Homeಮುಖಪುಟಉದ್ಧವ್‌ ಠಾಕ್ರೆಗೆ ಮತ್ತೆ ಸಿಎಂ ಸ್ಥಾನ ದೊರಕಿಸಲು ಸಾಧ್ಯವಿಲ್ಲ: ಸುಪ್ರೀಂ ಕೋರ್ಟ್

ಉದ್ಧವ್‌ ಠಾಕ್ರೆಗೆ ಮತ್ತೆ ಸಿಎಂ ಸ್ಥಾನ ದೊರಕಿಸಲು ಸಾಧ್ಯವಿಲ್ಲ: ಸುಪ್ರೀಂ ಕೋರ್ಟ್

- Advertisement -
- Advertisement -

ಏಕನಾಥ್ ಶಿಂಧೆ ನೇತೃತ್ವದ ಶಿವಸೇನೆ ಶಾಸಕರ ಗುಂಪು ಬಂಡಾಯವೆದ್ದ ನಂತರ ಉದ್ಧವ್ ಠಾಕ್ರೆ ಸರ್ಕಾರ ಬಹುಮತ ಕಳೆದುಕೊಂಡಿದೆ ಎಂದು ನಿರ್ಧರಿಸುವಲ್ಲಿ ಮಹಾರಾಷ್ಟ್ರದ ಮಾಜಿ ಗವರ್ನರ್ ಭಗತ್ ಸಿಂಗ್ ಕೊಶ್ಯಾರಿ ತಪ್ಪು ಮಾಡಿದ್ದಾರೆ ಎಂದು ಸುಪ್ರೀಂ ಕೋರ್ಟ್ ಗುರುವಾರ ಹೇಳಿದೆ.

ಆದರೆ ಉದ್ಧವ್ ಠಾಕ್ರೆ ಅವರು ಬಹುಮತ ಸಾಬೀತು ಮಾಡದೆ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರಿಂದ ಮಹಾ ವಿಕಾಸ್ ಅಘಾಡಿ ಸರ್ಕಾರವನ್ನು ಮರು ಸ್ಥಾಪಿಸಲು ಸಾಧ್ಯವಿಲ್ಲ ಎಂದು ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ನೇತೃತ್ವದ ಐವರು ನ್ಯಾಯಾಧೀಶರ ಸಂವಿಧಾನ ಪೀಠ ಹೇಳಿರುವುದಾಗಿ ಬಾರ್‌ ಅಂಡ್ ಬೆಂಚ್ ವರದಿ ಮಾಡಿದೆ.

ಜೂನ್ 29 ರಂದು, ಉದ್ದವ್‌ ಠಾಕ್ರೆ ಅವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಅವಿಶ್ವಾಸ ಮತವನ್ನು ತಡೆಯಲು ಸುಪ್ರೀಂ ಕೋರ್ಟ್ ನಿರಾಕರಿಸಿದ ಕೆಲವು ಗಂಟೆಗಳ ನಂತರ ಠಾಕ್ರೆ ನೇತೃತ್ವದ ಶಿವಸೇನೆ, ಎನ್‌ಸಿಪಿ ಮತ್ತು ಕಾಂಗ್ರೆಸ್ ಪಕ್ಷಗಳನ್ನೊಳಗೊಂಡ ಮಹಾ ವಿಕಾಸ್ ಅಘಾಡಿ ಸರ್ಕಾರ ಪಥನವಾಯಿತು.

ಶಿವಸೇನೆಯ 55 ಶಾಸಕರ ಪೈಕಿ 39 ಶಾಸಕರು ಮತ್ತು 10 ಸ್ವತಂತ್ರ ಶಾಸಕರ ಬೆಂಬಲ ತಮಗಿದೆ ಎಂದು ಏಕನಾಥ್ ಶಿಂಧೆಯವರು ಠಾಕ್ರೆ ವಿರುದ್ಧ ಬಂಡಾಯವೆದ್ದಿದ್ದರು. ನಂತರ ರಾಜ್ಯಪಾಲ ಕೊಶ್ಯಾರಿಯವರು ಹೊಸ ಸರ್ಕಾರ ರಚಿಸಲು ಆಹ್ವಾನಿಸಿದ್ದರು.

ಯಾವುದೇ ವಸ್ತುನಿಷ್ಠ ಸಂಗತಿ ಇಲ್ಲವಾದರೂ ಬಹುಮತ ಸಾಬೀತು ಮಾಡುವಂತೆ ಕೊಶ್ಯಾರಿಯವರು ತೆಗೆದುಕೊಂಡ ನಿರ್ಧಾರವು ತಪ್ಪಾಗಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ ಗಮನಿಸಿದೆ.

“‘ಶಿಂಧೆ ನೇತೃತ್ವದ ಶಾಸಕರು ಸರ್ಕಾರದಿಂದ ಹೊರಬರಲು ಬಯಸಿದ್ದರು ಎಂದು ಭಾವಿಸಲಾಗಿದ್ದರೂ, ಅವರು ಕೇವಲ ಒಂದು ಬಣವನ್ನು ರಚಿಸಿದ್ದರು” ಎಂದು ಚಂದ್ರಚೂಡ್ ತಿಳಿಸಿದ್ದಾರೆ. “ಪಕ್ಷದ ಆಂತರಿಕ ವಿವಾದದ ವಿಚಾರದಲ್ಲಿ ಬಹುಮತ ಸಾಬೀತು ಮಾಡಬೇಕೆಂದು ಹೇಳಲಾಗದು” ಎಂದಿದ್ದಾರೆ.

ಠಾಕ್ರೆ ಮತ್ತು ಶಿಂಧೆ ಬಣಗಳೆರಡೂ ಸಲ್ಲಿಸಿದ ಅರ್ಜಿಗಳನ್ನು ಸುಪ್ರೀಂ ಕೋರ್ಟ್ ವಿಚಾರಣೆ ನಡೆಸುತ್ತಿದೆ. ಶಿವಸೇನೆಯಿಂದ ಬೇರ್ಪಟ್ಟು ಬಿಜೆಪಿ ಜೊತೆಯಲ್ಲಿ ಹೋದ ಶಿಂಧೆ ಮತ್ತು ಇತರ 15 ಶಾಸಕರನ್ನು ಅನರ್ಹಗೊಳಿಸುವಂತೆ ಉದ್ಧವ್ ಠಾಕ್ರೆ ಕೋರಿದ್ದರು.

ಅಂದು ಉಪಸಭಾಪತಿಯಾಗಿದ್ದ ನರಹರಿ ಝಿರ್ವಾಲ್ ಅವರು ಶಿಂಧೆ ಗುಂಪಿನ ಶಾಸಕರಿಗೆ ನೀಡಿದ್ದ ಅನರ್ಹತೆ ನೋಟಿಸ್ ವಿರುದ್ಧ ಶಿಂಧೆ ನ್ಯಾಯಾಲಯದ ಮೆಟ್ಟಿಲೇರಿದ್ದರು.

ಈ ವಿಷಯಕ್ಕೆ ಸಂಬಂಧಿಸಿದ ತೀರ್ಪು- 2016ರಿಂದಲೂ ಸುಪ್ರೀಂ ಕೋರ್ಟ್‌‌ನ ನಬಮ್ ರೆಬಿಯಾ ತೀರ್ಪಿನ ಮೇಲೆ ಅವಲಂಬಿತವಾಗಿದೆ. ಅರುಣಾಚಲ ಪ್ರದೇಶ ವಿಧಾನಸಭೆ ಸ್ಪೀಕರ್ ಆಗಿದ್ದ ರೆಬಿಯಾ ಅವರಿಗೆ ಸಂಬಂಧಿಸಿದ ತೀರ್ಪು ಇದಾಗಿದೆ. “ಅನರ್ಹತೆ ಅರ್ಜಿಗಳ ಕುರಿತು ನಿರ್ಣಯವನ್ನು ಕೋರುವವರೆಗೆ ಅನರ್ಹತೆಯನ್ನು ಸ್ಪೀಕರ್‌ ನಿರ್ಧರಿಸಲಾಗದು” ಎಂಬ ವಿಷಯವನ್ನು ಈ ತೀರ್ಪು ಒಳಗೊಂಡಿದೆ.

ನಬಮ್ ರೆಬಿಯಾ ತೀರ್ಪಿನ ಸಿಂಧುತ್ವವನ್ನು ವಿಸ್ತೃತ ಪೀಠಕ್ಕೆ ಉಲ್ಲೇಖಿಸಲು ಸುಪ್ರೀಂ ಕೋರ್ಟ್ ಗುರುವಾರ ನಿರ್ಧರಿಸಿದೆ ಎಂದು ಬಾರ್ ಮತ್ತು ಬೆಂಚ್ ವರದಿ ಮಾಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...