Homeಮುಖಪುಟಶಿಂಧೆ ಬಣವೇ ನಿಜವಾದ ಶಿವಸೇನೆ ಎಂದ ಮಹಾರಾಷ್ಟ್ರ ಸ್ಪೀಕರ್ ನಿರ್ಧಾರ ಪ್ರಶ್ನಿಸಿ ಸುಪ್ರೀಂ ಮೊರೆ ಹೋದ...

ಶಿಂಧೆ ಬಣವೇ ನಿಜವಾದ ಶಿವಸೇನೆ ಎಂದ ಮಹಾರಾಷ್ಟ್ರ ಸ್ಪೀಕರ್ ನಿರ್ಧಾರ ಪ್ರಶ್ನಿಸಿ ಸುಪ್ರೀಂ ಮೊರೆ ಹೋದ ಉದ್ಧವ್ ಠಾಕ್ರೆ ಬಣ

- Advertisement -
- Advertisement -

ಮಹಾರಾಷ್ಟ್ರದ ಮುಖ್ಯಮಂತ್ರಿ ಏಕನಾಥ್ ಶಿಂಧೆ ನೇತೃತ್ವದ ಬಣವನ್ನು ‘ನಿಜವಾದ ಶಿವಸೇನೆ’ ಎಂದು ಗುರುತಿಸಿರುವ ಸ್ಪೀಕರ್ ರಾಹುಲ್ ನಾರ್ವೇಕರ್ ಅವರ ಆದೇಶದ ವಿರುದ್ಧ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ ಬಣ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದೆ.

ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ), ಸ್ಪೀಕರ್ ಆದೇಶಕ್ಕೆ ತಾತ್ಕಾಲಿಕ ತಡೆ ನೀಡಬೇಕು, ಸಿಎಂ ಶಿಂಧೆ ಬಣದ ಶಾಸಕರು ವಿಧಾನಸಭೆ ಪ್ರವೇಶಿಸುವುದಕ್ಕೆ ನಿರ್ಬಂಧ ವಿಧಿಸಿ ಮಧ್ಯಂತರ ಆದೇಶ ನೀಡಬೇಕು ಹಾಗೂ ಶಿಂಧೆ ಬಣದ ಶಾಸಕರ ಸದಸ್ಯತ್ವವನ್ನು ಅಮಾನತು ಮಾಡಬೇಕು ಎಂದು ಸುಪ್ರೀಂ ಕೋರ್ಟ್‌ನ್ನು ಕೋರಿದೆ.

ಶಿಂಧೆ ಬಣದ ಪರ ಸ್ಪೀಕರ್ ನೀಡಿರುವ ಆದೇಶ ಸಂಪೂರ್ಣವಾಗಿ ಕಾನೂನು ಬಾಹಿರವಾಗಿದೆ. ಇದು ಸಂವಿಧಾನದ ಹತ್ತನೇ ಶೆಡ್ಯೂಲ್ (ಪಕ್ಷಾಂತರ ವಿರೋಧಿ ಕಾಯ್ದೆ) ಗೆ ವಿರುದ್ದವಾಗಿದೆ. ಶಿಂಧೆ ಬಣ ಪ್ರತ್ಯೇಕವಾಗಿ ಸರ್ಕಾರ ರಚಿಸಿರುವುದು ಶಿವಸೇನೆಯ ಸಂವಿಧಾನದ ಉಲ್ಲಂಘಣೆಯಲ್ಲ ಎಂದು ಸ್ಪೀಕರ್‌ ಹೇಳಿರುವುದು ಸಂಪೂರ್ಣ ತಪ್ಪು ಎಂದು ಠಾಕ್ರೆ ಬಣ ಆರೋಪಿಸಿದೆ.

ಬಿಜೆಪಿಯ ಬೆಂಬಲದೊಂದಿಗೆ ಏಕನಾಥ್ ಶಿಂಧೆ ಮುಖ್ಯಮಂತ್ರಿಯಾಗಿದ್ದಾರೆ. ಅವರ ಬಣದ ಶಾಸಕರು ಬಿಜೆಪಿಯೊಂದಿಗೆ ಒಡನಾಟ ಹೊಂದಿರುವುದು ಸ್ಪಷ್ಟವಾಗಿದೆ. ಇದನ್ನು ಸ್ಪೀಕರ್ ಪರಿಗಣಿಸಿಲ್ಲ ಎಂದು ಠಾಕ್ರೆ ಬಣ ಆಪಾದಿಸಿದೆ.

ಮಹಾರಾಷ್ಟ್ರದ ಮಹಾ ಅಘಾಡಿ ಸರ್ಕಾರದ ಭಾಗವಾಗಿದ್ದ ಶಿವಸೇನೆಯಿಂದ ಬಂಡಾಯವೆದಿದ್ದ ಮುಖ್ಯಮಂತ್ರಿ ಏಕನಾಥ್ ಶಿಂಧೆ ಬಣ, ಬಿಜೆಪಿ ಜೊತೆ ಸೇರಿ ಪ್ರತ್ಯೇಕ ಸರ್ಕಾರ ರಚಿಸಿತ್ತು. ಸಿಎಂ ಶಿಂಧೆ ಸೇರಿದಂತೆ ಪಕ್ಷದ ವಿರುದ್ದ ತೊಡೆ ತಟ್ಟಿದ್ದ ಶಾಸಕರನ್ನು ಅಮಾನತುಗೊಳಿಸುವಂತೆ ಉದ್ದವ್ ಠಾಕ್ರೆ ಬಣ ಕೋರಿತ್ತು. ಆದರೆ, ಸ್ಪೀಕರ್ ಈ ಕುರಿತು ಯಾವುದೇ ಆದೇಶ ನೀಡದೆ ವಿಳಂಬ ಮಾಡಿದ್ದರು.

ಸುಪ್ರೀಂ ಕೋರ್ಟ್‌ ಚಾಟಿ ಬೀಸಿದ ಬಳಿಕ, ಜನವರಿ 10 ರಂದು ಏಕನಾಥ್ ಶಿಂಧೆ ಬಣದ ಪರ ಸ್ಪೀಕರ್ ತೀರ್ಪು ನೀಡಿದ್ದರು. ಶಿಂಧೆ ನೇತೃತ್ವದ ಶಿವಸೇನೆ ಬಣವು ಬಹುಪಾಲು ಪಕ್ಷದ ಶಾಸಕರ ಬೆಂಬಲವನ್ನು ಹೊಂದಿರುವುದರಿಂದ ಕಾನೂನುಬದ್ಧವಾಗಿದೆ ಎಂದು ಹೇಳಿದ್ದರು.

ಇದನ್ನೂ ಓದಿ : ಮೋದಿ ಮಣಿಪುರಕ್ಕೆ ಯಾಕೆ ಭೇಟಿ ನೀಡಿಲ್ಲ ಎಂದು ಜನ ನಮ್ಮನ್ನು ಕೇಳ್ತಿದ್ದಾರೆ: ಜೈರಾಮ್ ರಮೇಶ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗಣರಾಜ್ಯೋತ್ಸವ : ರಾಜ್ಯ ಸರ್ಕಾರ ಸಿದ್ದಪಡಿಸಿಕೊಟ್ಟ ಭಾಷಣ ಯಥಾವತ್ ಓದಿದ ರಾಜ್ಯಪಾಲ ಗೆಹ್ಲೋಟ್

ಸಂವಿಧಾನವು ತನ್ನ ಮೊದಲ ಅನುಚ್ಛೇದದಲ್ಲಿಯೇ ಭಾರತವನ್ನು ಒಂದು ರಾಜ್ಯಗಳ ಒಕ್ಕೂಟ ಎಂದು ಘೋಷಿಸುತ್ತದೆ. ಸಶಕ್ತ ರಾಜ್ಯಗಳ ಮೂಲಕ ಸಶಕ್ತ ಭಾರತ ನಿರ್ಮಿಸುವುದು ನಮ್ಮ ಸಂವಿಧಾನದ ನಿರ್ಮಾತೃಗಳ ಕನಸಾಗಿತ್ತು. ಆ ಕನಸಿಗೆ ಕುಂದುಂಟಾಗದಂತೆ ನಮ್ಮ...

‘ಪುಸ್ತಕ ಮನೆʼಯ ಅಂಕೇಗೌಡ ಸೇರಿ ರಾಜ್ಯದ ಮೂವರಿಗೆ ಪದ್ಮಶ್ರೀ ಪ್ರಶಸ್ತಿ

ಕರ್ನಾಟಕದ ಮೂವರು ಸೇರಿದಂತೆ ದೇಶದ ಒಟ್ಟು 45 ಸಾಧಕರನ್ನು 2026ನೇ ಸಾಲಿನ ಪ್ರತಿಷ್ಠಿತ ಪದ್ಮ ಪ್ರಶಸ್ತಿಗಳಿಗೆ ಆಯ್ಕೆ ಮಾಡಲಾಗಿದೆ ಎಂದು ವರದಿಯಾಗಿದೆ. ಮಂಡ್ಯ ಮೂಲದ ಪುಸ್ತಕ ಪ್ರೇಮಿ ಅಂಕೇಗೌಡ, ದಾವಣಗೆರೆಯ ಹಿಮೋಫಿಲಿಯಾ ಸೊಸೈಟಿಯ ವೈದ್ಯ...

ದೆಹಲಿ ಲೆಫ್ಟಿನೆಂಟ್ ಗವರ್ನರ್ ಮಾನನಷ್ಟ ಪ್ರಕರಣ : ಹೋರಾಟಗಾರ್ತಿ ಮೇಧಾ ಪಾಟ್ಕರ್ ಖುಲಾಸೆ

ದೆಹಲಿಯ ಲೆಫ್ಟಿನೆಂಟ್ ಗವರ್ನರ್ ವಿ.ಕೆ. ಸಕ್ಸೇನಾ ಅವರು 20 ವರ್ಷಗಳ ಹಿಂದಿನ ದಾಖಲಿಸಿದ್ದ ಮಾನನಷ್ಟ ಮೊಕದ್ದಮೆಯಲ್ಲಿ ಪರಿಸರ ಹೋರಾಟಗಾರ್ತಿ ಮೇಧಾ ಪಾಟ್ಕರ್ ಅವರನ್ನು ದೆಹಲಿ ನ್ಯಾಯಾಲಯ ಶನಿವಾರ (ಜ.24) ಖುಲಾಸೆಗೊಳಿಸಿದೆ ಎಂದು ಬಾರ್...

ಆರ್‌ಜೆಡಿ ರಾಷ್ಟ್ರೀಯ ಕಾರ್ಯಕಾರಿ ಸಭೆ; ಕಾರ್ಯಕಾರಿ ಅಧ್ಯಕ್ಷರಾಗಿ ತೇಜಸ್ವಿ ನೇಮಕ

ರಾಷ್ಟ್ರೀಯ ಜನತಾ ದಳ (ಆರ್‌ಜೆಡಿ) ಮುಖ್ಯಸ್ಥ ಲಾಲು ಪ್ರಸಾದ್ ಅವರ ಕಿರಿಯ ಪುತ್ರ ತೇಜಸ್ವಿ ಯಾದವ್ ಅವರನ್ನು, ಇಂದು (ಜ.25) ನಡೆದ ರಾಷ್ಟ್ರೀಯ ಕಾರ್ಯಕಾರಿ ಸಭೆಯಲ್ಲಿ ಪಕ್ಷದ ಕಾರ್ಯಕಾರಿ ಅಧ್ಯಕ್ಷರನ್ನಾಗಿ ನೇಮಿಸಲಾಯಿತು. 'ಮಹಾಘಟಬಂಧನ್' 36...

ಹಿಂದುತ್ವ ಗುಂಪಿನಿಂದ ಕಿರುಕುಳ : ಪಿಜ್ಜಾ ಔಟ್‌ಲೆಟ್‌ನ ಎರಡನೇ ಮಹಡಿಯಿಂದ ಜಿಗಿದ ಜೋಡಿ

ಉತ್ತರ ಪ್ರದೇಶದ ಶಹಜಹಾನ್‌ಪುರದಲ್ಲಿ ಹಿಂದುತ್ವ ಗುಂಪು ಕಿರುಕುಳ ನೀಡಿದ್ದರಿಂದ ಜೋಡಿಯೊಂದು ಪಿಜ್ಜಾ ಔಟ್‌ಲೆಟ್‌ನ ಎರಡನೇ ಮಹಡಿಯಿಂದ ಜಿಗಿದಿದ್ದು, ಈ ಸಂಬಂಧ ಎಂಟು ಮಂದಿಯ ವಿರುದ್ದ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ ಎಂದು ದಿ ನ್ಯೂ...

ಹಿಂದಿ ಚಿತ್ರಗಳು ತಮ್ಮ ಬೇರುಗಳನ್ನು ಕಳೆದುಕೊಂಡಿವೆ, ಹಣ ಆಧಾರಿತವಾಗಿವೆ: ಪ್ರಕಾಶ್ ರಾಜ್

ದೃಢ, ವಿಷಯಾಧಾರಿತ ಕಥೆ ನಿರೂಪಣೆಯಿಂದ ಪ್ರಶಂಸಿಸಲಾದ ಮಲಯಾಳಂ ಮತ್ತು ತಮಿಳು ಸಿನಿಮಾಗಳಿಗಿಂತ ಭಿನ್ನವಾಗಿ, ಹಿಂದಿ ಸಿನಿಮಾ ತನ್ನ ಬೇರುಗಳನ್ನು ಕಳೆದುಕೊಂಡಿದೆ. ಹೆಚ್ಚು ಹೆಚ್ಚು ನಕಲಿ ಮತ್ತು ಹಣ-ಆಧಾರಿತವಾಗುತ್ತಿದೆ ಎಂದು ನಟ ಪ್ರಕಾಶ್ ರಾಜ್...

ಚೋರ್ಲಾ ಘಾಟ್‌ನಲ್ಲಿ 400 ಕೋಟಿ ರೂ. ದರೋಡೆ: ಏನಿದು ಪ್ರಕರಣ..ಬೆಳಗಾವಿ ಎಸ್ಪಿ ಹೇಳಿದ್ದೇನು?

ಕರ್ನಾಟಕ, ಗೋವಾ ಮತ್ತು ಮಹಾರಾಷ್ಟ್ರ ರಾಜ್ಯಗಳ ಗಡಿಯಲ್ಲಿರುವ ಪಶ್ಚಿಮ ಘಟ್ಟಗಳ ವ್ಯಾಪ್ತಿಯ ಚೋರ್ಲಾ ಘಾಟ್‌ನಲ್ಲಿ ಬರೋಬ್ಬರಿ 400 ಕೋಟಿ ರೂಪಾಯಿ ಹಣ ಸಾಗಿಸುತ್ತಿದ್ದ ಕಂಟೇನರ್‌ಗಳನ್ನು ದರೋಡೆ ಮಾಡಲಾಗಿದೆ ಎಂಬ ವಿಚಾರ ದೊಡ್ಡ ಮಟ್ಟದಲ್ಲಿ...

‘ಅಲೈಡ್ ಹೆಲ್ತ್ ಕೋರ್ಸ್‌ಗಳ ನೀಟ್ ಪರೀಕ್ಷೆಯಿಂದ ಬಡ ವಿದ್ಯಾರ್ಥಿಗಳಿಗೆ ಅನ್ಯಾಯ..’; ಪ್ರಧಾನಿಗೆ ಪತ್ರ ಬರೆದ ತಮಿಳುನಾಡು ಸಿಎಂ

ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯನ್ನು (ನೀಟ್) ಅಲೈಡ್ ಹೆಲ್ತ್ ಕೋರ್ಸ್‌ಗಳ ಪ್ರವೇಶದಿಂದ ಹೊರಗಿಡಬೇಕು ಎಂದು ತಮಿಳುನಾಡು ಮುಖ್ಯಮಂತ್ರಿ ಎಂ ಕೆ ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದು...

ಬಾಂಗ್ಲಾದೇಶ| ಗ್ಯಾರೇಜ್ ಒಳಗೆ ಮಲಗಿದ್ದ ಹಿಂದೂ ಯುವಕ ಜೀವಂತ ದಹನ

ಬಾಂಗ್ಲಾದೇಶದ ರಾಜಧಾನಿ ಢಾಕಾದಿಂದ ಸುಮಾರು 50 ಕಿ.ಮೀ ದೂರದಲ್ಲಿರುವ ನರಸಿಂಗ್ಡಿಯಲ್ಲಿ ಗ್ಯಾರೇಜ್ ಒಳಗೆ ಮಲಗಿದ್ದ 23 ವರ್ಷದ ಹಿಂದೂ ವ್ಯಕ್ತಿ ಜೀವಂತವಾಗಿ ದಹನಗೊಂಡ ಘಟನೆ ನಡೆದಿದ್ದು, ಈ ಘಟನೆಯು ರಾಷ್ಟ್ರೀಯ ಚುನಾವಣೆಗೂ ಮುನ್ನ...

ಚುನಾವಣಾ ಆಯೋಗ ನಿರಂತರ ಒತ್ತಡ ಎದುರಿಸುತ್ತಿದೆ, ಅದರ ಸ್ವಾತಂತ್ರ್ಯ ರಕ್ಷಿಸಬೇಕಿದೆ : ಮಲ್ಲಿಕಾರ್ಜುನ ಖರ್ಗೆ

ಇತ್ತೀಚಿನ ದಿನಗಳಲ್ಲಿ, ಚುನಾವಣಾ ಆಯೋಗದಂತಹ ಸಂಸ್ಥೆಗಳು ನಿರಂತರ ಒತ್ತಡವನ್ನು ಎದುರಿಸುತ್ತಿವೆ. ಆದ್ದರಿಂದ ಪ್ರಜಾಪ್ರಭುತ್ವವು ಕೇವಲ ಉಳಿಯುವುದಲ್ಲದೆ, ನಿಜವಾಗಿಯೂ ಅಭಿವೃದ್ಧಿ ಹೊಂದುವಂತೆ ಅವುಗಳ ಸ್ವಾತಂತ್ರ್ಯವನ್ನು ರಕ್ಷಿಸುವುದು 'ನಮ್ಮ ಜವಾಬ್ದಾರಿ' ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ...