Homeಮುಖಪುಟಭೀಮಶಕ್ತಿಯ ಜೊತೆಗೂಡಿದ ಶಿವಶಕ್ತಿ: ಪ್ರಕಾಶ್ ಅಂಬೇಡ್ಕರ್‌ರವರ ವಂಚಿತ್ ಬಹುಜನ ಆಘಾಡಿಯೊಂದಿಗೆ ಉದ್ಧವ್ ಠಾಕ್ರೆ ಮೈತ್ರಿ

ಭೀಮಶಕ್ತಿಯ ಜೊತೆಗೂಡಿದ ಶಿವಶಕ್ತಿ: ಪ್ರಕಾಶ್ ಅಂಬೇಡ್ಕರ್‌ರವರ ವಂಚಿತ್ ಬಹುಜನ ಆಘಾಡಿಯೊಂದಿಗೆ ಉದ್ಧವ್ ಠಾಕ್ರೆ ಮೈತ್ರಿ

- Advertisement -
- Advertisement -

ಮಹಾರಾಷ್ಟ್ರದ ಪ್ರಮುಖ ರಾಜಕೀಯ ಬೆಳವಣಿಗೆಗಳಲ್ಲಿ ಪ್ರಕಾಶ್ ಅಂಬೇಡ್ಕರ್‌ರವರ ವಂಚಿತ್ ಬಹುಜನ ಆಘಾಡಿಯೊಂದಿಗೆ ಉದ್ಧವ್ ಠಾಕ್ರೆಯವರ ಶಿವಸೇನೆ ಪಕ್ಷವು ಮೈತ್ರಿಗೆ ಮುಂದಾಗಿದೆ. ಭೀಮಶಕ್ತಿ ಮತ್ತು ಶಿವಶಕ್ತಿ ಜೊತೆಗೂಡಿದ್ದು ಇದು ಮುಂಬರುವ ಬಿಎಂಸಿ ಮತ್ತು ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯಲ್ಲಿ ಪ್ರಭಾವ ಬೀರಲಿದೆ ಎಂಬ ಮಾತುಗಳು ಕೇಳಿಬರುತ್ತಿವೆ.

“ಉದ್ಧವ್ ಠಾಕ್ರೆ ಕೆಲವು ದಿನಗಳ ಹಿಂದೆ ಚುನಾವಣಾ ಪೂರ್ವ ಮೈತ್ರಿ ವಿಷಯ ಪ್ರಸ್ತಾಪಿಸಿದ್ದರು. ನಮ್ಮ ವಂಚಿತ್ ಬಹುಜನ್ ಅಘಾಡಿಯಲ್ಲಿ ಎಚ್ಚರಿಕೆಯಿಂದ ಚರ್ಚಿಸಿದ ನಂತರ ನಾವು ಶಿವಸೇನೆ (ಉದ್ಧವ್ ಬಾಳಾಸಾಹೇಬ್ ಠಾಕ್ರೆ) ಜೊತೆ ಮೈತ್ರಿ ಹೊಂದಲು ನಿರ್ಧರಿಸಿದ್ದೇವೆ.” ಎಂದು ಪ್ರಕಾಶ್ ಅಂಬೇಡ್ಕರ್ ಹೇಳಿದ್ದಾರೆ.

ಆದರೂ ಈ ಮೈತ್ರಿ ಎಷ್ಟರಮಟ್ಟಿಗೆ ಸಫಲವಾಗುತ್ತದೆ ಎಂಬುದು ಉದ್ಧವ್ ಠಾಕ್ರೆಯವರ ನಡೆಯ ಮೇಲೆ ನಿಂತಿದೆ. ಏಕೆಂದರೆ ಮಹಾ ವಿಕಾಸ್ ಅಘಾಡಿಯ ನಾಲ್ಕನೇ ಪಕ್ಷವಾಗಿ ನಮ್ಮ ವಂಚಿತ್ ಬಹುಜನ್ ಅಘಾಡಿ ಸೇರಿಕೊಳ್ಳುತ್ತದೆಯೊ ಅಥವಾ ಎನ್‌ಸಿಪಿ, ಕಾಂಗ್ರೆಸ್ ಬಿಟ್ಟು ಕೇವಲ ಶಿವಸೇನೆ ಮತ್ತು ನಾವು ಮೈತ್ರಿ ಮಾಡಿಕೊಳ್ಳುತ್ತೇವೆಯೋ ಎಂಬುದನ್ನು ಅವರೆ ಹೇಳಬೇಕು. ಏಕೆಂದರೆ ಸೀಟು ಹಂಚಿಕೆ ಸೇರಿದಂತೆ ಹಲವು ಕ್ಲಿಷ್ಟ ವಿಷಯಗಳು ಇಲ್ಲಿ ಅಡಗಿವೆ ಎಂದು ಪ್ರಕಾಶ್ ಅಂಬೇಡ್ಕರ್ ಹೇಳಿದ್ದಾರೆ.

2019ರ ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯಲ್ಲಿ ಶಿವಸೇನೆ ಬಿಜೆಪಿಯೊಂದಿಗೆ ಚುನಾವಣಾ ಪೂರ್ವ ಮೈತ್ರಿ ಮಾಡಿಕೊಂಡು ಚುನಾವಣೆ ಎದುರಿಸಿತ್ತು. ಆಗ ಬಿಜೆಪಿ 105, ಶಿವಸೇನೆ-56 ಕ್ಷೇತ್ರಗಳಲ್ಲಿ ಜಯಗಳಿಸಿದ್ದವು. ಎನ್.ಸಿ.ಪಿ 54, ಕಾಂಗ್ರೆಸ್ 44 ಕ್ಷೇತ್ರಗಳಿಗೆ ತೃಪ್ತಿಪಟ್ಟುಕೊಂಡಿದ್ದವು. ಆದರೆ ಮುಖ್ಯಮಂತ್ರಿ ಯಾರಾಗಬೇಕೆಂಬ ವಿವಾದದಿಂದಾಗಿ ಶಿವಸೇನೆ ಬಿಜೆಪಿಯೊಂದಿಗೆ ಮೈತ್ರಿ ಮುರಿದುಕೊಂಡು ಕಾಂಗ್ರೆಸ್ ಮತ್ತು ಎನ್‌ಸಿಪಿ ಜೊತೆ ಸೇರಿ ಮಹಾ ವಿಕಾಸ್ ಅಘಾಡಿ ರಚಿಸಿತ್ತು.

ಆದರೆ 2022ರ ಜೂನ್‌ನಲ್ಲಿ ಶಿವಸೇನೆ ಬಣದಲ್ಲಿನ ಕೆಲವನ್ನು ಆಪರೇಷನ್ ಮಾಡಿದ ಬಿಜೆಪಿ ಕೊನೆಗೂ ಏಕನಾಥ್ ಶಿಂಧೆಯ ಶಿವಸೇನೆ ಬಣದೊಂದಿಗೆ ಸೇರಿ ಅಧಿಕಾರ ಹಿಡಿದಿದೆ. ಇದು ಉದ್ಧವ್ ಠಾಕ್ರೆ ನೇತೃತ್ವದ ಬಲ ಕುಂದಿಸಲು ಬಿಜೆಪಿ ಮಾಡಿದ ಯತ್ನ ಎನ್ನಲಾಗುತ್ತಿತ್ತು. ಅದಕ್ಕೆ ಪ್ರತಿಯಾಗಿ ಉದ್ಧವ್ ದಲಿತರ ಬೆಂಬಲವಿರುವ ಪ್ರಕಾಶ್ ಅಂಬೇಡ್ಕರ್ ಜೊತೆ ಮೈತ್ರಿಗೆ ಮುಂದಾಗಿದ್ದಾರೆ.

ವಂಚಿತ್ ಬಹುಜನ್ ಅಘಾಡಿಯ ಶಕ್ತಿ

ಪ್ರಕಾಶ್ ಅಂಬೇಡ್ಕರ್‌ರವರ ವಂಚಿತ್ ಬಹುಜನ್ ಅಘಾಡಿ ಒಬ್ಬ ಸಂಸದ ಅಥವಾ ಒಬ್ಬ ಶಾಸಕನನ್ನೂ ಸಹ ಹೊಂದಿಲ್ಲ. ಆದರೂ ಅದು 2019ರ ಲೋಕಸಭಾ ಚುನಾವಣೆಯಲ್ಲಿ ಶೇ.6.92 ರಷ್ಟು ಮತಗಳನ್ನು ಪಡೆದಿತ್ತು. ಇದರಿಂದಾಗಿ ಎನ್‌ಸಿಪಿ, ಕಾಂಗ್ರೆಸ್‌ನ 10ಕ್ಕೂ ಹೆಚ್ಚು ಅಭ್ಯರ್ಥಿಗಳು ಸೋಲು ಅನುಭವಿಸಿದ್ದರು. ಸದ್ಯ ಬಿಜೆಪಿಯನ್ನು ಗುರಿಯಾಗಿಸಿಕೊಂಡಿರುವ ಅವರು ಜಾತ್ಯಾತೀತ ಶಕ್ತಿಗಳ ಜೊತೆ ಮೈತ್ರಿಗೆ ಮುಂದಾಗಿದ್ದಾರೆ.

ಇತ್ತೀಚೆಗೆ ಶಿವಸೇನೆ ಸಂಸ್ಥಾಪಕ ಉದ್ಧವ್ ಠಾಕ್ರೆಯವರ ತಾತ ಪ್ರಬೋಧಂಕರ್ ಠಾಕ್ರೆಯವರ ನೆನಪಿನಲ್ಲಿ ಪ್ರಬೋಧಂಕರ್.ಕಾಂ ವೆಬ್‌ಸೈಟ್ ಉದ್ಘಾಟನಾ ಕಾರ್ಯಕ್ರಮದಲ್ಲಿ ಉದ್ಧವ್ ಠಾಕ್ರೆ ಮತ್ತು ಪ್ರಕಾಶ್ ಅಂಬೇಡ್ಕರ್ ಜೊತೆ ಸೇರಿದ್ದರು. ಆಗ ಮಾತನಾಡಿದ ಪ್ರಕಾಶ್ ಅಂಬೇಡ್ಕರ್, “1950ರ ದಶಕದಲ್ಲಿ ನಮ್ಮ ತಾತ ಡಾ.ಬಿ.ಆರ್ ಅಂಬೇಡ್ಕರ್ ಮತ್ತು ಉದ್ಧವ್‌ರವರ ತಾತ ಪ್ರಬೋಧಂಕರ್ ಠಾಕ್ರೆ ಜೊತೆಗೂಡಿ, ಅಸ್ಪೃಶ್ಯತೆ, ಜಾತೀಯತೆ ಮತ್ತು ವರದಕ್ಷಿಣೆಯಂತಹ ಪಿಡುಗುಗಳ ವಿರುದ್ಧ ಹೋರಾಡಿದ್ದರು. ಈಗ ನಾವು ಪ್ರಜಾಪ್ರಭುತ್ವ ಮತ್ತು ಸಂವಿಧಾನದ ಉಳಿವಿಗಾಗಿ ಸಮಾಜಕ್ಕೆ ಮಾರಕವಾಗಿರುವ ಬಿಜೆಪಿ ವಿರುದ್ಧ ಹೋರಾಡುತ್ತೇವೆ” ಎಂದಿದ್ದರು.

ನಮ್ಮ ವಂಚಿತ್ ಬಹುಜನ್ ಅಘಾಡಿ ಪಕ್ಷವು ಅಂಚಿಗೆ ತಳ್ಳಲ್ಪಟ್ಟವರ ಮತ್ತು ಹಿಂದುಳಿದ ಜಾತಿ, ಧರ್ಮಗಳ ದನಿಯಾಗಿದೆ. ನಾವು ಬಡವರನ್ನು ಪ್ರತಿನಿಧಿಸುತ್ತೇವೆ. ನಮ್ಮ ಮೈತ್ರಿಗೆ ಮತ ಪರಿವರ್ತಿಸುವ ಶಕ್ತಿ ನಮಗೆ. ಅದು ಮುಂದಿನ ಬಿಎಂಸಿ ಚುನಾವಣೆಯಲ್ಲಿ ಸಾಬೀತಾಗಲಿದೆ ಎಂದಿದ್ದಾರೆ.

ಇದನ್ನೂ ಓದಿ: ಬಿಜೆಪಿ ಕೈವಾಡದ ಆರೋಪ: ಕರ್ನಾಟಕದ 27 ಲಕ್ಷ ಮತದಾರರ ಹೆಸರು ಕೈಬಿಟ್ಟಿದ್ದು ಹೇಗೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...