Homeಮುಖಪುಟಉದ್ಧವ್ ಠಾಕ್ರೆ ಕಾರ್ಟೂನ್ ಫಾರ್ವಡ್ ಮಾಡಿದ ನಿವೃತ್ತ ನೌಕಾದಳ ಅಧಿಕಾರಿ ಮೇಲೆ ಹಲ್ಲೆ: 6 ಜನರ...

ಉದ್ಧವ್ ಠಾಕ್ರೆ ಕಾರ್ಟೂನ್ ಫಾರ್ವಡ್ ಮಾಡಿದ ನಿವೃತ್ತ ನೌಕಾದಳ ಅಧಿಕಾರಿ ಮೇಲೆ ಹಲ್ಲೆ: 6 ಜನರ ಬಂಧನ

ಹಲ್ಲೆಗೊಳಗಾದ ಮದನ್ ಶರ್ಮಾರವರು ನೀಡಿದ ದೂರಿನ ಮೇರೆಗೆ ಮುಂಬೈ ಪೊಲೀಸರು ಶಿವಸೇನೆಯ ಕಂಡಿವಲಿ ಶಾಖಾ ಪ್ರಮುಖ್ ಕಮಲೇಶ್ ಕದಮ್ ಸೇರಿದಂತೆ ಇತರ ಆರು ಕಾರ್ಯಕರ್ತರನ್ನು ಬಂಧಿಸಿದ್ದಾರೆ.

- Advertisement -
- Advertisement -

ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ಕುರಿತ ಅವಹೇಳನಕಾರಿ ಕಾರ್ಟೂನ್ ಫಾರ್ವಡ್ ಮಾಡಿದ್ದಾರೆಂದು ಆರೋಪಿಸಿ ಮುಂಬೈನ ಕಂಡಿವಲಿ ನಿವಾಸಿಯಾದ ನಿವೃತ್ತ ನೌಕಾದಳ ಅಧಿಕಾರಿ ಮದನ್ ಶರ್ಮಾ(65) ಎಂಬುವವರ ಮೇಲೆ ಶಿವಸೇನೆ ಕಾರ್ಯಕರ್ತರು ಅಮಾನವೀಯವಾಗಿ ಹಲ್ಲೆ ನಡೆಸಿರುವ ಘಟನೆ ಜರುಗಿದೆ.

ಈ ಕುರಿತು ಮದನ್ ಶರ್ಮಾರವರು ನೀಡಿದ ದೂರಿನ ಮೇರೆಗೆ ಮುಂಬೈ ಪೊಲೀಸರು ಶಿವಸೇನೆಯ ಕಂಡಿವಲಿ ಶಾಖಾ ಪ್ರಮುಖ್ ಕಮಲೇಶ್ ಕದಮ್ ಸೇರಿದಂತೆ ಇತರ ಆರು ಕಾರ್ಯಕರ್ತರನ್ನು ಬಂಧಿಸಿದ್ದಾರೆ.

ಹಲ್ಲೆ ನಡೆಸುತ್ತಿರುವ ಸಿಸಿಟಿವಿ ದೃಶ್ಯಾವಳಿಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, 65 ವರ್ಷದ ಹಿರಿಯರ ಮೇಲಿನ ಹಲ್ಲೆಯನ್ನು ಮಾಜಿ ಸಿಎಂ ದೇವೇಂದ್ರ ಫಡ್ನವಿಸ್, ಚಿತ್ರನಟಿ ಸ್ವರ ಭಾಸ್ಕರ್ ಸೇರಿದಂತೆ ಹಲವರು ಟೀಕಿಸಿದ್ದಾರೆ.

ಘಟನೆಯ ವಿವರ:

ಮುಂಬೈನ ಕಂಡಿವಲಿ ನಿವಾಸಿಯಾದ ನಿವೃತ್ತ ನೌಕಾದಳ ಅಧಿಕಾರಿ ಮದನ್ ಶರ್ಮಾ(65) ತಮಗೆ ವಾಟ್ಸಾಪ್ ನಲ್ಲಿ ಬಂದಿದ್ದ (NCP ಮುಖ್ಯಸ್ಥ ಶರದ್ ಪವಾರ್ ಮತ್ತು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿಯವರ ಕಾಲಿಗೆ ಬೀಳುತ್ತಿರುವ) ಚಿತ್ರವೊಂದನ್ನು ತಾವು ವಾಸಿಸುತ್ತಿರುವ ಹೌಸಿಂಗ್ ಸೊಸೈಟಿ ವಾಟ್ಸಾಪಿಗೆ ಫಾರ್ವಡ್ ಮಾಡಿದ್ದರು. ಅದು ಶಿವ ಸೇನಾ ಕಾರ್ಯಕರ್ತರ ಗಮನಕ್ಕೆ ಬಂದಿದ್ದು, ಕಂಡಿವಲಿ ಶಾಖಾ ಪ್ರಮುಖ್ ಕಮಲೇಶ್ ಕದಮ್ ಮದನ್ ಶರ್ಮಾರವರಿಗೆ ಫೋನ್ ಮಾಡಿ ತಮ್ಮ ಹೆಸರು ಮತ್ತು ವಿಳಾಸ ಕೇಳಿದ್ದಾರೆ. ನಂತರ ಅವರ ನಿವಾಸದ ಎದುರು ಬಂದು ಸ್ವಲ್ಪ ಮಾತನಾಡುವುದಿದೆ, ಹೊರಗೆ ಬನ್ನಿ ಎಂದು ಮದನ್ ಶರ್ಮಾರನ್ನು ಕರೆಸಿಕೊಂಡು ಹಲ್ಲೆ ನಡೆಸಲಾಗಿದೆ. ಹಲ್ಲೆಯಲ್ಲಿ ಶರ್ಮಾರವರ ಎರಡೂ ಕಣ್ಣುಗಳಿಗೆ ಹಾನಿಯಾಗಿದೆ.

ವೈರಲ್ ಆದ ಸಿಸಿಟಿವಿ ದೃಶ್ಯಾವಳಿಗಳಲ್ಲಿ ಅಪಾರ್ಟ್ ಮೆಂಟ್ ಗೇಟಿನಿಂದ ಒಳಕ್ಕೆ ಮದನ್ ಶರ್ಮಾ ಓಡಿ ಬರುತ್ತಾರೆ. ಹಿಂದಿನಿಂದ 8-10 ಜನ ನುಗ್ಗಿಬಂದು ಅವರನ್ನು ಹಿಡಿದು ಥಳಿಸುವ ಮತ್ತು ಹೊರಕ್ಕೆ ಎಳೆದೊಯ್ಯುವುದನ್ನು ನೋಡಬಹುದಾಗಿದೆ.

ಘಟನೆಯ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಮದನ್ ಶರ್ಮಾ “ಅದನ್ನು ಏಕೆ ಷೇರ್ ಮಾಡಿದೆ ಎಂದು ಕೇಳಿದರು. ನಾನು ನನಗೆ ಬಂದಿದ್ದ ಕಾರ್ಟೂನ್ ಒಂದನ್ನು ವಾಟ್ಸಾಪ್ ನಲ್ಲಿ ಷೇರ್ ಮಾಡಿದೆ ಅಷ್ಟೆ ಎಂದೆ. ಆದರೂ ನನ್ನ ಮಾತನ್ನು ಕೇಳದೆ ಕ್ರೂರವಾಗಿ ಥಳಿಸಿದರು. ಸ್ವಲ್ಪ ಸಮಯದ ನಂತರ ತಪ್ಪಿಸಿಕೊಂಡು ಮನೆಗೆ ಬಂದೆ” ಎಂದಿದ್ದಾರೆ.

ಮಾಜಿ ಸಿಎಂ ದೇವೇಂದ್ರ ಫಡ್ನವಿಸ್ ಘಟನೆಯನ್ನು ತೀವ್ರವಾಗಿ ಖಂಡಿಸಿದ್ದು, ಆರೋಪಿಗಳ ಮೇಲೆ ಉದ್ಧವ್ ಠಾಕ್ರೆ ಕಠಿಣ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ.

ಸಿಎಂ ಉದ್ಧವ್ ಠಾಕ್ರೆಯವರ ಬಗೆಗಿನ ಜೋಕ್ ಫಾರ್ವಡ್ ಮಾಡಿದ್ದಕ್ಕೆ 65 ವರ್ಷದ ಹಿರಿಯರ ಮೇಲಿನ ಶಿವಸೈನಿಕರ ಹಲ್ಲೆ ಖಂಡನೀಯ. ನಾಗರೀಕ ಸಮಾಜದಲ್ಲಿ ಇಂತಹ ಹಿಂಸೆಗೆ ಅವಕಾಶವಿಲ್ಲವೆಂದು ನಟಿ ಸ್ವರ ಭಾಸ್ಕರ್ ಕಿಡಿಕಾರಿದ್ದಾರೆ.


ಇದನ್ನೂ ಓದಿ: ಬಹುಜನ ಭಾರತ: ಇತಿಹಾಸದ ಕಟಕಟೆಯಲ್ಲಿ ಅರುಣ್ ಮಿಶ್ರ ಎಂಬ ನ್ಯಾಯಮೂರ್ತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...