Homeಮುಖಪುಟಶಿಂಧೆ ಬಣವೇ ನಿಜವಾದ ಶಿವಸೇನೆ ಎಂದ ಮಹಾರಾಷ್ಟ್ರ ಸ್ಪೀಕರ್ ನಿರ್ಧಾರ ಪ್ರಶ್ನಿಸಿ ಸುಪ್ರೀಂ ಮೊರೆ ಹೋದ...

ಶಿಂಧೆ ಬಣವೇ ನಿಜವಾದ ಶಿವಸೇನೆ ಎಂದ ಮಹಾರಾಷ್ಟ್ರ ಸ್ಪೀಕರ್ ನಿರ್ಧಾರ ಪ್ರಶ್ನಿಸಿ ಸುಪ್ರೀಂ ಮೊರೆ ಹೋದ ಉದ್ಧವ್ ಠಾಕ್ರೆ ಬಣ

- Advertisement -
- Advertisement -

ಮಹಾರಾಷ್ಟ್ರದ ಮುಖ್ಯಮಂತ್ರಿ ಏಕನಾಥ್ ಶಿಂಧೆ ನೇತೃತ್ವದ ಬಣವನ್ನು ‘ನಿಜವಾದ ಶಿವಸೇನೆ’ ಎಂದು ಗುರುತಿಸಿರುವ ಸ್ಪೀಕರ್ ರಾಹುಲ್ ನಾರ್ವೇಕರ್ ಅವರ ಆದೇಶದ ವಿರುದ್ಧ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ ಬಣ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದೆ.

ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ), ಸ್ಪೀಕರ್ ಆದೇಶಕ್ಕೆ ತಾತ್ಕಾಲಿಕ ತಡೆ ನೀಡಬೇಕು, ಸಿಎಂ ಶಿಂಧೆ ಬಣದ ಶಾಸಕರು ವಿಧಾನಸಭೆ ಪ್ರವೇಶಿಸುವುದಕ್ಕೆ ನಿರ್ಬಂಧ ವಿಧಿಸಿ ಮಧ್ಯಂತರ ಆದೇಶ ನೀಡಬೇಕು ಹಾಗೂ ಶಿಂಧೆ ಬಣದ ಶಾಸಕರ ಸದಸ್ಯತ್ವವನ್ನು ಅಮಾನತು ಮಾಡಬೇಕು ಎಂದು ಸುಪ್ರೀಂ ಕೋರ್ಟ್‌ನ್ನು ಕೋರಿದೆ.

ಶಿಂಧೆ ಬಣದ ಪರ ಸ್ಪೀಕರ್ ನೀಡಿರುವ ಆದೇಶ ಸಂಪೂರ್ಣವಾಗಿ ಕಾನೂನು ಬಾಹಿರವಾಗಿದೆ. ಇದು ಸಂವಿಧಾನದ ಹತ್ತನೇ ಶೆಡ್ಯೂಲ್ (ಪಕ್ಷಾಂತರ ವಿರೋಧಿ ಕಾಯ್ದೆ) ಗೆ ವಿರುದ್ದವಾಗಿದೆ. ಶಿಂಧೆ ಬಣ ಪ್ರತ್ಯೇಕವಾಗಿ ಸರ್ಕಾರ ರಚಿಸಿರುವುದು ಶಿವಸೇನೆಯ ಸಂವಿಧಾನದ ಉಲ್ಲಂಘಣೆಯಲ್ಲ ಎಂದು ಸ್ಪೀಕರ್‌ ಹೇಳಿರುವುದು ಸಂಪೂರ್ಣ ತಪ್ಪು ಎಂದು ಠಾಕ್ರೆ ಬಣ ಆರೋಪಿಸಿದೆ.

ಬಿಜೆಪಿಯ ಬೆಂಬಲದೊಂದಿಗೆ ಏಕನಾಥ್ ಶಿಂಧೆ ಮುಖ್ಯಮಂತ್ರಿಯಾಗಿದ್ದಾರೆ. ಅವರ ಬಣದ ಶಾಸಕರು ಬಿಜೆಪಿಯೊಂದಿಗೆ ಒಡನಾಟ ಹೊಂದಿರುವುದು ಸ್ಪಷ್ಟವಾಗಿದೆ. ಇದನ್ನು ಸ್ಪೀಕರ್ ಪರಿಗಣಿಸಿಲ್ಲ ಎಂದು ಠಾಕ್ರೆ ಬಣ ಆಪಾದಿಸಿದೆ.

ಮಹಾರಾಷ್ಟ್ರದ ಮಹಾ ಅಘಾಡಿ ಸರ್ಕಾರದ ಭಾಗವಾಗಿದ್ದ ಶಿವಸೇನೆಯಿಂದ ಬಂಡಾಯವೆದಿದ್ದ ಮುಖ್ಯಮಂತ್ರಿ ಏಕನಾಥ್ ಶಿಂಧೆ ಬಣ, ಬಿಜೆಪಿ ಜೊತೆ ಸೇರಿ ಪ್ರತ್ಯೇಕ ಸರ್ಕಾರ ರಚಿಸಿತ್ತು. ಸಿಎಂ ಶಿಂಧೆ ಸೇರಿದಂತೆ ಪಕ್ಷದ ವಿರುದ್ದ ತೊಡೆ ತಟ್ಟಿದ್ದ ಶಾಸಕರನ್ನು ಅಮಾನತುಗೊಳಿಸುವಂತೆ ಉದ್ದವ್ ಠಾಕ್ರೆ ಬಣ ಕೋರಿತ್ತು. ಆದರೆ, ಸ್ಪೀಕರ್ ಈ ಕುರಿತು ಯಾವುದೇ ಆದೇಶ ನೀಡದೆ ವಿಳಂಬ ಮಾಡಿದ್ದರು.

ಸುಪ್ರೀಂ ಕೋರ್ಟ್‌ ಚಾಟಿ ಬೀಸಿದ ಬಳಿಕ, ಜನವರಿ 10 ರಂದು ಏಕನಾಥ್ ಶಿಂಧೆ ಬಣದ ಪರ ಸ್ಪೀಕರ್ ತೀರ್ಪು ನೀಡಿದ್ದರು. ಶಿಂಧೆ ನೇತೃತ್ವದ ಶಿವಸೇನೆ ಬಣವು ಬಹುಪಾಲು ಪಕ್ಷದ ಶಾಸಕರ ಬೆಂಬಲವನ್ನು ಹೊಂದಿರುವುದರಿಂದ ಕಾನೂನುಬದ್ಧವಾಗಿದೆ ಎಂದು ಹೇಳಿದ್ದರು.

ಇದನ್ನೂ ಓದಿ : ಮೋದಿ ಮಣಿಪುರಕ್ಕೆ ಯಾಕೆ ಭೇಟಿ ನೀಡಿಲ್ಲ ಎಂದು ಜನ ನಮ್ಮನ್ನು ಕೇಳ್ತಿದ್ದಾರೆ: ಜೈರಾಮ್ ರಮೇಶ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪೆಂಗ್ವಿನ್ ಇಂಡಿಯಾ ಹಿಂದೆ ಸರಿದ ನಂತರ ಸೋನಿಯಾ ಗಾಂಧಿ ಅವರ ಆತ್ಮಚರಿತ್ರೆ ‘ಬಿಲಾಂಗಿಂಗ್’ ಅನ್ನು ಪ್ರಕಟಿಸಲಿರುವ ‘ಹಾರ್ಪರ್‌ಕಾಲಿನ್ಸ್’ 

ನವದೆಹಲಿ: ಕಾಂಗ್ರೆಸ್‌ನ ಹಿರಿಯ ನಾಯಕಿ ಸೋನಿಯಾ ಗಾಂಧಿ ಅವರ ಬಹುನಿರೀಕ್ಷಿತ ಆತ್ಮಚರಿತ್ರೆ ‘ಬಿಲಾಂಗಿಂಗ್: ಎ ಜರ್ನಿ ಆಫ್ ಲವ್’ ಇದೀಗ ಭಾರತದಲ್ಲಿ ಹಾರ್ಪರ್‌ಕಾಲಿನ್ಸ್ ಇಂಡಿಯಾ ಮೂಲಕ ಪ್ರಕಟವಾಗಲಿದೆ. ಪೆಂಗ್ವಿನ್ ರ‍್ಯಾಂಡಮ್ ಹೌಸ್ ಇಂಡಿಯಾ...

ಜೈಲಿನಲ್ಲಿ ಕಂಬಿ ಎಣಿಸುತ್ತಿರುವ 25 ಕ್ರಿಮಿನಲ್‌ಗಳು, ದೆಹಲಿಯ ಜಂತರ್-ಮಂತರ್‌ಗೆ ಬರುಲು ಹೇಗೆ ಸಾಧ? ತನಿಖಾ ವರದಿಯಲ್ಲಿ ಬಯಲಾಯ್ತು ಪೊಲೀಸರ ಕುತಂತ್ರ

ದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ವಿರೋಧಿ ಪ್ರತಿಭಟನೆ ವೇಳೆ ದೆಹಲಿ ಪೊಲೀಸರು ಬಳಸಿದ್ದ ‘ಅಟೋಮೇಟೆಡ್ ಫೇಶಿಯಲ್ ರೆಕಗ್ನಿಷನ್ ಸಿಸ್ಟಮ್’ (AFRS - ಮುಖಚರ್ಯೆ ಗುರುತಿಸುವ ತಂತ್ರಜ್ಞಾನ) ಗಂಭೀರ...

ಪಶ್ಚಿಮ ಬಂಗಾಳ: ವರ್ಷದಲ್ಲಿ 1,000 ಆರ್‌ಎಸ್‌ಎಸ್‌ ಶಾಲೆ: ಶಿಕ್ಷಣ ವ್ಯವಸ್ಥೆಯನ್ನೇ ‘ರಾಷ್ಟ್ರೀಯತಾವಾದಿ’ಗೊಳಿಸುವುದಾಗಿ ಘೋಷಿಸಿದ ಸುವೇಂದು ಅಧಿಕಾರಿ

ಕೋಲ್ಕತ್ತಾ: ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಶೈಕ್ಷಣಿಕ ವಿಭಾಗವಾಗಿರುವ ವಿದ್ಯಾ ಭಾರತಿಯ ಶಾಲೆಗಳ ಸಂಖ್ಯೆಯನ್ನು ಪಶ್ಚಿಮ ಬಂಗಾಳದಲ್ಲಿ ಭಾರಿ ಪ್ರಮಾಣದಲ್ಲಿ ಹೆಚ್ಚಿಸುವುದಾಗಿ ಮುಖ್ಯಮಂತ್ರಿ ಸುವೇಂದು ಅಧಿಕಾರಿ ಘೋಷಿಸಿದ್ದಾರೆ. ರಾಜ್ಯದ ಪ್ರತಿಯೊಂದು ಜಿಲ್ಲೆ, ಪುರಸಭೆ...

SIR ನ್ಯಾಯಸಮ್ಮತವಾಗಿಲ್ಲ ಮಾಜಿ ಚುನಾವಣಾ ಆಯುಕ್ತ ಅಶೋಕ್ ಲಾವಾಸ ಆತಂಕ

ಭಾರತೀಯ ಚುನಾವಣಾ ಆಯೋಗವು (ಇಸಿಐ) ದೇಶಾದ್ಯಂತ ಕೈಗೊಂಡಿರುವ ಮತದಾರರ ಪಟ್ಟಿಯ ‘ವಿಶೇಷ ತೀವ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯು ಶಾಸನಾತ್ಮಕವಾಗಿ ಕಾನೂನುಬದ್ಧವಾಗಿದ್ದರೂ, ನೈತಿಕವಾಗಿ ನ್ಯಾಯಸಮ್ಮತವಾಗಿಲ್ಲ ಎಂದು ಮಾಜಿ ಚುನಾವಣಾ ಆಯುಕ್ತ ಅಶೋಕ್ ಲಾವಾಸ ತೀವ್ರ...

ಜಂತರ್ ಮಂತರ್ ಹಲ್ಲೆ: ‘ತಲೆಬುರುಡೆ ಒಡೆದೆ, ಜೈಲಿಗೆ ಹೋಗಲಿಲ್ಲ; ಕಪಿಲ್ ಮಿಶ್ರಾ ನನ್ನ ಅಣ್ಣ’: ಬಿಜೆಪಿ ಬೆಂಬಲದ ಬಗ್ಗೆ ದಾಳಿ ಆರೋಪಿ ಬಹಿರಂಗ ಹೇಳಿಕೆ

ನವದೆಹಲಿ: ದೆಹಲಿಯ ಜಂತರ್ ಮಂತರ್‌ನಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆಯ ವೇಳೆ ಪ್ರತಿಭಟನಾಕಾರಿಯ ತಂದೆಯ ಮೇಲೆ ನಡೆದ ಹಲ್ಲೆ ಪ್ರಕರಣ ಇದೀಗ ರಾಜಕೀಯ ವಿವಾದದ ಕೇಂದ್ರವಾಗಿದೆ. ಪ್ರಕರಣದ ಆರೋಪಿಯಾಗಿರುವ ಸ್ವತಃ ಬಲಪಂಥೀಯ ಹಾಗೂ ಹಿಂದೂತ್ವ ಕಾರ್ಯಕರ್ತ...

ದೆಹಲಿ: ‘ಖಾನ್’ ಎಂಬ ಹೆಸರಿನ ಕಾರಣಕ್ಕೆ ಪತ್ರಕರ್ತೆಯರ ಮೇಲೆ ಹಲ್ಲೆ ಆರೋಪ, FIR ದಾಖಲಿಸುವಂತೆ ಸಾಕೇತ್ ಠಾಣೆಯಲ್ಲಿ ಧರಣಿ

ದೆಹಲಿಯ ಸಾಕೇತ್ ಮ್ಯಾಕ್ಸ್ ಆಸ್ಪತ್ರೆಯ ಹೊಸ ವಿಭಾಗದ ಉದ್ಘಾಟನಾ ಕಾರ್ಯಕ್ರಮದ ವರದಿಗೆ ತೆರಳಿದ್ದ '4PM ನ್ಯೂಸ್ ನೆಟ್‌ವರ್ಕ್'ನ ಮುಸ್ಲಿಂ ಮಹಿಳಾ ಪತ್ರಕರ್ತೆಯರಾದ ಶಾಹೀನ್ ಖಾನ್ ಮತ್ತು ನಫೀಸಾ ಖಾನ್ ಅವರ ಮೇಲೆ ದಿಲ್ಲಿ...

ಮುಖ್ಯಮಂತ್ರಿಗಳನ್ನು ಪ್ರಶ್ನಿಸಿದ್ದಕ್ಕೆ ದೆಹಲಿ ಪೊಲೀಸರಿಂದ ಬಂಧನ-ಹಲ್ಲೆ: ಇಬ್ಬರು ಪತ್ರಕರ್ತೆಯರ ಆರೋಪ

ಸುದ್ದಿ ಮಾಡುತ್ತಿದ್ದಾಗ ದಕ್ಷಿಣ ದೆಹಲಿಯಲ್ಲಿ ದೆಹಲಿ ಪೊಲೀಸ್ ಸಿಬ್ಬಂದಿ ತಮ್ಮನ್ನು ವಶಕ್ಕೆ ಪಡೆದು ಥಳಿಸಿದ್ದಾರೆ ಎಂದು ಇಬ್ಬರು ಮುಸ್ಲಿಂ ಸ್ವತಂತ್ರ ಮಹಿಳಾ ಪತ್ರಕರ್ತೆಯರು ಆರೋಪಿಸಿದ್ದಾರೆ. '4 ಪಿಎಮ್ ನ್ಯೂಸ್ ನೆಟ್‌ವರ್ಕ್' (4 PM News...

ತ್ರಿಪುರಾ: ‘ದನ ಕಳ್ಳ’ ಎಂದು, ಖರೀದಿಸಿದ ದನಗಳೊಂದಿಗೆ ಹಿಂತಿರುಗುತ್ತಿದ್ದ ಮುಸ್ಲಿಂ ವ್ಯಾಪಾರಿ ಮೇಲೆ ಗುಂಪು ಹಲ್ಲೆ: 46 ವರ್ಷದ ಜಲೀಲುರ್ ರೆಹಮಾನ್ ಸಾವು

ಅಗರ್ತಲಾ: ಖರೀದಿಸಿದ ಎರಡು ದನಗಳನ್ನು ತೆಗೆದುಕೊಂಡು ಹೋಗುತ್ತಿದ್ದ ಮುಸ್ಲಿಂ ದನ ವ್ಯಾಪಾರಿಯೊಬ್ಬರನ್ನು ‘ದನ ಕಳ್ಳ’ ಎಂದು ಆರೋಪಿಸಿ ಗುಂಪೊಂದು ಥಳಿಸಿದ ಪರಿಣಾಮ ಅವರು ಮೃತಪಟ್ಟಿರುವ ಘಟನೆ ತ್ರಿಪುರಾದ ಕಲ್ಯಾಣಪುರ ಪೊಲೀಸ್ ಠಾಣೆ ವ್ಯಾಪ್ತಿಯ...

ಪ್ರಶ್ನಿಸುವವರನ್ನು ‘ದಿಮಾಗಿ ನಕ್ಸಲ್’ ಎಂದು ಕರೆಯುವುದು ಸೂಕ್ಷ್ಮತೆಯಿಲ್ಲದ ನಡವಳಿಕೆ: ಗೀತಾಂಜಲಿ ಅಂಗಮೋ

ಪ್ರಶ್ನೆ ಕೇಳುವ ವ್ಯಕ್ತಿಯನ್ನು ‘ದಿಮಾಗಿ ನಕ್ಸಲ್’ (ಬುದ್ಧಿಜೀವಿ ನಕ್ಸಲರು) ಎಂದು ಕರೆಯುವುದು ಅತ್ಯಂತ ಸೂಕ್ಷ್ಮತೆಯಿಲ್ಲದ ರೀತಿಯಾಗಿದೆ ಎಂದು ಪ್ರಸಿದ್ಧ ಹವಾಮಾನ ಕಾರ್ಯಕರ್ತ ಮತ್ತು ಶಿಕ್ಷಣ ತಜ್ಞ ಸೋನಂ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ...

ಬಸವರಾಜ ಕನ್ನಾಳೆ ಸಿಂಡಿಕೇಟ್ ಸದಸ್ಯತ್ವ ರದ್ದಾಗುತ್ತಾ? ರಾಜಭವನದ ಮೌನಕ್ಕೆ ಮೂಡಿದ ಅನುಮಾನ

ತುಮಕೂರು ವಿಶ್ವವಿದ್ಯಾಲಯದ ರಾಜ್ಯಪಾಲರ ನಾಮನಿರ್ದೇಶಿತ ಸಿಂಡಿಕೇಟ್ ಸದಸ್ಯ ಬಸವರಾಜ ಕನ್ನಾಳೆ ಬಂಧನದ ಬೆನ್ನಲ್ಲೇ, ತನಿಖಾ ಸಂಸ್ಥೆಗಳು ತಮ್ಮ ಕಾರ್ಯಾಚರಣೆಯನ್ನು ತೀವ್ರಗೊಳಿಸಿವೆ. ಪ್ರಕರಣಕ್ಕೆ ಸಂಬಂಧಿಸಿದಂತೆ ತುಮಕೂರು ವಿವಿಯ ಪ್ರಭಾರ ಕುಲಪತಿ ಪ್ರೊ. ನಾಗಭೂಷಣ ಅವರಿಂದ...