Homeಮುಖಪುಟಯುಪಿ ಸಾಧುಗಳ ಹತ್ಯೆಯನ್ನು ಕೋಮುವಾದೀಕರಿಸಬೇಡಿ: ಯೋಗಿಗೆ ಉದ್ಧವ್‌ ಪಾಠ

ಯುಪಿ ಸಾಧುಗಳ ಹತ್ಯೆಯನ್ನು ಕೋಮುವಾದೀಕರಿಸಬೇಡಿ: ಯೋಗಿಗೆ ಉದ್ಧವ್‌ ಪಾಠ

- Advertisement -
- Advertisement -

ಉತ್ತರ ಪ್ರದೇಶದ ಬುಲಂದ್‌ಶಹರ್‌ನಲ್ಲಿ ಹತ್ಯೆಯಾದ ಇಬ್ಬರು ಸಾಧುಗಳ ಕೊಲೆಗಾರರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಹಾಗೂ ಘಟನೆಯನ್ನು ಕೋಮುವಾದಿಕರಣ ಮಾಡಬಾರದೆಂದು ಯೋಗಿ ಆದಿತ್ಯನಾಥ್ ಅವರಿಗೆ ಉದ್ಧವ್ ಠಾಕ್ರೆ ಪಾಠ ಹೇಳಿದ್ದಾರೆ.

52 ಮತ್ತು 35 ವರ್ಷದ ಸಾಧುಗಳ ನ್ನು ಸೋಮವಾರ ರಾತ್ರಿ ಹತ್ಯೆಗೆಯ್ಯಲಾಗಿದ್ದು, ಈ ಸಂಬಂಧ ರಾಜು ಎನ್ನುವ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಪೋಲಿಸರು ತಿಳಿಸಿದ್ದಾರೆ. ಈ ಹಿಂದೆ ಸಾಧುಗಳು ಕೊಲೆಗಾರನ ವಿರುದ್ದ ಕಳ್ಳತನದ ಆರೋಪ ಹೊರಿಸಿದ್ದರು ಎನ್ನಲಾಗಿದೆ.

“ಯೋಗಿ ಆದಿತ್ಯನಾಥ್ ಅವರೊಂದಿಗೆ ದೂರವಾಣಿಯಲ್ಲಿ ಮಾತನಾಡಿದ್ದೇನೆ ಮತ್ತು ಘಟನೆಯ ಬಗ್ಗೆ ಚರ್ಚಿಸಿದ್ದೇನೆ. ಇಂತಹ ಘೋರ ಅಪರಾಧದ ವಿರುದ್ಧ ನಾವು ನಿಮ್ಮೊಂದಿಗಿದ್ದೇವೆ ಎಂದು ನಾನು ಅವರಿಗೆ ಹೇಳಿದೆ. ಮಹಾರಾಷ್ಟ್ರದಲ್ಲಿಯೂ ಇದೇ ರೀತಿಯ ಘಟನೆ ಜರುಗಿತ್ತು. ಆಗ ನಾವು ಅದನ್ನು ಕೋಮುವಾದೀಕರಿಸಲು ಬಿಡಲಿಲ್ಲ. ಆರೋಪಿಗಳನ್ನಷ್ಟೇ ಬಂಧಿಸಿದೆವು. ಅದೇ ರೀತಿ ನೀವು ಸಹ ಘಟನೆಗೆ ಕೋಮುವಾದದ ಆಯಾಮ ನೀಡುವುದನ್ನು ತಪ್ಪಿಸಬೇಕೆಂದು ನಾನು ಬಯಸುತ್ತೇನೆ” ಎಂದು ಉದ್ಧವ್ ಠಾಕ್ರೆ ಟ್ವೀಟ್ ಮಾಡಿದ್ದಾರೆ.

 

ಉತ್ತರಪ್ರದೇಶದ ಮುಖ್ಯಮಂತ್ರಿ ಆದಿತ್ಯನಾಥ್ ಈ ಹತ್ಯೆಗಳ ಬಗ್ಗೆ ಅಧಿಕಾರಿಗಳಲ್ಲಿ ವರದಿ ಕೇಳಿದ್ದಾರೆ.

ಮಹಾರಾಷ್ಟ್ರದ ಪಾಲ್ಘರ್‌ಲ್ಲಿ ಇಬ್ಬರು ಸಾಧುಗಳ ನ್ನು ಜನಸಮೂಹ ಹತ್ಯೆ ಮಾಡಿದ ನಂತರ ತನಿಖೆಗೆ ಒತ್ತಾಯಿಸಿದ ಬಿಜೆಪಿ ನಾಯಕರಲ್ಲಿ ಯೋಗಿ ಆದಿತ್ಯನಾಥ್‌ ಸಹ ಇದ್ದರು. ಮಹಾರಾಷ್ಟ್ರ ಸರ್ಕಾರವು ಘಟನೆಗೆ ಯಾವುದೇ ಕೋಮು ಸಂಬಂಧವನ್ನು ನಿರಾಕರಿಸಿದರೂ, ಹಲವಾರು ಬಿಜೆಪಿ ನಾಯಕರು ಇದು ಹಿಂದೂ ಸಾಧುಗಳ ಹತ್ಯೆ ಎಂಬ ಪ್ರಶ್ನೆಗಳನ್ನು ಎತ್ತಿದ್ದರು. ಗೃಹ ಸಚಿವ ಅಮಿತ್ ಶಾ ಅವರು ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರನ್ನು ಕರೆದು ಕಠಿಣ ಕ್ರಮ ಕೈಗೊಳ್ಳುವಂತೆ ಹೇಳಿದರು

ಅನೇಕ ಶಿವಸೇನಾ ನಾಯಕರು ಈ ಹತ್ಯೆಗಳ ಬಗ್ಗೆ ಟ್ವೀಟ್ ಮಾಡಿ, ಇದಕ್ಕೆ ಕೋಮುವಾದಿ ತಿರುವು ನೀಡದಂತೆ ಎಚ್ಚರಿಕೆ ನೀಡಿದ್ದಾರೆ.

ಶಿವಸೇನೆ ನಾಯಕ ಸಂಜಯ್ ರೌತ್ “ಭಯಾನಕ! ಯುಪಿ ಯ ಬುಲಂದ್‌ಶಹರ್‌ನಲ್ಲಿರುವ ದೇವಸ್ಥಾನವೊಂದರಲ್ಲಿ ಇಬ್ಬರು ಸಂತರನ್ನು ಕೊಲ್ಲಲಾಗಿದೆ, ಆದರೆ ಮಹಾರಾಷ್ಟ್ರದ ಪಾಲ್ಘರ್ ಘಟನೆಯನ್ನು ಕೋಮುವಾದ ಮಾಡಲು ಪ್ರಯತ್ನಿಸಿದ ರೀತಿ ಇದನ್ನೂ ಕೋಮುವಾದಿಕರಣ ಮಾಡದಂತೆ ಸಂಬಂಧಪಟ್ಟ ಎಲ್ಲರಿಗೂ ಮನವಿ ಮಾಡುತ್ತೇನೆ” ಎಂದು ಟ್ವೀಟ್ ಮಾಡಿದ್ದಾರೆ.

ರಾಜು ಭಾಂಗ್ (ಗಾಂಜಾ) ಸೇವಿಸಿ ನಂತರ ದೇವಸ್ಥಾನಕ್ಕೆ ಹೋಗಿ ಪುರೋಹಿತರನ್ನು ಕತ್ತಿಯಿಂದ ಹಲ್ಲೆ ನಡೆಸಿ ಕೊಲೆ ಮಾಡಿದ್ದಾಗಿ ವರದಿಯಾಗಿವೆ.

ಬುಲಂದ್‌ಶಹರ್‌ ಕೊಲೆಗಳಲ್ಲಿ ಯಾವುದೇ ಕೋಮು ಆಯಾಮವನ್ನು ಉತ್ತರ ಪ್ರದೇಶ ಪೊಲೀಸರು ನಿರಾಕರಿಸಿದ್ದಾರೆ. ಆರೋಪಿ ವ್ಯಕ್ತಿ ಇನ್ನೂ “ಮತ್ತಿನಲ್ಲಿದ್ದು” ಅಮಲು ಸರಿಯಾದ ನಂತರ ಪ್ರಶ್ನಿಸಲಾಗುವುದು ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಯುಪಿ ಹತ್ಯೆಯನ್ನು ರಾಜಕೀಯಗೊಳಿಸಬಾರದು ಮತ್ತು ಆರೋಪಿಗಳಿಗೆ ಶಿಕ್ಷೆಯಾಗಬೇಕು ಎಂದು ಟ್ವೀಟ್ ಮಾಡಿದ್ದಾರೆ.


ಇದನ್ನೂ ಓದಿ: ಉತ್ತರ ಪ್ರದೇಶದಲ್ಲಿ ಇಬ್ಬರು ಸಾಧುಗಳ ಹತ್ಯೆ: ಆರೋಪಿ ಬಂಧನ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...