Homeಮುಖಪುಟಎಂವಿಎ ಒಗ್ಗಟ್ಟಿನ ಬಗ್ಗೆ ಪ್ರಶ್ನಿಸಿದ ಉದ್ಧವ್ ಠಾಕ್ರೆ: ಮೈತ್ರಿಕೂಟದಿಂದ ನಿರ್ಗಮಿಸುವ ಮುನ್ಸೂಚನೆ?

ಎಂವಿಎ ಒಗ್ಗಟ್ಟಿನ ಬಗ್ಗೆ ಪ್ರಶ್ನಿಸಿದ ಉದ್ಧವ್ ಠಾಕ್ರೆ: ಮೈತ್ರಿಕೂಟದಿಂದ ನಿರ್ಗಮಿಸುವ ಮುನ್ಸೂಚನೆ?

- Advertisement -
- Advertisement -

ಮಹಾರಾಷ್ಟ್ರದ ರಾಜಕೀಯದಲ್ಲಿ ಮಹತ್ವದ ಬದಲಾವಣೆಗಳು ಸಂಭವಿಸುವ ಸಾಧ್ಯತೆಯಿದೆ. ಉದ್ದವ್ ಠಾಕ್ರೆ ಬಣದ ಶಿವಸೇನೆ ಬಿಜೆಪಿಯತ್ತ ಮೈತ್ರಿಕೂಟದತ್ತ ಒಳವು ತೋರಿಸುತ್ತಿದೆ ಎಂದು ವರದಿಯಾಗುತ್ತಿರುವ ನಡುವೆ, ಮಹಾ ವಿಕಾಸ್ ಅಘಾಡಿ (ಎಂವಿಎ) ಮೈತ್ರಿಕೂಟದ ಬಗ್ಗೆ ಅಸಮಾಧಾನ ವ್ಯಕ್ತಪಡಿಸುವ ಅಭಿಪ್ರಾಯವನ್ನು ಉದ್ಧವ್ ಠಾಕ್ರೆ ವ್ಯಕ್ತಪಡಿಸಿದ್ದಾರೆ.

ಶಿವಸೇನೆಯ (ಯುಬಿಟಿ) ಮುಖವಾಣಿ ಸಾಮ್ನಾಗೆ ನೀಡಿದ ಸಂದರ್ಶನದಲ್ಲಿ, “2024ರ ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯ ಸಮಯದಲ್ಲಿ ಸೀಟು ಹಂಚಿಕೆ ಒಪ್ಪಂದಗಳನ್ನು ಅಂತಿಮಗೊಳಿಸುವಲ್ಲಿ ಮತ್ತು ಅಭ್ಯರ್ಥಿಗಳನ್ನು ಆಯ್ಕೆ ಮಾಡುವಲ್ಲಿ ವಿಳಂಬದಂತಹ ತಪ್ಪುಗಳು ಪುನರಾವರ್ತನೆಯಾಗಿತ್ತು ಎಂದಿರುವ ಉದ್ದವ್ ಠಾಕ್ರೆ, ಎಂವಿಎ ಮೈತ್ರಿಕೂಟದ ಒಗ್ಗಟ್ಟಿನ ಬಗ್ಗೆ ಪ್ರಶ್ನಿಸಿದ್ದಾರೆ.

2024ರ ಲೋಕಸಭಾ ಚುನಾವಣೆಯಲ್ಲಿ ಎಂವಿಎ ಮೈತ್ರಿಕೂಟ ಅದ್ಭುತ ಪ್ರದರ್ಶನ ತೋರಿಸಿದಾಗ ಉಂಟಾದ ಸಂತೋಷ, ವಿಧಾನಸಭಾ ಚುನಾವಣೆಯ ಸಮಯದಲ್ಲಿ ಪಕ್ಷವಾರು ಗೆಲುವುಗಳನ್ನು ಸಾಧಿಸುವತ್ತ ಗಮನಹರಿಸಿದ ವೈಯಕ್ತಿಕ ಅಹಂಕಾರಗಳಾಗಿ ರೂಪಾಂತರಗೊಂಡು ಅಂತಿಮವಾಗಿ ಸೋಲಿಗೆ ಕಾರಣವಾಯಿತು ಎಂದು ಠಾಕ್ರೆ ಒತ್ತಿ ಹೇಳಿದ್ದಾರೆ.

ತಮ್ಮ ಪಕ್ಷವು ಲೋಕಸಭಾ ಚುನಾವಣೆಯ ಸಮಯದಲ್ಲಿ ತನ್ನ ಎಂವಿಎ ಪಾಲುದಾರರಿಗೆ ಹಲವು ಬಾರಿ ಗೆದ್ದ ಕ್ಷೇತ್ರಗಳನ್ನು ಬಿಟ್ಟುಕೊಡಬೇಕಾಯಿತು ಎಂದು ಅವರು ವಿಷಾದಿಸಿದ್ದಾರೆ.

ಚುನಾವಣೆಯ ಸಮಯದಲ್ಲಿ, ಕೆಲವು ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ನಿರ್ಧರಿಸಲಾಗುತ್ತಿರಲಿಲ್ಲ ಎಂದು ಮಾಜಿ ಸಿಎಂ ನೆನಪಿಸಿಕೊಂಡಿದ್ದಾರೆ.

“ಇದು ಸರಿಪಡಿಸಿಕೊಳ್ಳಲೇಬೇಕಾದ ತಪ್ಪಾಗಿತ್ತು. ಭವಿಷ್ಯದಲ್ಲಿ ಇಂತಹ ತಪ್ಪುಗಳು ಸಂಭವಿಸಿದರೆ ಒಟ್ಟಿಗೆ ಇರುವುದರಲ್ಲಿ ಅರ್ಥವಿಲ್ಲ” ಎಂದಿದ್ದಾರೆ.

ವಿಧಾನಸಭಾ ಚುನಾವಣೆಯ ಸಮಯದಲ್ಲಿ ವಿಶೇಷ ಕೊಡುಗೆಗಳನ್ನು ಘೋಷಿಸುವ ಸ್ಪರ್ಧೆಯು ಶಿವಸೇನೆ (ಯುಬಿಟಿ), ಎನ್‌ಸಿಪಿ (ಶರದ್ಚಂದ್ರ ಪವಾರ್) ಮತ್ತು ಕಾಂಗ್ರೆಸ್ ಒಳಗೊಂಡ ಎಂವಿಎಗೆ ಅನಾನುಕೂಲವನ್ನುಂಟು ಮಾಡುತ್ತದೆ ಎಂದು ಹೇಳಿದ್ದಾರೆ.

ಇವಿಎಂ ಹಗರಣ, ನಕಲಿ ಮತದಾರರ ಪಟ್ಟಿ ಮತ್ತು ವಿಧಾನಸಭಾ ಚುನಾವಣೆಯ ಸಮಯದಲ್ಲಿ ಮತದಾರರ ಸಂಖ್ಯೆಯಲ್ಲಿನ ಹೆಚ್ಚಳದ ಬಗ್ಗೆ ಚರ್ಚೆಗಳು ನಡೆಯುತ್ತಿವೆ.

ಲಡ್ಕಿ ಬಹಿನ್‌ನಂತಹ ಮೋಸಗೊಳಿಸುವ ಯೋಜನೆಗಳು ಚುನಾವಣಾ ನಿರೀಕ್ಷೆಗಳ ಮೇಲೆ ಪರಿಣಾಮ ಬೀರಿದ್ದವು ಎಂದು ಠಾಕ್ರೆ ಸಾಮ್ನಾದ ಕಾರ್ಯನಿರ್ವಾಹಕ ಸಂಪಾದಕ ಮತ್ತು ರಾಜ್ಯಸಭಾ ಸದಸ್ಯ ಸಂಜಯ್ ರಾವತ್ ಅವರೊಂದಿಗಿನ ಸಂದರ್ಶನದಲ್ಲಿ ಹೇಳಿದ್ದಾರೆ.

ತಪ್ಪುಗಳನ್ನು ಒಪ್ಪಿಕೊಳ್ಳಲು ಹಿಂಜರಿಯುವುದು ಸರಿಯಲ್ಲ. 2024ರ ಲೋಕಸಭಾ ಚುನಾವಣೆಯಲ್ಲಿ, ಎಂವಿಎ ಮಹಾರಾಷ್ಟ್ರದ 48 ಸ್ಥಾನಗಳಲ್ಲಿ 30 ಸ್ಥಾನಗಳನ್ನು ಗೆದ್ದುಕೊಂಡಿತ್ತು. ಐದು ತಿಂಗಳ ನಂತರ, ಮಹಾಯುತಿ ಮೈತ್ರಿಕೂಟವು ವಿರೋಧ ಪಕ್ಷಗಳಿಗೆ ಹೀನಾಯ ಸೋಲನ್ನುಂಟುಮಾಡಿತು. 288 ಸದಸ್ಯ ಬಲದ ಸದನದಲ್ಲಿ ಶಿವಸೇನೆ (ಯುಬಿಟಿ), ಎನ್‌ಸಿಪಿ (ಎಸ್‌ಪಿ) ಮತ್ತು ಕಾಂಗ್ರೆಸ್‌ನ ಒಟ್ಟಾರೆ 46 ಸ್ಥಾನಗಳಿಗೆ ಸೀಮಿತವಾಯಿತು” ಎಂದಿದ್ದಾರೆ.

ಕಳೆದ ಬಾರಿಯ ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಅತಿ ಹೆಚ್ಚು 132 ಸ್ಥಾನಗಳನ್ನು ಗೆದ್ದರೆ, ಏಕನಾಥ್ ಶಿಂಧೆ ನೇತೃತ್ವದ ಶಿವಸೇನೆ 57 ಮತ್ತು ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ 41 ಸ್ಥಾನಗಳನ್ನು ಗೆದ್ದಿತ್ತು. ಪ್ರತಿಸ್ಪರ್ಧಿಗಳಾದ ಶಿವಸೇನೆ (ಯುಬಿಟಿ) ಮತ್ತು ಎನ್‌ಸಿಪಿ (ಎಸ್‌ಪಿ) ನೇರ ಸ್ಪರ್ಧೆಯಲ್ಲಿ ಕ್ರಮವಾಗಿ 20 ಮತ್ತು 16 ಕ್ಷೇತ್ರಗಳನ್ನು ಗೆದ್ದುಕೊಂಡಿದ್ದವು.

ಐದು ಜೆಟ್‌ಗಳನ್ನು ಹೊಡೆದುರುಳಿಸಲಾಗಿದೆ ಎಂದ ಟ್ರಂಪ್: ಮೋದಿ ಸ್ಪಷ್ಟನೆ ನೀಡುವಂತೆ ಕಾಂಗ್ರೆಸ್ ಆಗ್ರಹ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...