Homeಮುಖಪುಟಶಿಂಧೆ ಬಣವೇ ನಿಜವಾದ ಶಿವಸೇನೆ ಎಂದ ಮಹಾರಾಷ್ಟ್ರ ಸ್ಪೀಕರ್ ನಿರ್ಧಾರ ಪ್ರಶ್ನಿಸಿ ಸುಪ್ರೀಂ ಮೊರೆ ಹೋದ...

ಶಿಂಧೆ ಬಣವೇ ನಿಜವಾದ ಶಿವಸೇನೆ ಎಂದ ಮಹಾರಾಷ್ಟ್ರ ಸ್ಪೀಕರ್ ನಿರ್ಧಾರ ಪ್ರಶ್ನಿಸಿ ಸುಪ್ರೀಂ ಮೊರೆ ಹೋದ ಉದ್ಧವ್ ಠಾಕ್ರೆ ಬಣ

- Advertisement -
- Advertisement -

ಮಹಾರಾಷ್ಟ್ರದ ಮುಖ್ಯಮಂತ್ರಿ ಏಕನಾಥ್ ಶಿಂಧೆ ನೇತೃತ್ವದ ಬಣವನ್ನು ‘ನಿಜವಾದ ಶಿವಸೇನೆ’ ಎಂದು ಗುರುತಿಸಿರುವ ಸ್ಪೀಕರ್ ರಾಹುಲ್ ನಾರ್ವೇಕರ್ ಅವರ ಆದೇಶದ ವಿರುದ್ಧ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ ಬಣ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದೆ.

ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ), ಸ್ಪೀಕರ್ ಆದೇಶಕ್ಕೆ ತಾತ್ಕಾಲಿಕ ತಡೆ ನೀಡಬೇಕು, ಸಿಎಂ ಶಿಂಧೆ ಬಣದ ಶಾಸಕರು ವಿಧಾನಸಭೆ ಪ್ರವೇಶಿಸುವುದಕ್ಕೆ ನಿರ್ಬಂಧ ವಿಧಿಸಿ ಮಧ್ಯಂತರ ಆದೇಶ ನೀಡಬೇಕು ಹಾಗೂ ಶಿಂಧೆ ಬಣದ ಶಾಸಕರ ಸದಸ್ಯತ್ವವನ್ನು ಅಮಾನತು ಮಾಡಬೇಕು ಎಂದು ಸುಪ್ರೀಂ ಕೋರ್ಟ್‌ನ್ನು ಕೋರಿದೆ.

ಶಿಂಧೆ ಬಣದ ಪರ ಸ್ಪೀಕರ್ ನೀಡಿರುವ ಆದೇಶ ಸಂಪೂರ್ಣವಾಗಿ ಕಾನೂನು ಬಾಹಿರವಾಗಿದೆ. ಇದು ಸಂವಿಧಾನದ ಹತ್ತನೇ ಶೆಡ್ಯೂಲ್ (ಪಕ್ಷಾಂತರ ವಿರೋಧಿ ಕಾಯ್ದೆ) ಗೆ ವಿರುದ್ದವಾಗಿದೆ. ಶಿಂಧೆ ಬಣ ಪ್ರತ್ಯೇಕವಾಗಿ ಸರ್ಕಾರ ರಚಿಸಿರುವುದು ಶಿವಸೇನೆಯ ಸಂವಿಧಾನದ ಉಲ್ಲಂಘಣೆಯಲ್ಲ ಎಂದು ಸ್ಪೀಕರ್‌ ಹೇಳಿರುವುದು ಸಂಪೂರ್ಣ ತಪ್ಪು ಎಂದು ಠಾಕ್ರೆ ಬಣ ಆರೋಪಿಸಿದೆ.

ಬಿಜೆಪಿಯ ಬೆಂಬಲದೊಂದಿಗೆ ಏಕನಾಥ್ ಶಿಂಧೆ ಮುಖ್ಯಮಂತ್ರಿಯಾಗಿದ್ದಾರೆ. ಅವರ ಬಣದ ಶಾಸಕರು ಬಿಜೆಪಿಯೊಂದಿಗೆ ಒಡನಾಟ ಹೊಂದಿರುವುದು ಸ್ಪಷ್ಟವಾಗಿದೆ. ಇದನ್ನು ಸ್ಪೀಕರ್ ಪರಿಗಣಿಸಿಲ್ಲ ಎಂದು ಠಾಕ್ರೆ ಬಣ ಆಪಾದಿಸಿದೆ.

ಮಹಾರಾಷ್ಟ್ರದ ಮಹಾ ಅಘಾಡಿ ಸರ್ಕಾರದ ಭಾಗವಾಗಿದ್ದ ಶಿವಸೇನೆಯಿಂದ ಬಂಡಾಯವೆದಿದ್ದ ಮುಖ್ಯಮಂತ್ರಿ ಏಕನಾಥ್ ಶಿಂಧೆ ಬಣ, ಬಿಜೆಪಿ ಜೊತೆ ಸೇರಿ ಪ್ರತ್ಯೇಕ ಸರ್ಕಾರ ರಚಿಸಿತ್ತು. ಸಿಎಂ ಶಿಂಧೆ ಸೇರಿದಂತೆ ಪಕ್ಷದ ವಿರುದ್ದ ತೊಡೆ ತಟ್ಟಿದ್ದ ಶಾಸಕರನ್ನು ಅಮಾನತುಗೊಳಿಸುವಂತೆ ಉದ್ದವ್ ಠಾಕ್ರೆ ಬಣ ಕೋರಿತ್ತು. ಆದರೆ, ಸ್ಪೀಕರ್ ಈ ಕುರಿತು ಯಾವುದೇ ಆದೇಶ ನೀಡದೆ ವಿಳಂಬ ಮಾಡಿದ್ದರು.

ಸುಪ್ರೀಂ ಕೋರ್ಟ್‌ ಚಾಟಿ ಬೀಸಿದ ಬಳಿಕ, ಜನವರಿ 10 ರಂದು ಏಕನಾಥ್ ಶಿಂಧೆ ಬಣದ ಪರ ಸ್ಪೀಕರ್ ತೀರ್ಪು ನೀಡಿದ್ದರು. ಶಿಂಧೆ ನೇತೃತ್ವದ ಶಿವಸೇನೆ ಬಣವು ಬಹುಪಾಲು ಪಕ್ಷದ ಶಾಸಕರ ಬೆಂಬಲವನ್ನು ಹೊಂದಿರುವುದರಿಂದ ಕಾನೂನುಬದ್ಧವಾಗಿದೆ ಎಂದು ಹೇಳಿದ್ದರು.

ಇದನ್ನೂ ಓದಿ : ಮೋದಿ ಮಣಿಪುರಕ್ಕೆ ಯಾಕೆ ಭೇಟಿ ನೀಡಿಲ್ಲ ಎಂದು ಜನ ನಮ್ಮನ್ನು ಕೇಳ್ತಿದ್ದಾರೆ: ಜೈರಾಮ್ ರಮೇಶ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: 43ಲಕ್ಷದಲ್ಲಿ ನೋಟಿಸ್ ತಲುಪಿರುವುದು 25ಲಕ್ಷ ಜನರಿಗೆ ಮಾತ್ರ, ಬಾಕಿ 18ಲಕ್ಷ ಜನರಿಗೆ ಇನ್ನು ನೋಟಿಸ್ಸೇ ತಲುಪಿಲ್ಲ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಆಡಳಿತಾತ್ಮಕ ಗೊಂದಲ ಹಾಗೂ ಯಾಂತ್ರಿಕ ಲೋಪಗಳ ಜಾಲದಲ್ಲಿ ಸಿಲುಕಿಬಿದ್ದಿದೆ. ಮುಖ್ಯ ಚುನಾವಣಾಧಿಕಾರಿಗಳ ಕಚೇರಿ ಬಿಡುಗಡೆ ಮಾಡಿರುವ ಇತ್ತೀಚಿನ ದತ್ತಾಂಶವೇ ಆಯೋಗದ...

ಕಾಳಿಘಾಟ್‌ನಲ್ಲಿ ‘ಮೀನಿನ ಪ್ರಸಾದ’ ಸ್ವೀಕರಿಸಿದ ಸುವೇಂದು ಅಧಿಕಾರಿ; ಬಾಗೇಶ್ವರ್ ಬಾಬಾ ‘ಮಾಂಸಾಹಾರ’ ವಿವಾದಕ್ಕೆ ಹೊಸ ತಿರುವು!

ದುರ್ಗಾ ಪೂಜೆ ಸಂದರ್ಭದಲ್ಲಿ ಮೀನು–ಮಾಂಸ ಸೇವನೆ ಕುರಿತು ಬಾಗೇಶ್ವರ್ ಧಾಮದ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿರುವ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ವಿವಾದಕ್ಕೆ ಕಾರಣವಾಗಿರುವ ನಡುವೆಯೇ, ಮುಖ್ಯಮಂತ್ರಿ ಸುವೇಂದು ಅಧಿಕಾರಿ ಕಾಳಿಘಾಟ್ʼನ ಕಾಳಿ ದೇವಸ್ಥಾನದಲ್ಲಿ...

ಎಸ್‌ಐಆರ್‌: ಹೈದರಾಬಾದ್, ಸಿಕಂದರಾಬಾದ್‌ನಲ್ಲಿ ಲಕ್ಷಾಂತರ ಮತದಾರರ ಹೆಸರು ಅಳಿಸುವಿಕೆ; 2029ರ ಚುನಾವಣೆಗೂ ಮುನ್ನ ಗಂಭೀರ ಆತಂಕ

ಹೈದರಾಬಾದ್: ತೆಲಂಗಾಣದಲ್ಲಿ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಮತದಾರರ ಪಟ್ಟಿಯಿಂದ ಭಾರೀ ಪ್ರಮಾಣದಲ್ಲಿ ಹೆಸರುಗಳನ್ನು ತೆಗೆದುಹಾಕಲಾಗಿರುವುದು ಮುಂದಿನ ಚುನಾವಣೆಯ ರಾಜಕೀಯ ಲೆಕ್ಕಾಚಾರಗಳ ಮೇಲೆ ಗಂಭೀರ ಪರಿಣಾಮ ಬೀರುವ ಸಾಧ್ಯತೆಯನ್ನು ಹುಟ್ಟುಹಾಕಿದೆ....

9/11 ದಾಳಿಗೆ 25 ವರ್ಷ: ‘ಭಯೋತ್ಪಾದನೆ ವಿರುದ್ಧದ ಯುದ್ಧ’ ಮತ್ತು ಕುಸಿದ ಪ್ರಜಾಪ್ರಭುತ್ವದ ಮೌಲ್ಯಗಳು

ನ್ಯೂಯಾರ್ಕ್‌ನ ಪ್ರತಿಷ್ಠಿತ ವರ್ಲ್ಡ್ ಟ್ರೇಡ್ ಸೆಂಟರ್ ಅವಳಿ ಗೋಪುರಗಳ ಮೇಲೆ ನಡೆದ ಭೀಕರ ಭಯೋತ್ಪಾದನಾ ದಾಳಿಗೆ ಇಂದಿಗೆ ಭರ್ತಿ 25 ವರ್ಷಗಳು ತುಂಬಿವೆ. ಈ ಕಾಲು ಶತಮಾನದ ಅವಧಿಯಲ್ಲಿ 'ಭಯೋತ್ಪಾದನೆ ವಿರುದ್ಧದ ಜಾಗತಿಕ...

‘ಈ ಪ್ರಕ್ರಿಯೆಯೇ ಶಿಕ್ಷೆಯಾಗಿದೆ’: ಉಮರ್ ಖಾಲಿದ್ ದೀರ್ಘ ಜೈಲುವಾಸದ ಬಗ್ಗೆ ಮಾಜಿ ನ್ಯಾಯಮೂರ್ತಿ ದೀಪಕ್ ಗುಪ್ತಾ ತೀವ್ರ ಟೀಕೆ

ನವದೆಹಲಿ: ಮಾನವ ಹಕ್ಕುಗಳ ಕಾರ್ಯಕರ್ತ, ವಿದ್ಯಾರ್ಥಿ ನಾಯಕ ಉಮರ್ ಖಾಲಿದ್ ಅವರ ದೀರ್ಘಕಾಲದ ವಿಚಾರಣಾಪೂರ್ವ ಬಂಧನ, ಎಲ್ಗರ್ ಪರಿಷತ್ ಪ್ರಕರಣದ ಆರೋಪಿಗಳ ವರ್ಷಗಳ ಜೈಲುವಾಸ ಹಾಗೂ ವೈಯಕ್ತಿಕ ಸ್ವಾತಂತ್ರ್ಯಕ್ಕೆ ಸಂಬಂಧಿಸಿದ ಪ್ರಕರಣಗಳಲ್ಲಿ ನ್ಯಾಯಾಂಗದ...

‘ದೇಶವಿರೋಧಿ ಮನಸ್ಥಿತಿಯಲ್ಲ’: ಜಿ.ಎನ್. ಸಾಯಿಬಾಬಾ ಸ್ಮರಣೆ ಪ್ರಕರಣದಲ್ಲಿ ‘ಟಿಸ್’ ಮಾಜಿ ವಿದ್ಯಾರ್ಥಿಗೆ ಜಾಮೀನು!

ದೆಹಲಿ ವಿಶ್ವವಿದ್ಯಾಲಯದ ಮಾಜಿ ಪ್ರಾಧ್ಯಾಪಕ ದಿವಂಗತ ಜಿ.ಎನ್. ಸಾಯಿಬಾಬಾ ಅವರ ಸ್ಮರಣಾರ್ಥ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (TISS) ಕ್ಯಾಂಪಸ್‌ನಲ್ಲಿ ನಡೆದ ಅನುಮತಿರಹಿತ ಕಾರ್ಯಕ್ರಮಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಂಧಿತರಾಗಿದ್ದ ಮಾಜಿ ವಿದ್ಯಾರ್ಥಿ...

ಜನಾಕ್ರೋಶದ ನಡುವೆಯೇ ಎಸ್ಐಆರ್ ಸಮರ್ಥಿಸಿಕೊಂಡ ಮುಖ್ಯ ಚುನಾವಣಾ ಆಯುಕ್ತ: ‘ರಾಜಕೀಯ ದಾಳಿಗಳಿಂದ ಆಯೋಗ ವಿಚಲಿತವಾಗದು’ ಎಂದ ಜ್ಞಾನೇಶ್ ಕುಮಾರ್

ಅಹಮದಾಬಾದ್: ದೇಶದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (SIR) ಕುರಿತು ರಾಜಕೀಯ ಪಕ್ಷಗಳು, ನಾಗರಿಕ ಸಂಘಟನೆಗಳು ಹಾಗೂ ವಿವಿಧ ವಲಯಗಳಿಂದ ತೀವ್ರ ಟೀಕೆಗಳು ವ್ಯಕ್ತವಾಗುತ್ತಿರುವ ನಡುವೆಯೇ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್...

ಕರ್ನಾಟಕ ಎಸ್ಐಆರ್: ಹೆಸರಿನ ಸಣ್ಣ ವ್ಯತ್ಯಾಸಕ್ಕಾಗಿ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರಿಗೆ ನೋಟಿಸ್; ‘ಸುಳ್ಳು ಮಾಹಿತಿ ನೀಡಿದರೆ ಜೈಲು’ ಎಂಬ ಬೆದರಿಕೆ

ಮೈಸೂರು: ಸುಮಾರು ಮೂರೂವರೆ ದಶಕಗಳ ಕಾಲ ರಾಜ್ಯದ ಆಡಳಿತ ವ್ಯವಸ್ಥೆಯಲ್ಲಿ ಸೇವೆ ಸಲ್ಲಿಸಿ, ಸ್ವತಃ ಚುನಾವಣಾ ಪ್ರಕ್ರಿಯೆಯ ಜವಾಬ್ದಾರಿಯುತ ಹುದ್ದೆಯಲ್ಲಿ ಕಾರ್ಯನಿರ್ವಹಿಸಿದ್ದ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರೇ ಇದೀಗ ತಮ್ಮ...

SIR : ತಾಯಿಯೊಂದಿಗೆ ಮ್ಯಾಪಿಂಗ್ ಮಾಡಿದರೂ ಅಜ್ಜನ ವಯಸ್ಸಿನ ವ್ಯತ್ಯಾಸದ ನೆಪ ಹೇಳಿ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ದಿನಕ್ಕೊಂದು ವಿಲಕ್ಷಣ ಹಾಗೂ ಯಾಂತ್ರಿಕ ದೋಷಗಳನ್ನು ಹೊರಹಾಕುತ್ತಿದ್ದು, ಪ್ರಜಾಪ್ರಭುತ್ವದ ಹಕ್ಕನ್ನು ಚಲಾಯಿಸಲು ಬಯಸುವ ನೈಜ ಮತದಾರರನ್ನು ಆತಂಕಕ್ಕೆ ತಳ್ಳುತ್ತಿದೆ. ಬ್ಯಾಟರಾಯನಪುರ...

ಬ್ಯಾಂಕ್ ಮುಷ್ಕರ: ದೇಶಾದ್ಯಂತ ಶಾಖಾ ಸೇವೆಗಳಿಗೆ ಅಡಚಣೆ; ವಾರಾಂತ್ಯ, ಗಣೇಶ ಚತುರ್ಥಿಯಿಂದ ಹಲವು ದಿನ ಸೇವೆ ವ್ಯತ್ಯಯ 

ನವದೆಹಲಿ: ಯುನೈಟೆಡ್ ಫೋರಮ್ ಆಫ್ ಬ್ಯಾಂಕ್ ಯೂನಿಯನ್ಸ್ (UFBU) ಕರೆ ನೀಡಿರುವ ರಾಷ್ಟ್ರವ್ಯಾಪಿ ಬ್ಯಾಂಕ್ ಮುಷ್ಕರ ಸೆಪ್ಟೆಂಬರ್ 11ರಂದು (ಇಂದು) ನಡೆಯುತ್ತಿದ್ದು, ದೇಶದಾದ್ಯಂತ ಬ್ಯಾಂಕ್ ಗ್ರಾಹಕರ ಸಾಮಾನ್ಯ ಸೇವೆಗಳ ಮೇಲೆ ಪರಿಣಾಮ ಬೀರುವ...