Homeಮುಖಪುಟ'ನಕಲಿ ಎನ್ನುವುದಕ್ಕೆ ಅದು ನಿಮ್ಮ ಡಿಗ್ರಿ ಅಲ್ಲ..; ಶಿವಸೇನೆ ಕುರಿತ ಮೋದಿ ಟೀಕೆಗೆ ಉದ್ಧವ್ ತಿರುಗೇಟು

‘ನಕಲಿ ಎನ್ನುವುದಕ್ಕೆ ಅದು ನಿಮ್ಮ ಡಿಗ್ರಿ ಅಲ್ಲ..; ಶಿವಸೇನೆ ಕುರಿತ ಮೋದಿ ಟೀಕೆಗೆ ಉದ್ಧವ್ ತಿರುಗೇಟು

- Advertisement -
- Advertisement -

ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ‘ನಕಲಿ ಶಿವಸೇನಾ’ ದಾಳಿಗೆ ಪ್ರತಿಕ್ರಿಯಿಸಿರುವ ಶಿವಸೇನೆ (ಯುಬಿಟಿ) ಮುಖ್ಯಸ್ಥ ಉದ್ಧವ್ ಠಾಕ್ರೆ, ‘ನಮ್ಮ ಪಕ್ಷವನ್ನು ಮಣ್ಣಿನ ಮಕ್ಕಳ ಹಕ್ಕುಗಳಿಗಾಗಿ ಹೋರಾಡಲು ಬಾಳಾ ಠಾಕ್ರೆ ಸ್ಥಾಪಿಸಿದ್ದಾರೆ’ ಎಂದು ಹೇಳಿರುವ ಅವರು, “ನಕಲಿ ಎಂದು ಹೇಳುವುದಕ್ಕೆ ನಮ್ಮ ಪಕ್ಷವು ನಿಮ್ಮ ಪದವಿ ಅಲ್ಲ’ ಎಂದು ಲೇವಡಿ ಮಾಡಿದ್ದಾರೆ.

“ಮಣ್ಣಿನ ಮಕ್ಕಳ ಹಕ್ಕುಗಳಿಗಾಗಿ ಹೋರಾಡಲು ಶಿವಸೇನೆ ಮುಖ್ಯಸ್ಥ ಬಾಳಾ ಠಾಕ್ರೆ ಸ್ಥಾಪಿಸಿದ ಪಕ್ಷವನ್ನು ನಕಲಿ ಎಂದು ಕರೆಯಲಾಗುತ್ತಿದೆ; ನಕಲಿ ಎಂದು ಕರೆಯುವುದಕ್ಕೆ ಅದು ನಿಮ್ಮ ಪದವಿ ಅಲ್ಲ” ಎಂದು ಉದ್ಧವ್ ಠಾಕ್ರೆ ವ್ಯಂಗ್ಯವಾಡಿದ್ದಾರೆ.

ಈ ವಾರದ ಆರಂಭದಲ್ಲಿ ಮಹಾರಾಷ್ಟ್ರದಲ್ಲಿ ನಡೆದ ರ್ಯಾಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಉದ್ಧವ್ ಠಾಕ್ರೆ ನೇತೃತ್ವದ ರಾಜಕೀಯ ಪಕ್ಷವನ್ನು “ನಕಲಿ ಶಿವಸೇನೆ” ಎಂದು ಕರೆದರು.

“ಇಂಡಿಯಾ ಮೈತ್ರಿಕೂಟದ ಪಾಲುದಾರ ಡಿಎಂಕೆ ಸನಾತನವನ್ನು ಮುಗಿಸುವ ಬಗ್ಗೆ ಮತ್ತು ಸನಾತನ ಧರ್ಮವನ್ನು ಮಲೇರಿಯಾ ಮತ್ತು ಡೆಂಗ್ಯೂಗೆ ಹೋಲಿಸುವ ಬಗ್ಗೆ ಮಾತನಾಡುತ್ತಿದೆ. ಕಾಂಗ್ರೆಸ್ ಮತ್ತು ನಕಲಿ ಶಿವಸೇನೆ ಅದೇ ಜನರನ್ನು ಮಹಾರಾಷ್ಟ್ರದಲ್ಲಿ ರ್ಯಾಲಿಗಳಿಗೆ ಕರೆಯುತ್ತಿದೆ” ಎಂದು ಪ್ರಧಾನಿ ಹೇಳಿದ್ದರು.

ಠಾಕ್ರೆ ಕುಟುಂಬದ ಮಾಜಿ ನಿಷ್ಠಾವಂತ ಏಕನಾಥ್ ಶಿಂಧೆ ಅವರು 2022 ರಲ್ಲಿ ಉದ್ಧವ್ ಠಾಕ್ರೆ ಅವರ ನಾಯಕತ್ವದ ವಿರುದ್ಧ ಶಿವಸೇನಾ ಶಾಸಕರು ಮತ್ತು ಸಂಸದರ ಬಂಡಾಯವನ್ನು ಮುನ್ನಡೆಸಿದರು. ಪಕ್ಷದಲ್ಲಿ ಭಾರೀ ವಿಭಜನೆಗೆ ಕಾರಣವಾದರು. ನಂತರ, ಶಿಂಧೆ ಬಿಜೆಪಿಯೊಂದಿಗೆ ಕೈಜೋಡಿಸಿದರು.

ಈ ವರ್ಷದ ಆರಂಭದಲ್ಲಿ, ಮಹಾರಾಷ್ಟ್ರ ವಿಧಾನಸಭಾ ಸ್ಪೀಕರ್ ರಾಹುಲ್ ನಾರ್ವೇಕರ್ ಅವರು ಏಕನಾಥ್ ಶಿಂಧೆ ಅವರ ಬಣ ನಿಜವಾದ ಶಿವಸೇನೆ ಎಂದು ತೀರ್ಪು ನೀಡಿದ್ದಾರೆ. ಆ ಮೂಲಕ ಉದ್ಧವ್ ಠಾಕ್ರೆ ಅವರನ್ನು ಮಹಾರಾಷ್ಟ್ರದ ರಾಜಕೀಯದ ಅಂಚಿಗೆ ತಳ್ಳಿದರು.

ಇಂಡಿಯಾ ಗೆಲ್ಲುವ ಭವಿಷ್ಯ ನುಡಿದ ಉದ್ಧವ್

ಉದ್ಧವ್ ಠಾಕ್ರೆ ಅವರ ಶಿವಸೇನೆ (ಯುಬಿಟಿ) ಕಾಂಗ್ರೆಸ್ ಮತ್ತು ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷ – ಶರದ್ಚಂದ್ರ ಪವಾರ್ ಜೊತೆ ಮೈತ್ರಿ ಮಾಡಿಕೊಂಡು ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸುತ್ತಿದೆ. ಶುಕ್ರವಾರ ಬೋಯಿಸರ್‌ನಲ್ಲಿ ನಡೆದ ರ್ಯಾಲಿಯಲ್ಲಿ ಮಾತನಾಡಿದ ಉದ್ಧವ್ ಠಾಕ್ರೆ, ಲೋಕಸಭೆ ಚುನಾವಣೆಯಲ್ಲಿ ಇಂಡಿಯಾ ಬ್ಲಾಕ್ 300 ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಇದನ್ನೂ ಓದಿ; ರಾಜಸ್ಥಾನದಲ್ಲಿ ಕಾಂಗ್ರೆಸ್‌ಗೆ ಭಾರೀ ಹಿನ್ನಡೆ; ಪಕ್ಷ ತೊರೆದ 400 ಕಾರ್ಯಕರ್ತರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಗಳ ವಿಚ್ಛೇದನ: ಸಿಹಿ ಹಂಚಿ, ಮೆರವಣಿಗೆಯಲ್ಲಿ ಆಕೆಯನ್ನು ಮನೆಗೆ ಕರೆತಂದ ನೀವೃತ್ತ ನ್ಯಾಯಾದೀಶ ಮತ್ತು ಕುಟುಂಬ

ಮೀರತ್: ಕೌಟುಂಬಿಕ ನ್ಯಾಯಾಲಯದಲ್ಲಿ ಮಗಳ ವಿಚ್ಛೇದನ ಅಂತಿಮವಾದ ನಂತರ ಆಕೆಯನ್ನು ಡೋಲು, ನೃತ್ಯಗಳ ಮೆರವಣಿಗೆಯಲ್ಲಿ ಸಂಭ್ರಮದಿಂದ ತಂದೆ ಮನೆಗೆ ಕರೆತಂದ ಘಟನೆ ಮೀರನ್ ನಲ್ಲಿ ನಡೆದಿದೆ.  ಪೋಷಕರ ಬೆಂಬಲದ ಅಪರೂಪದ ಮತ್ತು ಹೃದಯಸ್ಪರ್ಶಿ ಪ್ರದರ್ಶನದಲ್ಲಿ,...

“ನೀನು ನಿಜವಾಗಿಯೂ ಅಂಬೇಡ್ಕರ್ ಮಗಳಾ ಎಂದು ತಿಳಿಯಲು ನಾವು ನಿನ್ನ ಡಿಎನ್‌ಎ ಟೆಸ್ಟ್ ಮಾಡುತ್ತೇವೆ” ದೆಹಲಿ ಸಭೆಯಲ್ಲಿ ದಲಿತ ಟ್ರಾನ್ಸ್ ಹೋರಾಟಗಾರ್ತಿ ಗ್ರೇಸ್ ಬಾನುಗೆ ಜಾತಿ ನಿಂದನೆ ಆರೋಪ

ಕೇಂದ್ರ ಸರ್ಕಾರದ ವಿವಾದಾತ್ಮಕ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಕಾಯ್ದೆ, 2026ರ ವಿರುದ್ಧ ಕಳೆದ ಕೆಲ ವಾರಗಳಿಂದ ಇಡೀ ಟ್ರಾನ್ಸ್‌ಜೆಂಡರ್ ಮತ್ತು ಪ್ರಗತಿಪರ ಸಮುದಾಯ ಪ್ರತಿಭಟನೆ ನಡೆಸುತ್ತಿದೆ. ಈ ನಡುವೆ ಶುಕ್ರವಾರ...

‘ಮೋದಿ ಕ್ರಿಶ್ಚಿಯನ್ ಸಂಸ್ಥೆಗಳಲ್ಲಿ ಭಯ ಹುಟ್ಟಿಸಲು ಪ್ರಯತ್ನಿಸುತ್ತಿದ್ದಾರೆ’: ಎಫ್‌ಸಿಆರ್‌ಎ ತಿದ್ದುಪಡಿ ಕುರಿತು ಮಲ್ಲಿಕಾರ್ಜುನ ಖರ್ಗೆ

ಇಡುಕ್ಕಿ (ಕೇರಳ): ಸಾರ್ವಜನಿಕ ಮತ್ತು ಸಾಮಾಜಿಕ ಕಲ್ಯಾಣ ಕ್ಷೇತ್ರದಲ್ಲಿ ಕೆಲಸ ಮಾಡುವ ಕ್ರಿಶ್ಚಿಯನ್ ಸಂಸ್ಥೆಗಳು, ಎನ್‌ಜಿಒಗಳು ಮತ್ತು ನಾಗರಿಕ ಸಮಾಜದ ಮೇಲೆ ದಾಳಿ ಮಾಡಲು ಪ್ರಧಾನಿ ನರೇಂದ್ರ ಮೋದಿ ಎಫ್‌ಸಿಆರ್‌ಎ (ವಿದೇಶಿ ದೇಣಿಗೆ...

ವೈದ್ಯಕೀಯ, ತಾಂತ್ರಿಕ ಶಿಕ್ಷಣದಲ್ಲಿ ಎಸ್‌ಸಿ/ಎಸ್‌ಟಿ ಮೀಸಲಾತಿ ಹೆಚ್ಚಿಸಿದ ಒಡಿಶಾ ಸರ್ಕಾರ, ಒಬಿಸಿ ವಿದ್ಯಾರ್ಥಿಗಳಿಗೆ ಹೊಸ ಕೋಟಾ

ಮಹತ್ವದ ನಿರ್ಧಾರ ಕೈಗೊಂಡಿರುವ ಒಡಿಶಾ ಸರ್ಕಾರ, ವೈದ್ಯಕೀಯ, ಇಂಜಿನಿಯರಿಂಗ್ ಮತ್ತು ಇತರ ತಾಂತ್ರಿಕ ಹಾಗೂ ವೃತ್ತಿಪರ ಶಿಕ್ಷಣ ಕೋರ್ಸ್‌ಗಳಲ್ಲಿ ಪರಿಶಿಷ್ಟ ಪಂಗಡ (ಎಸ್‌ಟಿ), ಪರಿಶಿಷ್ಟ ಜಾತಿ (ಎಸ್‌ಸಿ) ಅಭ್ಯರ್ಥಿಗಳಿಗೆ ಮೀಸಲಾತಿಯನ್ನು ಗಣನೀಯವಾಗಿ ಹೆಚ್ಚಿಸಿದೆ....

ಶಾಲಾ ವಾರ್ಷಿಕೋತ್ಸವದಲ್ಲಿ ಲವಲವಿಕೆಯಿಂದ ಭಾಗವಹಿಸಿದ್ದ 6 ಮಕ್ಕಳು, ತಡರಾತ್ರಿ ಹೊತ್ತಿಗೆ ಶವವಾದರು : ಮಹಾರಾಷ್ಟ್ರದಲ್ಲೊಂದು ಹೃದಯ ವಿದ್ರಾವಕ ಘಟನೆ

ಶಾಲಾ ವಾರ್ಷಿಕೋತ್ಸವದಲ್ಲಿ ಬಹಳ ಉತ್ಸಾಹದಿಂದ ಭಾಗವಹಿಸಿದ್ದ ಆರು ಮಂದಿ ಮಕ್ಕಳು, ತಡ ರಾತ್ರಿ ಹೊತ್ತಿಗೆ ಶವವಾದ ಹೃದಯ ವಿದ್ರಾವಕ ಘಟನೆಯೊಂದು ಮಹಾರಾಷ್ಟ್ರದ ದಿಂಡೋರಿಯಲ್ಲಿ ಶುಕ್ರವಾರ (ಏ.3) ನಡೆದಿದೆ. ನಾಸಿಕ್‌ ನಗರದಿಂದ 20 ಕಿಲೋ...

ಕೇರಳ: ಕೊಲ್ಲಂನಲ್ಲಿ ಟಿವಿ ಚಾನೆಲ್ ಕಚೇರಿ ಮೇಲೆ ಸ್ಫೋಟಕ ವಸ್ತು ಎಸೆತ

ಕೊಲ್ಲಂ: ಇಲ್ಲಿನ ಟಿವಿ ಚಾನೆಲ್ ಒಂದರ ಕಚೇರಿಯ ಮೇಲೆ ಭಾನುವಾರ ಬೆಳಿಗ್ಗೆ ಸ್ಫೋಟಕ ವಸ್ತು ಎಸೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸರ ಪ್ರಕಾರ, ಆ ಪ್ರದೇಶ ಮತ್ತು ಚಾನೆಲ್ ಕಚೇರಿಯ ಸಿಸಿಟಿವಿ ದೃಶ್ಯಗಳಲ್ಲಿ ಇಬ್ಬರು...

ಹತ್ಯೆಯಾದ ಇರಾನ್ ಕಮಾಂಡರ್ ಖಾಸಿಮ್ ಸುಲೈಮಾನಿ ಅವರ ಸೊಸೆ, ಮೊಮ್ಮಗಳನ್ನು ಬಂಧಿಸಿದ ಅಮೆರಿಕ

ನವದೆಹಲಿ: ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರೂಬಿಯೊ ಶುಕ್ರವಾರ ತಮ್ಮ ಶಾಶ್ವತ ನಿವಾಸಿ ಸ್ಥಾನಮಾನವನ್ನು ರದ್ದುಗೊಳಿಸಿದ ನಂತರ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ನ ದಿವಂಗತ ನಾಯಕ ಖಾಸಿಮ್ ಸೊಲೈಮಾನಿ ಅವರ...

ಇರಾನ್ ಮೇಲೆ ಬೃಹತ್ ದಾಳಿ: ಹಲವು ಉನ್ನತ ನಾಯಕರನ್ನು ಕೊಲ್ಲಲಾಗಿದೆ ಎಂದು ವಿಡಿಯೋ ಹಂಚಿಕೊಂಡ ಟ್ರಂಪ್

ಟೆಹ್ರಾನ್ ಮೇಲೆ ನಡೆದ ದಾಳಿಯ ವೀಡಿಯೊವನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಂಚಿಕೊಂಡಿದ್ದು, ಹಲವಾರು ಇರಾನ್ ಮಿಲಿಟರಿ ನಾಯಕರ ಸಾವಿಗೆ ಅದು ಕಾರಣ ಎಂದು ಹೇಳಿಕೊಂಡಿದ್ದಾರೆ. "ಟೆಹ್ರಾನ್‌ನಲ್ಲಿ ನಡೆದ ಈ ಬೃಹತ್ ದಾಳಿಯೊಂದಿಗೆ, ಇರಾನ್‌ನ...

ಅಸ್ಸಾಂ ಚುನಾವಣೆ : ನುಸುಳುಕೋರರಿಂದ ಯುವ ಕಲ್ಯಾಣಕ್ಕೆ ವರಸೆ ಬದಲಿಸಿದ ಬಿಜೆಪಿ

ಅಸ್ಸಾಂ ವಿಧಾನಸಭಾ ಚುನಾವಣೆಗೆ ನಾಲ್ಕು ದಿನಗಳು ಬಾಕಿ ಇರುವಾಗ ಬಿಜೆಪಿ ತನ್ನ ಪ್ರಚಾರದ ವರಸೆಯನ್ನು ಬದಲಿಸಿಕೊಂಡಿದೆ. ನುಸುಳುಕೋರರನ್ನು ಹೊರಹಾಕುತ್ತೇವೆ, ಅಕ್ರಮ ವಲಸೆಗೆ ಕಡಿವಾಣ ಹಾಕುತ್ತೇವೆಂದು ಅಬ್ಬರಿಸುತ್ತಿದ್ದ ಬಿಜೆಪಿಗರು, ಈಗ ನುಸುಳಕೋರರ ವಿಷಯವನ್ನು ಬದಿಗೊತ್ತಿದ್ದಾರೆ....

ಕುಡಿದ ಮತ್ತಿನಲ್ಲಿ ಕಾರು ಚಾಲನೆ: ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ 19ವರ್ಷದ ಯುವಕ ಸಾವು 

ಬೆಂಗಳೂರು: ಕುಡಿದ ಮತ್ತಿನಲ್ಲಿ ಹದಿಹರೆಯದ ಯುವಕನೊಬ್ಬ ಚಲಾಯಿಸುತ್ತಿದ್ದ ಕಾರು, 19 ವರ್ಷದ ಯುವಕನ ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಆತ ಸಾವನ್ನಪ್ಪಿದ್ದಾನೆ. ಮಲ್ಲೇಶಪಾಳ್ಯದ ಮಾರುತಿನಗರದ 10 ನೇ ಮುಖ್ಯ ರಸ್ತೆಯಲ್ಲಿ ಶುಕ್ರವಾರ ತಡರಾತ್ರಿ...