Homeಮುಖಪುಟಭೀಮಶಕ್ತಿಯ ಜೊತೆಗೂಡಿದ ಶಿವಶಕ್ತಿ: ಪ್ರಕಾಶ್ ಅಂಬೇಡ್ಕರ್‌ರವರ ವಂಚಿತ್ ಬಹುಜನ ಆಘಾಡಿಯೊಂದಿಗೆ ಉದ್ಧವ್ ಠಾಕ್ರೆ ಮೈತ್ರಿ

ಭೀಮಶಕ್ತಿಯ ಜೊತೆಗೂಡಿದ ಶಿವಶಕ್ತಿ: ಪ್ರಕಾಶ್ ಅಂಬೇಡ್ಕರ್‌ರವರ ವಂಚಿತ್ ಬಹುಜನ ಆಘಾಡಿಯೊಂದಿಗೆ ಉದ್ಧವ್ ಠಾಕ್ರೆ ಮೈತ್ರಿ

- Advertisement -
- Advertisement -

ಮಹಾರಾಷ್ಟ್ರದ ಪ್ರಮುಖ ರಾಜಕೀಯ ಬೆಳವಣಿಗೆಗಳಲ್ಲಿ ಪ್ರಕಾಶ್ ಅಂಬೇಡ್ಕರ್‌ರವರ ವಂಚಿತ್ ಬಹುಜನ ಆಘಾಡಿಯೊಂದಿಗೆ ಉದ್ಧವ್ ಠಾಕ್ರೆಯವರ ಶಿವಸೇನೆ ಪಕ್ಷವು ಮೈತ್ರಿಗೆ ಮುಂದಾಗಿದೆ. ಭೀಮಶಕ್ತಿ ಮತ್ತು ಶಿವಶಕ್ತಿ ಜೊತೆಗೂಡಿದ್ದು ಇದು ಮುಂಬರುವ ಬಿಎಂಸಿ ಮತ್ತು ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯಲ್ಲಿ ಪ್ರಭಾವ ಬೀರಲಿದೆ ಎಂಬ ಮಾತುಗಳು ಕೇಳಿಬರುತ್ತಿವೆ.

“ಉದ್ಧವ್ ಠಾಕ್ರೆ ಕೆಲವು ದಿನಗಳ ಹಿಂದೆ ಚುನಾವಣಾ ಪೂರ್ವ ಮೈತ್ರಿ ವಿಷಯ ಪ್ರಸ್ತಾಪಿಸಿದ್ದರು. ನಮ್ಮ ವಂಚಿತ್ ಬಹುಜನ್ ಅಘಾಡಿಯಲ್ಲಿ ಎಚ್ಚರಿಕೆಯಿಂದ ಚರ್ಚಿಸಿದ ನಂತರ ನಾವು ಶಿವಸೇನೆ (ಉದ್ಧವ್ ಬಾಳಾಸಾಹೇಬ್ ಠಾಕ್ರೆ) ಜೊತೆ ಮೈತ್ರಿ ಹೊಂದಲು ನಿರ್ಧರಿಸಿದ್ದೇವೆ.” ಎಂದು ಪ್ರಕಾಶ್ ಅಂಬೇಡ್ಕರ್ ಹೇಳಿದ್ದಾರೆ.

ಆದರೂ ಈ ಮೈತ್ರಿ ಎಷ್ಟರಮಟ್ಟಿಗೆ ಸಫಲವಾಗುತ್ತದೆ ಎಂಬುದು ಉದ್ಧವ್ ಠಾಕ್ರೆಯವರ ನಡೆಯ ಮೇಲೆ ನಿಂತಿದೆ. ಏಕೆಂದರೆ ಮಹಾ ವಿಕಾಸ್ ಅಘಾಡಿಯ ನಾಲ್ಕನೇ ಪಕ್ಷವಾಗಿ ನಮ್ಮ ವಂಚಿತ್ ಬಹುಜನ್ ಅಘಾಡಿ ಸೇರಿಕೊಳ್ಳುತ್ತದೆಯೊ ಅಥವಾ ಎನ್‌ಸಿಪಿ, ಕಾಂಗ್ರೆಸ್ ಬಿಟ್ಟು ಕೇವಲ ಶಿವಸೇನೆ ಮತ್ತು ನಾವು ಮೈತ್ರಿ ಮಾಡಿಕೊಳ್ಳುತ್ತೇವೆಯೋ ಎಂಬುದನ್ನು ಅವರೆ ಹೇಳಬೇಕು. ಏಕೆಂದರೆ ಸೀಟು ಹಂಚಿಕೆ ಸೇರಿದಂತೆ ಹಲವು ಕ್ಲಿಷ್ಟ ವಿಷಯಗಳು ಇಲ್ಲಿ ಅಡಗಿವೆ ಎಂದು ಪ್ರಕಾಶ್ ಅಂಬೇಡ್ಕರ್ ಹೇಳಿದ್ದಾರೆ.

2019ರ ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯಲ್ಲಿ ಶಿವಸೇನೆ ಬಿಜೆಪಿಯೊಂದಿಗೆ ಚುನಾವಣಾ ಪೂರ್ವ ಮೈತ್ರಿ ಮಾಡಿಕೊಂಡು ಚುನಾವಣೆ ಎದುರಿಸಿತ್ತು. ಆಗ ಬಿಜೆಪಿ 105, ಶಿವಸೇನೆ-56 ಕ್ಷೇತ್ರಗಳಲ್ಲಿ ಜಯಗಳಿಸಿದ್ದವು. ಎನ್.ಸಿ.ಪಿ 54, ಕಾಂಗ್ರೆಸ್ 44 ಕ್ಷೇತ್ರಗಳಿಗೆ ತೃಪ್ತಿಪಟ್ಟುಕೊಂಡಿದ್ದವು. ಆದರೆ ಮುಖ್ಯಮಂತ್ರಿ ಯಾರಾಗಬೇಕೆಂಬ ವಿವಾದದಿಂದಾಗಿ ಶಿವಸೇನೆ ಬಿಜೆಪಿಯೊಂದಿಗೆ ಮೈತ್ರಿ ಮುರಿದುಕೊಂಡು ಕಾಂಗ್ರೆಸ್ ಮತ್ತು ಎನ್‌ಸಿಪಿ ಜೊತೆ ಸೇರಿ ಮಹಾ ವಿಕಾಸ್ ಅಘಾಡಿ ರಚಿಸಿತ್ತು.

ಆದರೆ 2022ರ ಜೂನ್‌ನಲ್ಲಿ ಶಿವಸೇನೆ ಬಣದಲ್ಲಿನ ಕೆಲವನ್ನು ಆಪರೇಷನ್ ಮಾಡಿದ ಬಿಜೆಪಿ ಕೊನೆಗೂ ಏಕನಾಥ್ ಶಿಂಧೆಯ ಶಿವಸೇನೆ ಬಣದೊಂದಿಗೆ ಸೇರಿ ಅಧಿಕಾರ ಹಿಡಿದಿದೆ. ಇದು ಉದ್ಧವ್ ಠಾಕ್ರೆ ನೇತೃತ್ವದ ಬಲ ಕುಂದಿಸಲು ಬಿಜೆಪಿ ಮಾಡಿದ ಯತ್ನ ಎನ್ನಲಾಗುತ್ತಿತ್ತು. ಅದಕ್ಕೆ ಪ್ರತಿಯಾಗಿ ಉದ್ಧವ್ ದಲಿತರ ಬೆಂಬಲವಿರುವ ಪ್ರಕಾಶ್ ಅಂಬೇಡ್ಕರ್ ಜೊತೆ ಮೈತ್ರಿಗೆ ಮುಂದಾಗಿದ್ದಾರೆ.

ವಂಚಿತ್ ಬಹುಜನ್ ಅಘಾಡಿಯ ಶಕ್ತಿ

ಪ್ರಕಾಶ್ ಅಂಬೇಡ್ಕರ್‌ರವರ ವಂಚಿತ್ ಬಹುಜನ್ ಅಘಾಡಿ ಒಬ್ಬ ಸಂಸದ ಅಥವಾ ಒಬ್ಬ ಶಾಸಕನನ್ನೂ ಸಹ ಹೊಂದಿಲ್ಲ. ಆದರೂ ಅದು 2019ರ ಲೋಕಸಭಾ ಚುನಾವಣೆಯಲ್ಲಿ ಶೇ.6.92 ರಷ್ಟು ಮತಗಳನ್ನು ಪಡೆದಿತ್ತು. ಇದರಿಂದಾಗಿ ಎನ್‌ಸಿಪಿ, ಕಾಂಗ್ರೆಸ್‌ನ 10ಕ್ಕೂ ಹೆಚ್ಚು ಅಭ್ಯರ್ಥಿಗಳು ಸೋಲು ಅನುಭವಿಸಿದ್ದರು. ಸದ್ಯ ಬಿಜೆಪಿಯನ್ನು ಗುರಿಯಾಗಿಸಿಕೊಂಡಿರುವ ಅವರು ಜಾತ್ಯಾತೀತ ಶಕ್ತಿಗಳ ಜೊತೆ ಮೈತ್ರಿಗೆ ಮುಂದಾಗಿದ್ದಾರೆ.

ಇತ್ತೀಚೆಗೆ ಶಿವಸೇನೆ ಸಂಸ್ಥಾಪಕ ಉದ್ಧವ್ ಠಾಕ್ರೆಯವರ ತಾತ ಪ್ರಬೋಧಂಕರ್ ಠಾಕ್ರೆಯವರ ನೆನಪಿನಲ್ಲಿ ಪ್ರಬೋಧಂಕರ್.ಕಾಂ ವೆಬ್‌ಸೈಟ್ ಉದ್ಘಾಟನಾ ಕಾರ್ಯಕ್ರಮದಲ್ಲಿ ಉದ್ಧವ್ ಠಾಕ್ರೆ ಮತ್ತು ಪ್ರಕಾಶ್ ಅಂಬೇಡ್ಕರ್ ಜೊತೆ ಸೇರಿದ್ದರು. ಆಗ ಮಾತನಾಡಿದ ಪ್ರಕಾಶ್ ಅಂಬೇಡ್ಕರ್, “1950ರ ದಶಕದಲ್ಲಿ ನಮ್ಮ ತಾತ ಡಾ.ಬಿ.ಆರ್ ಅಂಬೇಡ್ಕರ್ ಮತ್ತು ಉದ್ಧವ್‌ರವರ ತಾತ ಪ್ರಬೋಧಂಕರ್ ಠಾಕ್ರೆ ಜೊತೆಗೂಡಿ, ಅಸ್ಪೃಶ್ಯತೆ, ಜಾತೀಯತೆ ಮತ್ತು ವರದಕ್ಷಿಣೆಯಂತಹ ಪಿಡುಗುಗಳ ವಿರುದ್ಧ ಹೋರಾಡಿದ್ದರು. ಈಗ ನಾವು ಪ್ರಜಾಪ್ರಭುತ್ವ ಮತ್ತು ಸಂವಿಧಾನದ ಉಳಿವಿಗಾಗಿ ಸಮಾಜಕ್ಕೆ ಮಾರಕವಾಗಿರುವ ಬಿಜೆಪಿ ವಿರುದ್ಧ ಹೋರಾಡುತ್ತೇವೆ” ಎಂದಿದ್ದರು.

ನಮ್ಮ ವಂಚಿತ್ ಬಹುಜನ್ ಅಘಾಡಿ ಪಕ್ಷವು ಅಂಚಿಗೆ ತಳ್ಳಲ್ಪಟ್ಟವರ ಮತ್ತು ಹಿಂದುಳಿದ ಜಾತಿ, ಧರ್ಮಗಳ ದನಿಯಾಗಿದೆ. ನಾವು ಬಡವರನ್ನು ಪ್ರತಿನಿಧಿಸುತ್ತೇವೆ. ನಮ್ಮ ಮೈತ್ರಿಗೆ ಮತ ಪರಿವರ್ತಿಸುವ ಶಕ್ತಿ ನಮಗೆ. ಅದು ಮುಂದಿನ ಬಿಎಂಸಿ ಚುನಾವಣೆಯಲ್ಲಿ ಸಾಬೀತಾಗಲಿದೆ ಎಂದಿದ್ದಾರೆ.

ಇದನ್ನೂ ಓದಿ: ಬಿಜೆಪಿ ಕೈವಾಡದ ಆರೋಪ: ಕರ್ನಾಟಕದ 27 ಲಕ್ಷ ಮತದಾರರ ಹೆಸರು ಕೈಬಿಟ್ಟಿದ್ದು ಹೇಗೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...