Homeಮುಖಪುಟ'ನಕಲಿ ಎನ್ನುವುದಕ್ಕೆ ಅದು ನಿಮ್ಮ ಡಿಗ್ರಿ ಅಲ್ಲ..; ಶಿವಸೇನೆ ಕುರಿತ ಮೋದಿ ಟೀಕೆಗೆ ಉದ್ಧವ್ ತಿರುಗೇಟು

‘ನಕಲಿ ಎನ್ನುವುದಕ್ಕೆ ಅದು ನಿಮ್ಮ ಡಿಗ್ರಿ ಅಲ್ಲ..; ಶಿವಸೇನೆ ಕುರಿತ ಮೋದಿ ಟೀಕೆಗೆ ಉದ್ಧವ್ ತಿರುಗೇಟು

- Advertisement -
- Advertisement -

ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ‘ನಕಲಿ ಶಿವಸೇನಾ’ ದಾಳಿಗೆ ಪ್ರತಿಕ್ರಿಯಿಸಿರುವ ಶಿವಸೇನೆ (ಯುಬಿಟಿ) ಮುಖ್ಯಸ್ಥ ಉದ್ಧವ್ ಠಾಕ್ರೆ, ‘ನಮ್ಮ ಪಕ್ಷವನ್ನು ಮಣ್ಣಿನ ಮಕ್ಕಳ ಹಕ್ಕುಗಳಿಗಾಗಿ ಹೋರಾಡಲು ಬಾಳಾ ಠಾಕ್ರೆ ಸ್ಥಾಪಿಸಿದ್ದಾರೆ’ ಎಂದು ಹೇಳಿರುವ ಅವರು, “ನಕಲಿ ಎಂದು ಹೇಳುವುದಕ್ಕೆ ನಮ್ಮ ಪಕ್ಷವು ನಿಮ್ಮ ಪದವಿ ಅಲ್ಲ’ ಎಂದು ಲೇವಡಿ ಮಾಡಿದ್ದಾರೆ.

“ಮಣ್ಣಿನ ಮಕ್ಕಳ ಹಕ್ಕುಗಳಿಗಾಗಿ ಹೋರಾಡಲು ಶಿವಸೇನೆ ಮುಖ್ಯಸ್ಥ ಬಾಳಾ ಠಾಕ್ರೆ ಸ್ಥಾಪಿಸಿದ ಪಕ್ಷವನ್ನು ನಕಲಿ ಎಂದು ಕರೆಯಲಾಗುತ್ತಿದೆ; ನಕಲಿ ಎಂದು ಕರೆಯುವುದಕ್ಕೆ ಅದು ನಿಮ್ಮ ಪದವಿ ಅಲ್ಲ” ಎಂದು ಉದ್ಧವ್ ಠಾಕ್ರೆ ವ್ಯಂಗ್ಯವಾಡಿದ್ದಾರೆ.

ಈ ವಾರದ ಆರಂಭದಲ್ಲಿ ಮಹಾರಾಷ್ಟ್ರದಲ್ಲಿ ನಡೆದ ರ್ಯಾಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಉದ್ಧವ್ ಠಾಕ್ರೆ ನೇತೃತ್ವದ ರಾಜಕೀಯ ಪಕ್ಷವನ್ನು “ನಕಲಿ ಶಿವಸೇನೆ” ಎಂದು ಕರೆದರು.

“ಇಂಡಿಯಾ ಮೈತ್ರಿಕೂಟದ ಪಾಲುದಾರ ಡಿಎಂಕೆ ಸನಾತನವನ್ನು ಮುಗಿಸುವ ಬಗ್ಗೆ ಮತ್ತು ಸನಾತನ ಧರ್ಮವನ್ನು ಮಲೇರಿಯಾ ಮತ್ತು ಡೆಂಗ್ಯೂಗೆ ಹೋಲಿಸುವ ಬಗ್ಗೆ ಮಾತನಾಡುತ್ತಿದೆ. ಕಾಂಗ್ರೆಸ್ ಮತ್ತು ನಕಲಿ ಶಿವಸೇನೆ ಅದೇ ಜನರನ್ನು ಮಹಾರಾಷ್ಟ್ರದಲ್ಲಿ ರ್ಯಾಲಿಗಳಿಗೆ ಕರೆಯುತ್ತಿದೆ” ಎಂದು ಪ್ರಧಾನಿ ಹೇಳಿದ್ದರು.

ಠಾಕ್ರೆ ಕುಟುಂಬದ ಮಾಜಿ ನಿಷ್ಠಾವಂತ ಏಕನಾಥ್ ಶಿಂಧೆ ಅವರು 2022 ರಲ್ಲಿ ಉದ್ಧವ್ ಠಾಕ್ರೆ ಅವರ ನಾಯಕತ್ವದ ವಿರುದ್ಧ ಶಿವಸೇನಾ ಶಾಸಕರು ಮತ್ತು ಸಂಸದರ ಬಂಡಾಯವನ್ನು ಮುನ್ನಡೆಸಿದರು. ಪಕ್ಷದಲ್ಲಿ ಭಾರೀ ವಿಭಜನೆಗೆ ಕಾರಣವಾದರು. ನಂತರ, ಶಿಂಧೆ ಬಿಜೆಪಿಯೊಂದಿಗೆ ಕೈಜೋಡಿಸಿದರು.

ಈ ವರ್ಷದ ಆರಂಭದಲ್ಲಿ, ಮಹಾರಾಷ್ಟ್ರ ವಿಧಾನಸಭಾ ಸ್ಪೀಕರ್ ರಾಹುಲ್ ನಾರ್ವೇಕರ್ ಅವರು ಏಕನಾಥ್ ಶಿಂಧೆ ಅವರ ಬಣ ನಿಜವಾದ ಶಿವಸೇನೆ ಎಂದು ತೀರ್ಪು ನೀಡಿದ್ದಾರೆ. ಆ ಮೂಲಕ ಉದ್ಧವ್ ಠಾಕ್ರೆ ಅವರನ್ನು ಮಹಾರಾಷ್ಟ್ರದ ರಾಜಕೀಯದ ಅಂಚಿಗೆ ತಳ್ಳಿದರು.

ಇಂಡಿಯಾ ಗೆಲ್ಲುವ ಭವಿಷ್ಯ ನುಡಿದ ಉದ್ಧವ್

ಉದ್ಧವ್ ಠಾಕ್ರೆ ಅವರ ಶಿವಸೇನೆ (ಯುಬಿಟಿ) ಕಾಂಗ್ರೆಸ್ ಮತ್ತು ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷ – ಶರದ್ಚಂದ್ರ ಪವಾರ್ ಜೊತೆ ಮೈತ್ರಿ ಮಾಡಿಕೊಂಡು ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸುತ್ತಿದೆ. ಶುಕ್ರವಾರ ಬೋಯಿಸರ್‌ನಲ್ಲಿ ನಡೆದ ರ್ಯಾಲಿಯಲ್ಲಿ ಮಾತನಾಡಿದ ಉದ್ಧವ್ ಠಾಕ್ರೆ, ಲೋಕಸಭೆ ಚುನಾವಣೆಯಲ್ಲಿ ಇಂಡಿಯಾ ಬ್ಲಾಕ್ 300 ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಇದನ್ನೂ ಓದಿ; ರಾಜಸ್ಥಾನದಲ್ಲಿ ಕಾಂಗ್ರೆಸ್‌ಗೆ ಭಾರೀ ಹಿನ್ನಡೆ; ಪಕ್ಷ ತೊರೆದ 400 ಕಾರ್ಯಕರ್ತರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ಟೌನ್‌ಶಿಪ್ ಭೂಸ್ವಾಧೀನ ಪ್ರಕ್ರಿಯೆ ರದ್ದುಗೊಳಿಸಲು ಸಂಯುಕ್ತ ಹೋರಾಟ ಕರ್ನಾಟಕ ಆಗ್ರಹ

ಫಲವತ್ತಾದ ಕೃಷಿ ಭೂಮಿ ನಾಶ ಮಾಡಿ ನಿರ್ಮಿಸಲು ಉದ್ದೇಶಿಸಿರುವ ಬಿಡದಿ ಟೌನ್‌ಶಿಪ್ ಯೋಜನೆ ರೈತ ವಿರೋಧಿ ಹಾಗೂ ಜೀವ ಪರಿಸರ ವ್ಯವಸ್ಥೆಗೆ ವಿನಾಶಕಾರಿ. ಇಂತಹ ಪರಿಸರ ವಿನಾಶದ ಯೋಜನೆಗೆ ನೀಡಿರುವ ಸಂಪುಟ ಅನುಮೋದನೆಯನ್ನು...

‘ಮನೆ ಕೊಡಿ ಇಲ್ಲಾ ಜೈಲಿಗಾದರೂ ಬಿಡಿ’ : ಬೀದಿಗೆ ಬಿದ್ದ ಕೋಗಿಲು ನಿರಾಶ್ರಿತರ ಅಳಲು

"ನಮಗೊಂದು ಸೂರು ಕೊಟ್ಟರೆ ಅದಕ್ಕೆ ಕಾರಣರಾದ ಎಲ್ಲರನ್ನೂ ಹರಸಿ ನೆಮ್ಮದಿಯಾಗಿ ಬದುಕುತ್ತೇವೆ. ಇಲ್ಲವಾದರೆ ನಮ್ಮನ್ನು ಜೈಲಿಗಾದರೂ ಹಾಕಿಬಿಡಿ. ಒಂದು ನೆಲೆ ಮತ್ತು ಮೂರು ಹೊತ್ತಿನ ಊಟವಾದರೂ ಸಿಗುತ್ತದೆ". ಇದು ಸರ್ಕಾರ ಮನೆ ಧ್ವಂಸ...

ಒಳಮೀಸಲಾತಿ ಜಾರಿ ಸರ್ಕಾರದ ಹೊಸ ಸೂತ್ರ

ಕರ್ನಾಟಕದಲ್ಲಿ ಒಳಮೀಸಲಾತಿಯ ’ಸದ್ದು-ಗುದ್ದು’ ಅವಿಭಜಿತ ಆಂಧ್ರಪ್ರದೇಶಕ್ಕಿಂತಲೂ ಹೆಚ್ಚಾಗಿದೆ. ಇದಕ್ಕೆ ಕಾರಣ ಪರಿಶಿಷ್ಟ ಜಾತಿಗಳೊಳಗಿನ ಮೇಲಾಟವೂ ಹೌದು, ಸರ್ಕಾರದ ಬೇಜವಾಬ್ದಾರಿ ನಡೆಗಳೂ ಹೌದು. ಆದರೆ ದಿನಾಂಕ: 24.04.2026ರಂದು ನಡೆದ ಸಚಿವ ಸಂಪುಟ ಸಭೆಯು ಒಳಮೀಸಲಾತಿ...

ಕೊರೋನಾ ಲಸಿಕೆ ಒಳಹೊರಗುಗಳ ಪರಾಮರ್ಶೆಯ ನೋಟ

ಮನುಷ್ಯನ ನೆನಪಿನ ಶಕ್ತಿ ಕಡಿಮೆ ಎಂದು ರಾಜಕಾರಣಿಗಳು, ಅಧಿಕಾರಿಗಳು ಸದಾ ಗುನುಗುತ್ತಿರುತ್ತಾರೆ. ಅದು ಜೀವ ಮತ್ತು ಜೀವನ ಕಳೆದುಕೊಂಡ ವಿಚಾರವನ್ನು ಕೂಡ ಬಹಳ ಬೇಗ ಮರೆವಿನ ತೊಟ್ಟಿಗೆ ತಳ್ಳಿ ಬಿಡುತ್ತದೆ.ಆದರೂ, ಮನುಷ್ಯ ಭೂಮಿಯ...

‘ಮಾವಿನ ಮರ’ ಕಂಡ ಕನಸು

ಪುಸ್ತಕ ಪರಿಚಯ ಸವಾಲಿನ ವಿಷಯ. ಅದರಲ್ಲೂ ಕವಿತೆಗಳ ಕುರಿತು ಮಾತನಾಡುವುದು ಇನ್ನೂ ಸವಾಲು. ಪ್ರತಿಯೊಂದು ಕವಿತೆಯೂ ತನ್ನ ಓದುಗರೊಂದಿಗೆ ಸಂವಾದಿಸುವ ಬಗೆ ವಿಭಿನ್ನವಾಗಿರುತ್ತದೆ. ಅದನ್ನು ಏಕರೂಪೀ ಪರಿಭಾಷೆಯಲ್ಲಿ ಮಂಡಿಸುವುದು ಸರಿಯಲ್ಲ. ’ಮಿಥಿಲೆಯ ಮಾವಿನ...

NEET ರದ್ದು : ಖಿನ್ನತೆ, ಆತಂಕಕ್ಕೆ ಒಳಗಾದ ವಿದ್ಯಾರ್ಥಿಗಳು; ನಾಲ್ಕು ದಿನದಲ್ಲಿ ನಾಲ್ವರು ಸಾವಿಗೆ ಶರಣು

ಈ ವರ್ಷದ (2026) ನೀಟ್-ಯುಜಿ (NEET-UG) ಪರೀಕ್ಷೆ ರದ್ದಾದ ಬಳಿಕ ದೇಶದಾದ್ಯಂತ ಕನಿಷ್ಠ ನಾಲ್ವರು ವಿದ್ಯಾರ್ಥಿಗಳು ತೀವ್ರ ಮಾನಸಿಕ ಒತ್ತಡ ಹಾಗೂ ಹತಾಶೆಯಿಂದ ಸಾವಿಗೆ ಶರಣಾಗಿದ್ದಾರೆ. ರಾಜಸ್ಥಾನದ ಝುಂಜುನು ಜಿಲ್ಲೆಯ 23 ವರ್ಷದ ಪ್ರದೀಪ್...

ಪ್ಯಾಲೆಸ್ಟೀನಿಯನ್ ಕೈದಿಗಳ ಮೇಲೆ ಲೈಂಗಿಕ ದೌರ್ಜನ್ಯ ವರದಿ: ನ್ಯೂಯಾರ್ಕ್ ಟೈಮ್ ವಿರುದ್ಧ ಮೊಕದ್ದಮೆ ದಾಖಲಿಸಿದ ಇಸ್ರೇಲ್ ಕ್ರಮಕ್ಕೆ ಆರ್‌ಎಸ್‌ಎಫ್ ಖಂಡನೆ

ಪ್ಯಾಲೆಸ್ಟೀನಿಯನ್ ಕೈದಿಗಳನ್ನು ಗುರಿಯಾಗಿಸಿಕೊಂಡು ವ್ಯಾಪಕವಾದ ಲೈಂಗಿಕ ದೌರ್ಜನ್ಯವನ್ನು ಬಹಿರಂಗಪಡಿಸಿದ ನಿಕೋಲಸ್ ಕ್ರಿಸ್ಟೋಫ್ ಅವರ  ಅಭಿಪ್ರಾಯ ಅಂಕಣವನ್ನು ಪ್ರಕಟಿಸಿದ ನ್ಯೂಯಾರ್ಕ್ ಟೈಮ್ಸ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿರುವ ಇಸ್ರೇಲಿ ಸರ್ಕಾರದ ನಿರ್ಧಾರವನ್ನು ರಿಪೋರ್ಟರ್ಸ್ ವಿದೌಟ್...

“ಮುಸ್ಲಿಮರಿಗೆ ಯಾವುದೇ ಕೆಲಸ ಮಾಡಲ್ಲ” ಎಂದು ವಿವಾದಾತ್ಮಕ ಶಪಥ ಮಾಡಿದ ಪಶ್ಚಿಮ ಬಂಗಾಳದ ಬಿಜೆಪಿ ಶಾಸಕ ರಿತೇಶ್ ತಿವಾರಿ

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಬಿಜೆಪಿ ತನ್ನ ಮೊದಲ ಸರ್ಕಾರವನ್ನು ರಚಿಸಿದ ಕೆಲವೇ ದಿನಗಳಲ್ಲಿ, ಪಕ್ಷದ ಶಾಸಕ ರಿತೇಶ್ ತಿವಾರಿ ಅವರು ಮಾಡಿರುವ ಭಾಷಣವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. "ಪಶ್ಚಿಮ...

’ಎಸ್‌ಐಆರ್’ ವಿರುದ್ಧ ಜನಪರ ಸಂಘಟನೆಗಳಿಂದ ಜನಾಂದೋಲನ ಬಂಗಾಳದ ಜನರ ಜೊತೆಗೆ ನಿಂತ ಕರ್ನಾಟಕ

ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‌ಐಆರ್) ಮೂಲಕ ವಿರೋಧ ಪಕ್ಷಗಳ ಮತದಾರರು ಮತ್ತು ಅಲ್ಪಸಂಖ್ಯಾತ ಸಮುದಾಯದ ಲಕ್ಷಾಂತರ ಮತದಾರರನ್ನು ಪಟ್ಟಿಯಿಂದ ಕೈಬಿಡುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಕುತಂತ್ರ ಈಗಾಗಲೇ ಬಿಹಾರದಲ್ಲಿ ಜಗಜ್ಜಾಹೀರಾಗಿದೆ....

ನಿರುದ್ಯೋಗಿ ಯುವಕರನ್ನು ಜಿರಳೆಗಳು ಎಂದ ಸಿಜೆಐ: ಇದೆಂತಾ ಮಾತು ನ್ಯಾಯಮೂರ್ತಿಗಳೇ!

‘ಕೆಲವು ನಿರುದ್ಯೋಗಿ ಯುವಕರು ಜಿರಳೆಗಳಂತೆ ಸಮಾಜವನ್ನು ಕಾಡುತ್ತಾರೆ. ಉದ್ಯೋಗ, ಸ್ಥಾನಮಾನ ಸಿಗದೆ ಇದ್ದಾಗ ಅವರು ಎಲ್ಲರ ಮೇಲೆ ದಾಳಿ ಆರಂಭಿಸುತ್ತಾರೆ’ ಇದು ಯಾವುದೋ ರಾಜಕೀಯ ರ‍್ಯಾಲಿಯ ಭಾಷಣವಲ್ಲ ಅಥವಾ ಟಿವಿ ಚಾನೆಲ್‌ಗಳ ಜಗಳವಲ್ಲ,...