Homeಮುಖಪುಟಶಿಂಧೆ ಬಣವೇ ನಿಜವಾದ ಶಿವಸೇನೆ ಎಂದ ಮಹಾರಾಷ್ಟ್ರ ಸ್ಪೀಕರ್ ನಿರ್ಧಾರ ಪ್ರಶ್ನಿಸಿ ಸುಪ್ರೀಂ ಮೊರೆ ಹೋದ...

ಶಿಂಧೆ ಬಣವೇ ನಿಜವಾದ ಶಿವಸೇನೆ ಎಂದ ಮಹಾರಾಷ್ಟ್ರ ಸ್ಪೀಕರ್ ನಿರ್ಧಾರ ಪ್ರಶ್ನಿಸಿ ಸುಪ್ರೀಂ ಮೊರೆ ಹೋದ ಉದ್ಧವ್ ಠಾಕ್ರೆ ಬಣ

- Advertisement -
- Advertisement -

ಮಹಾರಾಷ್ಟ್ರದ ಮುಖ್ಯಮಂತ್ರಿ ಏಕನಾಥ್ ಶಿಂಧೆ ನೇತೃತ್ವದ ಬಣವನ್ನು ‘ನಿಜವಾದ ಶಿವಸೇನೆ’ ಎಂದು ಗುರುತಿಸಿರುವ ಸ್ಪೀಕರ್ ರಾಹುಲ್ ನಾರ್ವೇಕರ್ ಅವರ ಆದೇಶದ ವಿರುದ್ಧ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ ಬಣ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದೆ.

ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ), ಸ್ಪೀಕರ್ ಆದೇಶಕ್ಕೆ ತಾತ್ಕಾಲಿಕ ತಡೆ ನೀಡಬೇಕು, ಸಿಎಂ ಶಿಂಧೆ ಬಣದ ಶಾಸಕರು ವಿಧಾನಸಭೆ ಪ್ರವೇಶಿಸುವುದಕ್ಕೆ ನಿರ್ಬಂಧ ವಿಧಿಸಿ ಮಧ್ಯಂತರ ಆದೇಶ ನೀಡಬೇಕು ಹಾಗೂ ಶಿಂಧೆ ಬಣದ ಶಾಸಕರ ಸದಸ್ಯತ್ವವನ್ನು ಅಮಾನತು ಮಾಡಬೇಕು ಎಂದು ಸುಪ್ರೀಂ ಕೋರ್ಟ್‌ನ್ನು ಕೋರಿದೆ.

ಶಿಂಧೆ ಬಣದ ಪರ ಸ್ಪೀಕರ್ ನೀಡಿರುವ ಆದೇಶ ಸಂಪೂರ್ಣವಾಗಿ ಕಾನೂನು ಬಾಹಿರವಾಗಿದೆ. ಇದು ಸಂವಿಧಾನದ ಹತ್ತನೇ ಶೆಡ್ಯೂಲ್ (ಪಕ್ಷಾಂತರ ವಿರೋಧಿ ಕಾಯ್ದೆ) ಗೆ ವಿರುದ್ದವಾಗಿದೆ. ಶಿಂಧೆ ಬಣ ಪ್ರತ್ಯೇಕವಾಗಿ ಸರ್ಕಾರ ರಚಿಸಿರುವುದು ಶಿವಸೇನೆಯ ಸಂವಿಧಾನದ ಉಲ್ಲಂಘಣೆಯಲ್ಲ ಎಂದು ಸ್ಪೀಕರ್‌ ಹೇಳಿರುವುದು ಸಂಪೂರ್ಣ ತಪ್ಪು ಎಂದು ಠಾಕ್ರೆ ಬಣ ಆರೋಪಿಸಿದೆ.

ಬಿಜೆಪಿಯ ಬೆಂಬಲದೊಂದಿಗೆ ಏಕನಾಥ್ ಶಿಂಧೆ ಮುಖ್ಯಮಂತ್ರಿಯಾಗಿದ್ದಾರೆ. ಅವರ ಬಣದ ಶಾಸಕರು ಬಿಜೆಪಿಯೊಂದಿಗೆ ಒಡನಾಟ ಹೊಂದಿರುವುದು ಸ್ಪಷ್ಟವಾಗಿದೆ. ಇದನ್ನು ಸ್ಪೀಕರ್ ಪರಿಗಣಿಸಿಲ್ಲ ಎಂದು ಠಾಕ್ರೆ ಬಣ ಆಪಾದಿಸಿದೆ.

ಮಹಾರಾಷ್ಟ್ರದ ಮಹಾ ಅಘಾಡಿ ಸರ್ಕಾರದ ಭಾಗವಾಗಿದ್ದ ಶಿವಸೇನೆಯಿಂದ ಬಂಡಾಯವೆದಿದ್ದ ಮುಖ್ಯಮಂತ್ರಿ ಏಕನಾಥ್ ಶಿಂಧೆ ಬಣ, ಬಿಜೆಪಿ ಜೊತೆ ಸೇರಿ ಪ್ರತ್ಯೇಕ ಸರ್ಕಾರ ರಚಿಸಿತ್ತು. ಸಿಎಂ ಶಿಂಧೆ ಸೇರಿದಂತೆ ಪಕ್ಷದ ವಿರುದ್ದ ತೊಡೆ ತಟ್ಟಿದ್ದ ಶಾಸಕರನ್ನು ಅಮಾನತುಗೊಳಿಸುವಂತೆ ಉದ್ದವ್ ಠಾಕ್ರೆ ಬಣ ಕೋರಿತ್ತು. ಆದರೆ, ಸ್ಪೀಕರ್ ಈ ಕುರಿತು ಯಾವುದೇ ಆದೇಶ ನೀಡದೆ ವಿಳಂಬ ಮಾಡಿದ್ದರು.

ಸುಪ್ರೀಂ ಕೋರ್ಟ್‌ ಚಾಟಿ ಬೀಸಿದ ಬಳಿಕ, ಜನವರಿ 10 ರಂದು ಏಕನಾಥ್ ಶಿಂಧೆ ಬಣದ ಪರ ಸ್ಪೀಕರ್ ತೀರ್ಪು ನೀಡಿದ್ದರು. ಶಿಂಧೆ ನೇತೃತ್ವದ ಶಿವಸೇನೆ ಬಣವು ಬಹುಪಾಲು ಪಕ್ಷದ ಶಾಸಕರ ಬೆಂಬಲವನ್ನು ಹೊಂದಿರುವುದರಿಂದ ಕಾನೂನುಬದ್ಧವಾಗಿದೆ ಎಂದು ಹೇಳಿದ್ದರು.

ಇದನ್ನೂ ಓದಿ : ಮೋದಿ ಮಣಿಪುರಕ್ಕೆ ಯಾಕೆ ಭೇಟಿ ನೀಡಿಲ್ಲ ಎಂದು ಜನ ನಮ್ಮನ್ನು ಕೇಳ್ತಿದ್ದಾರೆ: ಜೈರಾಮ್ ರಮೇಶ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗೌರವ್ ಗೊಗೊಯ್ ಸಹಿತ ಮೂವರು ಕಾಂಗ್ರೆಸ್ ನಾಯಕರ ವಿರುದ್ಧ 500 ಕೋಟಿ ರೂ. ಮಾನನಷ್ಟ ಮೊಕದ್ದಮೆ ಹೂಡಿದ ಅಸ್ಸಾಂ ಸಿಎಂ

ಕಾಂಗ್ರೆಸ್ ನಾಯಕರಾದ ಜಿತೇಂದ್ರ ಸಿಂಗ್, ಭೂಪೇಶ್ ಬಘೇಲ್ ಮತ್ತು ಗೌರವ್ ಗೊಗೊಯ್ ವಿರುದ್ದ 500 ಕೋಟಿ ರೂಪಾಯಿ ಮಾನನಷ್ಟ ಮೊಕದ್ದಮೆ ಹೂಡಿದ್ದೇನೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ ತಿಳಿಸಿದ್ದಾರೆ. "ಪತ್ರಿಕಾಗೋಷ್ಠಿಯ ಮೂಲಕ...

ಕೇರಳದಲ್ಲಿ ಸರ್ಕಾರ ಬದಲಾವಣೆಗೆ ಕವಿ ಸಚ್ಚಿದಾನಂದನ್ ಕರೆಗೆ ಎಡಪಕ್ಷಗಳ ತೀವ್ರ ವಿರೋಧ; ಇದು ಸಾರ್ವಜನಿಕ ಭಾವನೆ ಎಂದ ವಿಪಕ್ಷಗಳು

ಕೇರಳದಲ್ಲಿ ನಿರಂತರ ಆಡಳಿತ ಅಪೇಕ್ಷಣೀಯವಲ್ಲ ಮತ್ತು ಅಧಿಕಾರವು ರಾಜಕೀಯ ರಂಗಗಳ ನಡುವೆ ಪರ್ಯಾಯವಾಗಿರಬೇಕು ಎಂದು ಹಿರಿಯ ಕವಿ ಮತ್ತು ಕೇರಳ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಕೆ. ಸಚ್ಚಿದಾನಂದನ್ ಹೇಳಿದ್ದಾರೆ. ಈ ಹೇಳಿಕೆ ಆಡಳಿತಾರೂಢ...

ಹಿಂದುತ್ವ ಗುಂಪಿನಿಂದ ಮುಸ್ಲಿಂ ವ್ಯಕ್ತಿ ರಕ್ಷಣೆ; ದೀಪಕ್ ಕೊಂದವರಿಗೆ 2 ಲಕ್ಷ ರೂಪಾಯಿ ಬಹುಮಾನ ಘೋಷಿಸಿದ್ದ ವ್ಯಕ್ತಿ ಬಂಧನ

ಹಿಂದುತ್ವ ಗುಂಪಿನಿಂದ ಮುಸ್ಲಿಂ ವ್ಯಕ್ತಿ ರಕ್ಷಿಸಿದ್ದ ಜಿಮ್ ಮಾಲೀಕ ದೀಪಕ್ ಕುಮಾರ್ (ಮೊಹಮ್ಮದ್ ದೀಪಕ್) ಅವರನ್ನು ಕೊಂದವರಿಗೆ 2 ಲಕ್ಷ ರೂಪಾಯಿ ಬಹುಮಾನ ಘೋಷಿಸಿದ್ದ ವ್ಯಕ್ತಿಯನ್ನು ಉತ್ತರಾಖಂಡ ಪೊಲೀಸರು ಸೋಮವಾರ (ಫೆ.9) ಬಂಧಿಸಿದ್ದಾರೆ. ಬಿಹಾರದ...

ಬಾಂಗ್ಲಾದೇಶ: ಚುನಾವಣೆಗೂ ಮುನ್ನ 62 ವರ್ಷದ ಹಿಂದೂ ಅಕ್ಕಿ ವ್ಯಾಪಾರಿ ಸುಶೇನ್ ಚಂದ್ರ ಸರ್ಕಾರ್ ಹತ್ಯೆ

ಬಾಂಗ್ಲಾದೇಶದ ಸಾರ್ವತ್ರಿಕ ಚುನಾವಣೆಗೆ ಮತದಾನಕ್ಕೆ ಕೆಲವೇ ಗಂಟೆಗಳ ಮೊದಲು, ಸೋಮವಾರ ತಡರಾತ್ರಿ ಬಾಂಗ್ಲಾದೇಶದ ಮೈಮೆನ್ಸಿಂಗ್ ಜಿಲ್ಲೆಯಲ್ಲಿ ಹಿಂದೂ ಅಕ್ಕಿ ವ್ಯಾಪಾರಿಯೊಬ್ಬರನ್ನು ಅವರ ಅಂಗಡಿಯೊಳಗೆ ಹತ್ಯೆಯಾಗಿದೆ.  ತ್ರಿಶಾಲ್ ಉಪಜಿಲಾದ ಬೋಗರ್ ಬಜಾರ್ ಛೇದಕದಲ್ಲಿರುವ "ಮೆಸರ್ಸ್ ಭಾಯ್...

ಹೈಕೋರ್ಟ್‌ನಲ್ಲಿ ಪ್ರಕರಣ ಬಾಕಿ ಇರುವಾಗಲೇ ಮಸೀದಿ ಕೆಡವಿದ ಉತ್ತರ ಪ್ರದೇಶ ಸರ್ಕಾರ

ಹೈಕೋರ್ಟ್‌ನಲ್ಲಿ ಪ್ರಕರಣ ಬಾಕಿ ಇರುವಾಗಲೇ ಉತ್ತರ ಪ್ರದೇಶ ಆಡಳಿತವು ಬರೇಲಿ ಜಿಲ್ಲೆಯ ಮಸೀದಿಯನ್ನು ನೆಲಸಮಗೊಳಿಸಿದೆ. ಮಸೀದಿ ನಿರ್ಮಾಣ ಕುರಿತಾದ ಪ್ರಕರಣ ಅಲಹಾಬಾದ್ ಹೈಕೋರ್ಟ್‌ನಲ್ಲಿ ಬಾಕಿ ಉಳಿದಿದೆ. ಭೋಜಿಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿರುವ ಪಿಪಾರಿಯಾ...

‘ನಾನು ಮಾಜಿ ಸೇನಾ ಮುಖ್ಯಸ್ಥರನ್ನು ನಂಬುತ್ತೇನೆ’ : ಜನರಲ್ ನರವಾಣೆ ಪುಸ್ತಕದ ಕುರಿತ ಪ್ರಕಾಶಕರ ಹೇಳಿಕೆಗೆ ರಾಹುಲ್ ಗಾಂಧಿ ಪ್ರತಿಕ್ರಿಯೆ

ಮಾಜಿ ಸೇನಾ ಮುಖ್ಯಸ್ಥ ಜನರಲ್ ಎಂ.ಎಂ. ನರವಾಣೆ ಅವರ ಆತ್ಮಕಥೆಯ ಪ್ರಕಾಶಕರ ವಿರುದ್ಧ ರಾಹುಲ್ ಗಾಂಧಿ ಮಂಗಳವಾರ (ಫೆ.10) ಗಂಭೀರ ಆರೋಪ ಮಾಡಿದ್ದಾರೆ. ನರವಾಣೆ ಅವರ ನೆನಪುಗಳ ಆಧಾರಿತ ಪುಸ್ತಕವು ಈಗಾಗಲೇ ಮಾರಾಟಕ್ಕೆ...

‘ಆದಿತ್ಯನಾಥನ ಆಡಳಿತದಲ್ಲಿ ಬ್ರಾಹ್ಮಣರು ಅಸುರಕ್ಷಿತರು, ಸನಾತನಿಗಳು ಎಂದಿಗೂ ಮರೆಯುವುದಿಲ್ಲ’ ಎಂಬ ಅರ್ಥದಲ್ಲಿ ಪೋಸ್ಟ್ ಮಾಡಿದ ಪತ್ರಕರ್ತನ ಬಂಧನ

ಮಧ್ಯಪ್ರದೇಶದ ಉಜ್ಜಯಿನಿ ಜಿಲ್ಲೆಯ ಪತ್ರಕರ್ತರೊಬ್ಬರನ್ನು ಉತ್ತರ ಪ್ರದೇಶ ಪೊಲೀಸರು ಬಂಧಿಸಿದ್ದಾರೆ. ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಕುರಿತು ಆಕ್ಷೇಪಾರ್ಹ ಮತ್ತು ಪ್ರಚೋದನಕಾರಿ ಚಿತ್ರವನ್ನು ಫೇಸ್‌ಬುಕ್‌ನಲ್ಲಿ ಅಪ್‌ಲೋಡ್ ಮಾಡಿದ ಆರೋಪದ ಮೇಲೆ ಅವರನ್ನು ಬಂಧಿಸಲಾಗಿದೆ ಎಂದು...

ಹಿಮಂತ ಬಿಸ್ವಾ ಶರ್ಮಾ ‘ಗುಂಡು ಹಾರಿಸುವ’ ವಿಡಿಯೋ ವಿರುದ್ಧದ ಅರ್ಜಿ; ವಿಚಾರಣೆಗೆ ಸಮ್ಮತಿಸಿದ ಸುಪ್ರೀಂ ಕೋರ್ಟ್

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರು ನಿರ್ದಿಷ್ಟ ಸಮುದಾಯದ ಸದಸ್ಯರ ಮೇಲೆ ಗುರಿಯಿಟ್ಟು ರೈಫಲ್‌ನಿಂದ ಗುಂಡು ಹಾರಿಸುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಅವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಕೋರಿ ಎಡಪಂಥೀಯ...

ನರವಾಣೆಯ ಅಪ್ರಕಟಿತ ಆತ್ಮಚರಿತ್ರೆ ಪ್ರಸಾರ ಆರೋಪ : ಎಫ್‌ಐಆರ್‌ ದಾಖಲಿಸಿದ ದೆಹಲಿ ಪೊಲೀಸರು

ಮಾಜಿ ಭೂಸೇನಾ ಮುಖ್ಯಸ್ಥ ಎಂ.ಎಂ ನರವಾಣೆ ಅವರ ಅಪ್ರಕಟಿತ ಆತ್ಮಚರಿತ್ರೆ "ಫೋರ್ ಸ್ಟಾರ್ಸ್ ಆಫ್ ಡೆಸ್ಟಿನಿ"ಯ ಪ್ರಸಾರ ಆರೋಪದ ಮೇಲೆ ದೆಹಲಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ ಎಂದು ವರದಿಯಾಗಿದೆ. ಇದೇ ಪುಸ್ತಕದ ವಿಷಯಗಳನ್ನು ಪ್ರತಿಪಕ್ಷ...

ನರವಾಣೆ ಅವರ ಆತ್ಮಚರಿತ್ರೆಯ ಯಾವುದೇ ಪ್ರತಿಗಳು ಸಾರ್ವಜನಿಕವಾಗಿ ಲಭ್ಯವಿಲ್ಲ: ಪೆಂಗ್ವಿನ್ ಪ್ರಕಾಶನ ಸ್ಪಷ್ಟನೆ

ಮಾಜಿ ಸೇನಾ ಮುಖ್ಯಸ್ಥ ಜನರಲ್ ಮನೋಜ್ ಮುಕುಂದ್ ನರವಾಣೆ ಅವರ ಆತ್ಮಚರಿತ್ರೆ 'ಫೋರ್ ಸ್ಟಾರ್ಸ್ ಆಫ್ ಡೆಸ್ಟಿನಿ'ಗೆ ವಿಶೇಷ ಪ್ರಕಾಶನ ಹಕ್ಕುಗಳನ್ನು ಹೊಂದಿದ್ದೇವೆ ಎಂದು ಪೆಂಗ್ವಿನ್ ರಾಂಡಮ್ ಹೌಸ್ ಇಂಡಿಯಾ (ಪಿಆರ್‌ಎಚ್‌ಐ) ಹೇಳಿದ್ದು,...