಇತ್ತೀಚೆಗೆ ಶಿವಸೇನೆ ಸಂಸ್ಥಾಪಕ ಉದ್ಧವ್ ಠಾಕ್ರೆಯವರ ತಾತ ಪ್ರಬೋಧಂಕರ್ ಠಾಕ್ರೆಯವರ ನೆನಪಿನಲ್ಲಿ ಪ್ರಬೋಧಂಕರ್.ಕಾಂ ವೆಬ್‌ಸೈಟ್ ಉದ್ಘಾಟನಾ ಕಾರ್ಯಕ್ರಮದಲ್ಲಿ ಉದ್ಧವ್ ಠಾಕ್ರೆ ಮತ್ತು ಪ್ರಕಾಶ್ ಅಂಬೇಡ್ಕರ್ ಜೊತೆ ಸೇರಿದ್ದರು. ಆಗ ಮಾತನಾಡಿದ ಪ್ರಕಾಶ್ ಅಂಬೇಡ್ಕರ್, “1950ರ ದಶಕದಲ್ಲಿ ನಮ್ಮ ತಾತ ಡಾ.ಬಿ.ಆರ್ ಅಂಬೇಡ್ಕರ್ ಮತ್ತು ಉದ್ಧವ್‌ರವರ ತಾತ ಪ್ರಬೋಧಂಕರ್ ಠಾಕ್ರೆ ಜೊತೆಗೂಡಿ, ಅಸ್ಪೃಶ್ಯತೆ, ಜಾತೀಯತೆ ಮತ್ತು ವರದಕ್ಷಿಣೆಯಂತಹ ಪಿಡುಗುಗಳ ವಿರುದ್ಧ ಹೋರಾಡಿದ್ದರು. ಈಗ ನಾವು ಪ್ರಜಾಪ್ರಭುತ್ವ ಮತ್ತು ಸಂವಿಧಾನದ ಉಳಿವಿಗಾಗಿ ಸಮಾಜಕ್ಕೆ ಮಾರಕವಾಗಿರುವ ಬಿಜೆಪಿ ವಿರುದ್ಧ ಹೋರಾಡುತ್ತೇವೆ” ಎಂದಿದ್ದರು.

ನಮ್ಮ ವಂಚಿತ್ ಬಹುಜನ್ ಅಘಾಡಿ ಪಕ್ಷವು ಅಂಚಿಗೆ ತಳ್ಳಲ್ಪಟ್ಟವರ ಮತ್ತು ಹಿಂದುಳಿದ ಜಾತಿ, ಧರ್ಮಗಳ ದನಿಯಾಗಿದೆ. ನಾವು ಬಡವರನ್ನು ಪ್ರತಿನಿಧಿಸುತ್ತೇವೆ. ನಮ್ಮ ಮೈತ್ರಿಗೆ ಮತ ಪರಿವರ್ತಿಸುವ ಶಕ್ತಿ ನಮಗೆ. ಅದು ಮುಂದಿನ ಬಿಎಂಸಿ ಚುನಾವಣೆಯಲ್ಲಿ ಸಾಬೀತಾಗಲಿದೆ ಎಂದಿದ್ದಾರೆ.

ಇದನ್ನೂ ಓದಿ: ಬಿಜೆಪಿ ಕೈವಾಡದ ಆರೋಪ: ಕರ್ನಾಟಕದ 27 ಲಕ್ಷ ಮತದಾರರ ಹೆಸರು ಕೈಬಿಟ್ಟಿದ್ದು ಹೇಗೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...