Homeಮುಖಪುಟಶಿಂಧೆ ಬಣವೇ ನಿಜವಾದ ಶಿವಸೇನೆ ಎಂದ ಮಹಾರಾಷ್ಟ್ರ ಸ್ಪೀಕರ್ ನಿರ್ಧಾರ ಪ್ರಶ್ನಿಸಿ ಸುಪ್ರೀಂ ಮೊರೆ ಹೋದ...

ಶಿಂಧೆ ಬಣವೇ ನಿಜವಾದ ಶಿವಸೇನೆ ಎಂದ ಮಹಾರಾಷ್ಟ್ರ ಸ್ಪೀಕರ್ ನಿರ್ಧಾರ ಪ್ರಶ್ನಿಸಿ ಸುಪ್ರೀಂ ಮೊರೆ ಹೋದ ಉದ್ಧವ್ ಠಾಕ್ರೆ ಬಣ

- Advertisement -
- Advertisement -

ಮಹಾರಾಷ್ಟ್ರದ ಮುಖ್ಯಮಂತ್ರಿ ಏಕನಾಥ್ ಶಿಂಧೆ ನೇತೃತ್ವದ ಬಣವನ್ನು ‘ನಿಜವಾದ ಶಿವಸೇನೆ’ ಎಂದು ಗುರುತಿಸಿರುವ ಸ್ಪೀಕರ್ ರಾಹುಲ್ ನಾರ್ವೇಕರ್ ಅವರ ಆದೇಶದ ವಿರುದ್ಧ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ ಬಣ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದೆ.

ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ), ಸ್ಪೀಕರ್ ಆದೇಶಕ್ಕೆ ತಾತ್ಕಾಲಿಕ ತಡೆ ನೀಡಬೇಕು, ಸಿಎಂ ಶಿಂಧೆ ಬಣದ ಶಾಸಕರು ವಿಧಾನಸಭೆ ಪ್ರವೇಶಿಸುವುದಕ್ಕೆ ನಿರ್ಬಂಧ ವಿಧಿಸಿ ಮಧ್ಯಂತರ ಆದೇಶ ನೀಡಬೇಕು ಹಾಗೂ ಶಿಂಧೆ ಬಣದ ಶಾಸಕರ ಸದಸ್ಯತ್ವವನ್ನು ಅಮಾನತು ಮಾಡಬೇಕು ಎಂದು ಸುಪ್ರೀಂ ಕೋರ್ಟ್‌ನ್ನು ಕೋರಿದೆ.

ಶಿಂಧೆ ಬಣದ ಪರ ಸ್ಪೀಕರ್ ನೀಡಿರುವ ಆದೇಶ ಸಂಪೂರ್ಣವಾಗಿ ಕಾನೂನು ಬಾಹಿರವಾಗಿದೆ. ಇದು ಸಂವಿಧಾನದ ಹತ್ತನೇ ಶೆಡ್ಯೂಲ್ (ಪಕ್ಷಾಂತರ ವಿರೋಧಿ ಕಾಯ್ದೆ) ಗೆ ವಿರುದ್ದವಾಗಿದೆ. ಶಿಂಧೆ ಬಣ ಪ್ರತ್ಯೇಕವಾಗಿ ಸರ್ಕಾರ ರಚಿಸಿರುವುದು ಶಿವಸೇನೆಯ ಸಂವಿಧಾನದ ಉಲ್ಲಂಘಣೆಯಲ್ಲ ಎಂದು ಸ್ಪೀಕರ್‌ ಹೇಳಿರುವುದು ಸಂಪೂರ್ಣ ತಪ್ಪು ಎಂದು ಠಾಕ್ರೆ ಬಣ ಆರೋಪಿಸಿದೆ.

ಬಿಜೆಪಿಯ ಬೆಂಬಲದೊಂದಿಗೆ ಏಕನಾಥ್ ಶಿಂಧೆ ಮುಖ್ಯಮಂತ್ರಿಯಾಗಿದ್ದಾರೆ. ಅವರ ಬಣದ ಶಾಸಕರು ಬಿಜೆಪಿಯೊಂದಿಗೆ ಒಡನಾಟ ಹೊಂದಿರುವುದು ಸ್ಪಷ್ಟವಾಗಿದೆ. ಇದನ್ನು ಸ್ಪೀಕರ್ ಪರಿಗಣಿಸಿಲ್ಲ ಎಂದು ಠಾಕ್ರೆ ಬಣ ಆಪಾದಿಸಿದೆ.

ಮಹಾರಾಷ್ಟ್ರದ ಮಹಾ ಅಘಾಡಿ ಸರ್ಕಾರದ ಭಾಗವಾಗಿದ್ದ ಶಿವಸೇನೆಯಿಂದ ಬಂಡಾಯವೆದಿದ್ದ ಮುಖ್ಯಮಂತ್ರಿ ಏಕನಾಥ್ ಶಿಂಧೆ ಬಣ, ಬಿಜೆಪಿ ಜೊತೆ ಸೇರಿ ಪ್ರತ್ಯೇಕ ಸರ್ಕಾರ ರಚಿಸಿತ್ತು. ಸಿಎಂ ಶಿಂಧೆ ಸೇರಿದಂತೆ ಪಕ್ಷದ ವಿರುದ್ದ ತೊಡೆ ತಟ್ಟಿದ್ದ ಶಾಸಕರನ್ನು ಅಮಾನತುಗೊಳಿಸುವಂತೆ ಉದ್ದವ್ ಠಾಕ್ರೆ ಬಣ ಕೋರಿತ್ತು. ಆದರೆ, ಸ್ಪೀಕರ್ ಈ ಕುರಿತು ಯಾವುದೇ ಆದೇಶ ನೀಡದೆ ವಿಳಂಬ ಮಾಡಿದ್ದರು.

ಸುಪ್ರೀಂ ಕೋರ್ಟ್‌ ಚಾಟಿ ಬೀಸಿದ ಬಳಿಕ, ಜನವರಿ 10 ರಂದು ಏಕನಾಥ್ ಶಿಂಧೆ ಬಣದ ಪರ ಸ್ಪೀಕರ್ ತೀರ್ಪು ನೀಡಿದ್ದರು. ಶಿಂಧೆ ನೇತೃತ್ವದ ಶಿವಸೇನೆ ಬಣವು ಬಹುಪಾಲು ಪಕ್ಷದ ಶಾಸಕರ ಬೆಂಬಲವನ್ನು ಹೊಂದಿರುವುದರಿಂದ ಕಾನೂನುಬದ್ಧವಾಗಿದೆ ಎಂದು ಹೇಳಿದ್ದರು.

ಇದನ್ನೂ ಓದಿ : ಮೋದಿ ಮಣಿಪುರಕ್ಕೆ ಯಾಕೆ ಭೇಟಿ ನೀಡಿಲ್ಲ ಎಂದು ಜನ ನಮ್ಮನ್ನು ಕೇಳ್ತಿದ್ದಾರೆ: ಜೈರಾಮ್ ರಮೇಶ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಡಿಜಿಟಲ್ ಅರೆಸ್ಟ್‌ನಲ್ಲಿ ಬರೋಬ್ಬರಿ 23 ಕೋಟಿ ರೂ. ಕಳೆದುಕೊಂಡ ವ್ಯಕ್ತಿ : ಹಣ ಮರುಪಾವತಿ, ವಂಚನೆ ತಡೆಗೆ ಮಾರ್ಗಸೂಚಿ ಕೋರಿ ಸುಪ್ರೀಂ ಮೊರೆ

ಸೈಬರ್ ವಂಚನೆಯಾದ ಡಿಜಿಟಲ್ ಅರೆಸ್ಟ್‌ನಲ್ಲಿ ಬರೋಬ್ಬರಿ 23 ಕೋಟಿ ರೂಪಾಯಿ (22.92 ಕೋಟಿ) ಕಳೆದುಕೊಂಡ 82 ವರ್ಷದ ವ್ಯಕ್ತಿಯೊಬ್ಬರು ಸುಪ್ರೀಂ ಕೋರ್ಟ್‌ ಮೊರೆ ಹೋಗಿದ್ದು, ಈ ಸಂಬಂಧ ಕೇಂದ್ರ ಸರ್ಕಾರ, ಭಾರತೀಯ ರಿಸರ್ವ್...

ಒಡಿಶಾ| ಗುಂಪು ಹಲ್ಲೆಯ ನಂತರ ಪಾದ್ರಿ ಕುಟುಂಬ ವಾಸವಿದ್ದ ಬಾಡಿಗೆ ಮನೆ ಖಾಲಿ ಮಾಡುವಂತೆ ಒತ್ತಡ

ಈ ತಿಂಗಳ ಆರಂಭದಲ್ಲಿ ಗುಂಪೊಂದು ಹಲ್ಲೆ ನಡೆಸಿ ಸಾರ್ವಜನಿಕವಾಗಿ ಅವಮಾನಿಸಿತ್ತು ಎನ್ನಲಾದ ಒಡಿಶಾ ಪಾದ್ರಿ ಕುಟುಂಬ ಎಂಟು ವರ್ಷಗಳ ಕಾಲ ವಾಸಿಸುತ್ತಿದ್ದ ಮನೆಯಿಂದ ಖಾಲಿ ಮಾಡುವಂತೆ ಒತ್ತಾಯಿಸಲಾಗಿದೆ. ಇದರಿಂದಾಗಿ ಅವರ ಕುಟುಂಬ ಭಯಭೀತರಾಗಿ...

ಆಧಾರ್ ಕಾರ್ಡ್‌ ಇಲ್ಲದೆ ದಾಖಲಿಸಿಕೊಳ್ಳದ ವೈದ್ಯರು : ಹೆರಿಗೆಗೆ ಆಸ್ಪತ್ರೆ ಸಿಗದೆ ಅಲೆಮಾರಿ ಮಹಿಳೆ ಪರದಾಟ

ಆಧಾರ್ ಕಾರ್ಡ್‌ ಇಲ್ಲದ ಕಾರಣ ವೈದ್ಯರು ದಾಖಲಿಸಿಕೊಳ್ಳಲು ನಿರಾಕರಿಸಿದ್ದು, ಪರಿಣಾಮ ಹೆರಿಗೆಗೆ ಆಸ್ಪತ್ರೆ ಸಿಗದೆ ಅಲೆಮಾರಿ ಸಮುದಾಯದ ಮಹಿಳೆಯೊಬ್ಬರು ಪರದಾಡುತ್ತಿರುವ ಬಗ್ಗೆ ತೆಲಂಗಾಣದ ಕರೀಂನಗರ ಜಿಲ್ಲೆಯಿಂದ ವರದಿಯಾಗಿದೆ. ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್ ವರದಿಯ...

ಲ್ಯಾಂಡ್‌ಲಾರ್ಡ್: ಜಮೀನ್ದಾರಿ ವ್ಯವಸ್ಥೆ, ಜಾತಿ ಪ್ರಶ್ನೆ ಮತ್ತು ಸಂವಿಧಾನ – ಕನ್ನಡ ಚಿತ್ರರಂಗದ ಒಂದು ಮಹತ್ವದ ತಿರುವು

ಕನ್ನಡ ಮುಖ್ಯವಾಹಿನಿ ಸಿನೆಮಾ ಅಪರೂಪಕ್ಕೊಮ್ಮೆ ಮಾತ್ರ ಸಮಾಜದ ಮೂಲಭೂತ ಪ್ರಶ್ನೆಗಳತ್ತ ನೇರವಾಗಿ ಮುಖ ಮಾಡುತ್ತದೆ. ಜಾತಿ, ಭೂಮಿ, ಅಧಿಕಾರ ಎಲ್ಲವನ್ನು ಒಟ್ಟಿಗೆ ಹಿಡಿದು ಪ್ರಶ್ನಿಸುವ ಚಿತ್ರಗಳು ಇನ್ನೂ ವಿರಳ. ನಿರ್ದೇಶಕ–ಕಥಾಲೇಖಕ ಜಡೆಶ್ ಕೆ....

ಕುಡುಪು ಗುಂಪು ಹತ್ಯೆ : ಮತ್ತೊಬ್ಬ ಆರೋಪಿಗೆ ಜಾಮೀನು

ಮಂಗಳೂರು ಹೊರವಲಯದ ಕುಡುಪು ಬಳಿ 2025ರ ಏಪ್ರಿಲ್ 27ರಂದು ನಡೆದ ಕೇರಳ ಮೂಲದ ಮುಹಮ್ಮದ್ ಅಶ್ರಫ್ ಅವರ ಗುಂಪು ಹತ್ಯೆ ಪ್ರಕರಣದ ಆರೋಪಿ ನಟೇಶ್ ಕುಮಾರ್‌ಗೆ ಹೈಕೋರ್ಟ್ ಶುಕ್ರವಾರ (ಜ.23) ಜಾಮೀನು ಮಂಜೂರು...

ಬಂಗಾಳದಲ್ಲಿ ಎಸ್‌ಐಆರ್ ಭಯದಿಂದ 110 ಮಂದಿ ಆತ್ಮಹತ್ಯೆ : ಸಿಎಂ ಮಮತಾ ಬ್ಯಾನರ್ಜಿ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಯ ಭಯದಿಂದ ಪ್ರತಿದಿನ ಪಶ್ಚಿಮ ಬಂಗಾಳದಲ್ಲಿ ಮೂರ್ನಾಲ್ಕು ಜನರು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಶುಕ್ರವಾರ (ಜ.23) ಹೇಳಿದ್ದಾರೆ. ಚುನಾವಣಾ ಆಯೋಗ ಮತ್ತು ಕೇಂದ್ರ...

ಮಹಿಳಾ ಅಧಿಕಾರಿಗೆ ಅವಾಚ್ಯ ಶಬ್ಧಗಳಿಂದ ಬೆದರಿಕೆ: ಕಾಂಗ್ರೆಸ್ ನಿಂದ ರಾಜೀವ್ ಗೌಡ ಅಮಾನತು

ಬೆಂಗಳೂರು: ಸಚಿವ ಜಮೀರ್ ಅಹ್ಮದ್ ಖಾನ್ ಅವರ ಪುತ್ರ ಝೈದ್ ಖಾನ್ ಅಭಿನಯದ ಕಲ್ಟ್ ಚಿತ್ರದ ಬ್ಯಾನರ್ ತೆರವು ಮಾಡಿದ್ದಕ್ಕೆ ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆ ಅಮೃತಗೌಡ ಅವರಿಗೆ ಕರೆ ಮಾಡಿ ಅಸಭ್ಯವಾಗಿ ನಿಂದಿಸಿ,...

ಭೀಮಾ ಕೋರೆಗಾಂವ್ ಪ್ರಕರಣ: ನಾಲ್ಕು ವರ್ಷಗಳ ನಂತರ ಇಬ್ಬರಿಗೆ ಬಾಂಬೆ ಹೈಕೋರ್ಟ್‌ನಿಂದ ಜಾಮೀನು

ಎಲ್ಗರ್ ಪರಿಷತ್ ಭೀಮಾ ಕೋರೆಗಾಂವ್ ಪ್ರಕರಣದಲ್ಲಿ ಬಂಧನಕ್ಕೊಳಗಾದ ನಾಲ್ಕು ವರ್ಷಗಳ ನಂತರ, ಸಾಮಾಜಿಕ ಕಾರ್ಯಕರ್ತರಾದ ಸಾಗರ್ ಗೋರ್ಖೆ ಮತ್ತು ರಮೇಶ್ ಗೈಚೋರ್ ಅವರಿಗೆ ಬಾಂಬೆ ಹೈಕೋರ್ಟ್ ಶುಕ್ರವಾರ ಜಾಮೀನು ನೀಡಿದೆ. ಈಗಾಗಲೇ ಬಿಡುಗಡೆಯಾದ...

‘ಗುಜರಾತ್‌ನಂತೆಯೇ ಕೇರಳವೂ ಈಗ ಬಿಜೆಪಿಯ ಮೇಲೆ ನಂಬಿಕೆ ಇಟ್ಟಿದೆ’: ಪ್ರಧಾನಿ ನರೇಂದ್ರ ಮೋದಿ 

ತಿರುವನಂತಪುರಂ: ಕೇರಳದಲ್ಲಿ ಮುಂಬರುವ ವಿಧಾನಸಭಾ ಚುನಾವಣೆಗೆ ಮುನ್ನ, ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ತಿರುವನಂತಪುರಂ ಕಾರ್ಪೊರೇಷನ್ ಚುನಾವಣೆಯಲ್ಲಿ ಬಿಜೆಪಿಯ ಐತಿಹಾಸಿಕ ವಿಜಯವನ್ನು "ಬದಲಾವಣೆಗೆ ಮಹತ್ವದ ಜನಾದೇಶ" ಎಂದು ಶ್ಲಾಘಿಸಿದ್ದಾರೆ.  ಇದೇ ವೇಳೆ "ಜನಪರ ಮತ್ತು...

ರಾಜಸ್ಥಾನ: ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಕೈದಿಗಳ ನಡುವೆ ಪ್ರೀತಿ: ಮದುವೆಗಾಗಿ ಪೆರೋಲ್ ಮೇಲೆ ಹೊರ ಬಂದ ಕೊಲೆ ಅಪರಾಧಿಗಳು

ಜೈಪುರದ ಸಂಗನೇರ್ ಓಪನ್ ಜೈಲಿನಲ್ಲಿ(ಮುಕ್ತ ಜೈಲು) ಪ್ರಾರಂಭವಾದ ಇಬ್ಬರು ಕೊಲೆ ಅಪರಾಧಿಗಳ ನಡುವಿನ ಪ್ರಣಯವು ಸಾರ್ವಜನಿಕ ಜೀವನಕ್ಕೂ ಕಾಲಿರಿಸಿದೆ. ಕೊಲೆ ಪ್ರಕರಣಗಳಲ್ಲಿ ಜೀವಾವಧಿಗೆ ಒಳಗಾಗಿರುವ ಇಬ್ಬರು ಕೈದಿಗಳು ಮದುವೆಯಾಗಲು ಪೆರೋಲ್ ಮೇಲೆ ಹೊರಬಂದಿದ್ದಾರೆ. ಅಪರಾಧ...