Homeಮುಖಪುಟಯುಪಿ ಸಾಧುಗಳ ಹತ್ಯೆಯನ್ನು ಕೋಮುವಾದೀಕರಿಸಬೇಡಿ: ಯೋಗಿಗೆ ಉದ್ಧವ್‌ ಪಾಠ

ಯುಪಿ ಸಾಧುಗಳ ಹತ್ಯೆಯನ್ನು ಕೋಮುವಾದೀಕರಿಸಬೇಡಿ: ಯೋಗಿಗೆ ಉದ್ಧವ್‌ ಪಾಠ

- Advertisement -
- Advertisement -

ಉತ್ತರ ಪ್ರದೇಶದ ಬುಲಂದ್‌ಶಹರ್‌ನಲ್ಲಿ ಹತ್ಯೆಯಾದ ಇಬ್ಬರು ಸಾಧುಗಳ ಕೊಲೆಗಾರರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಹಾಗೂ ಘಟನೆಯನ್ನು ಕೋಮುವಾದಿಕರಣ ಮಾಡಬಾರದೆಂದು ಯೋಗಿ ಆದಿತ್ಯನಾಥ್ ಅವರಿಗೆ ಉದ್ಧವ್ ಠಾಕ್ರೆ ಪಾಠ ಹೇಳಿದ್ದಾರೆ.

52 ಮತ್ತು 35 ವರ್ಷದ ಸಾಧುಗಳ ನ್ನು ಸೋಮವಾರ ರಾತ್ರಿ ಹತ್ಯೆಗೆಯ್ಯಲಾಗಿದ್ದು, ಈ ಸಂಬಂಧ ರಾಜು ಎನ್ನುವ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಪೋಲಿಸರು ತಿಳಿಸಿದ್ದಾರೆ. ಈ ಹಿಂದೆ ಸಾಧುಗಳು ಕೊಲೆಗಾರನ ವಿರುದ್ದ ಕಳ್ಳತನದ ಆರೋಪ ಹೊರಿಸಿದ್ದರು ಎನ್ನಲಾಗಿದೆ.

“ಯೋಗಿ ಆದಿತ್ಯನಾಥ್ ಅವರೊಂದಿಗೆ ದೂರವಾಣಿಯಲ್ಲಿ ಮಾತನಾಡಿದ್ದೇನೆ ಮತ್ತು ಘಟನೆಯ ಬಗ್ಗೆ ಚರ್ಚಿಸಿದ್ದೇನೆ. ಇಂತಹ ಘೋರ ಅಪರಾಧದ ವಿರುದ್ಧ ನಾವು ನಿಮ್ಮೊಂದಿಗಿದ್ದೇವೆ ಎಂದು ನಾನು ಅವರಿಗೆ ಹೇಳಿದೆ. ಮಹಾರಾಷ್ಟ್ರದಲ್ಲಿಯೂ ಇದೇ ರೀತಿಯ ಘಟನೆ ಜರುಗಿತ್ತು. ಆಗ ನಾವು ಅದನ್ನು ಕೋಮುವಾದೀಕರಿಸಲು ಬಿಡಲಿಲ್ಲ. ಆರೋಪಿಗಳನ್ನಷ್ಟೇ ಬಂಧಿಸಿದೆವು. ಅದೇ ರೀತಿ ನೀವು ಸಹ ಘಟನೆಗೆ ಕೋಮುವಾದದ ಆಯಾಮ ನೀಡುವುದನ್ನು ತಪ್ಪಿಸಬೇಕೆಂದು ನಾನು ಬಯಸುತ್ತೇನೆ” ಎಂದು ಉದ್ಧವ್ ಠಾಕ್ರೆ ಟ್ವೀಟ್ ಮಾಡಿದ್ದಾರೆ.

 

ಉತ್ತರಪ್ರದೇಶದ ಮುಖ್ಯಮಂತ್ರಿ ಆದಿತ್ಯನಾಥ್ ಈ ಹತ್ಯೆಗಳ ಬಗ್ಗೆ ಅಧಿಕಾರಿಗಳಲ್ಲಿ ವರದಿ ಕೇಳಿದ್ದಾರೆ.

ಮಹಾರಾಷ್ಟ್ರದ ಪಾಲ್ಘರ್‌ಲ್ಲಿ ಇಬ್ಬರು ಸಾಧುಗಳ ನ್ನು ಜನಸಮೂಹ ಹತ್ಯೆ ಮಾಡಿದ ನಂತರ ತನಿಖೆಗೆ ಒತ್ತಾಯಿಸಿದ ಬಿಜೆಪಿ ನಾಯಕರಲ್ಲಿ ಯೋಗಿ ಆದಿತ್ಯನಾಥ್‌ ಸಹ ಇದ್ದರು. ಮಹಾರಾಷ್ಟ್ರ ಸರ್ಕಾರವು ಘಟನೆಗೆ ಯಾವುದೇ ಕೋಮು ಸಂಬಂಧವನ್ನು ನಿರಾಕರಿಸಿದರೂ, ಹಲವಾರು ಬಿಜೆಪಿ ನಾಯಕರು ಇದು ಹಿಂದೂ ಸಾಧುಗಳ ಹತ್ಯೆ ಎಂಬ ಪ್ರಶ್ನೆಗಳನ್ನು ಎತ್ತಿದ್ದರು. ಗೃಹ ಸಚಿವ ಅಮಿತ್ ಶಾ ಅವರು ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರನ್ನು ಕರೆದು ಕಠಿಣ ಕ್ರಮ ಕೈಗೊಳ್ಳುವಂತೆ ಹೇಳಿದರು

ಅನೇಕ ಶಿವಸೇನಾ ನಾಯಕರು ಈ ಹತ್ಯೆಗಳ ಬಗ್ಗೆ ಟ್ವೀಟ್ ಮಾಡಿ, ಇದಕ್ಕೆ ಕೋಮುವಾದಿ ತಿರುವು ನೀಡದಂತೆ ಎಚ್ಚರಿಕೆ ನೀಡಿದ್ದಾರೆ.

ಶಿವಸೇನೆ ನಾಯಕ ಸಂಜಯ್ ರೌತ್ “ಭಯಾನಕ! ಯುಪಿ ಯ ಬುಲಂದ್‌ಶಹರ್‌ನಲ್ಲಿರುವ ದೇವಸ್ಥಾನವೊಂದರಲ್ಲಿ ಇಬ್ಬರು ಸಂತರನ್ನು ಕೊಲ್ಲಲಾಗಿದೆ, ಆದರೆ ಮಹಾರಾಷ್ಟ್ರದ ಪಾಲ್ಘರ್ ಘಟನೆಯನ್ನು ಕೋಮುವಾದ ಮಾಡಲು ಪ್ರಯತ್ನಿಸಿದ ರೀತಿ ಇದನ್ನೂ ಕೋಮುವಾದಿಕರಣ ಮಾಡದಂತೆ ಸಂಬಂಧಪಟ್ಟ ಎಲ್ಲರಿಗೂ ಮನವಿ ಮಾಡುತ್ತೇನೆ” ಎಂದು ಟ್ವೀಟ್ ಮಾಡಿದ್ದಾರೆ.

ರಾಜು ಭಾಂಗ್ (ಗಾಂಜಾ) ಸೇವಿಸಿ ನಂತರ ದೇವಸ್ಥಾನಕ್ಕೆ ಹೋಗಿ ಪುರೋಹಿತರನ್ನು ಕತ್ತಿಯಿಂದ ಹಲ್ಲೆ ನಡೆಸಿ ಕೊಲೆ ಮಾಡಿದ್ದಾಗಿ ವರದಿಯಾಗಿವೆ.

ಬುಲಂದ್‌ಶಹರ್‌ ಕೊಲೆಗಳಲ್ಲಿ ಯಾವುದೇ ಕೋಮು ಆಯಾಮವನ್ನು ಉತ್ತರ ಪ್ರದೇಶ ಪೊಲೀಸರು ನಿರಾಕರಿಸಿದ್ದಾರೆ. ಆರೋಪಿ ವ್ಯಕ್ತಿ ಇನ್ನೂ “ಮತ್ತಿನಲ್ಲಿದ್ದು” ಅಮಲು ಸರಿಯಾದ ನಂತರ ಪ್ರಶ್ನಿಸಲಾಗುವುದು ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಯುಪಿ ಹತ್ಯೆಯನ್ನು ರಾಜಕೀಯಗೊಳಿಸಬಾರದು ಮತ್ತು ಆರೋಪಿಗಳಿಗೆ ಶಿಕ್ಷೆಯಾಗಬೇಕು ಎಂದು ಟ್ವೀಟ್ ಮಾಡಿದ್ದಾರೆ.


ಇದನ್ನೂ ಓದಿ: ಉತ್ತರ ಪ್ರದೇಶದಲ್ಲಿ ಇಬ್ಬರು ಸಾಧುಗಳ ಹತ್ಯೆ: ಆರೋಪಿ ಬಂಧನ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...