Homeಮುಖಪುಟ'ನಕಲಿ ಎನ್ನುವುದಕ್ಕೆ ಅದು ನಿಮ್ಮ ಡಿಗ್ರಿ ಅಲ್ಲ..; ಶಿವಸೇನೆ ಕುರಿತ ಮೋದಿ ಟೀಕೆಗೆ ಉದ್ಧವ್ ತಿರುಗೇಟು

‘ನಕಲಿ ಎನ್ನುವುದಕ್ಕೆ ಅದು ನಿಮ್ಮ ಡಿಗ್ರಿ ಅಲ್ಲ..; ಶಿವಸೇನೆ ಕುರಿತ ಮೋದಿ ಟೀಕೆಗೆ ಉದ್ಧವ್ ತಿರುಗೇಟು

- Advertisement -
- Advertisement -

ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ‘ನಕಲಿ ಶಿವಸೇನಾ’ ದಾಳಿಗೆ ಪ್ರತಿಕ್ರಿಯಿಸಿರುವ ಶಿವಸೇನೆ (ಯುಬಿಟಿ) ಮುಖ್ಯಸ್ಥ ಉದ್ಧವ್ ಠಾಕ್ರೆ, ‘ನಮ್ಮ ಪಕ್ಷವನ್ನು ಮಣ್ಣಿನ ಮಕ್ಕಳ ಹಕ್ಕುಗಳಿಗಾಗಿ ಹೋರಾಡಲು ಬಾಳಾ ಠಾಕ್ರೆ ಸ್ಥಾಪಿಸಿದ್ದಾರೆ’ ಎಂದು ಹೇಳಿರುವ ಅವರು, “ನಕಲಿ ಎಂದು ಹೇಳುವುದಕ್ಕೆ ನಮ್ಮ ಪಕ್ಷವು ನಿಮ್ಮ ಪದವಿ ಅಲ್ಲ’ ಎಂದು ಲೇವಡಿ ಮಾಡಿದ್ದಾರೆ.

“ಮಣ್ಣಿನ ಮಕ್ಕಳ ಹಕ್ಕುಗಳಿಗಾಗಿ ಹೋರಾಡಲು ಶಿವಸೇನೆ ಮುಖ್ಯಸ್ಥ ಬಾಳಾ ಠಾಕ್ರೆ ಸ್ಥಾಪಿಸಿದ ಪಕ್ಷವನ್ನು ನಕಲಿ ಎಂದು ಕರೆಯಲಾಗುತ್ತಿದೆ; ನಕಲಿ ಎಂದು ಕರೆಯುವುದಕ್ಕೆ ಅದು ನಿಮ್ಮ ಪದವಿ ಅಲ್ಲ” ಎಂದು ಉದ್ಧವ್ ಠಾಕ್ರೆ ವ್ಯಂಗ್ಯವಾಡಿದ್ದಾರೆ.

ಈ ವಾರದ ಆರಂಭದಲ್ಲಿ ಮಹಾರಾಷ್ಟ್ರದಲ್ಲಿ ನಡೆದ ರ್ಯಾಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಉದ್ಧವ್ ಠಾಕ್ರೆ ನೇತೃತ್ವದ ರಾಜಕೀಯ ಪಕ್ಷವನ್ನು “ನಕಲಿ ಶಿವಸೇನೆ” ಎಂದು ಕರೆದರು.

“ಇಂಡಿಯಾ ಮೈತ್ರಿಕೂಟದ ಪಾಲುದಾರ ಡಿಎಂಕೆ ಸನಾತನವನ್ನು ಮುಗಿಸುವ ಬಗ್ಗೆ ಮತ್ತು ಸನಾತನ ಧರ್ಮವನ್ನು ಮಲೇರಿಯಾ ಮತ್ತು ಡೆಂಗ್ಯೂಗೆ ಹೋಲಿಸುವ ಬಗ್ಗೆ ಮಾತನಾಡುತ್ತಿದೆ. ಕಾಂಗ್ರೆಸ್ ಮತ್ತು ನಕಲಿ ಶಿವಸೇನೆ ಅದೇ ಜನರನ್ನು ಮಹಾರಾಷ್ಟ್ರದಲ್ಲಿ ರ್ಯಾಲಿಗಳಿಗೆ ಕರೆಯುತ್ತಿದೆ” ಎಂದು ಪ್ರಧಾನಿ ಹೇಳಿದ್ದರು.

ಠಾಕ್ರೆ ಕುಟುಂಬದ ಮಾಜಿ ನಿಷ್ಠಾವಂತ ಏಕನಾಥ್ ಶಿಂಧೆ ಅವರು 2022 ರಲ್ಲಿ ಉದ್ಧವ್ ಠಾಕ್ರೆ ಅವರ ನಾಯಕತ್ವದ ವಿರುದ್ಧ ಶಿವಸೇನಾ ಶಾಸಕರು ಮತ್ತು ಸಂಸದರ ಬಂಡಾಯವನ್ನು ಮುನ್ನಡೆಸಿದರು. ಪಕ್ಷದಲ್ಲಿ ಭಾರೀ ವಿಭಜನೆಗೆ ಕಾರಣವಾದರು. ನಂತರ, ಶಿಂಧೆ ಬಿಜೆಪಿಯೊಂದಿಗೆ ಕೈಜೋಡಿಸಿದರು.

ಈ ವರ್ಷದ ಆರಂಭದಲ್ಲಿ, ಮಹಾರಾಷ್ಟ್ರ ವಿಧಾನಸಭಾ ಸ್ಪೀಕರ್ ರಾಹುಲ್ ನಾರ್ವೇಕರ್ ಅವರು ಏಕನಾಥ್ ಶಿಂಧೆ ಅವರ ಬಣ ನಿಜವಾದ ಶಿವಸೇನೆ ಎಂದು ತೀರ್ಪು ನೀಡಿದ್ದಾರೆ. ಆ ಮೂಲಕ ಉದ್ಧವ್ ಠಾಕ್ರೆ ಅವರನ್ನು ಮಹಾರಾಷ್ಟ್ರದ ರಾಜಕೀಯದ ಅಂಚಿಗೆ ತಳ್ಳಿದರು.

ಇಂಡಿಯಾ ಗೆಲ್ಲುವ ಭವಿಷ್ಯ ನುಡಿದ ಉದ್ಧವ್

ಉದ್ಧವ್ ಠಾಕ್ರೆ ಅವರ ಶಿವಸೇನೆ (ಯುಬಿಟಿ) ಕಾಂಗ್ರೆಸ್ ಮತ್ತು ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷ – ಶರದ್ಚಂದ್ರ ಪವಾರ್ ಜೊತೆ ಮೈತ್ರಿ ಮಾಡಿಕೊಂಡು ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸುತ್ತಿದೆ. ಶುಕ್ರವಾರ ಬೋಯಿಸರ್‌ನಲ್ಲಿ ನಡೆದ ರ್ಯಾಲಿಯಲ್ಲಿ ಮಾತನಾಡಿದ ಉದ್ಧವ್ ಠಾಕ್ರೆ, ಲೋಕಸಭೆ ಚುನಾವಣೆಯಲ್ಲಿ ಇಂಡಿಯಾ ಬ್ಲಾಕ್ 300 ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಇದನ್ನೂ ಓದಿ; ರಾಜಸ್ಥಾನದಲ್ಲಿ ಕಾಂಗ್ರೆಸ್‌ಗೆ ಭಾರೀ ಹಿನ್ನಡೆ; ಪಕ್ಷ ತೊರೆದ 400 ಕಾರ್ಯಕರ್ತರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...