Homeಮುಖಪುಟಶಿಂಧೆ ಬಣವೇ ನಿಜವಾದ ಶಿವಸೇನೆ ಎಂದ ಮಹಾರಾಷ್ಟ್ರ ಸ್ಪೀಕರ್ ನಿರ್ಧಾರ ಪ್ರಶ್ನಿಸಿ ಸುಪ್ರೀಂ ಮೊರೆ ಹೋದ...

ಶಿಂಧೆ ಬಣವೇ ನಿಜವಾದ ಶಿವಸೇನೆ ಎಂದ ಮಹಾರಾಷ್ಟ್ರ ಸ್ಪೀಕರ್ ನಿರ್ಧಾರ ಪ್ರಶ್ನಿಸಿ ಸುಪ್ರೀಂ ಮೊರೆ ಹೋದ ಉದ್ಧವ್ ಠಾಕ್ರೆ ಬಣ

- Advertisement -
- Advertisement -

ಮಹಾರಾಷ್ಟ್ರದ ಮುಖ್ಯಮಂತ್ರಿ ಏಕನಾಥ್ ಶಿಂಧೆ ನೇತೃತ್ವದ ಬಣವನ್ನು ‘ನಿಜವಾದ ಶಿವಸೇನೆ’ ಎಂದು ಗುರುತಿಸಿರುವ ಸ್ಪೀಕರ್ ರಾಹುಲ್ ನಾರ್ವೇಕರ್ ಅವರ ಆದೇಶದ ವಿರುದ್ಧ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ ಬಣ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದೆ.

ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ), ಸ್ಪೀಕರ್ ಆದೇಶಕ್ಕೆ ತಾತ್ಕಾಲಿಕ ತಡೆ ನೀಡಬೇಕು, ಸಿಎಂ ಶಿಂಧೆ ಬಣದ ಶಾಸಕರು ವಿಧಾನಸಭೆ ಪ್ರವೇಶಿಸುವುದಕ್ಕೆ ನಿರ್ಬಂಧ ವಿಧಿಸಿ ಮಧ್ಯಂತರ ಆದೇಶ ನೀಡಬೇಕು ಹಾಗೂ ಶಿಂಧೆ ಬಣದ ಶಾಸಕರ ಸದಸ್ಯತ್ವವನ್ನು ಅಮಾನತು ಮಾಡಬೇಕು ಎಂದು ಸುಪ್ರೀಂ ಕೋರ್ಟ್‌ನ್ನು ಕೋರಿದೆ.

ಶಿಂಧೆ ಬಣದ ಪರ ಸ್ಪೀಕರ್ ನೀಡಿರುವ ಆದೇಶ ಸಂಪೂರ್ಣವಾಗಿ ಕಾನೂನು ಬಾಹಿರವಾಗಿದೆ. ಇದು ಸಂವಿಧಾನದ ಹತ್ತನೇ ಶೆಡ್ಯೂಲ್ (ಪಕ್ಷಾಂತರ ವಿರೋಧಿ ಕಾಯ್ದೆ) ಗೆ ವಿರುದ್ದವಾಗಿದೆ. ಶಿಂಧೆ ಬಣ ಪ್ರತ್ಯೇಕವಾಗಿ ಸರ್ಕಾರ ರಚಿಸಿರುವುದು ಶಿವಸೇನೆಯ ಸಂವಿಧಾನದ ಉಲ್ಲಂಘಣೆಯಲ್ಲ ಎಂದು ಸ್ಪೀಕರ್‌ ಹೇಳಿರುವುದು ಸಂಪೂರ್ಣ ತಪ್ಪು ಎಂದು ಠಾಕ್ರೆ ಬಣ ಆರೋಪಿಸಿದೆ.

ಬಿಜೆಪಿಯ ಬೆಂಬಲದೊಂದಿಗೆ ಏಕನಾಥ್ ಶಿಂಧೆ ಮುಖ್ಯಮಂತ್ರಿಯಾಗಿದ್ದಾರೆ. ಅವರ ಬಣದ ಶಾಸಕರು ಬಿಜೆಪಿಯೊಂದಿಗೆ ಒಡನಾಟ ಹೊಂದಿರುವುದು ಸ್ಪಷ್ಟವಾಗಿದೆ. ಇದನ್ನು ಸ್ಪೀಕರ್ ಪರಿಗಣಿಸಿಲ್ಲ ಎಂದು ಠಾಕ್ರೆ ಬಣ ಆಪಾದಿಸಿದೆ.

ಮಹಾರಾಷ್ಟ್ರದ ಮಹಾ ಅಘಾಡಿ ಸರ್ಕಾರದ ಭಾಗವಾಗಿದ್ದ ಶಿವಸೇನೆಯಿಂದ ಬಂಡಾಯವೆದಿದ್ದ ಮುಖ್ಯಮಂತ್ರಿ ಏಕನಾಥ್ ಶಿಂಧೆ ಬಣ, ಬಿಜೆಪಿ ಜೊತೆ ಸೇರಿ ಪ್ರತ್ಯೇಕ ಸರ್ಕಾರ ರಚಿಸಿತ್ತು. ಸಿಎಂ ಶಿಂಧೆ ಸೇರಿದಂತೆ ಪಕ್ಷದ ವಿರುದ್ದ ತೊಡೆ ತಟ್ಟಿದ್ದ ಶಾಸಕರನ್ನು ಅಮಾನತುಗೊಳಿಸುವಂತೆ ಉದ್ದವ್ ಠಾಕ್ರೆ ಬಣ ಕೋರಿತ್ತು. ಆದರೆ, ಸ್ಪೀಕರ್ ಈ ಕುರಿತು ಯಾವುದೇ ಆದೇಶ ನೀಡದೆ ವಿಳಂಬ ಮಾಡಿದ್ದರು.

ಸುಪ್ರೀಂ ಕೋರ್ಟ್‌ ಚಾಟಿ ಬೀಸಿದ ಬಳಿಕ, ಜನವರಿ 10 ರಂದು ಏಕನಾಥ್ ಶಿಂಧೆ ಬಣದ ಪರ ಸ್ಪೀಕರ್ ತೀರ್ಪು ನೀಡಿದ್ದರು. ಶಿಂಧೆ ನೇತೃತ್ವದ ಶಿವಸೇನೆ ಬಣವು ಬಹುಪಾಲು ಪಕ್ಷದ ಶಾಸಕರ ಬೆಂಬಲವನ್ನು ಹೊಂದಿರುವುದರಿಂದ ಕಾನೂನುಬದ್ಧವಾಗಿದೆ ಎಂದು ಹೇಳಿದ್ದರು.

ಇದನ್ನೂ ಓದಿ : ಮೋದಿ ಮಣಿಪುರಕ್ಕೆ ಯಾಕೆ ಭೇಟಿ ನೀಡಿಲ್ಲ ಎಂದು ಜನ ನಮ್ಮನ್ನು ಕೇಳ್ತಿದ್ದಾರೆ: ಜೈರಾಮ್ ರಮೇಶ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಖುಲಾಸೆ : ಇಡೀ ವ್ಯವಸ್ಥೆಯೇ ಬ್ರಿಜ್ ಭೂಷಣ್‌ರನ್ನು ರಕ್ಷಿಸಿತು ಎಂದ ವಿನೇಶ್ ಫೋಗಟ್; ಮೇಲ್ಮನವಿ ಸಲ್ಲಿಸಲು ಮಹಿಳಾ ಕುಸ್ತಿಪಟುಗಳ ನಿರ್ಧಾರ

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿದ್ದ ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಹಾಗೂ ಬಿಜೆಪಿ ಮಾಜಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರನ್ನು ದೆಹಲಿಯ ರೋಸ್...

ಕರ್ನಾಟಕದಲ್ಲಿ SIR ಬಿಹಾರ-ಬಂಗಾಳಕ್ಕಿಂತ ಭೀಕರ: ಆಗಸ್ಟ್ 4 ರಂದು ಜನಪರ ಸಂಘಟನೆಗಳಿಂದ ಮಹತ್ವದ ಮಾಧ್ಯಮಗೋಷ್ಠಿ

ಬೆಂಗಳೂರು: ಕರ್ನಾಟಕದಲ್ಲಿ ನಡೆಯುತ್ತಿರುವ ಎಸ್‌ಐಆರ್ (SIR) ಪ್ರಕ್ರಿಯೆಯು ಬಿಹಾರ ಮತ್ತು ಪಶ್ಚಿಮ ಬಂಗಾಳ ರಾಜ್ಯಗಳಿಗಿಂತಲೂ ಅತ್ಯಂತ ಭೀಕರ ರೂಪ ಪಡೆದುಕೊಳ್ಳುತ್ತಿದೆ ಎಂದು 'SIR ವಿರೋಧಿ ಜಾತ್ಯತೀತ ಪಕ್ಷಗಳು ಮತ್ತು ಜನಪರ ಸಂಘಟನೆಗಳ ಒಕ್ಕೂಟ'...

“ನೈರ್ಮಲ್ಯ ಕಾರ್ಮಿಕರು ಕೆಲಸ ಬಿಡಲು ಸಾಧ್ಯವಿಲ್ಲ”: ದೇಶಾದ್ಯಂತ ಪ್ರತಿಭಟನೆಗೆ DASAM ಬೆಂಬಲ, ಉದ್ಯೋಗ ಖಾಯಂಗೊಳಿಸಲು ತೀವ್ರ ಒತ್ತಾಯ

ನವದೆಹಲಿ: ಉದ್ಯೋಗ ಕ್ರಮಬದ್ಧಗೊಳಿಸುವಿಕೆ (ಖಾಯಂಗೊಳಿಸುವುದು), ನ್ಯಾಯಯುತ ವೇತನ, ಸಾಮಾಜಿಕ ಭದ್ರತೆ, ಸುರಕ್ಷಿತ ಕೆಲಸದ ವಾತಾವರಣ ಮತ್ತು ಕೆಲಸದ ಸ್ಥಳದಲ್ಲಿ ಮಾನವ ಘನತೆಯನ್ನು ಎತ್ತಿಹಿಡಿಯುವಂತೆ ಒತ್ತಾಯಿಸಿ ದೇಶದ ನಾನಾ ಭಾಗಗಳಲ್ಲಿ ನೈರ್ಮಲ್ಯ ಕಾರ್ಮಿಕರು ನಡೆಸುತ್ತಿರುವ...

ದ್ವೇಷ ಭಾಷಣ ಪ್ರಕರಣ: ಬಿಜೆಪಿ ನಾಯಕರಾದ ಅನುರಾಗ್‌ ಠಾಕೂರ್‌, ಪರ್ವೇಶ್‌ ವರ್ಮಾಗೆ ಕ್ಲೀನ್ ಚೀಟ್: ಪುನರ್ ಪರಿಶೀಲನಾ ಅರ್ಜಿ ವಜಾಗೊಳಿಸಿದ ಸುಪ್ರೀಂ

ನವದೆಹಲಿ: 2020ರ ದೆಹಲಿಯಲ್ಲಿ ನಡೆದ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರೋಧಿ ಪ್ರತಿಭಟನೆಗಳ ಸಂದರ್ಭದಲ್ಲಿ ಉದ್ರೇಕಕಾರಿ ಹಾಗೂ ದ್ವೇಷಪೂರಿತ ಭಾಷಣ ಮಾಡಿದ ಆರೋಪ ಹೊತ್ತಿದ್ದ ಬಿಜೆಪಿ ನಾಯಕರಾದ ಅನುರಾಗ್ ಠಾಕೂರ್ ಮತ್ತು ಪರ್ವೇಶ್‌...

ಕರ್ನಾಟಕ ಸಚಿವ ಸಂಪುಟ ವಿಸ್ತರಣೆ: ನೂತನ ಸಚಿವರ ಪಟ್ಟಿಗೆ ವರಿಷ್ಠರ ಅನುಮೋದನೆ: ಇಂದು ಸಂಜೆ 4:05 ಕ್ಕೆ ಪ್ರಮಾಣ ವಚನ

ಬಹುನಿರೀಕ್ಷಿತ ಕರ್ನಾಟಕ ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಕೊನೆಗೂ ಮುಹೂರ್ತ ನಿಗದಿಯಾಗಿದ್ದು, ಕಾಂಗ್ರೆಸ್ ಹೈಕಮಾಂಡ್ ನೂತನ ಸಚಿವರ ಪಟ್ಟಿಗೆ ಅಧಿಕೃತ ಅನುಮೋದನೆ ನೀಡಿದೆ. ಇದರೊಂದಿಗೆ ಕಳೆದ ಕೆಲವು ದಿನಗಳಿಂದ ರಾಜ್ಯ ರಾಜಕಾರಣದಲ್ಲಿ ತೀವ್ರ...

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ಪ್ರಕರಣ : WFI ಮಾಜಿ ಅಧ್ಯಕ್ಷ ಬ್ರಿಜ್ ಭೂಷಣ್‌ ಸಿಂಗ್‌ ಖುಲಾಸೆ

ದೆಹಲಿ ನ್ಯಾಯಾಲಯವು ಸೋಮವಾರ (ಆ.3) ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಮತ್ತು ಬಿಜೆಪಿ ನಾಯಕ ಬ್ರಿಜ್ ಭೂಷಣ್ ಸಿಂಗ್ ಅವರನ್ನು ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಪ್ರಕರಣದಿಂದ...

ಪ್ರಶ್ನೆ ಪತ್ರಿಕೆ ಸೋರಿಕೆ : ಫಾಸ್ಟ್‌ ಟ್ರ್ಯಾಕ್ ಕೋರ್ಟ್ ನ್ಯಾಯಾಧೀಶೆ ಒಂದೇ ವಾರದಲ್ಲಿ ವರ್ಗಾವಣೆ

ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಗಳ ವಿಚಾರಣೆಗಾಗಿ ಸ್ಥಾಪಿಸಲಾದ ತ್ವರಿತಗತಿ (ಫಾಸ್ಟ್‌ ಟ್ರ್ಯಾಕ್) ನ್ಯಾಯಾಲಯದ ನೇತೃತ್ವ ವಹಿಸಲು ನೇಮಕಗೊಂಡ ಕೇವಲ ಒಂದು ವಾರದ ನಂತರ, ದೆಹಲಿ ಹೈಕೋರ್ಟ್ ಶನಿವಾರ (ಆಗಸ್ಟ್ 1) ವಿಶೇಷ ನ್ಯಾಯಾಧೀಶರಾದ...

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...