Homeಮುಖಪುಟಭೀಮಶಕ್ತಿಯ ಜೊತೆಗೂಡಿದ ಶಿವಶಕ್ತಿ: ಪ್ರಕಾಶ್ ಅಂಬೇಡ್ಕರ್‌ರವರ ವಂಚಿತ್ ಬಹುಜನ ಆಘಾಡಿಯೊಂದಿಗೆ ಉದ್ಧವ್ ಠಾಕ್ರೆ ಮೈತ್ರಿ

ಭೀಮಶಕ್ತಿಯ ಜೊತೆಗೂಡಿದ ಶಿವಶಕ್ತಿ: ಪ್ರಕಾಶ್ ಅಂಬೇಡ್ಕರ್‌ರವರ ವಂಚಿತ್ ಬಹುಜನ ಆಘಾಡಿಯೊಂದಿಗೆ ಉದ್ಧವ್ ಠಾಕ್ರೆ ಮೈತ್ರಿ

- Advertisement -
- Advertisement -

ಮಹಾರಾಷ್ಟ್ರದ ಪ್ರಮುಖ ರಾಜಕೀಯ ಬೆಳವಣಿಗೆಗಳಲ್ಲಿ ಪ್ರಕಾಶ್ ಅಂಬೇಡ್ಕರ್‌ರವರ ವಂಚಿತ್ ಬಹುಜನ ಆಘಾಡಿಯೊಂದಿಗೆ ಉದ್ಧವ್ ಠಾಕ್ರೆಯವರ ಶಿವಸೇನೆ ಪಕ್ಷವು ಮೈತ್ರಿಗೆ ಮುಂದಾಗಿದೆ. ಭೀಮಶಕ್ತಿ ಮತ್ತು ಶಿವಶಕ್ತಿ ಜೊತೆಗೂಡಿದ್ದು ಇದು ಮುಂಬರುವ ಬಿಎಂಸಿ ಮತ್ತು ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯಲ್ಲಿ ಪ್ರಭಾವ ಬೀರಲಿದೆ ಎಂಬ ಮಾತುಗಳು ಕೇಳಿಬರುತ್ತಿವೆ.

“ಉದ್ಧವ್ ಠಾಕ್ರೆ ಕೆಲವು ದಿನಗಳ ಹಿಂದೆ ಚುನಾವಣಾ ಪೂರ್ವ ಮೈತ್ರಿ ವಿಷಯ ಪ್ರಸ್ತಾಪಿಸಿದ್ದರು. ನಮ್ಮ ವಂಚಿತ್ ಬಹುಜನ್ ಅಘಾಡಿಯಲ್ಲಿ ಎಚ್ಚರಿಕೆಯಿಂದ ಚರ್ಚಿಸಿದ ನಂತರ ನಾವು ಶಿವಸೇನೆ (ಉದ್ಧವ್ ಬಾಳಾಸಾಹೇಬ್ ಠಾಕ್ರೆ) ಜೊತೆ ಮೈತ್ರಿ ಹೊಂದಲು ನಿರ್ಧರಿಸಿದ್ದೇವೆ.” ಎಂದು ಪ್ರಕಾಶ್ ಅಂಬೇಡ್ಕರ್ ಹೇಳಿದ್ದಾರೆ.

ಆದರೂ ಈ ಮೈತ್ರಿ ಎಷ್ಟರಮಟ್ಟಿಗೆ ಸಫಲವಾಗುತ್ತದೆ ಎಂಬುದು ಉದ್ಧವ್ ಠಾಕ್ರೆಯವರ ನಡೆಯ ಮೇಲೆ ನಿಂತಿದೆ. ಏಕೆಂದರೆ ಮಹಾ ವಿಕಾಸ್ ಅಘಾಡಿಯ ನಾಲ್ಕನೇ ಪಕ್ಷವಾಗಿ ನಮ್ಮ ವಂಚಿತ್ ಬಹುಜನ್ ಅಘಾಡಿ ಸೇರಿಕೊಳ್ಳುತ್ತದೆಯೊ ಅಥವಾ ಎನ್‌ಸಿಪಿ, ಕಾಂಗ್ರೆಸ್ ಬಿಟ್ಟು ಕೇವಲ ಶಿವಸೇನೆ ಮತ್ತು ನಾವು ಮೈತ್ರಿ ಮಾಡಿಕೊಳ್ಳುತ್ತೇವೆಯೋ ಎಂಬುದನ್ನು ಅವರೆ ಹೇಳಬೇಕು. ಏಕೆಂದರೆ ಸೀಟು ಹಂಚಿಕೆ ಸೇರಿದಂತೆ ಹಲವು ಕ್ಲಿಷ್ಟ ವಿಷಯಗಳು ಇಲ್ಲಿ ಅಡಗಿವೆ ಎಂದು ಪ್ರಕಾಶ್ ಅಂಬೇಡ್ಕರ್ ಹೇಳಿದ್ದಾರೆ.

2019ರ ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯಲ್ಲಿ ಶಿವಸೇನೆ ಬಿಜೆಪಿಯೊಂದಿಗೆ ಚುನಾವಣಾ ಪೂರ್ವ ಮೈತ್ರಿ ಮಾಡಿಕೊಂಡು ಚುನಾವಣೆ ಎದುರಿಸಿತ್ತು. ಆಗ ಬಿಜೆಪಿ 105, ಶಿವಸೇನೆ-56 ಕ್ಷೇತ್ರಗಳಲ್ಲಿ ಜಯಗಳಿಸಿದ್ದವು. ಎನ್.ಸಿ.ಪಿ 54, ಕಾಂಗ್ರೆಸ್ 44 ಕ್ಷೇತ್ರಗಳಿಗೆ ತೃಪ್ತಿಪಟ್ಟುಕೊಂಡಿದ್ದವು. ಆದರೆ ಮುಖ್ಯಮಂತ್ರಿ ಯಾರಾಗಬೇಕೆಂಬ ವಿವಾದದಿಂದಾಗಿ ಶಿವಸೇನೆ ಬಿಜೆಪಿಯೊಂದಿಗೆ ಮೈತ್ರಿ ಮುರಿದುಕೊಂಡು ಕಾಂಗ್ರೆಸ್ ಮತ್ತು ಎನ್‌ಸಿಪಿ ಜೊತೆ ಸೇರಿ ಮಹಾ ವಿಕಾಸ್ ಅಘಾಡಿ ರಚಿಸಿತ್ತು.

ಆದರೆ 2022ರ ಜೂನ್‌ನಲ್ಲಿ ಶಿವಸೇನೆ ಬಣದಲ್ಲಿನ ಕೆಲವನ್ನು ಆಪರೇಷನ್ ಮಾಡಿದ ಬಿಜೆಪಿ ಕೊನೆಗೂ ಏಕನಾಥ್ ಶಿಂಧೆಯ ಶಿವಸೇನೆ ಬಣದೊಂದಿಗೆ ಸೇರಿ ಅಧಿಕಾರ ಹಿಡಿದಿದೆ. ಇದು ಉದ್ಧವ್ ಠಾಕ್ರೆ ನೇತೃತ್ವದ ಬಲ ಕುಂದಿಸಲು ಬಿಜೆಪಿ ಮಾಡಿದ ಯತ್ನ ಎನ್ನಲಾಗುತ್ತಿತ್ತು. ಅದಕ್ಕೆ ಪ್ರತಿಯಾಗಿ ಉದ್ಧವ್ ದಲಿತರ ಬೆಂಬಲವಿರುವ ಪ್ರಕಾಶ್ ಅಂಬೇಡ್ಕರ್ ಜೊತೆ ಮೈತ್ರಿಗೆ ಮುಂದಾಗಿದ್ದಾರೆ.

ವಂಚಿತ್ ಬಹುಜನ್ ಅಘಾಡಿಯ ಶಕ್ತಿ

ಪ್ರಕಾಶ್ ಅಂಬೇಡ್ಕರ್‌ರವರ ವಂಚಿತ್ ಬಹುಜನ್ ಅಘಾಡಿ ಒಬ್ಬ ಸಂಸದ ಅಥವಾ ಒಬ್ಬ ಶಾಸಕನನ್ನೂ ಸಹ ಹೊಂದಿಲ್ಲ. ಆದರೂ ಅದು 2019ರ ಲೋಕಸಭಾ ಚುನಾವಣೆಯಲ್ಲಿ ಶೇ.6.92 ರಷ್ಟು ಮತಗಳನ್ನು ಪಡೆದಿತ್ತು. ಇದರಿಂದಾಗಿ ಎನ್‌ಸಿಪಿ, ಕಾಂಗ್ರೆಸ್‌ನ 10ಕ್ಕೂ ಹೆಚ್ಚು ಅಭ್ಯರ್ಥಿಗಳು ಸೋಲು ಅನುಭವಿಸಿದ್ದರು. ಸದ್ಯ ಬಿಜೆಪಿಯನ್ನು ಗುರಿಯಾಗಿಸಿಕೊಂಡಿರುವ ಅವರು ಜಾತ್ಯಾತೀತ ಶಕ್ತಿಗಳ ಜೊತೆ ಮೈತ್ರಿಗೆ ಮುಂದಾಗಿದ್ದಾರೆ.

ಇತ್ತೀಚೆಗೆ ಶಿವಸೇನೆ ಸಂಸ್ಥಾಪಕ ಉದ್ಧವ್ ಠಾಕ್ರೆಯವರ ತಾತ ಪ್ರಬೋಧಂಕರ್ ಠಾಕ್ರೆಯವರ ನೆನಪಿನಲ್ಲಿ ಪ್ರಬೋಧಂಕರ್.ಕಾಂ ವೆಬ್‌ಸೈಟ್ ಉದ್ಘಾಟನಾ ಕಾರ್ಯಕ್ರಮದಲ್ಲಿ ಉದ್ಧವ್ ಠಾಕ್ರೆ ಮತ್ತು ಪ್ರಕಾಶ್ ಅಂಬೇಡ್ಕರ್ ಜೊತೆ ಸೇರಿದ್ದರು. ಆಗ ಮಾತನಾಡಿದ ಪ್ರಕಾಶ್ ಅಂಬೇಡ್ಕರ್, “1950ರ ದಶಕದಲ್ಲಿ ನಮ್ಮ ತಾತ ಡಾ.ಬಿ.ಆರ್ ಅಂಬೇಡ್ಕರ್ ಮತ್ತು ಉದ್ಧವ್‌ರವರ ತಾತ ಪ್ರಬೋಧಂಕರ್ ಠಾಕ್ರೆ ಜೊತೆಗೂಡಿ, ಅಸ್ಪೃಶ್ಯತೆ, ಜಾತೀಯತೆ ಮತ್ತು ವರದಕ್ಷಿಣೆಯಂತಹ ಪಿಡುಗುಗಳ ವಿರುದ್ಧ ಹೋರಾಡಿದ್ದರು. ಈಗ ನಾವು ಪ್ರಜಾಪ್ರಭುತ್ವ ಮತ್ತು ಸಂವಿಧಾನದ ಉಳಿವಿಗಾಗಿ ಸಮಾಜಕ್ಕೆ ಮಾರಕವಾಗಿರುವ ಬಿಜೆಪಿ ವಿರುದ್ಧ ಹೋರಾಡುತ್ತೇವೆ” ಎಂದಿದ್ದರು.

ನಮ್ಮ ವಂಚಿತ್ ಬಹುಜನ್ ಅಘಾಡಿ ಪಕ್ಷವು ಅಂಚಿಗೆ ತಳ್ಳಲ್ಪಟ್ಟವರ ಮತ್ತು ಹಿಂದುಳಿದ ಜಾತಿ, ಧರ್ಮಗಳ ದನಿಯಾಗಿದೆ. ನಾವು ಬಡವರನ್ನು ಪ್ರತಿನಿಧಿಸುತ್ತೇವೆ. ನಮ್ಮ ಮೈತ್ರಿಗೆ ಮತ ಪರಿವರ್ತಿಸುವ ಶಕ್ತಿ ನಮಗೆ. ಅದು ಮುಂದಿನ ಬಿಎಂಸಿ ಚುನಾವಣೆಯಲ್ಲಿ ಸಾಬೀತಾಗಲಿದೆ ಎಂದಿದ್ದಾರೆ.

ಇದನ್ನೂ ಓದಿ: ಬಿಜೆಪಿ ಕೈವಾಡದ ಆರೋಪ: ಕರ್ನಾಟಕದ 27 ಲಕ್ಷ ಮತದಾರರ ಹೆಸರು ಕೈಬಿಟ್ಟಿದ್ದು ಹೇಗೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...