Homeಮುಖಪುಟಉದ್ಧವ್ ಠಾಕ್ರೆ ಕಾರ್ಟೂನ್ ಫಾರ್ವಡ್ ಮಾಡಿದ ನಿವೃತ್ತ ನೌಕಾದಳ ಅಧಿಕಾರಿ ಮೇಲೆ ಹಲ್ಲೆ: 6 ಜನರ...

ಉದ್ಧವ್ ಠಾಕ್ರೆ ಕಾರ್ಟೂನ್ ಫಾರ್ವಡ್ ಮಾಡಿದ ನಿವೃತ್ತ ನೌಕಾದಳ ಅಧಿಕಾರಿ ಮೇಲೆ ಹಲ್ಲೆ: 6 ಜನರ ಬಂಧನ

ಹಲ್ಲೆಗೊಳಗಾದ ಮದನ್ ಶರ್ಮಾರವರು ನೀಡಿದ ದೂರಿನ ಮೇರೆಗೆ ಮುಂಬೈ ಪೊಲೀಸರು ಶಿವಸೇನೆಯ ಕಂಡಿವಲಿ ಶಾಖಾ ಪ್ರಮುಖ್ ಕಮಲೇಶ್ ಕದಮ್ ಸೇರಿದಂತೆ ಇತರ ಆರು ಕಾರ್ಯಕರ್ತರನ್ನು ಬಂಧಿಸಿದ್ದಾರೆ.

- Advertisement -
- Advertisement -

ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ಕುರಿತ ಅವಹೇಳನಕಾರಿ ಕಾರ್ಟೂನ್ ಫಾರ್ವಡ್ ಮಾಡಿದ್ದಾರೆಂದು ಆರೋಪಿಸಿ ಮುಂಬೈನ ಕಂಡಿವಲಿ ನಿವಾಸಿಯಾದ ನಿವೃತ್ತ ನೌಕಾದಳ ಅಧಿಕಾರಿ ಮದನ್ ಶರ್ಮಾ(65) ಎಂಬುವವರ ಮೇಲೆ ಶಿವಸೇನೆ ಕಾರ್ಯಕರ್ತರು ಅಮಾನವೀಯವಾಗಿ ಹಲ್ಲೆ ನಡೆಸಿರುವ ಘಟನೆ ಜರುಗಿದೆ.

ಈ ಕುರಿತು ಮದನ್ ಶರ್ಮಾರವರು ನೀಡಿದ ದೂರಿನ ಮೇರೆಗೆ ಮುಂಬೈ ಪೊಲೀಸರು ಶಿವಸೇನೆಯ ಕಂಡಿವಲಿ ಶಾಖಾ ಪ್ರಮುಖ್ ಕಮಲೇಶ್ ಕದಮ್ ಸೇರಿದಂತೆ ಇತರ ಆರು ಕಾರ್ಯಕರ್ತರನ್ನು ಬಂಧಿಸಿದ್ದಾರೆ.

ಹಲ್ಲೆ ನಡೆಸುತ್ತಿರುವ ಸಿಸಿಟಿವಿ ದೃಶ್ಯಾವಳಿಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, 65 ವರ್ಷದ ಹಿರಿಯರ ಮೇಲಿನ ಹಲ್ಲೆಯನ್ನು ಮಾಜಿ ಸಿಎಂ ದೇವೇಂದ್ರ ಫಡ್ನವಿಸ್, ಚಿತ್ರನಟಿ ಸ್ವರ ಭಾಸ್ಕರ್ ಸೇರಿದಂತೆ ಹಲವರು ಟೀಕಿಸಿದ್ದಾರೆ.

ಘಟನೆಯ ವಿವರ:

ಮುಂಬೈನ ಕಂಡಿವಲಿ ನಿವಾಸಿಯಾದ ನಿವೃತ್ತ ನೌಕಾದಳ ಅಧಿಕಾರಿ ಮದನ್ ಶರ್ಮಾ(65) ತಮಗೆ ವಾಟ್ಸಾಪ್ ನಲ್ಲಿ ಬಂದಿದ್ದ (NCP ಮುಖ್ಯಸ್ಥ ಶರದ್ ಪವಾರ್ ಮತ್ತು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿಯವರ ಕಾಲಿಗೆ ಬೀಳುತ್ತಿರುವ) ಚಿತ್ರವೊಂದನ್ನು ತಾವು ವಾಸಿಸುತ್ತಿರುವ ಹೌಸಿಂಗ್ ಸೊಸೈಟಿ ವಾಟ್ಸಾಪಿಗೆ ಫಾರ್ವಡ್ ಮಾಡಿದ್ದರು. ಅದು ಶಿವ ಸೇನಾ ಕಾರ್ಯಕರ್ತರ ಗಮನಕ್ಕೆ ಬಂದಿದ್ದು, ಕಂಡಿವಲಿ ಶಾಖಾ ಪ್ರಮುಖ್ ಕಮಲೇಶ್ ಕದಮ್ ಮದನ್ ಶರ್ಮಾರವರಿಗೆ ಫೋನ್ ಮಾಡಿ ತಮ್ಮ ಹೆಸರು ಮತ್ತು ವಿಳಾಸ ಕೇಳಿದ್ದಾರೆ. ನಂತರ ಅವರ ನಿವಾಸದ ಎದುರು ಬಂದು ಸ್ವಲ್ಪ ಮಾತನಾಡುವುದಿದೆ, ಹೊರಗೆ ಬನ್ನಿ ಎಂದು ಮದನ್ ಶರ್ಮಾರನ್ನು ಕರೆಸಿಕೊಂಡು ಹಲ್ಲೆ ನಡೆಸಲಾಗಿದೆ. ಹಲ್ಲೆಯಲ್ಲಿ ಶರ್ಮಾರವರ ಎರಡೂ ಕಣ್ಣುಗಳಿಗೆ ಹಾನಿಯಾಗಿದೆ.

ವೈರಲ್ ಆದ ಸಿಸಿಟಿವಿ ದೃಶ್ಯಾವಳಿಗಳಲ್ಲಿ ಅಪಾರ್ಟ್ ಮೆಂಟ್ ಗೇಟಿನಿಂದ ಒಳಕ್ಕೆ ಮದನ್ ಶರ್ಮಾ ಓಡಿ ಬರುತ್ತಾರೆ. ಹಿಂದಿನಿಂದ 8-10 ಜನ ನುಗ್ಗಿಬಂದು ಅವರನ್ನು ಹಿಡಿದು ಥಳಿಸುವ ಮತ್ತು ಹೊರಕ್ಕೆ ಎಳೆದೊಯ್ಯುವುದನ್ನು ನೋಡಬಹುದಾಗಿದೆ.

ಘಟನೆಯ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಮದನ್ ಶರ್ಮಾ “ಅದನ್ನು ಏಕೆ ಷೇರ್ ಮಾಡಿದೆ ಎಂದು ಕೇಳಿದರು. ನಾನು ನನಗೆ ಬಂದಿದ್ದ ಕಾರ್ಟೂನ್ ಒಂದನ್ನು ವಾಟ್ಸಾಪ್ ನಲ್ಲಿ ಷೇರ್ ಮಾಡಿದೆ ಅಷ್ಟೆ ಎಂದೆ. ಆದರೂ ನನ್ನ ಮಾತನ್ನು ಕೇಳದೆ ಕ್ರೂರವಾಗಿ ಥಳಿಸಿದರು. ಸ್ವಲ್ಪ ಸಮಯದ ನಂತರ ತಪ್ಪಿಸಿಕೊಂಡು ಮನೆಗೆ ಬಂದೆ” ಎಂದಿದ್ದಾರೆ.

ಮಾಜಿ ಸಿಎಂ ದೇವೇಂದ್ರ ಫಡ್ನವಿಸ್ ಘಟನೆಯನ್ನು ತೀವ್ರವಾಗಿ ಖಂಡಿಸಿದ್ದು, ಆರೋಪಿಗಳ ಮೇಲೆ ಉದ್ಧವ್ ಠಾಕ್ರೆ ಕಠಿಣ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ.

ಸಿಎಂ ಉದ್ಧವ್ ಠಾಕ್ರೆಯವರ ಬಗೆಗಿನ ಜೋಕ್ ಫಾರ್ವಡ್ ಮಾಡಿದ್ದಕ್ಕೆ 65 ವರ್ಷದ ಹಿರಿಯರ ಮೇಲಿನ ಶಿವಸೈನಿಕರ ಹಲ್ಲೆ ಖಂಡನೀಯ. ನಾಗರೀಕ ಸಮಾಜದಲ್ಲಿ ಇಂತಹ ಹಿಂಸೆಗೆ ಅವಕಾಶವಿಲ್ಲವೆಂದು ನಟಿ ಸ್ವರ ಭಾಸ್ಕರ್ ಕಿಡಿಕಾರಿದ್ದಾರೆ.


ಇದನ್ನೂ ಓದಿ: ಬಹುಜನ ಭಾರತ: ಇತಿಹಾಸದ ಕಟಕಟೆಯಲ್ಲಿ ಅರುಣ್ ಮಿಶ್ರ ಎಂಬ ನ್ಯಾಯಮೂರ್ತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...

ದ್ವೇಷ ಭಾಷಣ ಮಸೂದೆ ರಾಜ್ಯಪಾಲರಿಂದ ತಿರಸ್ಕೃತವಾಗಿಲ್ಲ: ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ಮಸೂದೆ ಸರ್ವಾನುಮತದಿಂದ ಅಂಗೀಕಾರವಾಗಿದ್ದು, ರಾಜ್ಯಪಾಲರು ಅದನ್ನು ವಾಪಸ್ ಕಳಿಸಿಲ್ಲ, ತಿರಸ್ಕರಿಸಿಲ್ಲ, ಅಂಕಿತವನ್ನೂ ಹಾಕಿಲ್ಲ. ಅವರು ಕರೆದಾಗ ಈ ಬಗ್ಗೆ ವಿವರಣೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಭಾನುವಾರ (ಜ.11) ಮಂಗಳೂರಿನಲ್ಲಿ...

ಐಸಿಸ್ ಗುರಿ ಮಾಡಿ ಸಿರಿಯಾ ಮೇಲೆ ವೈಮಾನಿಕ ದಾಳಿ ನಡೆಸಿದ ಅಮೆರಿಕ

ಸಿರಿಯಾದ ಇಸ್ಲಾಮಿಕ್ ಸ್ಟೇಟ್ (ಐಎಸ್) ಗುಂಪಿನ ತಾಣಗಳ ಮೇಲೆ ಅಮೆರಿಕ ಮತ್ತು ಅದರ ಪಾಲುದಾರ ಪಡೆಗಳು ದೊಡ್ಡ ಪ್ರಮಾಣದ ದಾಳಿಗಳನ್ನು ನಡೆಸಿವೆ ಎಂದು ಅಮೆರಿಕದ ಸೆಂಟ್ರಲ್ ಕಮಾಂಡ್ (ಸೆಂಟ್‌ಕಾಮ್) ಘೋಷಿಸಿದೆ. ಡಿಸೆಂಬರ್ 13ರಂದು ಸಿರಿಯಾದಲ್ಲಿ...

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....